No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಪುತ್ತೂರು: ರೈಲ್ವೆ ಸೇತುವೆ ಅಗಲೀಕರಣಕ್ಕಾಗಿ ವಿದ್ಯಾರ್ಥಿಗಳ ಟ್ವೀಟ್ ಅಭಿಯಾನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 29, 2018
in Special Articles
0
ಪುತ್ತೂರು: ರೈಲ್ವೆ ಸೇತುವೆ ಅಗಲೀಕರಣಕ್ಕಾಗಿ ವಿದ್ಯಾರ್ಥಿಗಳ ಟ್ವೀಟ್ ಅಭಿಯಾನ
Share on FacebookShare on TwitterShare on WhatsApp

ನಮ್ಮ ದೇಶದಲ್ಲಿ ಸಾವಿರಾರು ಸಾಮಾಜಿಕ ಸಮಸ್ಯೆಗಳಿದ್ದು, ಇದರ ಬಗ್ಗೆಯೆಲ್ಲಾ ಕೇವಲ ಹೋರಾಟಗಾರರು ಮಾತ್ರ ತಲೆಕೆಡಿಸಿಕೊಳ್ಳಬೇಕು ಕಾಲದಲ್ಲಿ, ತಮ್ಮೂರಿನ ಸಮಸ್ಯೆಯೊಂದನ್ನು ಪರಿಹಾರ ಮಾಡಲು ಪುತ್ತೂರಿನ ವಿದ್ಯಾರ್ಥಿಗಳು ಬೃಹತ್ ಟ್ವೀಟ್ ಅಭಿಯಾನ ಆರಂಭಿಸಿದ್ದು, ಈ ಕುರಿತಂತೆ ಪುತ್ತೂರಿನ ವಿದ್ಯಾರ್ಥಿಯೇ ಬರೆದಿರುವ ವಿಶೇಷ ಲೇಖನ ಓದಿ.

ನೆಹರೂ ನಗರದ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಸಂಘಗಳು ಮತ್ತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಪುತ್ತೂರು ಘಟಕದ ಸಹಯೋಗದಲ್ಲಿ, ಕಾಲೇಜನ್ನು ಸಂಪರ್ಕಿಸುವ ರೈಲ್ವೆ ಬ್ರಿಡ್ಜ್ ಅಗಲಿಕರಣಕ್ಕಾಗಿ ರೈಲ್ ಬ್ರಿಡ್ಜ್ ವೈಡ್ ಬ್ರಿಡ್ಜ್ ಎಂಬ ಬೃಹತ್ ಟ್ವೀಟ್ ಅಭಿಯಾನವನ್ನು ಕೈಗೊಳ್ಳಲಾಗಿದೆ.

ಏನಿದು ಸಮಸ್ಯೆ?

ವಿವೇಕಾನಂದ ಶಿಕ್ಷಣ ಸಂಸ್ಥೆಗಳನ್ನು ಸಂಪರ್ಕಿಸುವ ಈ ರೈಲ್ವೆ ಬ್ರಿಡ್ಜ್ ನ ಅಗಲ ಕೇವಲ ಮೂರು ಮೀಟರ್! ಈ ಸಂಪರ್ಕ ರಸ್ತೆಯಲ್ಲಿ ನಿತ್ಯ ಸುಮಾರು 8,000 ವಿದ್ಯಾರ್ಥಿಗಳನ್ನು ಒಳಗೊಂಡು 10,000ಕ್ಕೂ ಹೆಚ್ಚು ಮಂದಿ ಸಂಚರಿಸುತ್ತಾರೆ.

ಈ ರೈಲ್ವೆ ಬ್ರಿಡ್ಜ್ ನ ಅಗಲ ಕಡಿಮೆ ಇರುವುದರಿಂದ ವಾಹನ ದಟ್ಟಣೆ, ಪಾದಾಚಾರಿಗಳಿಗೆ ತೊಂದರೆ ಆಗುವಂತಹ ಸ್ಥಿತಿ ದಿನನಿತ್ಯ ಕಾಣಸಿಗುತ್ತದೆ. ಇನ್ನು ಮಳೆಗಾಲದಲ್ಲಿ ಈ ರಸ್ತೆಯಲ್ಲಿ ಸಂಚರಿಸುವುದೇ ಒಂದು ಸಾಹಸ. ಯಾಕೆಂದರೆ ಮಳೆಯ ನೀರು ಸಲಿಸಾಗಿ ಹರಿದು ಹೋಗದೆ ಸೇತುವೆಯ ಮೇಲೆಯೇ ಒಟ್ಟುಗೂಡುವುದರಿಂದ ಆ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಮತ್ತು ಪಾದಾಚಾರಿಗಳಿಗೆ ಇನ್ನಷ್ಟು ಸಮಸ್ಯೆ ಎದುರಾಗುತ್ತದೆ. ಹಾಗೆಯೇ ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ವಾಹನ ಬಳಸುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಈ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದೆ.

ಹಾಗಿದ್ದರೆ ಈ ಹಿಂದೆ ಇದರ ಪರಿಹಾರಕ್ಕಾಗಿ ಪ್ರಯತ್ನ ನಡೆಯಲಿಲ್ಲವೆ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡುತ್ತದೆ. ಸಮಸ್ಯೆ ಪರಿಹಾರಕ್ಕಾಗಿ ಪ್ರಯತ್ನವೇನೋ ನಡೆದಿತ್ತು ಆದರೆ ಫಲಕಾರಿಯಾಗಲಿಲ್ಲ. ಇಲ್ಲಿನ ಮಾಜಿ ಶಾಸಕಿ ಮಲ್ಲಿಕಾಪ್ರಸಾದ್ ಅವರ ಅವಧಿಯಲ್ಲಿ, ಬಿ.ಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ನೀಡಿದ ವಿಶೇಷ ಅನುದಾನದಿಂದಾಗಿ ಉತ್ತಮ ರಸ್ತೆ ನಿರ್ಮಾಣವಾದರೂ ರೈಲ್ವೆ ಬ್ರಿಡ್ಜ್ ಅಗಲವಾಗಲಿಲ್ಲ.

ಪುತ್ತೂರಿನಲ್ಲಿ ತಮ್ಮ ರಾಜಕೀಯ ಜೀವನ ಆರಂಭಿಸಿದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರು ಮುಖ್ಯಮಂತ್ರಿಯಾಗಿ, ಕೇಂದ್ರ ರೈಲ್ವೆ ಸಚಿವರಾಗಿ ಅಧಿಕಾರ ನಿಭಾಯಿಸಿದರೂ ಈ ಸಮಸ್ಯೆಯ ಬಗ್ಗೆ ಗಮನವಹಿಸಿರಲಿಲ್ಲ. ಈ ರೈಲ್ವೆ ಬ್ರಿಡ್ಜ್ ಅನ್ನು ಅಗಲಗೊಳಿಸಲು ರೈಲ್ವೆ ಇಲಾಖೆಯು ಶೇ.50ರಷ್ಟು ಹಣಬರಿಸಲು ಸಿದ್ದವಿದೆ. ಇನ್ನುಳಿದ ಮೊತ್ತವನ್ನು ನಗರಸಭೆ ಭರಿಸಬೇಕು ಎಂಬ ತನ್ನ ಮಾಮೂಲಿ ನಿಯಮವನ್ನು ತಿಳಿಸಿದೆ. ಇನ್ನು ರೈಲ್ವೆ ಇಲಾಖೆಯ ನಿಯಮಗಳಲ್ಲಿ ಕೆಲವು ವಿನಾಯತಿಗಾಗಿ ಇಲ್ಲಿನ ರಾಜ್ಯಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಹಲವು ವರ್ಷದಿಂದ ಶ್ರಮ ವಹಿಸುತ್ತಿದ್ದರೂ ರೈಲ್ವೆ ಇಲಾಖೆ ಒಪ್ಪದ ಕಾರಣ ಅವರ ಶ್ರಮ ವ್ಯರ್ಥವಾಗಿ ಹೋಯಿತು.

ಟ್ವೀಟ್ ಅಭಿಯಾನದ ಉದ್ದೇಶ

ನರೇಂದ್ರ ಮೋದಿಯವರು ಪ್ರಧಾನಿಯಾದ ನಂತರ ಸಾಮಾಜಿಕ ಜಾಲತಾಣವನ್ನು ಗಮನಿಸುವ ಮೂಲಕವೂ ಹಲವಾರು ಸಮಸ್ಯೆಗಳನ್ನು ಪರಿಹರಿಸಿದ್ದು ಎಲ್ಲರಿಗೂ ತಿಳಿದಿರುವ ಸಂಗತಿ. ಆದ್ದರಿಂದ ಉಪನ್ಯಾಸಕರ ಮಾರ್ಗದರ್ಶನದಿಂದ ಟ್ವೀಟ್ ಅಭಿಯಾನಕ್ಕೆ ಮುಂದಾಗಿರುವ ವಿದ್ಯಾರ್ಥಿಗಳು ಆ ಮೂಲಕವಾದರೂ ಸಮಸ್ಯೆ ಪರಿಹಾರವಾಗಬಹುದೆಂಬ ದೃಢ ನಂಬಿಕೆಯಲ್ಲಿದ್ದಾರೆ.

ಈ ಹಿನ್ನೆಲೆಯಲ್ಲಿ ಅಕ್ಟೋಬರ್ 28 ರಂದು ಬೆಳಗ್ಗೆ 9:00 ರಿಂದ ರಾತ್ರಿ 11:59 ರ ವರೆಗೆ ಬೃಹತ್ ಟ್ವೀಟ್ ಅಭಿಯಾನವನ್ನು ಕೈಗೊಂಡಿದ್ದರು. ಆ ಮೂಲಕ ಈ ಟ್ವೀಟ್ ಅಭಿಯಾನವನ್ನು ಟ್ರೆಂಡ್ ಆಗುವಂತೆ ಮಾಡುವ ಕಲ್ಪನೆ ಇದೆ. ಹಾಗೆಯೇ ಟ್ವಿಟರ್ ಮೂಲಕ ಭಾರತೀಯ ರೈಲ್ವೆ ಇಲಾಖೆ, ಪ್ರಧಾನಿ ನರೇಂದ್ರ ಮೋದಿ, ರೈಲ್ವೆ ಸಚಿವ ಪೀಯೂಷ್ ಗೋಯಲ್, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ನಳಿನ್ ಕುಮಾರ್ ಕಟೀಲ್ ಮುಂತಾದವರಿಗೆ ಟ್ವೀಟ್ ಮಾಡುವ ಮೂಲಕ ಇದರ ಯಶಸ್ಸಿನ ನಿರೀಕ್ಷೆಯಲ್ಲಿದ್ದಾರೆ.

ಬಹುಷಃ ಒಂದು ತಾಲೂಕಿನ ಸಮಸ್ಯೆಯನ್ನು ರಾಷ್ಟ್ರಮಟ್ಟಕ್ಕೆ ಮುಟ್ಟಿಸುವ ಬೃಹತ್ ಟ್ವೀಟ್ ಅಭಿಯಾನ ಇದೆ ಮೊದಲು. ಸಾವಿರಾರು ಮಂದಿ ಈ ವಿಚಾರದಲ್ಲಿ ಟ್ವೀಟ್ ಮಾಡಿದ್ದಾರೆ. ಆಸಕ್ತರು ಬೆಂಬಲಿಸಬೇಕಾಗಿ ಮನವಿಯನ್ನು ಮಾಡಲಾಗಿದೆ.

ಲೇಖನ: ಅರುಣ್ ಕಿರಿಮಂಜೇಶ್ವರ


8722552497
ವಿವೇಕಾನಂದ ಕಾಲೇಜು,
ಪುತ್ತೂರು

Tags: Indian RailwayPM Narendra ModiPuttururailway bridgetweet campaignTwitter
Share197Tweet123Send
Previous Post

ಚೈತ್ರಾ ಕುಂದಾಪುರಗೆ ವ್ಯಾಪಕ ಬೆಂಬಲ: ಸಂಘದ ಮಧ್ಯಪ್ರವೇಶಕ್ಕೆ ಆಗ್ರಹ

Next Post

Highlights: 30.10.2018

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Highlights: 30.10.2018

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL