Thursday, December 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ದಕ್ಷಿಣ ಕನ್ನಡ

ಕಲಾರಸಿಕರ ಮನಸೂರೆಗೊಂಡ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಸಂಗೀತ-ನೃತ್ಯ ಸಂಭ್ರಮ

ಕಲಾಕ್ಷೇತ್ರಕ್ಕೆ ದೀಪಕ್-ಪ್ರೀತಿಕಲಾ ಕುಟುಂಬಸ್ಥರ ಕೊಡುಗೆ ಅಪಾರ: ಈಶ್ವರ್ ಬೆಡೆಕರ್ ಪ್ರಶಂಸೆ

October 27, 2025
in ದಕ್ಷಿಣ ಕನ್ನಡ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಪುತ್ತೂರು  |

ಇಲ್ಲಿನ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ 29 ನೇ ವಾರ್ಷಿಕೋತ್ಸವ ಅದ್ದೂರಿಯಾಗಿ ನಡೆದಿದ್ದು, ಕಾರ್ಯಕ್ರಮಗಳು ಕಲಾರಸಿಕರ ಮನಸೂರೆಗೊಂಡವು.

ಸಂಗೀತ-ನೃತ್ಯೋತ್ಸವ 2025 ಎಂಬ ಶೀರ್ಷಿಕೆಯಡಿಯಲ್ಲಿ ನಗರದ ಜೈನ್ ಭವನದಲ್ಲಿ ನಡೆದ ಕಾರ್ಯಕ್ರಮ ಸಂಗೀತ ಹಾಗೂ ನೃತ್ಯ ಪ್ರಕಾರಗಳ ವೈಭವವನ್ನು ತೆರೆದಿಟ್ಟಿತು.

ಈ ಸಂದರ್ಭದಲ್ಲಿ ಮಾತನಾಡಿದ ನಿವೃತ್ತ ಬ್ಯಾಂಕ್ ಉದ್ಯೋಗಿ ಹಾಗೂ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಈಶ್ವರ್ ಬೆಡೆಕರ್, ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಸಂಸ್ಥೆಯ ಸಂಸ್ಥಾಪಕರಾದ ಭವಾನಿಶಂಕರ ರಾಯರು ತಮ್ಮ ಮಕ್ಕಳಿಗೆ ಚಿಕ್ಕಂದಿನಿಂದಲೇ ಅಭ್ಯಾಸ ಮಾಡಿಸುತ್ತಿದ್ದರು. ಅವರ ಮಕ್ಕಳು ಇಂದಿಗೂ ಅವಿರತವಾಗಿ ಕಲಾ ಸೇವೆ ಮಾಡುತ್ತಾ ಬರುತ್ತಿರುವುದು ಸಂತೋಷದ ವಿಚಾರ ಎಂದರು.

ದೀಪಕ್ ಅವರ ತಂದೆ ಎಂತಹುದ್ದೇ ಪರಿಸ್ಥಿತಿಯಲ್ಲೂ ಸಹ ತಮ್ಮ ಮಕ್ಕಳಿಗೆ ಸಂಗೀತ ಹಾಗೂ ನೃತ್ಯ ಅಭ್ಯಾಸವನ್ನು ತಪ್ಪದೇ ಮಾಡಿಸಿದ್ದು, ಇವರು ಚಿಕ್ಕಂದಿನಿಂದಲೇ ಆರಂಭಿಸಿ ಇಂದಿನವರೆಗೂ ನಿರಂತರವಾಗಿ ಕಲಾಸೇವೆ ಮಾಡುತ್ತಿರುವುದು ಮಾದರಿಯಾದುದು ಎಂದು ಶ್ಲಾಘಿಸಿದರು.
ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯಿಂದ ಪ್ರತಿ ವರ್ಷವೂ ಸಹ ಇಂತಹ ಅರ್ಥಪೂರ್ಣ ಕಾರ್ಯಕ್ರಮ ಆಚರಿಸಿಕೊಂಡು ಬರುತ್ತಿರುವುದು ಸಂತೋಷದ ವಿಚಾರ. ಹಿಂದೆ ಪುತ್ತೂರು ನರಸಿಂಹ ನಾಯಕ್ ಅವರಿಂದ ನಮ್ಮ ಊರು ರಾಜ್ಯದಲ್ಲೇ ಹೆಸರುವಾಸಿಯಾಗಿತ್ತು. ಈಗ, ದೀಪಕ್ ಅವರ ಕುಟುಂಬಸ್ಥರು ಅದೇ ರೀತಿಯಲ್ಲಿ ಪುತ್ತೂರಿನ ಹೆಸರನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯತ್ತಾರೆ ಎಂಬ ಭರವಸೆ ನಮಗಿದೆ ಎಂದರು.

ಸಮಾಜಕ್ಕೆ ಉತ್ತಮ, ಸಂಸ್ಕಾರಯುತ ಜನಾಂಗವನ್ನು ಕೊಡಬೇಕು ಎಂಬ ಆಶಯದೊಂದಿಗೆ ದೀಪಕ್, ಪ್ರೀತಿಕಲಾ ಹಾಗೂ ಕುಟುಂಬಸ್ಥರು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಇಂತಹ ಕಾರ್ಯಗಳು ಮುಂದುವರೆಯಬೇಕಿದ್ದು, ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ಗುರುಗಳಾದ ದೀಪಕ್ ಅವರು ಮಾತನಾಡಿ, ಪುತ್ತೂರಿನ ಮಣ್ಣಿನ ಶಕ್ತಿಯಿಂದಾಗಿ ನಾವು ಇಂತಹ ಕಲಾಸೇವೆ ಮಾಡಲು ಸಾಧ್ಯವಾಯಿತು. ಮುಂದಿನ ದಿನಗಳಲ್ಲಿ ಇನ್ನೂ ಹಲವಾರು ಕಾರ್ಯಕ್ರಮಗಳನ್ನು ಮಾಡುವ ಯೋಚನೆಯಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಕೋರಿದರು.ಕಲಾ ಸೇವೆಯೊಟ್ಟಿಗೆ ಸಾಮಾಜಿಕ ಕಳಕಳಿಯ ಭಾಗವಾಗಿ ಹಲವು ಕಡೆಗಳಲ್ಲಿ ಸ್ವಚ್ಛತಾ ಕಾರ್ಯಗಳನ್ನು ಮಾಡಲಾಗಿದೆ. ಪ್ರಮುಖವಾಗಿ ಮಹಾಲಿಂಗೇಶ್ವರ ದೇವಾಲಯದ ನಾಗವನ ಪ್ರದೇಶ, ಹೆಜ್ಜೆಗಿರಿ ಹಾಗೂ ಕೆಮ್ಮಿಂಜೆ ದೇವಾಲಯ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ಹಾಗೂ ಕಸವನ್ನು ಹೆಕ್ಕುವ ಕಾರ್ಯ ಮಾಡಲಾಗಿದೆ ಎಂದು ತಿಳಿಸಿದೆ.

ನಮ್ಮ ಪರಿಸರ ಹಾಗೂ ಊರನ್ನು ಸ್ವಚ್ಚವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಹೀಗಾಗಿ, ನಮ್ಮ ಪರಿಸರ, ನಮ್ಮ ಸಾರ್ವಜನಿಕ ಆಸ್ತಿಯ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಪ್ರತಿಯೊಬ್ಬರೂ ಸಹ ಸಹಕರಿಸಬೇಕು. ಇಂತಹ ಮನೋಭಾವನೆಯನ್ನು ಪ್ರಮುಖವಾಗಿ ಮಕ್ಕಳಲ್ಲಿ ಬೆಳೆಸಬೇಕು ಎಂದು ಕರೆ ನೀಡಿದರು.
ಅಭ್ಯಾಗತರಾಗಿ ಪಾಲ್ಗೊಂಡಿದ್ದ ಯೇಳ್ತಿಮಾರ್ ಟ್ರೇಡರ್ಸ್ ಹಾಗೂ ಇಂಡಸ್ಟ್ರೀಸ್ ಮಾಲೀಕರಾರದ ವಿಜಯಲಕ್ಷ್ಮೀ ಶೆಣೈ ಅವರು ಮಾತನಾಡಿದರು.

ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಗೆ ಇತ್ತೀಚೆಗಷ್ಟೇ ಸೇರಿದ ಪುಟ್ಟ ಮಕ್ಕಳಾದಿಯಾಗಿ, ಇಲ್ಲೇ ಕಲಿತು ವಿದೂಷಿಗಳಾಗಿ ರಾಜ್ಯದ ಹಲವು ಕಡೆಗಳಲ್ಲಿ ಕಲಾ ಸೇವೆ ಮಾಡುತ್ತಿರುವ ಶಿಷ್ಯರೂ ಸಹ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ಆರಂಭದಲ್ಲಿ ಸಂಗೀತ ಕಾರ್ಯಕ್ರಮ ಹಾಗೂ ನಂತರ ಭರತನಾಟ್ಯ ನೃತ್ಯ ಪ್ರದರ್ಶನಗಳು ನಡೆಯಿತು. ಅದ್ದೂರಿಯಾಗಿ ನಡೆದ ಕಾರ್ಯಕ್ರಮ ಹಾಗೂ ಎಲ್ಲ ವಯೋಮಾನದ ಕಲಾವಿದರ ಪ್ರದರ್ಶನ ಪ್ರೇಕ್ಷಕರನ್ನು ಮಂತ್ರಮುಗ್ದಗೊಳಿಸಿತು.

ನಟುವಾಂಗದಲ್ಲಿ ಗುರುಗಳಾದ ಬಿ. ದೀಪಕ್ ಕುಮಾರ್, ಹಾಡುಗಾರಿಕೆಯಲ್ಲಿ ವಿದ್ವಾನ್ ಪ್ರೀತಿಕಲಾ, ಮೃದಂಗದಲ್ಲಿ ಉಡುಪಿಯ ವಿದ್ವಾನ್ ಬಾಲಚಂದ್ರ ಭಾಗವತ್, ಕೊಳಲಿನಲ್ಲಿ ವಿದ್ವಾನ್ ರಾಜಗೋಪಾಲನ್ ಕಾಇಂಗಾಡ್, ರಿದಂ ಪ್ಯಾಡ್’ನಲ್ಲಿ ಸುಹಾಸ್ ಹೆಬ್ಬಾರ್ ಹಾಗೂ ಪಿಟೀಲಿನಲ್ಲಿ ಮಂಗಳೂರಿನ ಕು.ಧನುಶ್ರೀ ಶಬರಾಯ ಅವರುಗಳು ನಿರ್ವಹಿಸಿದರು.

ಇನ್ನು, ವಿಘ್ನೇಶ್ ವಿಶ್ವಕರ್ಮ ಅವರು ಅತ್ಯುತ್ತಮವಾಗಿ ವರ್ಣಾಲಂಕಾರ ಮಾಡಿದ್ದು, ಶ್ರೀ ಮೂಕಾಂಬಿಕಾ ಕಾಸ್ಟ್ಯೂಮ್ಸ್, ಭಾವನಾ ಕಲಾ ಆರ್ಟ್ಸ್ ಹಾಗೂ ವಿಶ್ವಕಲಾ ಆರ್ಟ್ಸ್ ಜಂಟಿಯಾಗಿ ವಸ್ತ್ರಾಲಂಕಾರ ಹಾಗೂ ಮಂಗಳೂರಿನ ದೇವ್ ಪ್ರೊ ಸೌಂಡ್ಸ್ ಅವರು ಧ್ವನಿ ಬೆಳಕು ನಿರ್ವಹಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BharatanatyamCarnatic musicKannada News WebsiteLatest News KannadaMahalingeshwara TemplePutturSri Mookambika Cultural Academyನೃತ್ಯ ಪ್ರಕಾರನೃತ್ಯೋತ್ಸವಪುತ್ತೂರುಶ್ರೀ ಮಹಾಲಿಂಗೇಶ್ವರ ದೇವಸ್ಥಾನಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಸಂಗೀತ
Previous Post

ರೋಹಿತ್ ಶರ್ಮಾ ನಿವೃತ್ತಿ ಘೋಷಣೆ ಕುರಿತು ಮಹತ್ವದ ಅಪ್ಡೇಟ್ ಇಲ್ಲಿದೆ

Next Post

ಅಯ್ಯೋ ಕಂದಾ! ಆಟ ಆಡುತ್ತಿದ್ದಾಗ ಕಾರು ಡಿಕ್ಕಿ | ಉಸಿರು ಕೈಚೆಲ್ಲಿದ 2 ವರ್ಷದ ಮಗು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಯ್ಯೋ ಕಂದಾ! ಆಟ ಆಡುತ್ತಿದ್ದಾಗ ಕಾರು ಡಿಕ್ಕಿ | ಉಸಿರು ಕೈಚೆಲ್ಲಿದ 2 ವರ್ಷದ ಮಗು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸೇಫ್ಟಿ ಅಪ್ಲೀಕೇಷನ್‍ಗಳು ಕಳೆದುಹೋದ ಮೊಬೈಲ್ ಶೋಧಕ್ಕೆ ಸಹಕಾರಿ: ಎಸ್‌ಪಿ ಮಿಥುನ್‌ಕುಮಾರ್

December 4, 2025

ಕನ್ನಡ ಬರೀ ಭಾಷೆ ಅಲ್ಲ ಸಂಸ್ಕೃತಿ: ಶಿವಮೊಗ್ಗ ಜಿಲ್ಲಾ ಕಸಾಪ ಅಧ್ಯಕ್ಷ ಮಂಜುನಾಥ

December 4, 2025

ಮೈಸೂರು ರೈಲ್ವೆ ನಿಲ್ದಾಣದ ವಿಶೇಷತೆಗಳೇನು? ನಿತ್ಯ ಎಷ್ಟು ಮಂದಿ ಸಂಚರಿಸುತ್ತಾರೆ? ಏನೆಲ್ಲಾ ಸೌಲಭ್ಯಗಳಿವೆ?

December 4, 2025

ಮೇವು ಕೊರತೆ ಪರಿಹಾರಕ್ಕೆ ರಸಮೇವು | ಕೃಷಿ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿತೆ

December 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸೇಫ್ಟಿ ಅಪ್ಲೀಕೇಷನ್‍ಗಳು ಕಳೆದುಹೋದ ಮೊಬೈಲ್ ಶೋಧಕ್ಕೆ ಸಹಕಾರಿ: ಎಸ್‌ಪಿ ಮಿಥುನ್‌ಕುಮಾರ್

December 4, 2025

ಕನ್ನಡ ಬರೀ ಭಾಷೆ ಅಲ್ಲ ಸಂಸ್ಕೃತಿ: ಶಿವಮೊಗ್ಗ ಜಿಲ್ಲಾ ಕಸಾಪ ಅಧ್ಯಕ್ಷ ಮಂಜುನಾಥ

December 4, 2025

ಮೈಸೂರು ರೈಲ್ವೆ ನಿಲ್ದಾಣದ ವಿಶೇಷತೆಗಳೇನು? ನಿತ್ಯ ಎಷ್ಟು ಮಂದಿ ಸಂಚರಿಸುತ್ತಾರೆ? ಏನೆಲ್ಲಾ ಸೌಲಭ್ಯಗಳಿವೆ?

December 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!