ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬಹು ನಿರೀಕ್ಷಿತ ದಕ್ಷಿಣ ಭಾರತದ ಮೊಟ್ಟ ಮೊದಲ ವಂದೇ ಭಾರತ್ ಹಾಗೂ ಭಾರತ್ ಕಾಶಿ ದರ್ಶನ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದರು.
ಕೆಎಸ್’ಆರ್ ಬೆಂಗಳೂರು ರೈಲು ನಿಲ್ದಾಣದಲ್ಲಿ ಎರಡೂ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಿಯವರು ಈ ಮೂಲಕ ದಕ್ಷಿಣ ಭಾರತದ ರೈಲ್ವೆ ವ್ಯವಸ್ಥೆಯಲ್ಲಿ ಹೊಸ ದಾಖಲೆಯನ್ನು ಬರೆದಿದ್ದಾರೆ.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿಯವರನ್ನು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸ್ವಾಗತಿಸಿದರು.
ಆನಂತರ ಪ್ಲಾಟ್ ಫಾರಂ 7ರಲ್ಲಿ ವಂದೇ ಭಾರತ್ ಎಕ್ಸ್’ಪ್ರೆಸ್ ರೈಲಿಗೆ ಚಾಲನೆ ನೀಡಿದ ಪ್ರಧಾನಿಯವರು ಇದಕ್ಕೂ ಮುನ್ನ ರೈಲಿನ ಒಳಗೆ ಪ್ರವೇಶಿಸಿ ಒಮ್ಮೆ ಪರಿಶೀಲನೆ ನಡೆಸಿದರು. ಅಲ್ಲದೇ ರೈಲಿನ ಒಳಗೆ ತೆರಳಿ ಕೆಲವು ಪ್ರಯಾಣಿಕರನ್ನು ಭೇಟಿಯಾಗಿ ಶುಭ ಕೋರಿದರು.
ಆನಂತರ, ಕಾಶಿ ವಿಶ್ವನಾಥ ದರ್ಶನಕ್ಕೆ ಯಾತ್ರಾರ್ಥಿಗಳಿಗಾಗಿ ವಿಶೇಷವಾಗಿ ಆರಂಭಿಸಿರುವ ಭಾರತ್ ಗೌರವ್ ಕಾಶಿ ದರ್ಶನ್ ರೈಲಿಗೂ ಸಹ ಹಸಿರು ನಿಶಾನೆ ತೋರಿದ ಪ್ರಧಾನಿಯವರು, ಪ್ರಯಾಣಿಕರತ್ತ ಕೈಬೀಸಿ ಶುಭ ಕೋರಿದರು.
ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿಯವರು, ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್ಪ್ರೆಸ್ ಸಂಪರ್ಕ ಸೌಲಭ್ಯದ ಜತೆಗೆ ವಾಣಿಜ್ಯ ಚಟುವಟಿಕೆಗಳನ್ನೂ ಹೆಚ್ಚಿಸುತ್ತದೆ. ಅದು ಜೀವನವನ್ನು ಹೆಚ್ಚು ಸುಗಮಗೊಳಿಸುತ್ತದೆ. ಈ ರೈಲಿನ ಸಂಚಾರಕ್ಕೆ ಬೆಂಗಳೂರಿನಲ್ಲಿ ಹಸಿರು ನಿಶಾನೆ ತೋರಿಸಿದ್ದಕ್ಕೆ ಸಂತಸವಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
The Chennai-Mysuru Vande Bharat Express will boost connectivity as well as commercial activities. It will also enhance ‘Ease of Living.’ Glad to have flagged off this train from Bengaluru. pic.twitter.com/zsuO9ihw29
— Narendra Modi (@narendramodi) November 11, 2022
ಈ ವೇಳೆ ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಂಸದ ಪ್ರತಾಪ್, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post