No Result
View All Result
Malnad is a Cultural ‘Gharana’ of Great Minds: Dr. Jayamala at Sahyadri Utsava
English Articles

Malnad is a Cultural ‘Gharana’ of Great Minds: Dr. Jayamala at Sahyadri Utsava

by ಕಲ್ಪ ನ್ಯೂಸ್
March 13, 2026
0

Kalpa Media House  |  Shimoga | Invoking the poetic essence of the Malnad landscape, veteran actor, former minister, and Chairperson...

Read moreDetails
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
  • Advertise With Us
  • Grievances
  • About Us
  • Contact Us
Monday, March 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ದೇಶದ ಜನರಿಗೆ ದೀಪಾವಳಿಗೆ 2 ಬಿಗ್ ಗಿಫ್ಟ್ ನೀಡಿದ ಪ್ರಧಾನಿ ನರೇಂದ್ರ ಮೋದಿ

ಕೆಂಪು ಕೋಟೆಯಲ್ಲಿ ನಿಂತು ಶತ್ರುಗಳಿಗೆ ಖಡಕ್ ವಾರ್ನಿಂಗ್ ನೀಡಿದ ಮೋದಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 15, 2025
in ರಾಷ್ಟ್ರೀಯ
0
ದೇಶದ ಜನರಿಗೆ ದೀಪಾವಳಿಗೆ 2 ಬಿಗ್ ಗಿಫ್ಟ್ ನೀಡಿದ ಪ್ರಧಾನಿ ನರೇಂದ್ರ ಮೋದಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

  • ರಕ್ತ ಮತ್ತು ನೀರು ಒಟ್ಟಿಗೆ ಹರಿಯುವುದಿಲ್ಲ ಭಾರತ ಈಗಾಗಲೇ ನಿರ್ಧರಿಸಿದೆ
  • ಭಾರತದಲ್ಲಿ ಹುಟ್ಟುವ ನದಿ ನೀರಿನ ಹಕ್ಕು ಭಾರತೀಯರಿಗಿದೆ 
  • ಸಿಂಧು ನದಿ ಒಪ್ಪಂದಕ್ಕೆ ಮುಂದೆಂದೂ  ಒಪ್ಪಿಗೆ ನೀಡುವುದಿಲ್ಲ
  • ಉಗ್ರರಿಗೆ ಸಹಾಯ ಮಾಡುವವರೆಲ್ಲರನ್ನು ಭಯೋತ್ಪಾದಕರಂತೆ ಕಾಣುತ್ತೇವೆ
  • ನಾವು ಯಾವುದೇ ಬೆದರಿಕೆಗೆ ಹೆದರುವುದಿಲ್ಲ, ಬಲಿಯಾಗುವುದಿಲ್ಲ 
  • ಭಾರತವು ಇನ್ನು ಮುಂದೆ ಪರಮಾಣು ಬೆದರಿಕೆಗಳನ್ನು ಸಹಿಸುವುದಿಲ್ಲ 
  • ಶತ್ರುಗಳು ಪರಮಾಣು ಬೆದರಿಕೆ ಮುಂದುವರೆಸಿದರೆ, ನಾವು ಸೂಕ್ತ ಉತ್ತರಕ್ಕೆ ಸಿದ್ಧ

79ನೇ ಸ್ವಾತಂತ್ರ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ದೇಶದ ಜನರಿಗೆ ಮುಂಬರುವ ದೀಪಾವಳಿಗೆ ಎರಡು ಬಿಗ್ ಉಡುಗೊರೆ ಘೋಷಣೆ ಮಾಡಿದ್ದಾರೆ.

ದೇಶದ ಜನತೆಯನ್ನುದ್ದೇಶಿಸಿ ಮಾತನಾಡುವ ವೇಳೆ, ಈ ದೀಪಾವಳಿಗೆ, ನಾನು ನಿಮಗಾಗಿ ಡಬಲ್ ಧಮಾಕ ನೀಡಲಿದ್ದೇನೆ. ಈ ದೀಪಾವಳಿಯಲ್ಲಿ ನಾಗರಿಕರು ದೊಡ್ಡ ಉಡುಗೊರೆಯನ್ನು ಪಡೆಯಲಿದ್ದಾರೆ ಎಂದಿದ್ದಾರೆ.

ನಾವು ಮುಂದಿನ ಪೀಳಿಗೆಯ ಜಿಎಸ್ಟಿ ಸುಧಾರಣೆಗಳನ್ನು ತರುತ್ತಿದ್ದೇವೆ. ಇದು ದೇಶದಾದ್ಯಂತ ತೆರಿಗೆ ಹೊರೆಯನ್ನು ಕಡಿಮೆ ಮಾಡುತ್ತದೆ. ಇದು ದೀಪಾವಳಿ ಉಡುಗೊರೆಯಾಗಲಿದೆ ಎಂದಿದ್ದಾರೆ.

8 ವರ್ಷಗಳ ಹಿಂದೆ ಸರ್ಕಾರವು ಪ್ರಮುಖ ಸುಧಾರಣೆಗಳನ್ನು ಕೈಗೊಂಡಿದೆ. ಸರ್ಕಾರವು ದೇಶದಾದ್ಯಂತ ತೆರಿಗೆ ಹೊರೆಯನ್ನು ಕಡಿಮೆ ಮಾಡಿ, ತೆರಿಗೆ ಪ್ರಕ್ರಿಯೆಯನ್ನು ಸರಳಗೊಳಿಸಿದೆ ಎಂದು ಭರವಸೆ ನೀಡಿದ್ದಾರೆ.ಇನ್ನು ಎರಡನೇ ಉಡುಗೊರೆಯಾಗಿ, ವಿಕಸಿತ ಭಾರತ ರೋಜ್’ಗಾರ್ ಯೋಜನೆಯಡಿಯಲ್ಲಿ ಮೊದಲ ಬಾರಿಗೆ ಖಾಸಗಿ ವಲಯದ ಉದ್ಯೋಗ ಮಾರುಕಟ್ಟೆಗೆ ಪ್ರವೇಶಿಸುವ ಯುವಕರಿಗೆ 15,000 ರೂ. ನೆರವನ್ನು ಮೋದಿ ಘೋಷಿಸಿದ್ದಾರೆ.

ನನ್ನ ದೇಶದ ಯುವಕರೇ, ಈ ದಿನವೇ ನಮ್ಮ ದೇಶದ ಯುವಕರಿಗಾಗಿ 1 ಲಕ್ಷ ಕೋಟಿ ಮೌಲ್ಯದ ಯೋಜನೆಯನ್ನು ನಾವು ಪ್ರಾರಂಭಿಸುತ್ತಿದ್ದೇವೆ. ಇಂದಿನಿಂದ ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜ್’ಗಾರ್ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ಈ ಯೋಜನೆಯಡಿಯಲ್ಲಿ ಖಾಸಗಿ ವಲಯದಲ್ಲಿ ಮೊದಲ ಉದ್ಯೋಗ ಪಡೆಯುವ ಯುವಕ-ಯುವತಿಯರು ಸರ್ಕಾರದಿಂದ 15,000 ರೂ. ಪಡೆಯುತ್ತಾರೆ ಎಂದಿದ್ದಾರೆ.

ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಕಂಪನಿಗಳಿಗೆ ಪ್ರೋತ್ಸಾಹ ಮೊತ್ತವನ್ನು ಸಹ ನೀಡಲಾಗುತ್ತದೆ. ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜ್’ಗಾರ್ ಯೋಜನೆಯು ಯುವಕರಿಗೆ ಸುಮಾರು 3.5 ಕೋಟಿ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಎಂದಿದ್ದಾರೆ.

ಪ್ರಧಾನಿ ಭಾಷಣದಲ್ಲಿ ಇನ್ನೇನು ಪ್ರಸ್ತಾಪ ಆಯ್ತು?
ನಾವು ನಮ್ಮ ಸಶಸ್ತ್ರ ಪಡೆಗಳಿಗೆ ಮುಕ್ತ ಹಸ್ತ ನೀಡಿದ್ದೇವೆ. ಇದೀಗ ನಮ್ಮ ದೇಶ ಭಯೋತ್ಪಾದಕರು ಮತ್ತು ಅವರನ್ನು ಬೆಂಬಲಿಸುವವರ ನಡುವೆ ವ್ಯತ್ಯಾಸವನ್ನು ನೋಡುವುದಿಲ್ಲ. ಭವಿಷ್ಯದಲ್ಲಿ ಪಾಕಿಸ್ತಾನದಿಂದ ಯಾವುದೇ ದುಷ್ಕೃತ್ಯ ಎದುರಾದರೂ ಅದಕ್ಕೆ ಶಿಕ್ಷೆಯನ್ನು ನಮ್ಮ ಸಶಸ್ತ್ರ ಪಡೆಗಳೇ ನಿರ್ಧರಿಸುತ್ತವೆ ಎಂದು ತಿಳಿಸಿದರು.

ಏಪ್ರಿಲ್ 22 ರಂದು ಪಹಲ್ಗಾಮ್’ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ ಇಡೀ ರಾಷ್ಟ್ರವು ಆಕ್ರೋಶಗೊಂಡಿದ್ದು, ಆಪರೇಷನ್ ಸಿಂಧೂರ ಆ ಆಕ್ರೋಶದ ಪ್ರತಿಕ್ರಿಯೆಯಾಗಿತ್ತು ಎಂದರು.ಭಾರತದ ಮೇಲೆ ಪರಮಾಣು ಬೆದರಿಕೆಗಳು ಬಹಳ ಸಮಯದಿಂದ ಮುಂದುವರೆದಿವೆ. ಆದರೆ, ಅದನ್ನು ಇನ್ನು ಮುಂದೆ ಸಹಿಸಲಾಗುವುದಿಲ್ಲ. ನಮ್ಮ ಶತ್ರುಗಳು ಪರಮಾಣು ಬೆದರಿಕೆ ಮುಂದುವರೆಸಿದರೆ, ನಾವು ಸೂಕ್ತ ಉತ್ತರವನ್ನು ನೀಡಲು ಸಿದ್ಧರಿದ್ದೇವೆ. ನಮ್ಮ ಸಶಸ್ತ್ರ ಪಡೆಗಳು ಪ್ರತಿಕ್ರಿಯೆ ನೀಡುತ್ತವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪಾಕಿಸ್ತಾನದಲ್ಲಿ ನಮ್ಮ ಸಶಸ್ತ್ರ ಪಡೆಗಳು ಮಾಡಿದ ಹಾನಿ ದೊಡ್ಡದಾಗಿತ್ತು. ಭಾರತವು ಇನ್ನು ಮುಂದೆ ಪರಮಾಣು ಬೆದರಿಕೆಗಳನ್ನು ಸಹಿಸುವುದಿಲ್ಲ ಎಂದು ನಿರ್ಧರಿಸಿದೆ, ನಾವು ಯಾವುದೇ ಬೆದರಿಕೆಗೆ ಹೆದರುವುದಿಲ್ಲ, ಬಲಿಯಾಗುವುದಿಲ್ಲ ಎಂದರು.

ರಕ್ತ ಮತ್ತು ನೀರು ಒಟ್ಟಿಗೆ ಹರಿಯುವುದಿಲ್ಲ ಎಂದು ಭಾರತ ಈಗಾಗಲೇ ನಿರ್ಧಾರ ಮಾಡಿದೆ. ಸಿಂಧೂ ನದಿ ನೀರು ಒಪ್ಪಂದವು ಅನ್ಯಾಯವಾಗಿದೆ ಎಂದು ನಮ್ಮ ದೇಶದ ಜನರು ಅರಿತುಕೊಂಡಿದ್ದಾರೆ. ಸಿಂಧೂ ನದಿ ಒಪ್ಪಂದದಿಂದ ನೀರು ಶತ್ರುಗಳ ಭೂಮಿಗೆ ನೀರಾವರಿಗೆ ಸಹಾಯಕವಾಗಿದೆ. ಆದರೆ, ನಮ್ಮದೇ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಭಾರತದಲ್ಲಿ ಹುಟ್ಟುವ ನದಿ ನೀರಿನ ಹಕ್ಕು ಭಾರತೀಯರಿಗೆ ಇದೆ. ದೇಶದ ರೈತರಿಗೆ ಇದೆ. ಕಳೆದ ಏಳು ದಶಕಗಳಿಂದ ಒಪ್ಪಂದದ ಮೇರೆಗೆ ಬೇರೆ ದೇಶಗಳಿಗೆ ಭಾರತ ನೀರುಣಿಸುತ್ತಿತ್ತು. ನಮ್ಮ ಭೂಮಿ ಬರಿದಾಗುತ್ತಿತ್ತು. ಅಂದ ಮೇಲೆ ಅಂತಹ ಒಪ್ಪಂದ ಏಕೆ ಬೇಕು ಎಂದು ಪ್ರಶ್ನೆ ಮಾಡಿದರು.

ಭಾರತದ ಹಾಗೂ ನಮ್ಮ ರೈತರ ಹಿತದೃಷ್ಠಿಯಿಂದ ಪಾಕ್ ಜತೆಗಿನ ಸಿಂಧು ನದಿ ಒಪ್ಪಂದಕ್ಕೆ ಮುಂದೆಂದೂ ಒಪ್ಪಿಗೆ ನೀಡುವುದಿಲ್ಲ. ಭಯೋತ್ಪಾದಕತೆ ಪೋಷಿಸುವವರನ್ನು ನಾವು ಇನ್ನು ಮುಂದೆ ಬೇರೆ ಬೇರೆ ಎಂದು ಪರಿಗಣಿಸದೇ ಅವರೆಲ್ಲರನ್ನು ಒಂದೇ ಎಂದು ಕರೆಯುತ್ತೇವೆ. ಉಗ್ರರಿಗೆ ಸಹಾಯ ಮಾಡುವವರೆಲ್ಲರನ್ನು ಭಯೋತ್ಪಾದಕರಂತೆ ಕಾಣುತ್ತೇವೆ ಎಂದು ಪಾಕಿಸ್ತಾನ ಹಾಗೂ ಉಗ್ರ ಬೆಂಬಲಿತ ರಾಷ್ಟ್ರಗಳಿಗೆ ಎಚ್ಚರಿಕೆ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: 79ನೇ ಸ್ವಾತಂತ್ರ ದಿನಾಚರಣೆGSTIndependence DayKannada NewsLatest Newsnarendra modiOperation SindhuraPakistanPM Modiಕೆಂಪು ಕೋಟೆಜಿಎಸ್‌ಟಿತೆರಿಗೆ ಹೊರೆದೀಪಾವಳಿಪ್ರಧಾನಿ ನರೇಂದ್ರ ಮೋದಿಭಾರತ
Share196Tweet123Send
Previous Post

ತಾಲೂಕು ಆಡಳಿತದ ವಿರುದ್ಧ ಜೆಡಿಎಸ್ ಪ್ರತಿಭಟನೆ | ಉಪವಿಭಾಗಾಧಿಕಾರಿಗೆ ದೂರು 

Next Post

ಜೈಲಿನಲ್ಲಿ ದರ್ಶನ್’ಗೆ ಮತ್ತೆ ಬೆನ್ನು ನೋವು ಬರ್ತಿದೆಯಂತೆ! ಮೊದಲ ದಿನ ಏನು ತಿಂಡಿ ತಿಂದರು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಾರು ಬದಲಿಸಿ ಗುಪ್ತವಾಗಿ ಪತ್ನಿ ನಿವಾಸಕ್ಕೆ ದರ್ಶನ್ | ಬೆಂಬಿಡದೇ ತೆರಳಿ ಬಂಧಿಸಿದ ಪೊಲೀಸರು

ಜೈಲಿನಲ್ಲಿ ದರ್ಶನ್'ಗೆ ಮತ್ತೆ ಬೆನ್ನು ನೋವು ಬರ್ತಿದೆಯಂತೆ! ಮೊದಲ ದಿನ ಏನು ತಿಂಡಿ ತಿಂದರು?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿಕ್ಕಮಗಳೂರು-ಯಶವಂತಪುರ, ತಾಳಗುಪ್ಪ-ಮೈಸೂರು ಸೇರಿ 15 ರೈಲುಗಳ ಲೇಟೆಸ್ಟ್ ಅಪ್ಡೇಟ್

March 16, 2026
ಮದುವೆಗೆ ಮುನ್ನ ದೈಹಿಕ ಸಂಬಂಧ ರಾಕ್ಷಸ ವಿವಾಹವಾಗುತ್ತದೆ: ನ್ಯಾಯಮೂರ್ತಿ ಶ್ರೀಶಾನಂದ

ಮದುವೆಗೆ ಮುನ್ನ ದೈಹಿಕ ಸಂಬಂಧ ರಾಕ್ಷಸ ವಿವಾಹವಾಗುತ್ತದೆ: ನ್ಯಾಯಮೂರ್ತಿ ಶ್ರೀಶಾನಂದ

March 16, 2026
ಭೀಕರ ಅಪಘಾತ | ಆರು ಮಂದಿ ಸ್ಥಳದಲ್ಲೇ ಸಾವು

ಅಪಘಾತ | ಶಾಸಕ ಪ್ರಕಾಶ್ ಕೋಳಿವಾಡ ಅವರ ಆಪ್ತ ಸಹಾಯಕ ಸಾವು

March 16, 2026
ಅಕ್ರಮ ಗಾಂಜಾ ಮಾರಾಟ | ಓರ್ವನ ಬಂಧನ

ಅಕ್ರಮ ಗಾಂಜಾ ಮಾರಾಟ | ಓರ್ವನ ಬಂಧನ

March 16, 2026
ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬಿಡುಗಡೆ

ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬಿಡುಗಡೆ

March 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL