No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Wednesday, May 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ನೀನು ಈಶ ನಾನು ದಾಸ | ದಾಸರೆಂದರೆ ಪುರಂದರ ದಾಸರಯ್ಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 9, 2024
in Special Articles
0
ನೀನು ಈಶ ನಾನು ದಾಸ | ದಾಸರೆಂದರೆ ಪುರಂದರ ದಾಸರಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಲೇಖನ: ಹರೀಶಾಚಾರ್ಯ ಸಂಡೂರು  |

ನಾಡು ಕಂಡ ಶ್ರೇಷ್ಠ ಸಂತ ಭಕ್ತಿ ಮಾರ್ಗ ಪ್ರವರ್ತಕ, ದಾಸಶ್ರೇಷ್ಠ, ಸಮಾಜದ ಅಂಕುಡೊಂಕುಗಳನ್ನು ಸರಳ ಆಡುಭಾಷೆಯಾದ ಕನ್ನಡದ ಮೂಲಕ ಕನ್ನಡದ ಕಂಪಿನ ಜೊತೆ ಹರಿನಾಮಸ್ಮರಣೆಯನ್ನು ಪದ್ಯ, ಉಗಾಭೋಗ, ಸುಳಾದಿಗಳ ಮೂಲಕ ಮನೆಮನಕೆ ತಲುಪಿಸಿದ ಕೀರ್ತಿ ಪುರಂದರದಾಸರಿಗೆ ಸಲ್ಲುತ್ತದೆ.

ಅದೊಂದು ಕಾಲ 15ನೆಯ ಶತಮಾನ ಪ್ರಾಂಥೀಯ ಭಾಷೆಗಳು ಗರಿಕೆದರಿ ನಲಿಯುವ ಸಮಯ ದೇವನಾಗರಿ ಬಿಟ್ಟರೆ, ಬೇರೆ ಭಾಷೆಗಳಲ್ಲಿ ಶಾಸ್ತ್ರವಿಚಾರ ಅರಿಯುವುದು ಕಷ್ಟ ಆ ಸಮಯದಲ್ಲಿ ಕನ್ನಡ ದಾಸಸಾಹಿತ್ಯದ #DasaSahitya ಮೂಲಕ ಭಗವಂತನನ್ನು ಅರಿತು ಸಾಕ್ಷಾತ್ಕರಿಸಲು ಅಣಿ ಮಾಡಿದವರು ಇವತ್ತಿನ ಕಥಾನಾಯಕ “ಪುರಂದರ ದಾಸರು.” #Purandaradasaru
“ಮುಕ್ತಿ: ನೈಜ ಸುಖಾನುಭೂತಿ: ಅಮಲ ಭಕ್ತಿಶ್ಚ ತತ್ ಸಾಧನಮ್” ಎಂದು ನಿಷ್ಕಲ್ಮಷವಾದ ಭಕ್ತಿ ಮಾಡಿದರೆ ಭಗವಂತ ಒಲಿಯುವುದು ಸತ್ಯ, ಆ ಭಕ್ತಿಗಟ್ಟಿಯಾಗಿ ಭಗವಂತನಲ್ಲಿ ನೆಲೆಯೂರಬೇಕಾದರೆ, ಭಗವಂತನ ಜ್ಞಾನ ಅವಶ್ಯಕ. ಆ ಜ್ಞಾನ ಪರಿಪಕ್ವವಾಗುವುದು ಸತತವಾದ ಶಾಸ್ತ್ರಗಳ ಅಭ್ಯಾಸದಿಂದ ಇದು ಅಷ್ಟು ಸರಳವಲ್ಲ, ಶಾಸ್ತ್ರ ಪ್ರಮೇಯಗಳು ಕಬ್ಬಿಣದ ಕಡಲೆ ಆದರೂ, ಅದನ್ನು ಸರಳೀಕರಿಸಿ ಮುಕ್ತಿಗೆ ಸೋಪಾನ ಹಾಕಿದವರ ಗುಂಪಿನಲ್ಲಿ ಅಗ್ರಗಣ್ಯರು `ದಾಸರೆಂದರೆ ಪುರಂದರ ದಾಸರಯ್ಯ’ ಇವರ ಮಾರ್ಗ ಅನುಕರಿಸಿದವರ ಅನೇಕ ದಾಸರ ಗುಂಪೇ ಇದೆ. ಆದ್ದರಿಂದ `ದಾಸ ಸಾಹಿತ್ಯ ಸಂಗೀತ ಪಿತಾಮಹ’ ಎಂದರೆ ತಪ್ಪಾಗಲಾರದು.

ಇವರ ಜೀವನ ಒಂದು ರೋಚಕದ ಕಥೆ. ಸಾಮಾನ್ಯ ಎಲ್ಲಾ ಜ್ಞಾನಿಗಳ ಜೀವನ ಚರಿತ್ರೆಯಲ್ಲಿ ಕೇಳುವುದು ಬಡಕುಟುಂಬ. ಅನನ್ಯವಾದ ದೇವರ ಸೇವೆ. ನಂತರ ಒಳ್ಳೆ ಸತ್ಪುರುಷನ ಅವತಾರ, ಅದಕ್ಕೆ ಒಂದಂಶದಲ್ಲಿ ವ್ಯತಿರಿಕ್ತರಾದವರು ದಾಸರು ತಂದೆ ವರದಪ್ಪನಾಯಕ ತಾಯಿ ರುಕ್ಮಿಣಿ ಶ್ರೀನಿವಾಸನ ಸೇವೆ ಮಾಡಿದ್ದು ನಿಜ.

ಸಿರಿವರನ ದಯದಿಂದಲಿ ಜನಿತರಾದರು ಪುರಂದರವೆಂಬ ನಗರಿಯಲಿ
ಚರಿಸಿದರು ಕೆಲವು ದಿನ ಸಂಸಾರ ವೃತ್ತಿಯಲಿ
ಜರಿದು ವೈರಾಗ್ಯವನು ತೊಟ್ಟು ದೃಢಮನಸಿನಲಿ
ತರುಣಿ ಮಕ್ಕಳ ಸಹಿತ ಸೇರಿದರು ಕಿಷ್ಕಿಂದಗಿರಿ ತುಂಗಪಂಪದಲಿ
                                                         -ವಿಜಯದಾಸರು
ಆದರೆ ಬಡಕುಟುಂಬವಲ್ಲ, ನವಕೋಟಿ ನಾರಾಯಣ ಎಂದೇ ಬಿರುದು, ಈ ಶ್ರೀನಿವಾಸನಾಯಕರಿಗೆ, ಧನಲಕ್ಷ್ಮೀ ತಾಂಡವವಾಡುವಾಗ ವೈರಾಗ್ಯ ತುಸುದೂರವೆ, ಅದೇನಾದರೇನು ಆಗಲಿ ನಮ್ಮ ನಾಯಕರ ಹೆಂಡತಿಯ ಮೂಗುತಿಯ ಘಟನೆ ಒಂದು ಸಾಕಾಯಿತು ಅವರ ವೈರಾಗ್ಯಕ್ಕೆ ಸರ್ವಸ್ವವನ್ನು ಪದುಮನಾಭನ ಪಾದಕೆ ಕೃಷ್ಣಾರ್ಪಣವಿತ್ತು “ಕೆರೆಯ ನೀರನು ಕೆರೆಗೆ ಚೆಲ್ಲಿ”, “ಆದದ್ದೆಲ್ಲ ಒಳಿತೆ ಆಯಿತು ನಮ್ಮ ಶ್ರೀಧರನ ಸೇವೆಗೆ ಸಾಧನ ಸಂಪತ್ತಾಯಿತು” ಎಂದು “ದಾರಿ ಯಾವುದಯ್ಯಾ ವೈಕುಂಠಕೆ ದಾರಿ ತೋರಿಸಯ್ಯ” ಎಂದು ಹೊರಟರು ಇಂತವರೇ ನಿಜವಾದ ದಾಸರು.

ನಾಮಪದ ಅಥವಾ ಕ್ರಿಯಾಪದವಾಗಿವುಳ್ಳ ಶಬ್ಧ ಇದು ಭಗವಂತನನ್ನು ಒಲಿಸಿಕೊಳ್ಳುವ ಬಹುದೊಡ್ಡ ಮಾಧ್ಯಮ. ಈ ಪದಗಳು ಹೇಗೆ ಬಳಸುತ್ತೇವೆ ಎನ್ನುವುದರಲ್ಲಿ ಪುಣ್ಯಪಾಪಗಳ ಸಂಗ್ರಹವಿದೆ. ಇದರ ಸರಿಯಾದ ಬಳಕೆ ಸುವ್ಯವಸ್ಥಿತ ರೀತಿಯಲ್ಲಿ ಜೋಡಣೆಯಾಗಿ ಭಗವಂತನನ್ನು ಕೊಂಡಾಡಲು ಉಪಯುಕ್ತವಾಗಬೇಕಾದರೆ ಗುರುಗಳ ಅನುಗ್ರಹ ಬಹಳ ಪ್ರಮುಖವಾದದ್ದು. ಹಾಗೆ ದಾಸರು ಗುರುಗಳಾಗಿ ಕಂಡದ್ದು ವಿಜಯನಗರ ಸಾಮ್ರಾಜ್ಯದ ಶ್ರೀಕೃಷ್ಣದೇವರಾಯನ #SriKrishnadevaraya ಕುಹಯೋಗ ಪರಿಹರಿಸಿದ ಕರ್ನಾಟಕ ವಿದ್ಯಾಸಿಂಹಾಸನಾಧೀಶ್ವರ “ಶ್ರೀ ವ್ಯಾಸರಾಜರು” #Vyasarajaru ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಇದನ್ನು ಹೇಳಿದಷ್ಟೆಯಲ್ಲ ಕೃತಿಯಲಿ ತೋರಿಸಿ ಪುರಂದರ ವಿಠ್ಠಲ ಎಂಬ ಅಂಕಿತ ಪಡೆದು 4,75,000 ಕೃತಿಗಳನ್ನು ರಚಿಸಿ ವ್ಯಾಸರಾಜರಿಂದ “ದಾಸರೆಂದರೆ ಪುರಂದರದಾಸರಯ್ಯ” ಎಂದು ಕೀರ್ತಿಪತಾಕೆಯನ್ನು ಪಡೆದು ಜೀವನದ ಉದ್ದಕ್ಕೂ ಪರಿಪಾಲಿಸಿದರು.

ಪುರುಷನ ಸಾಧನೆಗೆ ಮಡದಿಯು ಕಾರಣಳಾದರೆ ಅವರೆ ಆದರ್ಶ ದಂಪತಿಗಳು. ವೈರಾಗ್ಯ ದಾಸರಲ್ಲಿ ಮಾತ್ರ ಇರುವುದಿಲ್ಲ ಅವರ ಮಡದಿಯಲ್ಲಿ ಇತ್ತು ಎನ್ನಲೂ ಇದೊಂದು ಘಟನೆ ಸಾಕು ಎನಿಸುತ್ತದೆ. ಒಮ್ಮೆ ದಾಸರು ತಮ್ಮ ದಿನನಿತ್ಯದ ಜೀವನ ನಿರ್ವಹಣೆಗಾಗಿ ಯಾಯಿವಾರ (ಭಿಕ್ಷೆ) ಬೇಡಲು “ರಾಗಿ ತಂದಿರಾ ಭಿಕ್ಷೆಗೆ ರಾಗಿ ತಂದಿರಾ” ಎಂದು ಬೇಡಲು ಹೊರಟಾಗ ಇವರ ವೈರಾಗ್ಯದ ಪರೀಕ್ಷೆಯನ್ನು ಮಾಡಿದವನು ಭೂಪಾಲ ಕೃಷ್ಣರಾಯ ತಾನು ಕೊಡುವ ಅಕ್ಕಿಯ ಒಳಗೆ ಮುತ್ತು ರತ್ನಗಳನ್ನು ಬೆರೆಸಿ ಕೊಟ್ಟನು ಅದನ್ನು ಮಡದಿಗೆ ನೀಡಿದರು ದಾಸರು. ಅವರನ್ನೇ ಹಿಂಬಾಲಿಸಿದ ಭೂಪಾಲ ಕೃಷ್ಣರಾಯ ಮತ್ತು ವ್ಯಾಸತೀರ್ಥರು, ಮನೆಯ ಆಚೆ ದಾಸರ ಹೆಂಡತಿ “ಛೇ ಯಾರೋ ಅಕ್ಕಿಯಲ್ಲಿ ಕಲ್ಲುಮಣ್ಣುಗಳನ್ನು ಹಾಕಿರುವರೆಂದು” ನಿಂದಿಸಿ ಕೆರುವುದನ್ನು ಕಂಡು ಅವಕ್ಕಾದರು, ನಿಶ್ಚಯಿಸಿದರು “ಹೊನ್ನಿನಾಸೆ ಬಿಡಿರೆಂಬ ಕಾಗದ ಬಂದಿದೆ ಮಣ್ಣಿನಾಸೆ ಬಿಡಿರೆಂಬ ಕಾಗದ ಬಂದಿದೆ” ಇದು ದಾಸರ ಮಾತು ಅದರ ಅರಿಯುವಿಕೆ ಈ ಸಾಧ್ವಿಯಲ್ಲೂ ಕಾಣಬಹುದು ಎಂದು ಇದಲ್ಲವೆ ನಿಜವಾದ ವೈರಾಗ್ಯ! ಇದಲ್ಲವೆ ನಿಜ ಆದರ್ಶ ದಂಪತಿಗಳ ಸಾಮರಸ್ಯದ ಬದುಕು.
ಶಾಸ್ತ್ರವಿಚಾರಗಳನ್ನು ಆಡುಭಾಷೆಯಲ್ಲಿ ಕನ್ನಡಿಕರಿಸುವುದು ಅಷ್ಟು ಸುಲಭದ ಮಾತಲ್ಲ, ವ್ಯಾಸಸಾಹಿತ್ಯ ಸೂರ್ಯನಂತೆ ಪ್ರಖರತೆ ಬಹಳ, ದಾಸಸಾಹಿತ್ಯ ಚಂದ್ರನಂತೆ ಸೂರ್ಯನ ಬೆಳಕನ್ನು ಪಡೆದು ಮುದನೀಡಬೇಕು. ಇದು ದಾಸರಿಗೆ ಕೈಯಲ್ಲಿ ಇರುವ ಚಂಡಿನಂತೆ, ಅಂಗೈಯಲ್ಲಿ ಚಂಡು ಇರುವಾಗ ಎಲ್ಲಾ ಭಾಗಗಳು ಹೇಗೆ ಸ್ಪಷ್ಟತೆ ಇರುತ್ತದೆಯೋ ಹಾಗೆ ಶಾಸ್ತ್ರ ಪ್ರಮೇಯಗಳು ದಾಸರಾಯರಿಗೆ ಇದರ ನಿದರ್ಶನವೇ ದಾಸರ ಈ ಉಗಾಭೋಗ:

ಕೃತೆಯತ್ ಧ್ಯಾಯಯೋವಿಷ್ಣುಂ ತ್ರೇತಾಯಾಂ ಯಜತೋ ಮುಖೈ:|
ದ್ವಾಪರೆ ಪರಿಚರ್ಯಾಯಾಂ ಕಲೌ ತದ್ ಹರಿಕೀರ್ತನಮ್|| (ಭಾಗವತ 12-3-52) ಇದರ ಅನುವಾದದ ಉಗಾಭೋಗ
ಧ್ಯಾನವು ಕೃತಯುಗದಲಿ, ತಜ್ಞಯಾಗವು ತ್ರೇತಾಯುಗದಲಿ,
ಅರ್ಚನೆ ದ್ವಾಪರದಲಿ, ಕೀರ್ತನೆ ಮಾತ್ರದಿ ಕಲಿಯುಗದಲಿ
ಮುಕುತಿಯನೀವ ಪುರಂದರ ವಿಠ್ಠಲ

ಗ್ರಾಸಕ್ಕಿಲ್ಲದ ಪರರ ಮನೆಗಳ ಪೋಗಿ ತುಳಸಿ ಮಾಲೆ ಧರಿಸಿ, ಡಂಭಕದಿ ಹರಿಸ್ಮರಣೆ ಮಾಡಿ, ತಂಬೂರಿ ಮೀಟಿದರೆ ದಾಸರಾಗುವುದಿಲ್ಲ. ಪ್ರಹ್ಲಾದರಾಜರು ಹೇಳಿದಂತೆ ಶ್ರವಣಂ ಕೀರ್ತನಂ ವಿಷ್ಣೂ….. ವಂದನಂ ದಾಸ್ಯಂ….. ಎನ್ನುವಂತೆ.

ನವವಿಧ ಭಕ್ತಿಯಲ್ಲಿ ದಾಸ್ಯವು ಒಂದು ಬಗೆ. `ನೀನು ಈಶ ನಾನು ದಾಸ’ ಎಂದವನು ಮಾತ್ರ ನಿಜದಾಸ. ಈ ದೃಷ್ಠಿಕೋನದಲ್ಲಿ ನೋಡಿದಾಗ ವ್ಯಾಸರಾಜರ `ದಾಸರೆಂದರೆ ಪುರಂದರ ದಾಸರಯ್ಯ’ ಎನ್ನುವ ಮಾತು ಅಕ್ಷರ ಅಕ್ಷರ ಸತ್ಯ.

ದಾಸರು ಆಡಿದ ಮಾತು ಹಾಡಾಯಿತು ಸಾಧನೆಗೈಯ್ಯುವ ಸಾಧಕ, ಸಾಧ್ವೀ ಸಖಿಯರಿಗೆ ಸಾಧನ ಪಥವಾಯಿತು. ಗೃಹಣಿಯರಿಗೆ ಮನೆಯ ಕೆಲಸಲ್ಲೂ ದೇವರನ್ನು ಕಾಣುವ ಅನುಸಂಧಾನ ಚಿಗುರೊಡೆಯಿತು. ಸಾಮಾಜಿಕ ಸುಧಾರಣೆಯ ಮಾನದಂಡವಾಯಿತು. ಸಂಗೀತ ಪ್ರಿಯರಿಗೆ ಹೋಳಿಗೆಯ ಹೂರ್ಣವಾಯಿತು. ಸಾಹಿತಿಗಳಿಗೆ ಶಬ್ದ ಭಂಡಾರವಾಯಿತು. ಇವರನ್ನು ಪಡೆದ ಭರತ ಭೂಮಿ ಕನ್ನಡ ನಾಡು ಧನ್ಯ ಅವರ ಸ್ಮರಣೆ ಅನುದಿನವು ಇರಲೆಂದು ಪ್ರಾರ್ಥಿಸುವ.

ಶ್ರೀಕೃಷ್ಣಾರ್ಪಣಮಸ್ತು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: Carnatic musicHampiKannada News WebsiteLatest News KannadaSri PurandaradasaruVijayadasaruVijayanagarಕನ್ನಡ ನಾಡುದಾಸಸಾಹಿತ್ಯಪುರಂದರ ದಾಸರ ಆರಾಧನೆಪುರಂದರದಾಸರುಭಗವಂತವಿಜಯದಾಸರುವಿಜಯನಗರ ಸಾಮ್ರಾಜ್ಯವ್ಯಾಸರಾಜರುಶ್ರೀ ವ್ಯಾಸರಾಜರುಸಂಗೀತಹರಿನಾಮಸ್ಮರಣೆ
Share198Tweet123Send
Previous Post

ರಾಹುಲ್ ಗಾಂಧಿ ಹೇಳಿದ ಡ್ರೋಣ್ ಹಾಗೂ ಅದಾನಿ, ಅಂಬಾನಿ ಕಥೆ ಏನು?

Next Post

ತುಮಕೂರು: 10-11 ರಂದು ಶ್ರೀ ತ್ಯಾಗರಾಜ, ಶ್ರೀ ಪುರಂದರ ಆರಾಧನಾ ಉತ್ಸವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನೀನು ಈಶ ನಾನು ದಾಸ | ದಾಸರೆಂದರೆ ಪುರಂದರ ದಾಸರಯ್ಯ

ತುಮಕೂರು: 10-11 ರಂದು ಶ್ರೀ ತ್ಯಾಗರಾಜ, ಶ್ರೀ ಪುರಂದರ ಆರಾಧನಾ ಉತ್ಸವ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

2026ರಲ್ಲಿ ವೃತ್ತಿಜೀವನದ ಬೆಳವಣಿಗೆಗೆ ನೆರವಾಗುವ ಬೆಂಗಳೂರಿನ ಪ್ರಮುಖ 10 ಕಂಪನಿಗಳ ಪಟ್ಟಿ ಪ್ರಕಟಿಸಿದ ಲಿಂಕ್ಡ್‌ ಇನ್

May 20, 2026
“ಮೆಲೋಡಿ” ಮೀಮ್ ಪರಿಣಾಮ: ದಲಾಲ್ ಸ್ಟ್ರೀಟ್‌ನಲ್ಲಿ ಅಚ್ಚರಿ ಷೇರು ಏರಿಕೆ

“ಮೆಲೋಡಿ” ಮೀಮ್ ಪರಿಣಾಮ: ದಲಾಲ್ ಸ್ಟ್ರೀಟ್‌ನಲ್ಲಿ ಅಚ್ಚರಿ ಷೇರು ಏರಿಕೆ

May 20, 2026
GE Aerospace to Invest ₹100 Crore in Pune Facility, Boosting India Manufacturing

ಪುಣೆಯ 100 ಕೋಟಿ ಹೂಡಿಕೆಯೊಂದಿಗೆ ಭಾರತದಲ್ಲಿ ತನ್ನ ಉತ್ಪಾದನಾ ಸಾಮರ್ಥ್ಯವನ್ನು ವೇಗಗೊಳಿಸಲು ಮುಂದಾಗಿರುವ GE ಏರೋಸ್ಪೇಸ್

May 20, 2026
ಅಕ್ರಮ ಮರಳು ಸಾಗಣೆ ವಿರುದ್ಧ ದಾಳಿ : 150 ಟನ್‌ಗೂ ಅಧಿಕ ಮರಳು ಜಪ್ತಿ

ಅಕ್ರಮ ಮರಳು ಸಾಗಣೆ ವಿರುದ್ಧ ದಾಳಿ : 150 ಟನ್‌ಗೂ ಅಧಿಕ ಮರಳು ಜಪ್ತಿ

May 20, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL