ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ದೆಹಲಿಯ ಬಾಂಗ್ಲಾವಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಪ್ರಾರ್ಥನೆಯಲ್ಲಿ ರಾಜ್ಯದಿಂದ 342 ಮಂದಿ ಪಾಲ್ಗೊಂಡಿದ್ದು, ಇದರಲ್ಲಿ 200 ಮಂದಿಗೆ ಕ್ವಾರಂಟೈನ್’ನಲ್ಲಿ ಇರಿಸಲಾಗಿದೆ.
ಈ ಕುರಿತಂತೆ ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, ಪ್ರಾರ್ಥನೆಯಲ್ಲಿ ಭಾಗವಹಿಸಿದ ಕರ್ನಾಟಕ ಮೂಲದ 342 ಜನರಲ್ಲಿ, ಈಗ ಬೆಂಗಳೂರಿಂದ 4 ಹಾಗೂ ಬೆಳಗಾವಿ ಜಿಲ್ಲೆಯಿಂದ 5 ಜನರನ್ನು ಸೇರಿ ಒಟ್ಟು 200 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಉಳಿದವರನ್ನು ಶೀಘ್ರವೇ ಗುರುತಿಸುವ ಕಾರ್ಯ ನಡೆದಿದೆ ಎಂದು ತಿಳಿಸಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post