No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Wednesday, April 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂಕಣ ಡಾ. ಮೈತ್ರೇಯಿ ಆದಿತ್ಯಪ್ರಸಾದ್

ತಾಯಿಯಾಗುವುದೆಂದರೆ… ಶಿವಮೊಗ್ಗದಲ್ಲಿ ಭಾನುವಾರ ಪೂಜಾ ರಘುನಂದನ್ ಏಕವ್ಯಕ್ತಿ ರಂಗ ಪ್ರದರ್ಶನ

ವಸುಧಾ ವೈಶಾಲಿ ಜನ್ಮದಿನೋತ್ಸವ ನಿಮಿತ್ತ ಕಲಾ ಸನ್ಮಾನ ಹಾಗೂ ಸನ್ಮಾನಿತ ಬಹುಮುಖ ಪ್ರತಿಭೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 30, 2026
in ಡಾ. ಮೈತ್ರೇಯಿ ಆದಿತ್ಯಪ್ರಸಾದ್
0
ತಾಯಿಯಾಗುವುದೆಂದರೆ… ಶಿವಮೊಗ್ಗದಲ್ಲಿ ಭಾನುವಾರ ಪೂಜಾ ರಘುನಂದನ್ ಏಕವ್ಯಕ್ತಿ ರಂಗ ಪ್ರದರ್ಶನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |ವಸುಧಾ ವೈಶಾಲಿ ಜನ್ಮದಿನೋತ್ಸವದ ಸಲುವಾಗಿ ಕಲಾ ಸನ್ಮಾನ ಸಮಾರಂಭದ ಗೌರವಕ್ಕೆ ಭಾಜನರಾದ ಶ್ರೀಮತಿ ಪೂಜಾ ರಘುನಂದನ್ ಕುಂದಾ ನಗರಿ ಎಂದೇ ಪ್ರಖ್ಯಾತವಾದ ಬೆಳಗಾವಿಯಲ್ಲಿ #Belgaum ಜನಿಸಿದರು. ಬಾಲ್ಯದಿಂದಲೇ ಕ್ರೀಡಾ ಚಟುವಟಿಕೆಯಲ್ಲಿ ಪ್ರಸಿದ್ಧಿಯಾಗಿ ರಾಜ್ಯ ಹಾಗೂ ರಾಷ್ಟ್ರಮಟ್ಟದ ಈಜು ಸ್ಪರ್ಧೆಗಳಲ್ಲಿ ಭಾಗವಹಿಸಿ ಅನೇಕ ಪದಕಗಳನ್ನು ಪಡೆದು ತಮ್ಮೂರಿಗೆ ಹೆಮ್ಮೆ ತಂದ ಪ್ರತಿಭೆ. ಇವರು ವಿವಾಹವಾಗಿ ಬಂದದ್ದು ಹಾಸನಕ್ಕೆ. #Hassan ಅಲ್ಲಿ ತಮ್ಮ ಚಟುವಟಿಕೆಗಳನ್ನು ವಿಸ್ತಾರಗೊಳಿಸಿ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯರಾದರು. ರಂಗಭೂಮಿ, ಸಮಾಜ ಸೇವೆ, ಪತ್ರಿಕಾ ರಂಗ, ಮಾಡಲಿಂಗ್, ಸಾಹಿತ್ಯ, ಸಂಗೀತ, ಸಂಘಟನೆ, ಶಿಕ್ಷಣ, ಆರೋಗ್ಯ ಹೀಗೆ ಆಡುಮುಟ್ಟದ ಸೊಪ್ಪಿಲ್ಲ ಎಂಬಂತೆ ತೊಡಗಿಸಿಕೊಂಡು ಬಹುಮುಖ ಪ್ರತಿಭೆ ಎಂದೆನಿಸಿಕೊಂಡವರಾಗಿದ್ದಾರೆ.

ಕಳೆದ ಹತ್ತು ವರ್ಷಗಳಿಂದ ಈಚೆ ಪೂಜಾ ರಘುನಂದನ್ #PoojaRaghunandan ಅವರು ರಂಗಭೂಮಿ ಕಲಾವಿದೆಯಾಗಿ ತಂತ್ರಜ್ಞಾನ ಕ್ಷೇತ್ರಕ್ಕೆ ನಿರಂತರವಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ರಾಜ್ಯದ ಪ್ರತಿಷ್ಠಿತ ವೇದಿಕೆಗಳಲ್ಲಿ ಕಾರ್ಯಕ್ರಮ ನೀಡಿರುವ ಹೆಗ್ಗಳಿಕೆ ಇವರದು. “ರಂಗ ಹೃದಯ” ಎಂಬ ತಂಡದೊಂದಿಗೆ ಐತಿಹಾಸಿಕ, ಸಾಮಾಜಿಕ ನಾಟಕಗಳಲ್ಲಿ ನಾಯಕಿಯಾಗಿ ಹಾಗೂ ಪೋಷಕ ಪಾತ್ರಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿದ್ದಾರೆ. ನಂತರ ಇವರನ್ನು ಸೆಳೆದದ್ದು ಮಕ್ಕಳ ರಂಗಭೂಮಿಯ ಕ್ಷೇತ್ರ. ಹಾಸನದಲ್ಲಿ ಇವರು ಮೊಟ್ಟಮೊದಲ ಬಾರಿಗೆ ಮಕ್ಕಳರಂಗ ಶಿಬಿರವಾದ “ಕುಣಿಯೋಣು ಬಾರ” #KuniyonuBara ವನ್ನು ಆರಂಭಿಸಿ ಅದರ ನಿರ್ದೇಶಕರಾಗಿ ಅತ್ಯಂತ ಯಶಸ್ವಿಯಾಗಿ ಅದನ್ನು ಮುನ್ನಡೆಸುತ್ತಾ ಬಂದಿದ್ದಾರೆ.

ಕಲಾಕ್ಷೇತ್ರದಲ್ಲಿ ಇವರ ಕೊಡುಗೆ ಅಪಾರ. ಸ್ಮಶಾನ ಕಾಯುವ ಕೆಲಸ ಮಾಡುವ ಮಹಿಳೆಯ ಜೀವನ ಕಥೆ ಆಧರಿಸಿದ ‘ಕೊನೆಯ ನಿಲ್ದಾಣ’ ಚಿತ್ರದ ನಾಯಕಿಯಾಗಿ ಅಭಿನಯಿಸಿ ಉತ್ತಮ ಪ್ರದರ್ಶನ ನೀಡಿರುವುದೇ ಅಲ್ಲದೆ, ಸುಮಾರು ಹತ್ತಕ್ಕೂ ಅಧಿಕ ಕಲಾತ್ಮಕ ಚಿತ್ರಗಳಲ್ಲಿ ನಾಯಕಿಯಾಗಿ ಅಭಿನಯಿಸಿದ ಹೆಗ್ಗಳಿಕೆ ಇವರದು. ಕನ್ನಡದ ಖ್ಯಾತ ನಟ ಕೆ ಸುಚೇಂದ್ರ ಪ್ರಸಾದ್ ಅವರು ನಾಯಕನಾದ ಸಿನೆಮಾ ‘ಒಂದಾನೊಂದು ಕಾಲದಾಗ’ ಎಂಬ ಚಿತ್ರದಲ್ಲಿ ನಾಯಕಿಯಾಗಿ ಉತ್ತಮ ಅಭಿನಯವನ್ನು ನೀಡಿರುತ್ತಾರೆ. ಅದು ಗೋವಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿಯೂ ಪ್ರದರ್ಶಿತವಾಗಿದೆ.ಪಿಆರ್ ಸ್ಪೆಷಲ್ ಯೂಟ್ಯೂಬ್ ಚಾನೆಲ್ ಮುಖಾಂತರ ಹಾಸನದ ಸ್ಥಳೀಯ ಅನೇಕ ಹೊಸ ಪ್ರತಿಭೆಗಳಿಗೆ ವೇದಿಕೆಯನ್ನು ಕಲ್ಪಿಸಿಕೊಟ್ಟ ಶ್ರೀಮಂತ ವ್ಯಕ್ತಿತ್ವ ಇವರದು. ಅಲ್ಲದೆ ಇವರು ‘ಪರಿದೃಶ್ಯ’ ಅಂತಾರಾಷ್ಟ್ರೀಯ ಚಿತ್ರೋತ್ಸವದ ತೀರ್ಪುಗಾರರಲ್ಲೊಬ್ಬರಾಗಿದ್ದರು. ಭಾರತ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಖಾತೆಯಲ್ಲಿನ ಸೆನ್ಸಾರ್ ಬೋರ್ಡ್ ನ ಪ್ಯಾನಲ್ ಅಡ್ವೈಸರ್ ಸದಸ್ಯರಾಗಿ ಎರಡು ವರ್ಷಗಳ ಕಾಲ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ್ದ ದಿಟ್ಟೆ ಇವರು. ದೂರದರ್ಶನ ಚಂದನದ ವಿಜ್ಞಾನ ವಿಸ್ಮಯ ಎಂಬ ಸರಣಿ ಕಾರ್ಯಕ್ರಮದ ಕಂಠದಾನ ಕಲಾವಿದೆಯೂ ಹೌದು. ಸಮಾಜಮುಖಿಯಾದ ಇವರು ರೋಟರಿ ಕ್ಲಬ್ ಅಧ್ಯಕ್ಷರಾಗಿ ಹತ್ತು ಹಲವು ಗಮನಾರ್ಹ ಕಾರ್ಯ ಕೈಗೊಂಡು ಪ್ರಸಿದ್ಧರಾಗಿ, ಅನೇಕ ಸೇವಾ ಸಂಘಟನೆಗಳಲ್ಲಿಯೂ ಕೂಡ ಸಕ್ರಿಯ ಕಾರ್ಯಕರ್ತೆಯೂ ಆಗಿದ್ದಾರೆ.

ಕಲಾಸೇವೆಗಾಗಿ ಹಾಸನ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹತ್ತಾರು ಪ್ರಮುಖ ಎನಿಸುವ ಪ್ರಶಸ್ತಿಗಳು, ಸನ್ಮಾನಗಳು ಇವರನ್ನು ಅರಸಿ ಬಂದಿವೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಅವರೊಂದಿಗೆ ಸಂವಾದ ಮಾಡುವ ಅವಕಾಶ ದೊರೆತಿದ್ದು ಇವರ ಹೆಮ್ಮೆಯ ಸಂಗತಿಗಳಲ್ಲೊಂದು. ಪ್ರಸ್ತುತ ಶ್ರೀವಿದ್ಯಾ ಪ್ರತಿಷ್ಠಾನದ ಅಧ್ಯಕ್ಷೆ, ರಂಗ ಹೃದಯ ತಂಡದ ಕಾರ್ಯದರ್ಶಿ, ಸ್ಥಳೀಯ ದೈನಿಕ ಪತ್ರಿಕೆಯಾದ ಹೊಯ್ಸಳ ಪಥದ ಸಂಪಾದಕಿ, ಇನ್ನರ್ ವೀಲ್ ಸಂಸ್ಥೆಯ ಗೌರವ ಸದಸ್ಯರಾದ ಇವರು ಪ್ರಸ್ತುತ ಜಿಲ್ಲಾ ಆರೋಗ್ಯ ಸಮಿತಿಯ ಜಿಲ್ಲಾ ಸದಸ್ಯರಾಗಿ ಭ್ರೂಣ ಲಿಂಗ ಪತ್ತೆ ತಡೆಯುವಲ್ಲಿ ಕಾರ್ಯ ಪ್ರವೃತ್ತರಾಗಿದ್ದಾರೆ. ಸಮಾಜ ಸೇವೆ ಸಾಂಸ್ಕೃತಿಕ ಪ್ರಪಂಚ ಹಾಗೂ ಕುಟುಂಬವನ್ನೂ ಅತ್ಯುತ್ತಮವಾಗಿ ನಿಭಾಯಿಸುತ್ತಲೇ ನಾಡಿನಾದ್ಯಂತ ಹೆಸರು ಮಾಡಿರುವುದು ಇವರ ವೈಶಿಷ್ಟ್ಯವೇ ಸರಿ.

ತಾಯಿಯಾಗುವುದೆಂದರೆ…..
ತಾಯಿಯಾಗುವ ಪರಿಕಲ್ಪನೆಗೆ ಒಂದು ನಿರ್ದಿಷ್ಟ ವ್ಯಾಖ್ಯಾನ ಇದೆಯೇ ಇದಕ್ಕೆ ಉತ್ತರವೇ ಈ #OneManPlay ಏಕ ವ್ಯಕ್ತಿ ರಂಗ ಪ್ರಯೋಗ. ತಮ್ಮ ಜೀವನದಲ್ಲಿನ ನೈಜ ಘಟನೆಗಳನ್ನು ಆಧರಿಸಿ ಬರೆದ ಲೇಖನ ಅಮ್ಮ ಎಂದರೆ ಅದನ್ನು ನಾಡಿನ ಖ್ಯಾತ ನಿರ್ದೇಶಕ ಕೃಷ್ಣಮೂರ್ತಿ ಕವತ್ತಾರ್ ನಿರ್ದೇಶನದಲ್ಲಿ ತಾಯಿಯಾಗುವುದೆಂದರೆ.. ಎಂಬ ವಿಶಿಷ್ಟ ಏಕವ್ಯಕ್ತಿ ರಂಗ ಪ್ರಯೋಗವನ್ನು ಮಾಡಿ ಖ್ಯಾತನಾಮರಾಗಿದ್ದಾರೆ. ಈಗಾಗಲೇ ಇದು ರಾಜ್ಯಾದ್ಯಂತ 25ಕ್ಕೂ ಹೆಚ್ಚು ಪ್ರಯೋಗಗಳನ್ನು ಕಂಡಿದೆ.ಕಾನೂನಾತ್ಮಕವಾಗಿ ಮಕ್ಕಳನ್ನು ದತ್ತು ಪಡೆಯುವ ಪ್ರಕ್ರಿಯೆ ಕುರಿತ ಈ ಪ್ರಯೋಗ ಅನೇಕರಿಗೆ ಸ್ಪೂರ್ತಿಯಾಗಿ ಮಕ್ಕಳಿಲ್ಲದ ದಂಪತಿಗಳು ಮಕ್ಕಳನ್ನು ದತ್ತು ಪಡೆದಿದ್ದಾರೆ ಎಂಬುದು ಈ ಏಕವ್ಯಕ್ತಿಯ ಫಲಶ್ರುತಿಗಳಲ್ಲೊಂದಾಗಿದೆ. ಈ ರಂಗ ಪ್ರಯೋಗ ರಾಜ್ಯದ ಹಿರಿಯ ರಂಗ ಕರ್ಮಿಗಳು, ಕಲಾವಿದರು, ಅನೇಕ ಕಲಾಭಿಮಾನಿಗಳಿಂದ ಪ್ರಶಂಸೆಯ ಮಹಾಪೂರವೇ ಹರಿದು ಬಂದಿದೆ. ಕೆರೆಯ ನೀರನು ಕೆರೆಗೆ ಚೆಲ್ಲಿ ವರವ ಪಡೆದವರಂತೆ ಕಾಣಿರೋ ಹರಿಯ ಕರುಣದಲ್ಲಾದ ಭಾಗ್ಯವ ಹರಿಸಮರ್ಪಣೆ ಮಾಡಿ ಬದುಕಿರೋ… ಎಂಬ ದಾಸ ಶ್ರೇಷ್ಠ ಪುರಂದರದಾಸರ ಕೀರ್ತನೆಯ ಸಾಲುಗಳಂತೆ ಸಮಾಜದಿಂದ ಬಂದ ಹಣವನ್ನು ಸಮಾಜದ ಸದ್ವಿನಿಯೋಗಕ್ಕೆ ನೀಡುವ ಸಂಕಲ್ಪ ಮಾಡಿದ ಪೂಜಾರವರು ಕ್ಯಾನ್ಸರ್ ರೋಗಿಗಳಿಗೆ ಸಹಾಯಧನ, ಶಾಲೆಯ ನವೀಕರಣಕ್ಕೆ ಧನ ಸಹಾಯ ಸೇರಿದಂತೆ ಹತ್ತು ಹಲವು ಜನಪರ ಕಾರ್ಯಕ್ಕೆ ನೀಡುತ್ತಿರುವುದು ಅವರ ಸಾಮಾಜಿಕ ಕಳ ಕಳಿಯನ್ನು ತೋರಿಸುತ್ತದೆ.

ಹಿಂದೊಮ್ಮೆ ಶಿವಮೊಗ್ಗದಲ್ಲಿ ನಡೆದ ಈ ರಂಗ ಪ್ರಯೋಗ ಮತ್ತೆ ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ವಸುಧಾ ವೈಶಾಲಿ ಜನ್ಮದಿನೋತ್ಸವ ಸಮಿತಿಯಿಂದ ಆಯೋಜನೆ ಗೊಂಡಿದ್ದು ಬರುವ ಭಾನುವಾರ ಸಂಜೆ 5ಕ್ಕೆ ಕರ್ನಾಟಕ ಸಂಘದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ವಿಜೇತರಾದ ಶ್ರೀಮತಿ ಪೂಜಾ ರಘುನಂದನ್ ಅವರಿಗೆ ಗೌರವ ಸನ್ಮಾನ ಹಾಗೂ ನಂತರ ಏಕವ್ಯಕ್ತಿ ರಂಗ ಪ್ರಯೋಗ ತಾಯಿಯಾಗುವುದೆಂದರೆ… ಪ್ರದರ್ಶನಗೊಳ್ಳಲಿದೆ.

ಸುಮಾರು ನಾಲ್ಕು ದಶಕಗಳಿಂದಲೂ ತಮ್ಮ ಮಕ್ಕಳ ಜನ್ಮದಿನವನ್ನು ಕಲಾ ಸನ್ಮಾನದೊಂದಿಗೆ ಕಲೋತ್ಸವವಾಗಿ ಆಚರಿಸುತ್ತಾ ಬಂದಿರುವ ಡಾ. ವಿಘ್ನೇಶ್ ಎನ್. ಭಟ್ ಹಾಗೂ ಡಾ. ಸುಮಿತ್ರಾ.ವಿ ಭಟ್ ಅವರೂ ಸಹ ಆದರ್ಶಪ್ರಾಯರೇ. ಅವರ ಕುಟುಂಬವು ಸಹ ಸಮಾಜದಿಂದ ಪಡೆದದ್ದನ್ನು ಸಮಾಜಕ್ಕೆ ಹಿಂತಿರುಗಿಸುವಂತದ್ದೇ ಆಗಿದೆ. ತಮ್ಮ ಮಕ್ಕಳ ಹುಟ್ಟು ಹಬ್ಬದ ನಿಮಿತ್ತ ರಥಸಪ್ತಮಿಯ ಪರ್ವ ಕಾಲದಲ್ಲಿ ಸಾಹಿತ್ಯ ಸಂಗೀತ ನೃತ್ಯ ಯಕ್ಷಗಾನ ರಂಗಗಳ ಹಿರಿಯ ಹಾಗೂ ಹಲವು ಯುವ ಪ್ರತಿಭೆಗಳನ್ನು ಆಮಂತ್ರಿಸಿ ಅವರ ವಿದ್ಯೆಗೆ ತಲೆಬಾಗಿ ಅವರನ್ನು ಸನ್ಮಾನ ನಿಧಿ ಸಹಿತ ಗೌರವಿಸಿ ಸತ್ಕರಿಸುವುದು ಹಾಗೂ ಬಂದಿರುವ ಪುಟಾಣಿಗಳಿಗೆ ಉಡುಗೊರೆ ನೀಡಿ ಮಿತ್ರ ಭೋಜನದೊಂದಿಗೆ ಸಂಭ್ರಮಿಸುವುದು.ಮತ್ತೊಂದೆಡೆ ತಮ್ಮ ಮೊಮ್ಮಕ್ಕಳ ಜನ್ಮದಿನದ ಸಲುವಾಗಿ ಮಕ್ಕಳಿಗಾಗಿಯೇ ವಿಶೇಷ ಕಾರ್ಯಕ್ರಮ ಏರ್ಪಡಿಸಿ, ಸಾಮಾಜಿಕ ಅಭಿವೃದ್ಧಿಯ ದೆಸೆಯಲ್ಲಿ ಯುವ ತಂತ್ರಜ್ಞಾನಿಗಳು ಸಾಧಿಸಿದ ಹೊಸ ಆವಿಷ್ಕಾರಗಳಿಗಾಗಿ ಸ್ವರ್ಣ ಮತ್ತು ರಜತ ಪ್ರಶಸ್ತಿಗಳನ್ನು ನೀಡುತ್ತಾ ಬಂದಿದ್ದಾರೆ.

ಸನಾತನ ಹಿಂದೂ ಸಮಾಜದ ಪರಿಕಲ್ಪನೆಯೇ ಹಾಗೇ. ನಮ್ಮ ಸಂಸ್ಕೃತಿ ಸಂಸ್ಕಾರಗಳನ್ನು ಮುಂದಿನ ಪೀಳಿಗೆಗೆ ದಾಟಿಸುವ ನಿಟ್ಟಿನಲ್ಲಿ ತಂದೆ ತಾಯಿಯಾಗಿ, ಹಾಗೂ ಅಜ್ಜ-ಅಜ್ಜಿಯರಾಗಿ ಗುರುತರ ಕಾರ್ಯವನ್ನು ನಿರಂತರವಾಗಿ ಮಾಡುತ್ತಾ ಬಂದಿರುವುದು ನಿಜಕ್ಕೂ ಶ್ಲಾಘನೀಯ. ಈ ದಂಪತಿಗಳು ‘ವಸುದೈವ ಕುಟುಂಬಕಂ’ ಎಂಬ ಪರಿಕಲ್ಪನೆಯಲ್ಲಿ ತಮ್ಮ ಮನೆಗಷ್ಟೇ ಈ ಆಚರಣೆಯನ್ನು ಸೀಮಿತಗೊಳಿಸದೇ ಸಮಾಜಕ್ಕೆ ಸಂಸ್ಕಾರ ಸಂಸ್ಕೃತಿಯ ಸವಿ ಉಣ ಬಡಿಸುತ್ತಿದ್ದಾರೆ. ಇಂತಹ ವಿಶೇಷ ಕಾರ್ಯಕ್ರಮದಲ್ಲಿ ನಾವೆಲ್ಲರೂ ಭಾಗಿಯಾಗೋಣ. ಎಲ್ಲ ಕಾರ್ಯಕ್ರಮಗಳನ್ನು ಕಣ್ತುಂಬಿಸಿಕೊಳ್ಳೋಣ ಬನ್ನಿ ಭಾನುವಾರ ಸಂಜೆ ಸರಿಯಾಗಿ 5 ಗಂಟೆಗೇ ಬನ್ನಿ ಕರ್ನಾಟಕ ಸಂಘಕ್ಕೆ…..

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: DramaKannada News WebsiteKarnataka SanghaLatest News KannadaMythreyi PrasadPooja RaghunandanShimogaShivamoggaShivamogga NewsVasudha Vaishali Birthday Celebrationಏಕ ವ್ಯಕ್ತಿ ರಂಗ ಪ್ರಯೋಗಕಲಾಕ್ಷೇತ್ರಗೋವಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವಪೂಜಾ ರಘುನಂದನ್ಬೆಳಗಾವಿವಸುಧಾ ವೈಶಾಲಿ ಜನ್ಮದಿನೋತ್ಸವವಿಶೇಷ ಲೇಖನಹಾಸನ
Share205Tweet128Send
Previous Post

ದೇಹದಾರ್ಢ್ಯ ಸ್ಪರ್ಧೆ ಶಿಸ್ತು ಬದ್ಧ ಕ್ರೀಡಾ ಪ್ರಕಾರ: ಮೋಹನಕುಮಾರ್

Next Post

ಉಡುಪಿ | ಎಲ್ಲಾ ಸಿಟಿ ಬಸ್’ಗಳಿಗೆ ಡೋರ್ ಅಳವಡಿಕೆಗೆ ಜಿಲ್ಲಾಧಿಕಾರಿ ಡೆಡ್ ಲೈನ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಉಡುಪಿ | ಎಲ್ಲಾ ಸಿಟಿ ಬಸ್’ಗಳಿಗೆ ಡೋರ್ ಅಳವಡಿಕೆಗೆ ಜಿಲ್ಲಾಧಿಕಾರಿ ಡೆಡ್ ಲೈನ್

ಉಡುಪಿ | ಎಲ್ಲಾ ಸಿಟಿ ಬಸ್'ಗಳಿಗೆ ಡೋರ್ ಅಳವಡಿಕೆಗೆ ಜಿಲ್ಲಾಧಿಕಾರಿ ಡೆಡ್ ಲೈನ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮೈಸೂರು | ಭಕ್ತಿ ಭಾವದ ಕ್ಷೇತ್ರ-ಶ್ರೀ ವೆಂಕಟೇಶ್ವರ ಧ್ಯಾನ ಕೇಂದ್ರ | 23ರಿಂದ 8ನೇ ವಾರ್ಷಿಕೋತ್ಸವ ಸಂಭ್ರಮ

ಮೈಸೂರು | ಭಕ್ತಿ ಭಾವದ ಕ್ಷೇತ್ರ-ಶ್ರೀ ವೆಂಕಟೇಶ್ವರ ಧ್ಯಾನ ಕೇಂದ್ರ | 23ರಿಂದ 8ನೇ ವಾರ್ಷಿಕೋತ್ಸವ ಸಂಭ್ರಮ

April 22, 2026
ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ನಾಲ್ಕು ಸಾವು : ಸಚಿವ ಮಧುಬಂಗಾರಪ್ಪ

ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ನಾಲ್ಕು ಸಾವು : ಸಚಿವ ಮಧುಬಂಗಾರಪ್ಪ

April 22, 2026
ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲೂ ಉತ್ತಮ ಫಲಿತಾಂಶ: ಶಿಕ್ಷಣ ಸಚಿವ ಮಧುಬಂಗಾರಪ್ಪ

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲೂ ಉತ್ತಮ ಫಲಿತಾಂಶ: ಶಿಕ್ಷಣ ಸಚಿವ ಮಧುಬಂಗಾರಪ್ಪ

April 22, 2026
ಮೇ 15ರೊಳಗೆ ಶಿವಮೊಗ್ಗದ ಈ ಸಮಸ್ಯೆಗಳು ಬಗೆಹರಿಯದಿದ್ದರೆ ಉಗ್ರ ಹೋರಾಟ | ಕೆ.ಈ. ಕಾಂತೇಶ್ ಎಚ್ಚರಿಕೆ

ಮೇ 15ರೊಳಗೆ ಶಿವಮೊಗ್ಗದ ಈ ಸಮಸ್ಯೆಗಳು ಬಗೆಹರಿಯದಿದ್ದರೆ ಉಗ್ರ ಹೋರಾಟ | ಕೆ.ಈ. ಕಾಂತೇಶ್ ಎಚ್ಚರಿಕೆ

April 22, 2026
ಮುಸ್ಲಿಂರನ್ನು ಓಲೈಸುವ ಹಠ ಕಾಂಗ್ರೆಸ್ ಪಕ್ಷ ಇನ್ನೂ ಬಿಟ್ಟಿಲ್ಲ : ಕೆ.ಎಸ್. ಈಶ್ವರಪ್ಪ ದೂರು

ಮುಸ್ಲಿಂರನ್ನು ಓಲೈಸುವ ಹಠ ಕಾಂಗ್ರೆಸ್ ಪಕ್ಷ ಇನ್ನೂ ಬಿಟ್ಟಿಲ್ಲ : ಕೆ.ಎಸ್. ಈಶ್ವರಪ್ಪ ದೂರು

April 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL