ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಡಿ.26ರ ಗುರುವಾರ ಖಗ್ರಾಸ ಸೂರ್ಯಗ್ರಹಣ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಅಂದು ರಾಜ್ಯದ ಶಾಲಾ ಕಾಲೇಜುಗಳಿಗೆ ರಜೆ ನೀಡಬೇಕು ಎಂಬ ಒತ್ತಾಯ ಪೋಷಕರು ಹಾಗೂ ಕೆಲವು ವಿದ್ಯಾಸಂಸ್ಥೆಗಳ ಮುಖ್ಯಸ್ಥರಿಗೆ ರಾಜ್ಯ ಸರ್ಕಾರಕ್ಕೆ ಬಂದಿದೆ ಎಂದು ಹೇಳಲಾಗಿದೆ.
ಗುರುವಾರ ಮುಂಜಾನೆ 8.04ರಿಂದ 11.04ರವರೆಗೂ ಸೂರ್ಯಗ್ರಹಣ ಸಂಭವಿಸಲಿದ್ದು, ಹಿಂದೂ ಧರ್ಮಶಾಸ್ತ್ರ ಹಾಗೂ ನಂಬಿಕೆಯಂತೆ ಈ ವೇಳೆಯಲ್ಲಿ ಆಹಾರ ಸೇವನೆ ನಿಷಿದ್ಧವಾಗಿದೆ. ಈ ವೇಳೆಯಲ್ಲಿ ಆಹಾರ ಸೇವನೆ ಮಾಡಿದರೆ ತೊಂದರೆಯಾಗುತ್ತದೆ ಎಂಬ ನಂಬಿಕೆಯಿದ್ದು, ಇದನ್ನು ಕೋಟ್ಯಂತರ ಮಂದಿ ಆಚರಿಸುತ್ತಾರೆ.
ಈ ಹಿನ್ನೆಲೆಯಲ್ಲಿ ಅಂದು ಮುಂಜಾನೆ ಉಪಾಹಾರ ಸೇವಿಸಿ ಶಾಲಾ ಕಾಲೇಜುಗಳಿಗೆ ತೆರಳಿ, ಮತ್ತೆ ಸಂಜೆ ಬರುವವರೆಗೂ ಸಮಸ್ಯೆಯಾಗುತ್ತದೆ. ಹೀಗಾಗಿ, ಅಂದು ರಜೆ ಘೋಷಣೆ ಮಾಡಬೇಕು ಎಂದು ಹಲವು ಪೋಷಕರು ಶಾಲಾ-ಕಾಲೇಜು ಮುಖ್ಯಸ್ಥರನ್ನು ಒತ್ತಾಯಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ವಿದ್ಯಾಸಂಸ್ಥೆಗಳ ಮುಖ್ಯಸ್ಥರು ರಾಜ್ಯ ಸರ್ಕಾರದ ಗಮನಕ್ಕೆ ಈ ವಿಚಾರವನ್ನು ತಂದಿದ್ದು, ರಜೆ ನೀಡುವ ಕುರಿತಾಗಿ ಸರ್ಕಾರ ಯಾವುದೇ ನಿರ್ಧಾರ ಕೈಗೊಳ್ಳುವಲ್ಲಿ ಗೊಂದಲದಲ್ಲಿದೆ ಎನ್ನಲಾಗಿದೆ.
Get in Touch With Us info@kalpa.news Whatsapp: 9481252093







Discussion about this post