No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಪುತ್ತೂರು | ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ದಿನಗಣನೆ | ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅರುಣ್ ಕುಮಾರ್ ಪುತ್ತಿಲ ನೇತೃತ್ವದಲ್ಲಿ ಭರ್ಜರಿ ತಯಾರಿ

kalpa News by kalpa News
November 25, 2025
in ದಕ್ಷಿಣ ಕನ್ನಡ
0
ಪುತ್ತೂರು | ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ದಿನಗಣನೆ | ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಪುತ್ತೂರು  |

ಕಳೆದ ಎರಡು ವರ್ಷ ಯಶಸ್ವಿಯಾಗಿ ನಡೆಸಿಕೊಂಡು ಬಂದ ಶ್ರೀನಿವಾಸ ಕಲ್ಯಾಣೋತ್ಸವ #SrinivasaKalyana ಈ ಬಾರಿಯೂ ಸಹ ವೈಭವೋಪೇತವಾಗಿ ನಡೆಸಲು ದಿನಗಣನೆ ಆರಂಭವಾಗಿದೆ.

ಈ ಕುರಿತಂತೆ ಮಾತನಾಡಿರುವ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, #ArunKumarPuttila ಎಲ್ಲರ ಸಹಕಾರದಿಂದ ಎರಡು ವರ್ಷ ಯಶಸ್ವಿಯಾಗಿ ನಡೆಸಲಾಗಿದ್ದು, ಈಗ ಮೂರನೇ ಬಾರಿ ಯೋಗ ಬಂದಿದೆ. ಈ ಬಾರಿ ಶ್ರೀನಿವಾಸ ಕಲ್ಯಾಣೋತ್ಸವದ ಜೊತೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜನ್ಮಶತಾಬ್ಬಿಯನ್ನು ಶಾಶ್ವತವಾಗಿ ಉಳಿಯಬೇಕೆಂಬ ಮತ್ತು ಹಿಂದು ಸಮಾಜ ಸಾಮೂಹಿಕ ವಿವಾಹಕ್ಕೆ ಮುಂದಿನ ದಿನ ಒತ್ತು ಕೊಡಬೇಕೆಂಬ ನಿಟ್ಟಿನಲ್ಲಿ ಹಿಂದವಿ ಸಾಮ್ರಾಜ್ಯೋತ್ಸವ ಮತ್ತು ಸಾಮೂಹಿಕ ವಿವಾಹವನ್ನು ಜೋಡಿಸಿದ್ದೇವೆ ಎಂದರು.

ಸಾಮೂಹಿಕ ವಿವಾಹದ #MassMarriage ಕುರಿತು ಘೋಷಣೆ ಮಾಡಿದ ಆರಂಭದಲ್ಲಿ 243 ಜೋಡಿಗಳು ನೋಂದಾಯಿಸಿಕೊಂಡಿದ್ದರು. ಆದರೆ ಬೇರೆ ಬೇರೆ ಕಾರಣಗಳಿಂದ ಅವರು ಮುಂದೆ ಬರಲಿಲ್ಲ. ಜೊತೆಗೆ ನಾವು ಕೂಡಾ ಪೂರ್ಣಪ್ರಮಾಣದ ಜೋಡಿಗಳಿಗೆ ಮಾತ್ರ ವಿವಾಹಕ್ಕೆ ಅವಕಾಶ ನೀಡಿದ್ದೇವೆ ಎಂದರು.

ಸುಮಾರು 75 ಸಾವಿರ ರೂಪಾಯಿಯಷ್ಟು ಒಂದು ಜೋಡಿಯ ಸಾಹಿತ್ಯಕ್ಕೆ ಖರ್ಚು ತಗಲುತ್ತದೆ. ಸುಮಾರು ರೂ. 50 ಸಾವಿರ ಚಿನ್ನದ ತಾಳಿ, ಕರಿಮಣಿಗೆ ವ್ಯಹಿಸಲಾಗುವುದು. ಉಳಿದಂತೆ ಬಟ್ಟೆಗಳಿಗೆ ಸಹಿತ ಖರ್ಚು ಇದೆ. ಒಟ್ಟಿನಲ್ಲಿ ನಮ್ಮ ಮದುವೆಯಲ್ಲಿ ಯಾವ ಕಾರ್ಯ ಮಾಡಿದ್ದೇವೋ, ಅದೆಲ್ಲವನ್ನು ಸಾಮೂಹಿಕ ವಿವಾಹದ ಜೋಡಿಗಳಿಗೆ ಮಾಡಲಿದ್ದೇವೆ ಎಂದು ತಿಳಿಸಿದರು.ದಿಬ್ಬಣವು ಬೆಳಿಗ್ಗೆ ಗಂಟೆ 8.30ಕ್ಕೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್’ನಿಂದ ಹೊರಡಲಿದ್ದು, ವೇದಿಕೆಯಲ್ಲೂ ಜೋಡಿಗಳ ಕುಟುಂಬಗಳು ಜೊತೆಯಲ್ಲಿ ಇರುತ್ತಾರೆ. ಪ್ರತಿ ಜೋಡಿಗೂ ಶೃಂಗಾರ ಮಂಟಪದ ವ್ಯವಸ್ಥೆ ಮಾಡಲಾಗಿದೆ. ವಿವಾಹ ಕಾರ್ಯಕ್ರಮದಲ್ಲೂ ಪ್ರತಿ ಜೋಡಿಗೆ ಒಬ್ಬೊಬ್ಬ ವೈದಿಕರಿರುತ್ತಾರೆ. ಪ್ರಧಾನ ವೈದಿಕರ ಮಾರ್ಗದರ್ಶನದಂತೆ ಆಯಾಯ ವೈದಿಕರು ವಿವಾಹ ಕಾರ್ಯಕ್ರಮ ನಡೆಸಲಿದ್ದಾರೆ.

ನ.28ಕ್ಕೆ ಹೊರೆಕಾಣಿಕೆ ಸಮರ್ಪಣೆ ನಡೆಯಲಿದ್ದು, ಮೆರವಣಿಗೆ ದರ್ಬೆಯಿಂದ ಸಂಜೆ ಗಂಟೆ 4ಕ್ಕೆ ಹೊರಡಲಿದೆ. ಪ್ರತಿ ಗ್ರಾಮದಿಂದಲೂ ಬಂದ ಹಸಿರುಹೊರೆಕಾಣಿಕೆ ದರ್ಬೆಯಿಂದ ಮೆರವಣಿಗೆ ಮೂಲಕ ದೇವಸ್ಥಾನ ಸಭಾಭವನದಲ್ಲಿರುವ ಉಗ್ರಾಣದಲ್ಲಿ ಜೋಡಿಸಲಾಗುವುದು.

ನ.29ರಂದು ಏನೆಲ್ಲಾ ಕಾರ್ಯಕ್ರಮ?
ನ.29ಕ್ಕೆ ಬೆಳಿಗ್ಗೆ ಗಣಪತಿ ಹೋಮದಿಂದ ಆರಂಭಗೊಂಡು ಭಜನಾ ಕಾರ್ಯಕ್ರಮ ನಡೆಯಲಿದೆ.

ಸಂಜೆ ಗಂಟೆ 4 ರಿಂದ ಶ್ರೀದೇವಿ, ಭೂದೇವಿ ಸಹಿತ ಶ್ರೀನಿವಾಸ ದೇವರಿಗೆ ವೈಭವದ ಶೋಭಯಾತ್ರೆ ಬೊಳುವಾರಿನಿಂದ ಆರಂಭಗೊಳ್ಳಲಿದೆ. ಸಂಜೆ ಗಂಟೆ 7.30ರಿಂದ ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ಹಿಂದವಿ ಸಾಮಾಜ್ಯೋತ್ಸವ ನಡೆಯಲಿದೆ. ರಾತ್ರಿ ಮಂಗಳರಾತಿ ಅನ್ನಸಂತರ್ಪಣೆ ನಡೆಯಲಿದೆ. ಬಳಿಕ ಸಾಂಸ್ಕೃತಿಕ ಕಲಾವೈಭವ ಪ್ರದರ್ಶನಗೊಳ್ಳಲಿದೆ.

ನ.30ರಂದು ಏನೆಲ್ಲಾ ಕಾಯಕ್ರಮ ನಡೆಯಲಿದೆ?
ನ.30ಕ್ಕೆ ಬೆಳಿಗ್ಗೆ ಗಂಟೆ 5.30 ರಿಂದ ಸುಪ್ರಭಾತ ಪೂಜಾ ಸೇವೆ, ಬೆಳಿಗ್ಗೆ ಗಂಟೆ 10.30ರ ಮಕರ ಲಗ್ನದಲ್ಲಿ ಸಾಮೂಹಿಕ ವಿವಾಹ, ಮದ್ಯಾಹ್ನ ಅನ್ನ ಸಂತರ್ಪಣೆ ನಡೆಯಲಿದೆ. ಈ ಸಂದರ್ಭ ಭಜನೋತ್ಸವ ನಡೆಯಲಿದೆ. ಸಂಜೆ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಆಕರ್ಷಕ ಸಿಡಿಮದ್ದು ಪ್ರದರ್ಶನ ನಡೆಯಲಿದೆ. ರಾತ್ರಿ ಅನ್ನಸಂತರ್ಪಣೆ ನಡೆಯಲಿದೆ.ಯಾರೆಲ್ಲಾ ಪಾಲ್ಗೊಳ್ಳಲಿದ್ದಾರೆ?
ಕಾರ್ಯಕ್ರಮದಲ್ಲಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಗೋರ್ಕಣ ಮಂಡಲಾಧೀಶ್ವರ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ, ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು, ಚಿತ್ತಾಪುರ ಮಠದ ವಿದ್ಯೆಂದ್ರ ತೀರ್ಥ ಶ್ರೀಪಾದರು, ಅರೆಮಾದನಹಳ್ಳಿ ವಿಶ್ವಕರ್ಮ ಜಗದ್ಗುರು ಪೀಠದ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ, ಗುರುಪುರ ಶ್ರೀ ಕ್ಷೇತ್ರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಶ್ರೀ ರಾಮ ಕ್ಷೇತ್ರ ಕನ್ಯಾಡಿಯ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಒಡಿಯೂರು ಗುರುದೇವದತ್ತ ಸಂಸ್ಥಾನ ಗುರುದೇವಾನಂದ ಸ್ವಾಮೀಜಿ, ಶ್ರೀಕ್ಷೇತ್ರ ಕೇಮಾರು ಶ್ರೀ ಈಶವಿಠಲದಾಸ ಸ್ವಾಮೀಜಿ, ಕನ್ಯಾನ ಶ್ರೀ ಕ್ಷೇತ್ರ ಕಣಿಯೂರು ಮಠದ ಶ್ರೀ ಮಹಾಬಲ ಸ್ವಾಮೀಜಿ, ಶ್ರೀಧಾಮ ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿ ಪಾಲ್ಗೊಳ್ಳಲಿದ್ದಾರೆ.

ಹೇಗಿದೆ ಸಿದ್ದತೆ?
ಈ ಬಾರಿ 400 ಚದರ ಅಡಿ ಉದ್ದ ಮತ್ತು 140 ಚದರ ಅಡಿ ಅಗಲದ ಸಭಾಂಗಣ ನಿರ್ಮಾಣ ಆಗುತ್ತಿದೆ. ಸಭಾಂಗಣ ಮತ್ತು ವೇದಿಕೆ ಸೇರಿ ಒಟ್ಟು 60 ಸಾವಿರ ಚದರ ಅಡಿ ಆಗಲಿದೆ. ಅನ್ನಛತ್ರವು ಪ್ರತ್ಯೇಕವಾಗಿದ್ದು, ಸುಮಾರು 25 ಸಾವಿರ ಚದರ ಅಡಿಯ ಅನ್ನಛತ್ರ ನಿರ್ಮಾಣದ ಸಿದ್ಧತೆ ಕಾರ್ಯ ನಡೆಯುತ್ತಿದೆ.

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಅಧ್ಯಕ್ಷ ನರಸಿಂಹ ಪ್ರಸಾದ್, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ತಿಂಗಳಾಡಿ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅಧ್ಯಕ್ಷ ಶ್ರೀರಾಮ ಭಟ್ ಪಾತಾಳ, ಸ್ವಾಗತ ಸಮಿತಿ ಕಾರ್ಯದರ್ಶಿ ಪ್ರೇಮರಾಜ್, ಸಂಚಾಲಕರಾದ ಉಮೇಶ್ ಕೋಡಿಬೈಲ್ ಮತ್ತು ರವಿ ಕುಮಾರ್ ರೈ ಕೆದಂಬಾಡಿ ಮಠ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

Tags: Arun Kumar PuttilaDakshina KannadaMass MarriagePuttila Parivara Seva TrustPutturRSSSamuhika VivahaSrinivasa Kalyana Mahotsavaಅರುಣ್ ಕುಮಾರ್ ಪುತ್ತಿಲಪುತ್ತಿಲ ಪರಿವಾರ ಸೇವಾ ಟ್ರಸ್ಟ್ಪುತ್ತೂರುರಾಷ್ಟ್ರೀಯ ಸ್ವಯಂಸೇವಕ ಸಂಘಶ್ರೀನಿವಾಸ ಕಲ್ಯಾಣೋತ್ಸವಸಾಮೂಹಿಕ ವಿವಾಹ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದಾವಣಗೆರೆ ಹಿಂದಿನ ಡಿಸಿ, ಬೆಸ್ಕಾಂ ಎಂಡಿ ಮಹಾಂತೇಶ್ ಬೀಳಗಿ ಅಪಘಾತದಲ್ಲಿ ದುರ್ಮರಣ

Next Post

ನ.28ರಂದು ಉಡುಪಿ, ಮಲ್ಪೆ, ಮಣಿಪಾಲ ಠಾಣಾ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಣೆ

kalpa News

kalpa News

Next Post
ನ.28ರಂದು ಉಡುಪಿ, ಮಲ್ಪೆ, ಮಣಿಪಾಲ ಠಾಣಾ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಣೆ

ನ.28ರಂದು ಉಡುಪಿ, ಮಲ್ಪೆ, ಮಣಿಪಾಲ ಠಾಣಾ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಣೆ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL