Thursday, October 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

20 ಮಕ್ಕಳನ್ನು ಬಲಿ ಪಡೆದ ಕೆಮ್ಮಿನ ಸಿರಪ್ ಕಂಪೆನಿ ಮಾಲೀಕ ಅರೆಸ್ಟ್

October 9, 2025
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಚೆನ್ನೈ  |

20 ಅಮಾಯಕ ಮಕ್ಕಳನ್ನು ಬಲಿ ಪಡೆದ ಕೆಮ್ಮಿನ ಸಿರಪ್ #CoughSyrup ತಯಾರಕ ಕಂಪೆನಿ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಮಾಲೀಕ ಎಸ್. ರಂಗನಾಥನ್ ಅವರನ್ನು ಕೊನೆಗೂ ಬಂಧಿಸಲಾಗಿದೆ.

ಎಸ್. ರಂಗನಾಥ್ ಅವರನ್ನು ಮಧ್ಯಪ್ರದೇಶ ಪೊಲೀಸರು ಚೆನ್ನೈನಲ್ಲಿ ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.

ಮಧ್ಯಪ್ರದೇಶದ ಮತ್ತು ರಾಜಸ್ಥಾನದಲ್ಲಿ ಸಿರಪ್ ಸೇವಿಸಿ ಮಕ್ಕಳು ಸಾವನ್ನಪ್ಪಿದ್ದರು. ಕೋಲ್ಡ್ರಿಫ್ ಸಿರಪ್ ಸೇವಿಸಿದ ನಂತರ ಮಕ್ಕಳು ಮೂತ್ರಪಿಂಡದ ಸೋಂಕಿಗೆ ಒಳಗಾಗಿದ್ದರು.

ಕೋಲ್ಡ್ರಿಫ್ #ColdrifSyrup ಎಂಬುದು ಮಕ್ಕಳಲ್ಲಿ ಸ್ರವಿಸುವ ಮೂಗು, ಸೀನುವಿಕೆ, ಗಂಟಲು ನೋವು ಮತ್ತು ಕಣ್ಣುಗಳಲ್ಲಿ ನೀರು ಬರುವುದು ಸೇರಿದಂತೆ ಶೀತ ಮತ್ತು ಕೆಮ್ಮಿನ ಲಕ್ಷಣಗಳಿಗೆ ಚಿಕಿತ್ಸೆ ನೀಡಲು ಸೂಚಿಸಲಾದ ಔಷಧವಾಗಿದೆ. ಈ ತಿಂಗಳ ಆರಂಭದಲ್ಲಿ ತಮಿಳುನಾಡು ಅಧಿಕಾರಿಗಳು ಸಿರಪ್ ಮಾದರಿಗಳಲ್ಲಿ ವಿಷಕಾರಿ ಮತ್ತು ಹಾನಿಕಾರಕ ವಸ್ತುವಾದ ಡೈಥಿಲೀನ್ ಗ್ಲೈಕೋಲ್ #DiethyleneGlycol ಇರುವುದು ಕಂಡುಬಂದ ನಂತರ ಅವುಗಳನ್ನು ಕಲಬೆರಕೆ ಎಂದು ಘೋಷಿಸಿದರು.
ಘಟನೆ ಹಿನ್ನೆಲೆಯಲ್ಲಿ ಶ್ರೀಸನ್ ಫಾರ್ಮಾ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಈ ಕಂಪನಿಯ ಮಾಲೀಕ ರಂಗನಾಥನ್ ಅವರನ್ನು ಇಂದು ಬೆಳಿಗ್ಗೆ ಚೆನ್ನೈನಲ್ಲಿ ಮಧ್ಯಪ್ರದೇಶ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿಷಕಾರಿ ಸಿರಪ್ ಸೇವಿಸಿ ಕನಿಷ್ಠ 20 ಮಕ್ಕಳ ಸಾವುಗಳಿಗೆ ಸಂಬಂಧಿಸಿದಂತೆ ರಾಜ್ಯ ಪೊಲೀಸರು ಅವರನ್ನು ಹುಡುಕುತ್ತಿದ್ದರು. ಸುಳಿವು ಕೊಟ್ಟವರಿಗೆ 20,000 ರೂ. ಬಹುಮಾನವನ್ನು ಸಹ ಘೋಷಿಸಲಾಗಿತ್ತು.

ಇನ್ನು, ಕೆಮ್ಮಿನ ಸಿರಪ್ ಸೇವಿಸಿ ವಿವಿಧ ರಾಜ್ಯಗಳಲ್ಲಿ ಮಕ್ಕಳು ಸಾಲು ಸಾಲಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮುನ್ಸೂಚನೆಯಾಗಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಹೀಗಿದೆ ಮಾರ್ಗಸೂಚಿ:

ಚಿಕ್ಕ ಮಕ್ಕಳ ಜಾಗ್ರತೆ ವಿಚಾರದಲ್ಲಿ:
ಮಕ್ಕಳಿಗೆ ಕೆಮ್ಮಿನ ಸಿರಪ್’ಗಳನ್ನು ನೀಡಬೇಡಿ. 2 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮು ಅಥವಾ ಶೀತದ ಸಿರಪ್’ಗಳನ್ನು ಯಾವುದೇ ಕಾರಣಕ್ಕೂ ನೀಡಬಾರದು. 2 ರಿಂದ 5 ವರ್ಷಗಳ ವಯಸ್ಸಿನ ಮಕ್ಕಳಿಗೆ ಸರಿಯಾದ ತಜ್ಞ ವೈದ್ಯರಲ್ಲಿ ಪರೀಕ್ಷೆ ಮಾಡಿಸಿದ ನಂತರವಷ್ಟೆ ಅವರ ನಿಗದಿತ ಸಲಹೆ ಮೇರೆಗೆ ಮಾತ್ರ ಈ ಔಷಧಿಗಳನ್ನು ನೀಡುಬೇಕು.

ಹಿರಿಯ ಮಕ್ಕಳ ವಿಚಾರದಲ್ಲಿ:
ಸ್ವಲ್ಪ ಹಿರಿಯ ವಯಸ್ಸಿನ ಮಕ್ಕಳಿಗೆ ಕೆಮ್ಮಿನ ಸಿರಪ್’ಗಳನ್ನು ವೈದ್ಯರ ಸಲಹೆಯ ಮೇರೆಗೆ ಮಾತ್ರ ನೀಡಬೇಕು. ಸಾಧ್ಯವಾದಷ್ಟು ಕಡಿಮೆ ಅವಧಿಗೆ ಕನಿಷ್ಠ ಅಗತ್ಯವಿರುವ ಡೋಸ್ ಅನ್ನು ಬಳಸಿ. ಬಹು ಔಷಧಿಗಳ ಸಂಯೋಜನ ಇರುವ ಸಿರಪ್’ಗಳನ್ನು ಉಪಯೋಗಿಸಬಾರದು.ಸುರಕ್ಷಿತ ಮನೆಮದ್ದುಗಳು ಉತ್ತಮ
ಚಿಕ್ಕಮಕ್ಕಳಲ್ಲಿ ಕೆಮ್ಮ ಹಾಗೂ ಶೀತದ ಪ್ರಭಾವ ಸೌಮ್ಯವಾಗಿರುತ್ತದೆ. ಇದು ಮನೆಮದ್ದುಗಳಿಂದಲೇ ಗುಣವಾಗುವ ಸಾಧ್ಯತೆಯಿರುತ್ತದೆ.ಸುರಕ್ಷಿತವಾದ ಕ್ರಮಗಳಿಂದ ನಿಧಾನವಾಗಿ ಉತ್ತಮಗೊಳ್ಳುತ್ತದೆ

ಪೋಷಕರು ಮಕ್ಕಳಿಗೆ:
ಸಾಕಷ್ಟು ದ್ರವಪದಾರ್ಥಗಳನ್ನು ನೀಡುವುದು, ಸಾಕಷ್ಟು ವಿಶ್ರಾಂತಿ ಮತ್ತು ನಿದ್ರೆ ಮಾಡಲು ಅವಕಾಶ ನೀಡುವುದು. ಪೌಷ್ಟಿಕ ಆಹಾರವನ್ನು ನೀಡುವುದು.

ಸ್ವಯಂ ಔಷದೋಪಚಾರ ಮಾಡಬೇಡಿ
ವೈದ್ಯರ ಸಲಹೆ ಇಲ್ಲದೆ ಕೆಮ್ಮಿನ ಸಿರಪ್’ಗಳನ್ನು ಎಂದಿಗೂ ಖರೀದಿಸಬೇಡಿ ಅಥವಾ ಬಳಸಬೇಡಿ. ಈ ಹಿಂದೆ ಬಳಸಿ ಉಳಿದ ಔಷಧಗಳನ್ನು ಅಥವಾ ಇತರರು ಶಿಫಾರಸು ಮಾಡಿದ ಔಷಧಗಳನ್ನು ಬಳಸುವುದನ್ನು ನಿಲ್ಲಿಸಿ. ಮಕ್ಕಳಲ್ಲಿ ಯಾವುದೇ ಅಸಹಜ ಪ್ರತಿಕ್ರಿಯೆ, ನಿದ್ರಾವಸ್ಥೆ, ವಾಂತಿ ಅಥವಾ ಉಸಿರಾಟದ ತೊಂದರೆ ಕಂಡುಬಂದಲ್ಲಿ ತಕ್ಷಣ ಹತ್ತಿರದ ತಜ್ಞ ವೈದ್ಯರಿಗೆ ತೋರಿಸಿ. ಔಷಧದ ಅವಧಿ ಮುಗಿಯುವ ದಿನಾಂಕ ಪರಿಶೀಲಿಸಿ ಮತ್ತು ಲೇಬಲ್’ಗಳನ್ನು ಎಚ್ಚರಿಕೆಯಿಂದ ಓದಿಕೊಳ್ಳಿ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

   

Tags: ChennaiChildren death by Cough SyrupColdrif SyrupCough syrupKannada News WebsiteLatest News KannadaMadhya PradeshRajastanSresan Pharmaceuticalsಕೆಮ್ಮಿನ ಸಿರಪ್ಕೋಲ್ಡ್ರಿಫ್ ಸಿರಪ್ಚೆನ್ನೈಡೈಥಿಲೀನ್ ಗ್ಲೈಕೋಲ್ಮಧ್ಯಪ್ರದೇಶರಾಜಸ್ಥಾನಸ್ರೆಸನ್ ಫಾರ್ಮಾಸ್ಯುಟಿಕಲ್ಸ್
Previous Post

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ | ಸರ್ಕಾರಕ್ಕೆ ಶೃಂಗೇರಿ ವಿಧುಶೇಖರ ಶ್ರೀ ಆಗ್ರಹ

Next Post

ಪೀಡಿಯಾಟ್ರಿಕ್ ಸ್ಟೆಮ್ ಸೆಲ್ ಟ್ರಾನ್ಸ್ ಪ್ಲಾಂಟೇಶನ್’ನಲ್ಲಿ ದಾಖಲೆ ಬರೆದ `ನಾರಾಯಣ ಹೆಲ್ತ್ ಸಿಟಿ’

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪೀಡಿಯಾಟ್ರಿಕ್ ಸ್ಟೆಮ್ ಸೆಲ್ ಟ್ರಾನ್ಸ್ ಪ್ಲಾಂಟೇಶನ್'ನಲ್ಲಿ ದಾಖಲೆ ಬರೆದ `ನಾರಾಯಣ ಹೆಲ್ತ್ ಸಿಟಿ'

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅ.10 | ಐಜಿಪಿ ರವಿಕಾಂತೆ ಗೌಡ, ವಿ. ಪೊಲೀಸ್ ಮಹಾ ನಿರ್ದೇಶಕ ಚಂದ್ರಶೇಖರ್ ನಗರಕ್ಕೆ | ಕಾರಣವೇನು?

October 9, 2025

ರಣಜಿ ಟ್ರೋಫಿ | ಅಭ್ಯಾಸ ಪಂದ್ಯದಲ್ಲಿ ಹೈಡ್ರಾಮಾ | ಸಹ ಆಟಗಾರನ ಮೇಲೆ ಬ್ಯಾಟ್ ಬೀಸಿದ ಪೃಥ್ವಿ

October 9, 2025

ಸೆಪ್ಟೆಂಬರ್ ಒಂದೇ ತಿಂಗಳಿನಿಲ್ಲಿ ನೈಋತ್ಯ ರೈಲ್ವೆ ರಕ್ಷಣಾ ಪಡೆ ಮಾಡಿರುವ ಸಾಧನೆಗಳು ಎಷ್ಟಿವೆ ನೋಡಿ!

October 9, 2025
Internet Image

ರಾಜ್ಯದ ಹೆಣ್ಮಕ್ಕಳಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ | ಏನದು?

October 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅ.10 | ಐಜಿಪಿ ರವಿಕಾಂತೆ ಗೌಡ, ವಿ. ಪೊಲೀಸ್ ಮಹಾ ನಿರ್ದೇಶಕ ಚಂದ್ರಶೇಖರ್ ನಗರಕ್ಕೆ | ಕಾರಣವೇನು?

October 9, 2025

ರಣಜಿ ಟ್ರೋಫಿ | ಅಭ್ಯಾಸ ಪಂದ್ಯದಲ್ಲಿ ಹೈಡ್ರಾಮಾ | ಸಹ ಆಟಗಾರನ ಮೇಲೆ ಬ್ಯಾಟ್ ಬೀಸಿದ ಪೃಥ್ವಿ

October 9, 2025

ಸೆಪ್ಟೆಂಬರ್ ಒಂದೇ ತಿಂಗಳಿನಿಲ್ಲಿ ನೈಋತ್ಯ ರೈಲ್ವೆ ರಕ್ಷಣಾ ಪಡೆ ಮಾಡಿರುವ ಸಾಧನೆಗಳು ಎಷ್ಟಿವೆ ನೋಡಿ!

October 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!