ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಪ್ರಪಂಚವನ್ನೇ ಅಲ್ಲೋಲಕಲ್ಲೋಲ ಮಾಡಿ, ಸಾಲು ಸಾಲು ಬಲಿ ಪಡೆಯುತ್ತಿರುವ ಕೊರೋನಾ ವೈರಸ್ ದೇಶದಲ್ಲಿ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 22ರ ಭಾನುವಾರ ದೇಶದಾದ್ಯಂತ ಜನತಾ ಕರ್ಫ್ಯೂ ಘೋಷಣೆ ಮಾಡಲಾಗಿದೆ.
ಕೋರೋನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಈ ಘೋಷಣೆ ಮಾಡಿದ್ದು, ವೈರಸ್ ನಿಂದ ಕಾಪಾಡಿಕೊಳ್ಳಲು ಜನತಾ ಕರ್ಫೂ ಅವಶ್ಯಕತೆಯಿದೆ. ಅಂದು ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೂ ಇದು ಜಾರಿಯಲ್ಲಿರುತ್ತದೆ ಎಂದು ತಿಳಿಸಿದರು.
My address to the nation. #IndiaFightsCorona https://t.co/w3nMRwksxJ
— Narendra Modi (@narendramodi) March 19, 2020
ಜನತಾ ಕರ್ಫೂ ಸಂದರ್ಭ ಮನೆಯಿಂದ ಯಾರು ಹೊರಗೆ ಬರಬಾರದು. ಅಗತ್ಯವಿದ್ದರೆ ಮಾತ್ರ ಹೊರಗೆ ಬನ್ನಿ. ಆ ದಿನ ಸಂಜೆ 5 ಗಂಟೆಗೆ ಮನೆಗಳ ಬಾಗಿಲು, ಬಾಲ್ಕನಿ , ಕಿಟಕಿ ಬಳಿ ಚಪ್ಪಾಳೆ ಹೊಡೆಯುವ ಮೂಲಕ ಬೇರೆಯವರಿಗೆ ಧನ್ಯವಾದ ಆರ್ಪಿಸೋಣ ಎಂದು ತಿಳಿಸಿದರು.
ಪ್ರಧಾನಿ ಭಾಷಣದ ಹೈಲೈಟ್ಸ್:
- ಕಳೆದ ಎರಡು ತಿಂಗಳಿನಿಂದ ಕೊರೋನಾವೈರಸ್ ಜಗತ್ತಿನಾದ್ಯಂತ ವ್ಯಾಪಿಸುತ್ತಿದ್ದು, ಮನುಕುಲ ಸಂಕಷ್ಟಕ್ಕೆ ಸಿಲುಕಿದೆ
- ನನಗೆ ನಿಮ್ಮ ಸಮಯ ಬೇಕು, ಈ ಮಹಾಮಾರಿಯಿಂದ ಬಚಾವಾಗಲು ವಿಜ್ಞಾನದಲ್ಲಿ ಯಾವುದೇ ಪರಿಹಾರ ಸದ್ಯಕ್ಕೆ ಸಿಕ್ಕಿಲ್ಲ
- ಕೋವಿಡ್ 19 ಬೇರೆ ದೇಶಗಳಲ್ಲಿ ಹಬ್ಬಿರುವ ರೀತಿಯನ್ನು ನಾವು ನೋಡಿದಲ್ಲಿ ಅದು ಇದ್ದಕ್ಕಿದ್ದಂತೆ ಸಾಂಕ್ರಾಮಿಕವಾಗಿ ಹಬ್ಬಿದೆ.
- ಈ ಸೋಂಕಿಗೆ ಈವರೆಗೂ ಯಾವುದೇ ಲಸಿಕೆ ಕಂಡುಹಿಡಿಯುವಲ್ಲಿ ವಿಜ್ಞಾನ ವಲಯ ವಿಫಲವಾಗಿದೆ
- ಪ್ರತಿಯೊಬ್ಬ ಭಾರತೀಯರು ಮುಂಜಾಗ್ರತಾ ವಹಿಸಬೇಕಾದದ್ದು ಅಗತ್ಯವಾಗಿದೆ
- ಕೊರೋನಾವೈರಸ್ ತಡೆಗಾಗಿ ಭಾರತ ಸರ್ಕಾರ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿದ್ದು, ಹಣಕಾಸು ಸಚಿವರ ನೇತೃತ್ವದಲ್ಲಿ ಕೋವಿಡ್ ಟಾಸ್ಸ್ ಪೋರ್ಸ್ ರಚಿಸಿದೆ
- ತನ್ನ ನಾಗರಿಕರನ್ನು ಹೆಚ್ಚು ಪ್ರತ್ಯೇಕವಾಗಿರಿಸಿದ ರಾಷ್ಟ್ರಗಳು ಈ ಮಹಾಮಾರಿಯನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಆದರೆ ಇದಕ್ಕೆ ಭಾರತದಲ್ಲಿ ನಿಮ್ಮೆಲ್ಲರ ಭಾಗೀದಾರಿಕೆ ಅತ್ಯಗತ್ಯವಾಗಿದೆ
- ನಮ್ಮಲ್ಲಿ ಈ ಮಹಾಮಾರಿಯನ್ನು ಎದುರಿಸುವಲ್ಲಿ ಎರಡು ವಿಷಯಗಳು ಪ್ರಮುಖವಾಗಿರುತ್ತದೆ ಒಂದು ಸಂಕಲ್ಪ’ ಮತ್ತು ಇನ್ನೊಂದು ಸಂಯಮ’.
- ನಾವು ಸ್ವಾಸ್ಥ್ಯವಾಗಿದ್ದರೆ ಜಗತ್ತು ಸ್ವಾಸ್ಥ್ಯವಾಗಿರುತ್ತದೆ’ ಎಂಬುದು ನಮ್ಮ ಮೂಲಮಂತ್ರವಾಗಲಿ
- ಇದು ನಮ್ಮ ಸ್ವಯಂ ನಿರ್ಬಂಧದ ಪ್ರತೀಕವಾಗಲಿ. ಇದು ಈ ಮಾರಕ ವೈರಸ್ ವಿರುದ್ಧ ಮುಂಬರುವ ದಿನಗಳಲ್ಲಿ ನಮ್ಮ ಹೋರಾಟಕ್ಕೆ ಮುನ್ನುಡಿಯಾಗಲಿ
- ಈ ಸಂದರ್ಭದಲ್ಲಿ ದೇಶದಲ್ಲಿರುವ ಆಸ್ಪತ್ರೆಗಳಲ್ಲಿ ಯಾವುದೇ ಒತ್ತಡ ಉಂಟಾಗದಂತೆ ನೋಡಿಕೊಳ್ಳಬೇಕು. ವೈದ್ಯಕೀಯ ನೆರವು
- ಅಗತ್ಯವಿರುವವರು ತಮ್ಮ ಕುಟುಂಬ ವೈದ್ಯರಲ್ಲಿ ದೂರವಾಣಿ ಮೂಲಕವೇ ಆರೋಗ್ಯ ಸಲಹೆಯನ್ನು ಪಡೆದುಕೊಳ್ಳಿ
- ಈ ಸಂದರ್ಭದಲ್ಲಿ ವ್ಯಾಪಾರಿ ವರ್ಗ ಮತ್ತು ಕಾರ್ಮಿಕ ವರ್ಗದವರ ಜೊತೆಯಲ್ಲಿ ಮಾನವೀಯ ರೀತಿಯಲ್ಲಿ ವ್ಯವಹರಿಸುವುದು ಅಗತ್ಯವಿರುತ್ತದೆ
- ದೇಶದಲ್ಲಿ ಅಗತ್ಯ ವಸ್ತುಗಳ ಪೂರೈಕೆಯನ್ನು ಯಾವುದೇ ರೀತಿಯಲ್ಲಿ ಕಡಿಮೆಗೊಳಿಸುವುದಿಲ್ಲ. ಈ ವಿಚಾರದಲ್ಲಿ ಜನರು ಗಾಬರಿಗೊಳ್ಳುವ ಅಗತ್ಯವಿಲ್ಲ.
- ಈ ಮಹಾಮಾರಿಯ ವಿರುದ್ಧ ಮಾನವ ಜಾತಿ ವಿಜಯವಾಗಲಿ, ಭಾರತ ವಿಜಯಿಯಾಗಲಿ.. ಧನ್ಯವಾದಗಳು.
Get in Touch With Us info@kalpa.news Whatsapp: 9481252093
Discussion about this post