ಜಮ್ಮು: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಮುಖ್ಯಮಂತ್ರಿಯಾಗಿದ್ದ ಮೆಹಬೂಬಾ ಮುಫ್ತಿ ಅವರು ರಾಜ್ಯದ ಅಭಿವೃದ್ಧಿಯನ್ನು ನಿರ್ಲಕ್ಷಿಸಿದ್ದೇ, ಬಿಜೆಪಿ ಅವರಿಗೆ ನೀಡಿದ್ದ ಬೆಂಬಲ ಹಿಂಪಡೆಯಲು ಕಾರಣ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಶ್ರೀನಗರದಲ್ಲಿಂದು ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಿದ ಅವರು, ನಮಗೆ ಅಧಿಕಾರ ಮುಖ್ಯವಲ್ಲ ಬದಲಾಗಿ ರಾಜ್ಯ ಅಭಿವೃದ್ಧಿ ಮುಖ್ಯ. ಇಂತಹ ವೇಳೆಯಲ್ಲಿ ಮುಫ್ತಿ ಅಭಿವೃದ್ಧಿಯನ್ನು ನಿರ್ಲಕ್ಷಿಸಿದ್ದೇ ನಾವು ಬೆಂಬಲ ಹಿಂಪಡೆಯಲು ಕಾರಣ ಎಂದರು.
LIVE: Shri @AmitShah addressing a public meeting in Jammu. #JnKWithBJP https://t.co/dCv0vg0Tf6
— BJP (@BJP4India) June 23, 2018
ಚುನಾವಣೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಬೆಂಬಲ ಹಿಂಪಡೆದು, ರಾಜಕೀಯ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
Discussion about this post