ಕಲ್ಪ ಮೀಡಿಯಾ ಹೌಸ್ | ಪಾಟ್ನಾ |
ಇಲ್ಲಿನ ಕನ್ವರ್ ಯಾತ್ರೆ ವೇಳೆ ನಡೆಯುತ್ತಿದ್ದ ಡಿಜೆ ವಾಹನಕ್ಕೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿದ ಪರಿಣಾಮವಾಗಿ 9 ಮಂದಿ ಯಾತ್ರಿಗಳು ದುರಂತ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಬಿಹಾರದ ವೈಶಾಲಿಯಲ್ಲಿ ನಡೆದಿದೆ.
ಸುಲ್ತಾನ್ಪುರ ಗ್ರಾಮದ ಯುವಕರನ್ನು ಒಳಗೊಂಡ ತಂಡವು ಸೋನ್ಪುರ ಬಾಬಾ ಹರಿಹರನಾಥದಲ್ಲಿ ಜಲಾಭಿಷೇಕ ಮಾಡಲು ಗಂಗಾಜಲವನ್ನು ಹೊತ್ತು ಸರನ್ ಪಹೇಲಜಾಘಾಟ್’ಗೆ ತೆರಳುತ್ತಿತ್ತು.
Also read: ಬೆಂಗಳೂರು | ಸಿಸಿಬಿ ಅಧಿಕಾರಿ ತಿಮ್ಮೇಗೌಡ ಆತ್ಮಹತ್ಯೆ | ಕಾರಣವೇನು?

ಘಟನೆಯಲ್ಲಿ ಆರು ಮಂದಿಗೆ ಗಾಯಗಳಾಗಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಹಾಜಿಪುರ ಕೈಗಾರಿಕಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 











Discussion about this post