ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ಬಿಜೆಪಿಗೆ ಬಿ.ವೈ. ವಿಜಯೇಂದ್ರ #BYVijayendra ಅವರನ್ನು ಸರಿಯಾದ ಸಮಯದಲ್ಲಿ ಆಯ್ಕೆ ಮಾಡಿದ್ದು, ಇಷ್ಟು ದಿನ ಒಂದು ಲೆಕ್ಕ, ಇನ್ನು ಮುಂದೆ ಹೊಸ ಲೆಕ್ಕೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ #HDDevegowda ಅವರು ಸಂಸತದೊಂದಿಗೆ ವಿರೋಧಿಗಳಿಗೆ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರು ಬುಧವಾರ ಅಧಿಕಾರ ಸ್ವೀಕರಿಸಲಿದ್ದು, ಇದಕ್ಕೂ ಮುನ್ನ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಭೇಟಿಯಾಗಿ ಆರ್ಶೀವಾದ ಪಡೆದ ವೇಳೆ ಅವರು ಮಾತನಾಡಿದರು.
ವಿಜಯೇಂದ್ರ ಅವರೊಂದಿಗೆ ಮಾತನಾಡಿದ ದೇವೇಗೌಡರು, ಬಿಜೆಪಿ ವರಿಷ್ಠರು ಸರಿಯಾದ ಸಮಯಕ್ಕೆ ನಿಮ್ಮನ್ನು ಆಯ್ಕೆ ಮಾಡುವ ಮೂಲಕ ಸೂಕ್ತ ನಿರ್ಧಾರ ಕೈಗೊಂಡಿದ್ದಾರೆ. ಮೂರು ದಿನದ ಹಿಂದೆ ಒಂದು ಲೆಕ್ಕ, ಇನ್ನು ಮುಂದೆ ಹೊಸ ಲೆಕ್ಕ ಎಂದು ಮಾರ್ಮಿಕವಾಗಿ ಹೇಳುವ ಮೂಲಕ ವಿರೋಧಿಗಳಿಗೆ ಖಡಕ್ ಸಂದೇಶ ರವಾನಿಸಿದ್ದಾರೆ.
ದೇವೇಗೌಡರ ನಿವಾಸಕ್ಕೆ ಅಗಮಿಸಿದ ವಿಜಯೇಂಧ್ರ ಅವರನ್ನು ಸಂಸದ ಪ್ರಜ್ವಲ್ ರೇವಣ್ಣ #PrajwalRevanna ಆತ್ಮೀಯವಾಗಿ ಸ್ವಾಗತಿಸಿ ದೇವೇಗೌಡ ಬಳಿಯಲ್ಲಿ ಕರೆದುಕೊಂಡು ಹೋದರು. ದೇವೇಗೌಡರಿಗೆ ನಮಸ್ಕರಿಸಿದ ವಿಜಯೇಂದ್ರ ಅವರಿಗೆ ಶಾಲು ಹೊದಿಸಿ, ಹಣ್ಣಿನ ಬುಟ್ಟಿ ಕೊಟ್ಟು ಮಾಜಿ ಪ್ರಧಾನಿಯವರು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಿಜಯೇಂದ್ರ, ಗೌರವಾನ್ವಿತ ಮಾಜಿ ಪ್ರಧಾನಿ ಶ್ರೀ ಹೆಚ್.ಡಿ. ದೇವೇಗೌಡರನ್ನು ಅವರ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆಯಲಾಯಿತು. ಈ ವೇಳೆ ಅವರು ಪ್ರೀತಿಯಿಂದ ಸನ್ಮಾನಿಸಿ ಶುಭ ಹಾರೈಸಿದ್ದು ನನ್ನ ರಾಜಕೀಯ ಜೀವನದ ಅವಿಸ್ಮರಣಿಯ ಕ್ಷಣವಾಗಿಸಿತು. ಈ ಹೊತ್ತಿಗೂ ಸ್ಫೂರ್ತಿಯ ಚಿಲುಮೆ ಯಾಗಿರುವ ಅವರ ‘ಹೋರಾಟದ ಛಲ – ಆತ್ಮಸ್ಥೈರ್ಯದ ಬಲ’ ನನ್ನಂಥವರಿಗೆ ಸದಾ ಪ್ರೇರಣಾ ಶಕ್ತಿಯಾಗಿದೆ ಎಂದರು.
ಮುಂಬರುವ ಲೋಕಸಭಾ ಚುನಾವಣೆಗೆ #ParliamentElection2024 ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ದೇವೇಗೌಡರನ್ನು ವಿಜಯೇಂದ್ರ ಭೇಟಿಯಾಗಿರುವುದು ಅತ್ಯಂತ ಮಹತ್ವವನ್ನು ಪಡೆದುಕೊಂಡಿದೆ.
ಶಾಸಕರಾದ ಶ್ರೀ ಎಂ.ಕೃಷ್ಣಪ್ಪನವರು, ಶ್ರೀ ಸಿ.ಕೆ.ರಾಮಮೂರ್ತಿ ಅವರು, ಸಂಸದರಾದ ಶ್ರೀ ಪ್ರಜ್ವಲ್ ರೇವಣ್ಣ ಅವರು, ಮಾಜಿ ಶಾಸಕರಾದ ಶ್ರೀ ಡಿ.ಸಿ.ತಮ್ಮಣ್ಣನವರು ಉಪಸ್ಥಿತರಿದ್ದರು.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post