ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಸೇವಾ ಭದ್ರತೆ ಹಾಗೂ ವೇತನ ತಾರತಮ್ಯ ಸರಿಪಡಿಸದೇ ಇರುವ ಕ್ರಮವನ್ನು ವಿರೋಧಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ ಜೂನ್ 4ರಿಂದ ಅಸಹಕಾರ ಚಳುವಳಿ ನಡೆಸಲಿದೆ.
ಈ ಕುರಿತಂತೆ ಮಾತನಾಡಿರುವ ಸಂಘದ ಜಿಲ್ಲಾಧ್ಯಕ್ಷೆ ಡಾ.ಹೇಮಲತಾ, ಸೇವಾ ಭದ್ರತೆ ನೀಡಬೇಕು, ವೇತನ ತಾರತಮ್ಯ ನೀಗಿಸಬೇಕೆಂದು ಒತ್ತಾಯಿಸಿ ಮೇ 20 ರಂದು ಸಂಘ ರಾಜ್ಯದಾದ್ಯಂತ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದ್ದೆವು. ಆ ವೇಳೆ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರ ನೇತೃತ್ವದಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಸಭೆ ನಡೆದಿತ್ತು. ಸಭೆಯಲ್ಲಿ ಬೇಡಿಕೆ ಈಡೇರಿಸಲು ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ, ನಮಗೆ ನೀಡಿದ ಭರವಸೆಯಂತೆ ಸಮಿತಿ ರಚನೆಗೊಂಡಿಲ್ಲ. ಹೀಗಾಗಿ, ಜೂನ್ 4ರಿಂದ ಅಸಹಕಾರ ಚಳುವಳಿ ಆರಂಭಿಸುತ್ತಿದ್ದೇವೆ ಎಂದರು.
ಸಂಘದ ಪದಾಧಿಕಾರಿಗಳಾದ ಸುಪ್ರಿಯಾ, ಶಂಕರ್ ಸೇರಿದಂತೆ ಹಲವರಿದ್ದರು.
Get in Touch With Us info@kalpa.news Whatsapp: 9481252093
Discussion about this post