ಬೆಂಗಳೂರು: ಚಿತ್ರೀಕರಣ ಮುಗಿಸಿಕೊಂಡು ಬಳ್ಳಾರಿಯಿಂದ ಬೆಂಗಳೂರಿಗೆ ವಾಪಾಸಾಗುತ್ತಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕಾರು ಅಪಘಾತಕ್ಕೀಡಾಗಿದ್ದು, ಪುನೀತ್ ಸೇರಿದಂತೆ ಯಾರಿಗೂ ಯಾವುದೇ ರೀತಿಯ ತೊಂದರೆಯಾಗಿಲ್ಲ.
ಇಂದು ರಾತ್ರಿ ಈ ಘಟನೆ ನಡೆದಿದ್ದು, ಪುನೀತ್ ಪ್ರಯಾಣಿಸುತ್ತಿದ್ದ ರೇಂಜ್ ರೋವರ್ ಕಾರಿನ ಟಯರ್ ಸ್ಫೋಟಗೊಂಡ ಪರಿಣಾಮ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಬಳ್ಳಾರಿಯಲ್ಲಿ ನಟಸಾರ್ವಭೌಮ ಚಿತ್ರೀಕರಣ ಮುಗಿಸಿಕೊಂಡು ಬೆಂಗಳೂರಿಗೆ ಮರಳುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಪ್ರಸ್ತುತ ಪುನೀತ್ ಬೆಂಗಳೂರಿಗೆ ಹಿಂತಿರುಗುತ್ತಿದ್ದಾರೆ.
ಈ ವಿಷಯ ತಿಳಿಯತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಫೇಸ್ ಬುಕ್ ಸ್ಟೇಟಸ್ ಹಾಕಿರುವ ಪುನೀತ್, ಆರಾಮವಾಗಿದ್ದೇನೆ. ಹೆದರುವ ಅಗತ್ಯವಿಲ್ಲ ಎಂದಿದ್ದಾರೆ.
Discussion about this post