ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಡಿ.ಕೆ. ಶಿವಕುಮಾರ್ #DKShivakumar ಅವರು ಇಂದು ಮುಖ್ಯಮಂತ್ರಿ ಹುದ್ದೆಗೆ ಪ್ರಮಾಣವಚನ ಸ್ವೀಕರಿಸಲಿದ್ದು, ಹಿರಿಯ ನಾಯಕ ಡಾ.ಜಿ. ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ #DCM ಸ್ಥಾನ ನೀಡುವುದು ಬಹುತೇಕ ಖಚಿತವಾಗಿದೆ.
ಡಿಸಿಎಂ ಹುದ್ದೆಗೆ ಪರಮೇಶ್ವರ್ ಆಯ್ಕೆ
ಕಾಂಗ್ರೆಸ್ ಹೈಕಮಾಂಡ್ #Congress ಆರಂಭದಲ್ಲಿ ಕೇವಲ ಮುಖ್ಯಮಂತ್ರಿ ಹುದ್ದೆಯನ್ನಷ್ಟೇ ಸೃಷ್ಟಿಸುವ ಯೋಚನೆ ಮಾಡಿದ್ದರೂ, ಪಕ್ಷದ ಒಳಗಿನ ಸಮತೋಲನ ಹಾಗೂ ವಿವಿಧ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡುವ ಉದ್ದೇಶದಿಂದ ಡಿಸಿಎಂ ಹುದ್ದೆ ಸೃಷ್ಟಿಸಲು ತೀರ್ಮಾನಿಸಿದೆ.
Also Read>> ಚಿಕ್ಕಮಗಳೂರು-ಯಶವಂತಪುರ, ಬೆಂಗಳೂರು-ಹೊಸಪೇಟೆ ಸೇರಿ ಹಲವು ರೈಲುಗಳ ಬಿಗ್ ಅಪ್ಡೇಟ್
ಪಕ್ಷದ ಹಿರಿಯ ದಲಿತ ನಾಯಕನಾದ ಡಾ. ಪರಮೇಶ್ವರ್ #DrGParameshwar ಅವರಿಗೆ ಈ ಹುದ್ದೆ ನೀಡುವ ಮೂಲಕ ದಲಿತ ಸಮುದಾಯಕ್ಕೆ ಪ್ರಾಮುಖ್ಯತೆ ನೀಡಲಾಗಿದೆ ಎನ್ನಲಾಗುತ್ತಿದೆ.
ಸಿದ್ದರಾಮಯ್ಯ ಒತ್ತಡ ಪರಿಣಾಮ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ #Siddharamaiah ಅವರು ಪರಮೇಶ್ವರ್ ಪರವಾಗಿ ಗಟ್ಟಿಯಾಗಿ ನಿಂತಿದ್ದು, ಅವರ ದೀರ್ಘಕಾಲದ ಪಕ್ಷ ಸೇವೆಯನ್ನು ಗಮನದಲ್ಲಿಟ್ಟುಕೊಂಡು ಗೌರವಯುತ ಸ್ಥಾನ ನೀಡಬೇಕು ಎಂದು ಹೈಕಮಾಂಡ್ ಮುಂದೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಈ ಒತ್ತಡದ ಹಿನ್ನೆಲೆ ಹೈಕಮಾಂಡ್ ಅಂತಿಮವಾಗಿ ಒಪ್ಪಿಗೆ ನೀಡಿದೆ.
ಒಂದೇ ಡಿಸಿಎಂ – ಹೈಕಮಾಂಡ್ ನಿರ್ಧಾರ
ಹೊಸ ಸಚಿವ ಸಂಪುಟದಲ್ಲಿ ಡಿಸಿಎಂ ಹುದ್ದೆಗೆ ಹಲವು ನಾಯಕರು ಪೈಪೋಟಿ ನಡೆಸಿದರೂ, ರಾಜ್ಯದಲ್ಲಿ ಅಧಿಕಾರದ ಹಲವು ಕೇಂದ್ರಗಳು ನಿರ್ಮಾಣವಾಗಬಾರದು ಎಂಬ ಕಾರಣಕ್ಕೆ ಕೇವಲ ಒಬ್ಬರಿಗಷ್ಟೇ ಈ ಹುದ್ದೆ ನೀಡಲು ತೀರ್ಮಾನಿಸಲಾಗಿದೆ.
ಇದರಿಂದ ಪರಮೇಶ್ವರ್ ಅವರು ಹೊಸ ಸರ್ಕಾರದಲ್ಲಿ “ಸೆಕೆಂಡ್ ಇನ್ ಕಮಾಂಡ್” ಆಗಿ ಹೊರಹೊಮ್ಮಲಿದ್ದಾರೆ.
ಸತೀಶ್ ಜಾರಕಿಹೊಳಿ ಬೇಡಿಕೆ
ಇನ್ನೊಂದೆಡೆ, ಹಿರಿಯ ನಾಯಕ ಸತೀಶ್ ಜಾರಕಿಹೊಳಿ ಅವರು ಸಚಿವ ಸ್ಥಾನ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ ಬೇಡಿಕೆ ಇಟ್ಟಿದ್ದು, ಈ ಕುರಿತು ಹೈಕಮಾಂಡ್ ಮೇಲೆ ಒತ್ತಡ ತಂದಿದ್ದಾರೆ.
ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್
ಆದರೆ, ಎರಡು ಹುದ್ದೆಗಳನ್ನು ನೀಡಲು ಹೈಕಮಾಂಡ್ ಹಿಂಜರಿಯುತ್ತಿರುವುದಾಗಿ ತಿಳಿದುಬಂದಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಿ.ಕೆ. ಹರಿಪ್ರಸಾದ್ ಅವರ ಹೆಸರು ಪರಿಗಣನೆಯಲ್ಲಿ ಇದೆ.
ಸಂಪುಟಕ್ಕೆ ಸೇರ್ಪಡೆಗೊಳ್ಳುವ ಸಾಧ್ಯತೆ ಇರುವವರಲ್ಲಿ ಕೆ.ಜೆ. ಜಾರ್ಜ್, ಡಾ. ಜಿ. ಪರಮೇಶ್ವರ, ರಾಮಲಿಂಗ ರೆಡ್ಡಿ, ಕೃಷ್ಣ ಬೈರೇಗೌಡ, ಯು.ಟಿ. ಖಾದರ್, ಮಲ್ಲನಗೌಡ ಬಸನಗೌಡ ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಡಾ. ಯತೀಂದ್ರ ಸಿದ್ದರಾಮಯ್ಯ, ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಕೆ.ಎಚ್. ಮುನಿಯಪ್ಪ ಅಥವಾ ಅವರ ಪುತ್ರಿ ರೂಪಕಲಾ ಶಶಿಧರ್ ಸೇರಿದ್ದಾರೆ.
ರಾಜ್ಯ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ತೀವ್ರ ಚರ್ಚೆ ನಡೆಸುತ್ತಿದ್ದು, ಮೊದಲ ಪಟ್ಟಿಯಲ್ಲಿ ಕೆಲವು ಪ್ರಮುಖ ನಾಯಕರಿಗೆ ಅವಕಾಶ ಸಿಗದೇ ಇರಬಹುದೆಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.
ಲಕ್ಷ್ಮಿ ಹೆಬ್ಬಾಳ್ಕರ್’ಗೆ ಮೊದಲ ಪಟ್ಟಿಯಲ್ಲಿ ಅವಕಾಶ ಅನುಮಾನ
ಮೂಲಗಳ ಪ್ರಕಾರ, ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಮೊದಲ ಹಂತದ ಸಚಿವರ ಪಟ್ಟಿಯಲ್ಲಿ ಸ್ಥಾನ ಸಿಗುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ. ಈ ಬೆಳವಣಿಗೆ ಉತ್ತರ ಕರ್ನಾಟಕದ ರಾಜಕೀಯ ಸಮೀಕರಣಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ಗುಂಡೂರಾವ್, ಖಂಡ್ರೆ ಹೆಸರುಗಳು ಮುಂಚೂಣಿಯಲ್ಲಿ
ಮಾಜಿ ಸಚಿವರಾದ ದಿನೇಶ್ ಗುಂಡೂರಾವ್ ಮತ್ತು ಈಶ್ವರ್ ಖಂಡ್ರೆ ಅವರ ಹೆಸರುಗಳು ಸಚಿವ ಸ್ಥಾನಕ್ಕಾಗಿ ಪ್ರಬಲವಾಗಿ ಕೇಳಿಬರುತ್ತಿವೆ. ಇಬ್ಬರೂ ಹಿರಿಯ ನಾಯಕರು ಆಗಿರುವುದರಿಂದ ಸಂಪುಟದಲ್ಲಿ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗುತ್ತಿದೆ.
ಜಮೀರ್ ಅಹ್ಮದ್ ಖಾನ್ಗೆ ಹಿನ್ನಡೆ
ಆಡಿಯೋ ಸೋರಿಕೆ ಆರೋಪದ ಹಿನ್ನೆಲೆ ಜಮೀರ್ ಅಹ್ಮದ್ ಖಾನ್ ಅವರ ಸಚಿವ ಸ್ಥಾನ ಸಾಧ್ಯತೆಗಳಿಗೆ ಹಿನ್ನಡೆ ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ.
ಪ್ರಮಾಣವಚನ ಸಮಾರಂಭ
ಇಂದು ಬೆಂಗಳೂರಿನಲ್ಲಿ ನಡೆಯಲಿರುವ ಪ್ರಮಾಣವಚನ ಸಮಾರಂಭದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅರ್ಧ ದಿನದ ರಜೆ ಘೋಷಣೆ ಮಾಡಿದೆ.
ಒಟ್ಟಾರೆ, ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಸಮುದಾಯ ಸಮತೋಲನ ಮತ್ತು ಪಕ್ಷದ ಒಗ್ಗಟ್ಟನ್ನು ಕಾಪಾಡುವ ದಿಕ್ಕಿನಲ್ಲಿ ಈ ನಿರ್ಧಾರ ಮಹತ್ವದ ಹೆಜ್ಜೆ ಎಂದು ವಿಶ್ಲೇಷಿಸಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















