No Result
View All Result
English Articles

Record Budget: Chief Minister Must Fulfill Hometown Demands, Urges Dr. Shushrutha Gowda

by ಕಲ್ಪ ನ್ಯೂಸ್
March 2, 2026
0

Kalpa Media House  |  Mysuru | BJP leader and noted neurologist Dr. Shushrutha Gowda has urged Chief Minister Siddaramaiah to...

Read moreDetails
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
  • Advertise With Us
  • Grievances
  • About Us
  • Contact Us
Tuesday, March 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಸ್ತ್ರೀ ಆರೋಗ್ಯದ ರಕ್ಷಣೆ, ದೇಶದ ಪ್ರಗತಿಗೆ ಪೋಷಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 8, 2021
in Special Articles
0
ಸ್ತ್ರೀ ಆರೋಗ್ಯದ ರಕ್ಷಣೆ, ದೇಶದ ಪ್ರಗತಿಗೆ ಪೋಷಣೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಮತ್ತೊಮ್ಮೆ ಮಹಿಳಾ ದಿನಾಚರಣೆಯ ಸುಸಂದರ್ಭ ಬಂದಿದೆ. ಮತ್ತೊಮ್ಮೆ ವೇದಿಕೆಯ ಮೇಲೆ ಘೋಷಣೆ, ಭಾಷಣ, ಎರಡು ದಿನದ ನಂತರ ಎಲ್ಲವೂ ತಣ್ಣಗಾಗಿ ಮತ್ತೆ ಯಥಾ ಪ್ರಕಾರ ಮಾಮೂಲು ದಿನಚರಿಯಲ್ಲಿ ಮುಳುಗಿಬಿಡುತ್ತೇವೆ.

ಮಹಿಳಾ ದಿನಾಚರಣೆಯನ್ನು ಆಚರಿಸುತ್ತಾ ಬಂದು ಶತಕಗಳು ಕಳೆದಿದ್ದರೂ ಇಂದಿಗೂ ಮಹಿಳೆಯರ ಮೇಲಾಗುತ್ತಿರುವ ಅನ್ಯಾಯ, ದೌರ್ಜನ್ಯ, ಅತ್ಯಾಚಾರ, ತಾರತಮ್ಯ, ವರದಕ್ಷಿಣೆ ಪಿಡುಗು, ಇತ್ಯಾದಿಗಳಿಂದ ಮಹಿಳಾ ಸಮುದಾಯ ಹೊರಬರಲು ಸಾಧ್ಯವಾಗುತ್ತಿಲ್ಲ.

ಆರ್ಥಿಕ ಸ್ವಾವಲಂಬನೆಗಾಗಿಯೂ, ತನ್ನೊಳಗಿನ ಸಾಮರ್ಥ್ಯ, ಅಭಿರುಚಿಗಳನ್ನು ಸಾಬೀತುಪಡಿಸುವುದಕ್ಕಾಗಿಯೂ ಮಹಿಳೆ ಇಂದು ಎಲ್ಲಾ ರಂಗಗಳಲ್ಲೂ ತನ್ನನ್ನು ತೊಡಗಿಸಿಕೊಳ್ಳುತ್ತಾ ಪುರುಷರೇ ನಿರ್ಮಿಸಿರುವ ಭದ್ರಕೋಟೆಗೂ ಲಗ್ಗೆ ಹಾಕುತ್ತಾ ಅಲ್ಲಲ್ಲಿ ಯಶಸ್ಸನ್ನು ಪ್ರತಿಪಾದಿಸುತ್ತಿದ್ದಾಳೆ. ಅಲ್ಲಲ್ಲಿ ಅನ್ಯಾಯ ದೌರ್ಜನ್ಯಗಳ ವಿರುದ್ಧ ತನ್ನ ಪ್ರತಿಭಟನೆ ಹೋರಾಟಗಳನ್ನು ಮೌನವಾಗಿಯೂ, ಕೆಲವೊಮ್ಮೆ ದಿಟ್ಟವಾಗಿಯೂ ನಡೆಸುತ್ತಾ ಪ್ರಗತಿಯ ಗತಿಯಲ್ಲಿ ನಡೆಯುತ್ತಿದ್ದರೂ ವೇಗದ ಗತಿಯನ್ನು ಮಹಿಳೆಯರಿನ್ನು ತಲುಪಬೇಕಾಗಿದೆ.

ಗೃಹ ಕೃತ್ಯ, ಸಂಪಾದನೆ ಇವೆರಡನ್ನು ನಿಭಾಯಿಸುವ ಹೊತ್ತಿಗೆ ಇಂದು ಮಹಿಳೆ ಹೊಸಹೊಸ ಕೌಟುಂಬಿಕ ಸಮಸ್ಯೆಗಳನ್ನು ಎದುರಿಸಬೇಕಾಗಿದೆ. ಆಧುನಿಕ ಸೌಕರ್ಯಗಳು ಬದುಕನ್ನು ಸುಗಮಗೊಳಿಸುತ್ತಿದೆ ಎನಿಸಿದರೂ ನಿಜವಾದ ಅರ್ಥದಲ್ಲಿ ಜೀವನವನ್ನು ದುರ್ಗಮಗೊಳಿಸುತ್ತಿದೆ. ಕುಟುಂಬ, ಕೆರಿಯರ್, ಆಧುನಿಕ ಸ್ಪರ್ಧೆಗಳನ್ನು ಸಮತೋಲನ ಮಾಡುವುದೆಂದರೆ ಮಹಿಳೆಯ ನಡಿಗೆ ತಂತಿಯ ಮೇಲಿನ ನಡೆದ ಹಾಗಾಗಿದೆ. ಬದಲಾಗುತ್ತಿರುವ ಜೀವನಶೈಲಿಯಲ್ಲಿ ಮಹಿಳೆಯ ಆರೋಗ್ಯದ ಸ್ಥಿತಿಗತಿಯ ಜೊತೆಗೆ ಕೌಟುಂಬಿಕ ಆರೋಗ್ಯವೂ ಇಂದು ಸಂಕಷ್ಟದಲ್ಲಿದೆ. ಹೊರಗೆಲಸ ಮುಗಿಸಿ ಬೇಗನೆ ಮನೆಗೆ ಬರುವುದು, ನಾಲ್ಕು ಜನರ ಒಟ್ಟಿಗೆ ಕುಳಿತು ಊಟ ಮಾಡುವುದು, ಪರಸ್ಪರ ಹೇಳಿಕೇಳಿ ಮಾಡುವುದು (ಕೇರಿಂಗ್ ಅಂಡ್ ಶೇರಿಂಗ್) ಕಡಿಮೆಯಾಗುತ್ತಿದ್ದು ಸಂಬಂಧದ ತಂತುಗಳು ಸಡಿಲವಾಗುತ್ತಾ ಬಿಟ್ಟೇ ಹೋಗುತ್ತಿದೆ. ಇದೊಂದು ಬಹುದೊಡ್ಡ ಅಪಾಯ.

Photo: The Hindu Business Line

ಹದಿವಯಸ್ಸಿನವರಲ್ಲಂತೂ ಅಂತರ್ಜಾಲ ವ್ಯಸನ(ಸಿಟ್ಟಿಂಗ್ ಡಿಸೀಸ್)ದಿಂದ ಬೊಜ್ಜು, ಬಂಜೆತನ ಇತ್ಯಾದಿಗಳು ಹೆಚ್ಚುತ್ತಿವೆ. ನಮ್ಮ ದೇಹದಲ್ಲಿರುವ ಜೈವಿಕ ಗಡಿಯಾರವನ್ನು ಗೌರವಿಸಲು ಸಾಧ್ಯವಾಗದೇ (ಬೇಗನೆ ಮಲಗಿ, ಬೇಗನೆ ಏಳುವುದು, ಕಾಲಕಾಲಕ್ಕೆ ಊಟೋಪಚಾರ) ಇದರಿಂದ ಇಂದು ಮಹಿಳೆ ಪಿ.ಸಿ.ಓ.ಡಿ, ಮಧುಮೇಹ, ಏರುರಕ್ತದೊತ್ತಡ, ಕ್ಯಾನ್ಸರ್‌ನಂತಹ ಸಮಸ್ಯೆಗಳಿಂದ ಹೆಚ್ಚಾಗಿ ಬಳಲುತ್ತಿದ್ದಾಳೆ. ತಾಯ್ತನದ ಮಹತ್ತರ ಜವಾಬ್ದಾರಿಯನ್ನು ಹೊಂದಿರುವ ಮಹಿಳೆಯರಲ್ಲಿ ಇಂದಿಗೂ ಶೇ.70ರಷ್ಟು ಜನ ರಕ್ತಹೀನತೆಯೆಂಬ ಸಾಮಾನ್ಯ ಸಮಸ್ಯೆಯನ್ನು ಜಯಿಸಲು ಸಾಧ್ಯವಾಗದೇ, ಮಾತೃಮರಣಗಳನ್ನು, ಶಿಶುಮರಣಗಳನ್ನು ತಡೆಗಟ್ಟಲು ಸಾಧ್ಯವಾಗಲಿಲ್ಲ. ಕಷ್ಟಸಹಿಷ್ಣುತೆ ಮಾಯವಾಗುತ್ತಿದ್ದು ಸಿಝೇರಿಯನ್ ಇನ್ನಿತರ ಶಸ್ತ್ರಚಿಕಿತ್ಸೆಗಳು ಹೆಚ್ಚಾಗುತ್ತಿವೆ.

ಪ್ರಜನನ ಆರೋಗ್ಯದ ಬಗೆಗಿನ ಜ್ಞಾನ ಮಹಿಳೆಯರಲ್ಲಿ ಅತಿಕಡಿಮೆ. ಒಂದು ಹೆರಿಗೆಯ ನಂತರ ಇನ್ನೊಂದು ಮಗು ಬೇಗನೆ ಬೇಡವೆನಿಸಿದರೂ ಗೊತ್ತಾಗುವ ಹೊತ್ತಿಗೆ ಶೇ.60ರಷ್ಟು ಮಹಿಳೆಯರು ಗರ್ಭ ಧರಿಸಿರುತ್ತಾರೆ. ಅನವಶ್ಯಕ ಗರ್ಭಪಾತ ಮಾಡಿಕೊಂಡು ಲಕ್ಷಗಟ್ಟಲೆ ಮಹಿಳೆಯರಲ್ಲಿ ಆರೋಗ್ಯದ ಸಮಸ್ಯೆಗಳು ಉಂಟಾಗುತ್ತಿವೆ. ದೈಹಿಕ ಪರಿಶ್ರಮ ಕಡಿಮೆಯಾಗುತ್ತಿರುವುದರಿಂದ ಮಹಿಳೆಯರು ಬೊಜ್ಜು ಅದರಿಂದುಂಟಾಗುತ್ತಿರುವ ಸಮಸ್ಯೆಗಳು ಹೆಚ್ಚುತ್ತಿವೆ. ಶೇ.20ರಷ್ಟು ಮಹಿಳೆಯರಲ್ಲಿ ಖಿನ್ನತೆ, ಉನ್ಮಾಧ, ಇನ್ನಿತರ ಸಮಸ್ಯೆಗಳು. ಜೊತೆಗೆ ಹೆಣ್ಣಿಗೆ ಜೈವಿಕವಾಗಿ ಬರುವ ಮುಟ್ಟಿನ ಮುನ್ನ ಬವಣೆ, ಋತುಬಂಧದಲ್ಲುಂಟಾಗುವ ಖಾಲಿಗೂಡಿನ ಅನುಭವ ಹೀಗೆ ಹತ್ತು ಹಲವು ಸಂಕಷ್ಟಗಳನ್ನು ಮಹಿಳೆ ಎದುರಿಸಬೇಕಾಗಿದೆ.


ಥೈರಾಯಿಡ್, ಆರ್ಥರೈಟಿಸ್, ಅಸಿಡಿಟಿ, ಅಸ್ತಮಾ, ಲೈಂಗಿಕ ಸೋಂಕುಗಳು ಇನ್ನಿತರ ಸಮಸ್ಯೆಗಳೂ ಮಹಿಳೆಯರನ್ನೇ ಹೆಚ್ಚು ಭಾದಿಸುತ್ತಿದೆ. ಶೇ.80ರಷ್ಟು ಮಹಿಳೆಯರು ನಮ್ಮ ಆರೋಗ್ಯವನ್ನು ಲೆಕ್ಕಿಸದೆ ಬರೀ ಗಂಡ ಮಕ್ಕಳ ಯೋಗಕ್ಷೇಮವನ್ನೇ ಪ್ರಾಧಾನ್ಯವಾಗಿಟ್ಟುಕೊಂಡು ತಮ್ಮ ಕೈಯಿಂದ ಬಾಯೊಳಗೆ ಯಾವ ಆಹಾರ ಹೋಗುತ್ತಿದೆ ಎಂಬುದನ್ನು ಲಕ್ಷಿಸುವುದಿಲ್ಲ. ತನ್ನ ಆರೋಗ್ಯ ಸರಿಯಾಗಿಯೇ ಎಂದು ಭಾವಿಸುತ್ತಾಳೆ. ಇದನ್ನೇ ಸಂತರ ಕಾಯಿಲೆ ಎನ್ನುವುದು. ಕುಟುಂಬದ ಆಧಾರವಾದ ಮಹಿಳೆಯರ ಆರೋಗ್ಯವೇ ಹದಗೆಟ್ಟರೆ ಕುಟುಂಬದ ಪುರೋಭಿವೃದ್ಧಿ ಸಾಧ್ಯವೇ? ಆದ್ದರಿಂದ, ಕುಟುಂಬದ ಶಕ್ತಿ ಕೇಂದ್ರ ಅಥವಾ ಶಕ್ತಿಸ್ವರೂಪಿಣಿಯಾದ ಮಹಿಳೆಯರ ಬ್ಯಾಟರಿಯೇ ಶಕ್ತಿಗುಂದದ ಹಾಗೆ ರೀಚಾರ್ಜ್ ಮಾಡಬೇಕಾದ ಅಗತ್ಯ ಇಂದು ಹೆಚ್ಚಾಗಿದೆ. ಇಂದು ಮಹಿಳೆಯರಲ್ಲಿ ಮಲ್ಟಿಟಾಸ್ಕಿಂಗ್ ಅಥವಾ ಒಂದೇ ಸಂದರ್ಭದಲ್ಲಿ ಹಲವು ಕೆಲಸ ಮಾಡುವ ಸಾಮರ್ಥ್ಯವಿದ್ದರೂ ಮೈಂಡ್‌ಫುಲ್‌ನೆಸ್ ಇಸ್ ದ ಕೀ ಎನ್ನುವ ಹಾಗೆ ನಮ್ಮ ಕೆಲಸದ ಬಗ್ಗೆ ಕಾಳಜಿ ವಹಿಸುತ್ತಾ, ಕುಟುಂಬದವರ ಸಹಕಾರದೊಂದಿಗೆ ಸರಸ ಜನನ, ವಿರಸ ಮರಣ’’ ಎನ್ನುವ ಹಾಗೆ ಕೌಟುಂಬಿಕ ಸಾಮರಸ್ಯವನ್ನು ಕಾಪಾಡಿಕೊಳ್ಳುತ್ತಾ ತನ್ನ ಆರೋಗ್ಯವನ್ನೂ ಕಾಪಾಡಿಕೊಳ್ಳುವ ಅಗತ್ಯವಿದೆ.

ಮನೆ ಕೆಲಸವನ್ನು ಪುರುಷರೂ ಹಂಚಿಕೊಳ್ಳಬೇಕು. ಗಂಡಸಿನ ಆರ್ಥಿಕ ಹೊರೆಯನ್ನು ಹೆಣ್ಣು ಕಡಿಮೆ ಮಾಡುತ್ತಿರುವ ಸಂದರ್ಭಗಳಲ್ಲೆಲ್ಲಾ ಮನೆಕೆಲಸದಲ್ಲಿ, ಮಕ್ಕಳ ಪಾಲನೆಯಲ್ಲಿ ಪುರುಷರ ಸಹಾಯ ಹಸ್ತವಿಲ್ಲದಿದ್ದರೆ ಮಹಿಳೆಗೆ ಉದ್ಯೋಗ ಹಾಗೂ ಕುಟುಂಬದ ಸಮತೋಲನ ಮಾಡಲು ಸಾಧ್ಯವಾಗುವುದಿಲ್ಲ. ಮಹಿಳೆಯರ ಜೈವಿಕ ಅನಿವಾರ್ಯತೆಯಾದ ಗರ್ಭಧಾರಣೆ, ಮಗುವಿಗೆ ಜನನ, ಸ್ತನ್ಯಪಾನ ಇತ್ಯಾದಿಗಳಲ್ಲಿ ನೇರವಾಗಿ ಪಾಲ್ಗೊಳ್ಳಲು ಸಾಧ್ಯವಿಲ್ಲದಿದ್ದರೂ ಅನುಕೂಲಕರ ವಾತಾವರಣವನ್ನು ಕಲ್ಪಿಸಿಕೊಡಲು ಪುರುಷರ ಸಹಾಯ ಅತ್ಯಗತ್ಯ.


ಆರೋಗ್ಯವಂತ ಹೆಣ್ಣೇ ಕುಟುಂಬದ ಕಣ್ಣು, ಸ್ತ್ರೀ ಆರೋಗ್ಯದ ರಕ್ಷಣೆ, ದೇಶದ ಪ್ರಗತಿಗೆ ಪೋಷಣೆ ಎಂಬುದನ್ನು ಸದಾ ನೆನಪಿಟ್ಟುಕೊಳ್ಳಿ. ಮಹಿಳೆಯರೇ ಏಳಿ, ಎಚ್ಚರಗೊಳ್ಳಿ, ನಿಮ್ಮ ಬಗ್ಗೆ ಕಾಳಜಿವಹಿಸಿ. ಆರೋಗ್ಯವಂತರಾಗಿ ಎಲ್ಲ ಸವಾಲುಗಳನ್ನು ಎದುರಿಸಲು ಸಿದ್ಧರಾಗಿ. ನಿಮ್ಮ ಆರೋಗ್ಯ ಹದಗೆಟ್ಟರೆ ಯಾವ ಯುಗ ಪುರುಷರೂ ನಿಮ್ಮನ್ನು ಉದ್ಧರಿಸುವುದಿಲ್ಲ. ನಿಮ್ಮ ಆಹಾರ, ವಿಹಾರ, ವಿಚಾರಗಳ ಬಗ್ಗೆ ಲಕ್ಷ್ಯವಿಟ್ಟು ಆರೋಗ್ಯಕರ ಜೀವನಶೈಲಿ ರೂಪಿಸಿಕೊಳ್ಳಿ.

ಹಿತಮಿತವಾದ ಪೌಷ್ಠಿಕ ಆಹಾರವಿರಲಿ. ಬೆಳಗಿನ ಉಪಾಹಾರ ಎಂದಿಗೂ ತಪ್ಪಿಸಬೇಡಿ. ಕಬ್ಬಿಣಾಂಶ ಹಾಗೂ ಕ್ಯಾಲ್ಷಿಯಂ ಇರುವ ಆಹಾರ ಹೆಚ್ಚಿಗೆ ಸೇವಿಸಿ. ದಿನನಿತ್ಯ ಕನಿಷ್ಠ ಒಂದು ಗಂಟೆಯಾದರೂ ದೈಹಿಕ ಚಟುವಟಿಕೆಯಿರಲಿ. ಸಮಸ್ಯೆ ಸಂದೇಹಗಳು ಬಂದಾಗ ಕುಟುಂಬ ವೈದ್ಯರನ್ನು ಸಂಪರ್ಕಿಸಿ, ಚರ್ಚಿಸಿ. ಯಾವುದಾದರೊಂದು ಆರೋಗ್ಯವಿಮೆಯನ್ನು ಹೊಂದಿ. ಮನಬಿಚ್ಚಿ ಆಪ್ತಸ್ನೇಹಿತರೊಡನೆ ಮಾತನಾಡಿ ಭಾವನೆಗಳನ್ನು ಹಂಚಿಕೊಳ್ಳಿ. ಯಾವುದಾದರೂ ಹೊಸ ಚಟುವಟಿಕೆಗಳಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿ.

ಹೆಣ್ಣು ಶೋಷಣೆಗೆ ಬಲಿಯಾಗುವ ಬದಲು ಸಹಬಾಳ್ವೆಯಲ್ಲಿ ಸಮಪಾಲು ದೊರೆತು ಉರಿಯುವ ಬೆಂಕಿಯಾಗದೇ ಬೆಳಗುವ ದೀಪವಾಗಲಿ ಎಂದು ಆಶಿಸುತ್ತಾ ಎಲ್ಲರಿಗೂ ಮಹಿಳಾ ದಿನಾಚರಣೆಯ ಶುಭಾಶಯಗಳು.


ಲೇಖನ: ಡಾ॥ವೀಣಾ ಎಸ್.ಭಟ್, 
ಸ್ತ್ರೀರೋತಜ್ಞೆ,
ನಯನ ಆಸ್ಪತೆ, ಭದ್ರಾವತಿ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiDr. Veena S BhatFamily maintainInternational Women's DayPCODSociety healthSpecial ArticleWomenWomen healthಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಡಾ. ವೀಣಾ ಎಸ್. ಭಟ್ಭದ್ರಾವತಿಮಹಿಳಾ ದಿನಾಚರಣೆ
Share224Tweet123Send
Previous Post

ಬಾಲಿವುಡ್’ಗೆ ಭದ್ರಾವತಿ ಬೆಡಗಿ ಆಶಾ ಭಟ್: ನಿಮ್ಮ ಪಯಣದೊಂದಿಗಿದೆ ಇಡಿಯ ಉಕ್ಕಿನ ನಗರಿ

Next Post

3-4 ದಿನದಲ್ಲಿ ಪುಲ್ವಾಮಾ ಮಾದರಿಯಲ್ಲಿ ಯೋಧರ ಮೇಲೆ ಭಾರೀ ದಾಳಿ? ಗುಪ್ತಚರ ಇಲಾಖೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
3-4 ದಿನದಲ್ಲಿ ಪುಲ್ವಾಮಾ ಮಾದರಿಯಲ್ಲಿ ಯೋಧರ ಮೇಲೆ ಭಾರೀ ದಾಳಿ? ಗುಪ್ತಚರ ಇಲಾಖೆ

3-4 ದಿನದಲ್ಲಿ ಪುಲ್ವಾಮಾ ಮಾದರಿಯಲ್ಲಿ ಯೋಧರ ಮೇಲೆ ಭಾರೀ ದಾಳಿ? ಗುಪ್ತಚರ ಇಲಾಖೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಈ ದಿನಗಳು ಹುಬ್ಬಳ್ಳಿ-ವಿಜಯಪುರ-ಹುಬ್ಬಳ್ಳಿ ಡೆಮು ರೈಲು ಸಂಚಾರ ಭಾಗಶಃ ರದ್ದು

ಈ ದಿನಗಳು ಹುಬ್ಬಳ್ಳಿ-ವಿಜಯಪುರ-ಹುಬ್ಬಳ್ಳಿ ಡೆಮು ರೈಲು ಸಂಚಾರ ಭಾಗಶಃ ರದ್ದು

March 3, 2026
ಮಾ.7ರಿಂದ 10 ಸಹ್ಯಾದ್ರಿ ನಾಟಕೋತ್ಸವ | ಜೋಕುಮಾರಸ್ವಾಮಿ ಪ್ರದರ್ಶನದೊಂದಿಗೆ ಚಾಲನೆ

ಮಾ.7ರಿಂದ 10 ಸಹ್ಯಾದ್ರಿ ನಾಟಕೋತ್ಸವ | ಜೋಕುಮಾರಸ್ವಾಮಿ ಪ್ರದರ್ಶನದೊಂದಿಗೆ ಚಾಲನೆ

March 3, 2026
‘ಶಾಖಾಹಾರಿ’ ಸಿನಿಮಾಗೆ ಪ್ರತಿಷ್ಠಿತ ಫಿಲ್ಮ್‌ಫೇರ್ ಅವಾರ್ಡ್

‘ಶಾಖಾಹಾರಿ’ ಸಿನಿಮಾಗೆ ಪ್ರತಿಷ್ಠಿತ ಫಿಲ್ಮ್‌ಫೇರ್ ಅವಾರ್ಡ್

March 3, 2026
ಪುತ್ತೂರಿನ ಆಗಸದ ಕೆಳ ಎತ್ತರದಲ್ಲಿ ಹಾರಾಡಿದ ಸಣ್ಣ ವಿಮಾನ | ಭಯ ಪಡುವ ಅಗತ್ಯವಿಲ್ಲ

ಪುತ್ತೂರಿನ ಆಗಸದ ಕೆಳ ಎತ್ತರದಲ್ಲಿ ಹಾರಾಡಿದ ಸಣ್ಣ ವಿಮಾನ | ಭಯ ಪಡುವ ಅಗತ್ಯವಿಲ್ಲ

March 3, 2026
ಮಾ.3ರಂದು ಈಡಿಗರ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡ ಶಂಕುಸ್ಥಾಪನಾ ಸಮಾರಂಭ

ಮಾ.3ರಂದು ಈಡಿಗರ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡ ಶಂಕುಸ್ಥಾಪನಾ ಸಮಾರಂಭ

March 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL