ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ದೇಶದಾದ್ಯಂತ ಇಂಧನ ಉಳಿತಾಯ ಹಾಗೂ ಮಿತವ್ಯಯ ಕ್ರಮ ಕೈಗೊಳ್ಳಲು ದೇಶವಾಸಿಗಳಿಗೆ ಹಲವು ಸಲಹೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ #NarendraModi ಅವರು ತಾವೇ ಸ್ವತಃ ಅದನ್ನು ಪಾಲಿಸಿ ಮಾದರಿಯಾಗಿದ್ದಾರೆ.
ಹೌದು… ಪಶ್ಚಿಮ ಏಷ್ಯಾದಲ್ಲಿ ಯುದ್ಧದಿಂದ ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಸಂಕಷ್ಟ ಮತ್ತು ಜಾಗತಿಕ ಕಚ್ಚಾ ತೈಲ ಬೆಲೆ ಏರಿಕೆಯ ನಡುವೆಯೇ ಇಂಧನ ಉಳಿತಾಯ ಮಾಡಲು ಪ್ರಧಾನಿಯವರು ದೇಶವಾಸಿಗಳಿಗೆ ಕರೆ ನೀಡಿದ್ದಾರೆ.
Also Read>> ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಸಮಯದಲ್ಲಿ ಬದಲಾವಣೆ | ಭಕ್ತರಿಗೆ ಅನುಕೂಲ
ಅಲ್ಲದೇ, ಅದನ್ನು ಸ್ವತಃ ಅವರೇ ಪಾಲಿಸಿರುವ ಪ್ರಧಾನಿಯವರು, ತಮ್ಮ ಎಸ್’ಪಿಜಿ ಭದ್ರತಾ #SPGSecurity ಪಡೆಗೆ ನಿಯೋಜನೆಗೊಳ್ಳುವ ವಾಹನಗಳ ಸಂಖ್ಯೆಯ್ಲಿ ಶೇ.50ರಷ್ಟು ಕಡಿಮೆ ಮಾಡಲು ಆದೇಶಿಸಿದ್ದಾರೆ.
ಇತ್ತೀಚೆಗೆ ವಡೋದರಾ ಮತ್ತು ಗುವಾಹಟಿ ಭೇಟಿಗಳ ವೇಳೆ ಪ್ರಧಾನಿಯವರ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಕಡಿತಗೊಳಿಸಲಾಗಿತ್ತು.
ಪ್ರಧಾನಿಯವರ ಭದ್ರತಾ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಇಲ್ಲದಿದ್ದರೂ, ಅಮೆರಿಕಾ-ಇರಾನ್ ಸಂಘರ್ಷದಿಂದ ಉಂಟಾದ ಆರ್ಥಿಕ ಅನಿಶ್ಚಿತತೆಯ ಸಂದರ್ಭದಲ್ಲಿ ಜವಾಬ್ದಾರಿಯುತವಾಗಿ ಕಡಿಮೆ ಇಂಧನ ಬಳಕೆಗೆ ಪ್ರೋತ್ಸಾಹ ನೀಡುವುದು ಮತ್ತು ತಾವು ನುಡಿದಂತೆ ದೇಶದ ನಾಗರಿಕರ ಮುಂದೆ ಮಾದರಿಯಾಗಿ ನಡೆದುಕೊಳ್ಳುವುದು ಪ್ರಧಾನಿಯವರ ಉದ್ದೇಶವಾಗಿದೆ.
ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ಹೆಚ್ಚಳ
ಇದೇ ವೇಳೆ ಪ್ರಧಾನಿಯವರು ಭದ್ರತಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಬೆಂಗಾವಲು ವಾಹನ ಸಂಖ್ಯೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಸೂಚಿಸಿದೆ.
Why The Hell Did You Make Manya Surve a Hero?: Sanjay Gupta Opens Up on Underworld Threats
ಇದಕ್ಕಾಗಿ ಹೊಸ ವಾಹನಗಳನ್ನು ಖರೀದಿಸುವ ಬದಲಾಗಿ ಈಗಾಗಲೇ ಸರ್ಕಾರದಲ್ಲಿ ಇರುವ ಸಂಪನ್ಮೂಲ ಅಥವಾ ವಾಹನಗಳನ್ನೇ ಬಳಸಿಕೊಳ್ಳಲು ಮುಂದಾಗಿದೆ.
ಕೇಂದ್ರ ಸರ್ಕಾರದ ಕಾರ್ಯಯೋಜನೆಯಲ್ಲಿ ದೇಶದ ನಾಗರಿಕರು ಎಲೆಕ್ಟ್ರಿಕ್ ವಾಹನಗಳ ಹೆಚ್ಚುವರಿ ಬಳಕೆ, ಇಂಧನ ಬಳಕೆ ಕಡಿತ ಹಾಗೂ ಅನಗತ್ಯ ಪ್ರಯಾಣವನ್ನು ತಗ್ಗಿಸಲು ಆನ್ಲೈನ್ ಮೂಲಕ ಸಭೆಗಳನ್ನು ಹೆಚ್ಚೆಚ್ಚು ನಡೆಸುವಂತೆ ಸೂಚಿಸಲಾಗಿದೆ.
ಪಶ್ಚಿಮ ಏಷ್ಯಾದ ಅಸ್ಥಿರತೆಯಿಂದ ಉಂಟಾದ ಜಾಗತಿಕ ಆರ್ಥಿಕ ಒತ್ತಡಗಳಿಗೆ ಪ್ರತಿಕ್ರಿಯೆಯಾಗಿ ಈ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















