ಕಲ್ಪ ಮೀಡಿಯಾ ಹೌಸ್ | ವಯನಾಡ್ |
ವಯನಾಡ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ #RahulGandhi ವಿರುದ್ಧ ಕೇರಳ ಬಿಜೆಪಿ ಅಧ್ಯಕ್ಷ ಕೆ. ಸುರೇಂದ್ರನ್ #KSurendran ಅವರನ್ನು ಕಮಲ ಪಕ್ಷ ಕಣಕ್ಕಿಳಿಸಿದೆ.
ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ ನಂತರ ವಯನಾಡ್ #Wayanad ಕ್ಷೇತ್ರ ದೇಶದ ಗಮನ ಸೆಳೆದಿದೆ. ಈಗ ಅವರ ಎದುರಾಳಿಯಾಗಿ ರಾಜ್ಯಾಧ್ಯಕ್ಷರೇ ಕಣಕ್ಕಿಳಿಯುತ್ತಿರುವುದು ಕುತೂಹಲ ಹೆಚ್ಚಿಸಿದೆ.
ರಾಜೇಂದ್ರನ್ ನೇತೃತ್ವದಲ್ಲಿ ಕೇರಳದಲ್ಲಿ #Kerala ಬಿಜೆಪಿ ಬೆಳೆಯುತ್ತಿದ್ದು, ಈ ಬಾರಿ ಕಳೆದ ಬಾರಿಗಿಂತಲೂ ಉತ್ತಮ ಸಾಧನೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.
ಇನ್ನು, ರಾಜಂಪೇಟೆಯಿಂದ ಬಿಜೆಪಿಯಿಂದ ಆಂಧ್ರದ ಮಾಜಿ ಸಿಎಂ ಕಿರಣ್ ಕುಮಾರ್ ರೆಡ್ಡಿ ಕಣಕ್ಕಿಳಿದಿದ್ದಾರೆ. ಆಂಧ್ರದ ಬಿಜೆಪಿ ಅಧ್ಯಕ್ಷೆ ದಗುಬ್ಬಟಿ ಪುರಂದೇಶ್ವರಿ ಅವರು ರಾಜಮಂಡ್ರಿಯಿಂದ ಪಕ್ಷದಿಂದ ಕಣಕ್ಕಿಳಿದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















