ಚಳ್ಳಕೆರೆ: ತಾಲೂಕಿನಾದ್ಯಂತ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಚಳ್ಳಕೆರೆಯನ್ನು ಮಾದರಿ ವಿಧಾನಸಭಾ ಕ್ಷೇತ್ರ ಮಾಡುವುದಕ್ಕೆ ಶ್ರಮ ವಹಿಸಲಾಗುತ್ತಿದೆ ಎಂದು ಶಾಸಕ ಟಿ. ರಘುಮೂರ್ತಿ ತಿಳಿಸಿದರು.
ತಾಲೂಕಿನ ಸೋಮಗುದ್ದು ಗ್ರಾಮಪಂಚಾಯ್ತಿ ವ್ಯಾಪ್ತಿಯ ಚಿಕ್ಕ ಮಧುರೆ ಸಮೀಪ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ಯೋಜನೆ ಅಡಿಯಲ್ಲಿ ರೂ.3 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ ಕಾಮಗಾರಿ ಪರಿಶೀಲಿಸಿ ಮಾತನಾಡಿದರು.
ಚಿಕ್ಕ ಮಧುರೆ ಗ್ರಾಮದ ಸಮೀಪ ಕೆಆರ್’ಡಿಸಿಎಲ್ ಯೋಜನೆಯ ರೂ.3ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸೇತುವೆಯಿಂದ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದಂತಾಗುತ್ತದೆ. ಈ ಸ್ಥಳದಲ್ಲಿ ಮಳೆಯಾದರೆ ಪಕ್ಕದಲ್ಲಿ ಇರುವ ಹಳ್ಳದಿಂದ ರಸ್ತೆಯ ಮೇಲೆ ನೀರು ಹರಿದು ರಸ್ತೆ ಸಂಚಾರಕ್ಕೆ ಅಡ್ಡಿ ಏರ್ಪಡುತ್ತಿತ್ತು. ಇದರಿಂದ ಸಾರ್ವಜನಿಕರು ಸಮಸ್ಯೆ ಎದುರಿಸುವಂತಾಗಿತ್ತು. ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಸೇತುವೆಯನ್ನು ನಿರ್ಮಿಸಲಾಗುತ್ತಿದ್ದು ದ್ವಿಚಕ್ರ ವಾಹನ, ಬಸ್ ಸೇರಿದಂತೆ ಹಲವು ವಾಹನಗಳ ಸಂಚಾರಕ್ಕೆ ಅನುಕೂಲವಾಗುತ್ತಿದೆ ಎಂದರು.
ಚಿಕ್ಕಮಧುರೆ ಕೆರೆ ಕೋಡಿ ಬಿದ್ದ ಸಂದರ್ಭಗಳಲ್ಲಿ ಇಲ್ಲಿನ ರಸ್ತೆಯಿಂದ ಸೊಂಡೆಕೆರೆ ಕಡೆಗೆ ಹೋಗು ರಸ್ತೆ ಸಂಪರ್ಕ ಸಂಪೂರ್ಣ ಕಡಿತವಾಗುತ್ತಿತ್ತು. ಇದರಿಂದ ಸಾವಿರಾರು ಪ್ರಯಾಣಿಕರಿಗೆ ಸಮಸ್ಯೆ ಉಂಟಾಗುತ್ತಿತ್ತು. ಈ ನಿಟ್ಟಿನಲ್ಲಿ ಕೆಆರ್’ಡಿಸಿಎಲ್ ಯೋಜನೆಯ ರೂ.3 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಸೇತುವೆ ನಿರ್ಮಾಣ ಮಾಡಲಾಗುತ್ತಿದೆ. ಇದರಿಂದ ಹಲವು ಗ್ರಾಮಗಳ ಸಾರ್ವಜನಿಕರಿಗೆ ಉಪಯೋಗವಾಗಲಿದೆ. ಜತೆಗೆ ಇಲ್ಲಿನ ರಸ್ತೆ ತಿರುವಿನಲ್ಲಿ ಹಲವು ಅಪಘಾತಗಳು ಸಹ ನಡೆಯುತ್ತಿದ್ದವು. ಆದ್ದರಿಂದ ರಸ್ತೆಗೆ ಸೇತುವೆ ನಿರ್ಮಿಸುವುದು ಮತ್ತು ನೇರವಾದ ರಸ್ತೆ ಕಾಮಗಾರಿ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗತ್ತಿದೆ ಎಂದರು.
ಜಿಲ್ಲಾ ಪಂಚಾಯ್ತಿ ಸದಸ್ಯ ಬಿ.ಪಿ. ಪ್ರಕಾಶ್ ಮೂರ್ತಿ, ತಾಲೂಕು ಪಂಚಾಯ್ತಿ ಸದಸ್ಯ ಎಚ್. ಆಂಜನೇಯ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಸುರೇಶ್ ಬಾಬು, ಕೆಆರ್’ಡಿಸಿಎಲ್ ಎಂಜಿನಿಯರ್ ಲಿಂಗರಾಜು, ಮುಖಂಡರಾದ ಆರ್. ಮಲ್ಲೇಶಪ್ಪ, ಹನುಮಂತಪ್ಪ, ಮಲ್ಲಿಕಾರ್ಜುನ, ಚನ್ನಕೇಶವ, ಕುರುಡಿಹಳ್ಳಿ ಲಂಬಾಣಿಹಟ್ಟಿ ಎಸ್. ಪುರುಷೋತ್ತಮ ನಾಯ್ಕ ಹನುಮಂತಪ್ಪ ಚಿಕ್ಕಮಧುರೆ ಗ್ರಾಮಸ್ಥರು ಇದ್ದರು.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)
Discussion about this post