No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Thursday, March 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ದೃಢ ಭಕ್ತಿಯಿಂದ ಬೇಡಿದವರ ಪಾಲಿಗೆ ನಾನಿದ್ದೇನೆ..ನಾನಿದ್ದೇನೆ.. ಎಂದು ಅನುಗ್ರಹಿಸುವ ವಾತ್ಸಲ್ಯಮೂರ್ತಿ ಶ್ರೀರಾಯರು

ಶ್ರೀರಾಘವೇಂದ್ರ ಸ್ವಾಮಿಗಳವರ ವರ್ಧಂತಿ ಉತ್ಸವ ನಿಮಿತ್ತ ವಿಶೇಷ ಲೇಖನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 1, 2020
in Special Articles
0
ದೃಢ ಭಕ್ತಿಯಿಂದ ಬೇಡಿದವರ ಪಾಲಿಗೆ ನಾನಿದ್ದೇನೆ..ನಾನಿದ್ದೇನೆ.. ಎಂದು ಅನುಗ್ರಹಿಸುವ ವಾತ್ಸಲ್ಯಮೂರ್ತಿ ಶ್ರೀರಾಯರು

Internet Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶ್ರೀರಾಘವೇಂದ್ರ ಗುರುಸಾರ್ವಭೌಮರು 16 ನೆಯ ಶತಮಾನದ ಸಂತ ಶ್ರೇಷ್ಠರು. ಶ್ರೀ ರಾಘವೇಂದ್ರ ಸ್ವಾಮಿಗಳ ಅನನ್ಯ ಭಕ್ತರು ದೇಶ, ವಿದೇಶಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿದ್ದಾರೆ. ಅದರಲ್ಲೂ ದಕ್ಷಿಣ ಭಾರತದ ಪ್ರದೇಶಗಳಾದ ಆಂಧ್ರ ಪ್ರದೇಶ, ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಪ್ರತಿ ವರ್ಷ ಫಾಲ್ಗುಣಮಾಸದ ಶುಕ್ಲಪಕ್ಷದ ದ್ವಿತೀಯ ದಿನವನ್ನು ಶ್ರೀರಾಯರ ಪಟ್ಟಾಭಿಷೇಕ ದಿನವನ್ನಾಗಿ ಆಚರಿಸಲಾಗುತ್ತದೆ. ಫಾಲ್ಗುಣ ಶುಕ್ಲಪಕ್ಷದ ಸಪ್ತಮಿದಿನವನ್ನು ಶ್ರೀರಾಯರ ವರ್ಧಂತಿ ಉತ್ಸವ ದಿನವನ್ನಾಗಿ ಆಚರಿಸಲಾಗುತ್ತದೆ.

ಗೌತಮ ಗೋತ್ರದ ಬೀಗಮುದ್ರೆಯ ಮನೆತನದವರಾದ ವೀಣಾಕನಕಾಚಲ ಭಟ್ಟರೆಂದೇ ಖ್ಯಾತಿ ಪಡೆದವರ ಪುತ್ರರು ತಿಮ್ಮಣ್ಣ ಭಟ್ಟರು. ಇವರೂ ಕೂಡ ತಮ್ಮ ಪೂರ್ವಜರಂತೆ ಆಚಾರ್ಯರ ಶಾಸ್ತ್ರದಲ್ಲಿ ಹಾಗೂ ವಂಶವಿದ್ಯೆಯಾದ ವೀಣೆಯಲ್ಲಿ ಪ್ರಾವೀಣ್ಯತೆ ಪಡೆದವರು.

ಇವರ ಸುಪುತ್ರರೇ ಶ್ರೀವೆಂಕಟನಾಥಾಚಾರ್ಯರು. ವೆಂಕಟನಾಥರೇ ಶ್ರೀಸುಧೀಂದ್ರ ತೀರ್ಥ ಗುರುಗಳಿಂದ ಸನ್ಯಾಸ ದೀಕ್ಷೆ ಪಡೆದು ಶ್ರೀರಾಘವೇಂದ್ರ ಗುರುಸಾರ್ವಭೌಮರಾಗಿ ವೇದಾಂತ ಸಾಮ್ರಾಜ್ಯದ ಪೀಠವನ್ನಲಂಕರಿಸಿದ ಯತಿವರೇಣ್ಯರು.

ಸನ್ಯಾಸ ದೀಕ್ಷೆಯನ್ನು ಫಾಲ್ಗುಣ ಶುಕ್ಲಪಕ್ಷದ ದ್ವಿತೀಯಾ ದಿನದಂದು ಶ್ರೀಸುಧೀಂದ್ರ ತೀರ್ಥರಿಂದ ಸ್ವೀಕರಿಸುತ್ತಾರೆ. ಈ ದಿನವನ್ನು ಶ್ರೀಗುರುಸಾರ್ವಭೌಮರ ಪಟ್ಟಾಭಿಷೇಕ ಮಹೋತ್ಸವದ ದಿನವನ್ನಾಗಿ ಆಚರಿಸಲಾಗುತ್ತದೆ.

ಮಹಾಮಹಿಮರಾದ ಶ್ರೀಗುರುರಾಯರು ಹುಟ್ಟಿದ ಮಂಗಳಕರವಾದ ದಿನವಾದ ಫಾಲ್ಗುಣ ಶುಕ್ಲಪಕ್ಷದ ಸಪ್ತಮಿಯನ್ನು ಶ್ರೀರಾಯರ ವರ್ಧಂತಿ ಉತ್ಸವ ದಿನವನ್ನಾಗಿ ಆಚರಿಸಲಾಗುತ್ತದೆ.

ಈ ಒಂದು ವಾರದ ಕಾಲದಲ್ಲಿ ಶ್ರೀರಾಯರಿಗೆ ವಿಶೇಷ ಉತ್ಸವ, ಪೂಜೆ, ಉಪನ್ಯಾಸ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಿ ಶ್ರೀರಾಘವೇಂದ್ರ ಸಪ್ತಾಹ ಎಂದೂ ಆಚರಿಸುತ್ತಾರೆ.

ಜನರ ಕಷ್ಟಗಳ ನಿವಾರಣೆಗೆ ಮತ್ತು ಲೋಕೋದ್ಧಾರಕ್ಕಾಗಿ ಅವತರಿಸಿದ ಮಹಾನುಭಾವರು ಶ್ರೀರಾಘವೇಂದ್ರ ಸ್ವಾಮಿಗಳು. ಯಾರು ರಾಯರನ್ನು ದೃಢ ಭಕ್ತಿಯಿಂದ ತಮ್ಮ ಇಷ್ಟಾರ್ಥ, ಸಿದ್ಧಿಗಾಗಿ ಮೊರೆ ಹೋಗುತ್ತಾರೋ ಅಂತಹವರ ಬೇಡಿಕೆಗಳನ್ನು ಈಡೇರಿಸುವ ಕರುಣಾಮಯಿಗಳು ಶ್ರೀ ಗುರುರಾಯರು.

ರಾಯರನ್ನು ನಂಬಿ ಕೆಟ್ಟವರಿಲ್ಲ. ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ. ಮನುಷ್ಯನ ಆತ್ಮ ಜ್ಞಾನಕ್ಕೆ ಪ್ರತಿಯೊಬ್ಬರ ಬದುಕಿನಲ್ಲಿ ಓರ್ವ ಗುರುವಿನ ಮಾರ್ಗದರ್ಶನ ಅತ್ಯಗತ್ಯ. ಅಂತಹ ಗುರುಗಳ ಪಂಕ್ತಿಯಲ್ಲಿ ಅಗ್ರಸ್ಥಾನ ಪಡೆದಿರುವವರು ಶ್ರೇಷ್ಠ ಗುರುಗಳಾದ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳವರು.

ರಾಯರು ಓರ್ವ ಮಹಿಮಾ ಪುರುಷರು. ಶ್ರೀರಾಯರು ಅವರ ಪೂರ್ವಾಶ್ರಮದಲ್ಲಿ(ವೆಂಕಟನಾಥರು) ಅವರ ಪತ್ನಿ ಮತ್ತು ಮಗನ ಸಮೇತ ಒಂದು ಸಮಾರಂಭಕ್ಕೆ ಹೋಗಿದ್ದಾಗ ಅವರಿಗೆ ಆಹ್ವಾನ ಕೊಟ್ಟವರು ಸರಿಯಾದ ಗೌರವ ಕೊಡದೆ ಅವರಿಗೆ ಗಂಧ ತೇಯುವ ಕೆಲಸವನ್ನು ಕೊಟ್ಟರು. ಗಂಧವನ್ನು ಹಚ್ಚಿಕೊಂಡ ಬ್ರಾಹ್ಮಣರಿಗೆ ಮೈಯೆಲ್ಲಾ ಉರಿಯಾಗಿ ಒದ್ದಾಟ ಪ್ರಾರಂಭವಾಯಿತು. ಕಾರ್ಯಕ್ರಮ ನಿರ್ವಾಹಕರಿಗೆ ತಕ್ಷಣ ಆಗಿರುವ ಪ್ರಮಾದವನ್ನರಿತು ವೆಂಕಟನಾಥರನ್ನು ಒದಗಿರುವ ಈ ಸಂದಿಗ್ಧ ಪರಿಸ್ಥಿತಿಯಿಂದ ಪಾರು ಮಾಡಬೇಕೆಂದು ಕೇಳಿಕೊಳ್ಳುತ್ತಾರೆ. ತಕ್ಷಣ ವೆಂಕಟನಾಥರು ವರುಣ ಸೂಕ್ತವನ್ನು ಪಠಿಸಿ ಎಲ್ಲರ ಮೈಯಲ್ಲಾದ ಉರಿಯನ್ನು ತಮ್ಮ ಮಂತ್ರ ಶಕ್ತಿಯಿಂದ ಶಮನಗೊಳಿಸುತ್ತಾರೆ.

ರಾಯರು ತಮ್ಮ ಶಿಷ್ಯನೊಬ್ಬನು ತನ್ನ ಕಡು ಬಡತನದ ಬಗ್ಗೆ ಅರಿಕೆ ಮಾಡಿಕೊಂಡಾಗ ಗುರುಗಳು ಒಂದು ಹಿಡಿ ಮಂತ್ರಾಕ್ಷತೆಯನ್ನು ಕೊಟ್ಟು ಆಶೀರ್ವದಿಸುತ್ತಾರೆ. ಶಿಷ್ಯನು ತನ್ನ ಮನೆಗೆ ಹೋಗುವಾಗ ಕತ್ತಲಾಗಿದ್ದರಿಂದ ದಾರಿಯಲ್ಲಿ ಸಿಕ್ಕ ಒಂದು ಮನೆಯ ಜಗಲಿಯ ಮೇಲೆ ತನ್ನ ಮಂತ್ರಾಕ್ಷತೆಯ ಗಂಟಿನೊಂದಿಗೆ ಮಲಗುತ್ತಾನೆ.

ಆ ಮನೆಗೆ ಪಿಶಾಚಿ ಬಾಧೆ ಇರುತ್ತದೆ. ಆ ದಿನವು ಎಂದಿನಂತೆ ಪಿಶಾಚಿ ಬರಲು ಶ್ರೀರಾಯರ ಮಂತ್ರಾಕ್ಷತೆ ಪ್ರಭಾವದಿಂದ ಮನೆಯೊಳಗೆ ಹೋಗಲಾಗದೇ ಹೊರಗಡೆಯೇ ಸುಟ್ಟು ಭಸ್ಮವಾಗುತ್ತದೆ. ಅಂದೇ ಆ ಮನೆಯಲ್ಲಿ ಮನೆಯೊಡತಿಗೆ ಮಗು ಹುಟ್ಟುತ್ತದೆ. ಆ ಮನೆಯಲ್ಲಿ ಮಗು ಹುಟ್ಟುವ ಪ್ರತಿ ಸಂದರ್ಭದಲ್ಲಿಯೂ ಪಿಶಾಚಿಯ ಕಾಟದಿಂದ ಹುಟ್ಟುವ ಮಕ್ಕಳು ಸತ್ತು ಹೋಗುತ್ತಿದ್ದವು. ಆದರೆ ಈ ಬಾರಿ ಮಂತ್ರಾಕ್ಷತೆಯ ಪ್ರಭಾವದಿಂದ ಹುಟ್ಟಿದ ಮಗು ಬದುಕಿತು, ಪಿಶಾಚಿ ಸುಟ್ಟು ಭಸ್ಮವಾಯಿತು.

ಹರಿದಾಸರಲ್ಲಿ ಅಗ್ರಗಣ್ಯರಾಗಿದ್ದ ಶ್ರೀಜಗನ್ನಾಥದಾಸರಿಗೂ ಅವರಿಗೆ ಬಂದಿದ್ದ ವ್ಯಾಧಿ ಪರಿಹಾರಕ್ಕೆ ದಾರಿ ತೋರಿಸಿದ ಮಹಾನುಭಾವರು. ತಮ್ಮ ಅಪೂರ್ವ ತಪಃಶಕ್ತಿಯ ಬಲದಿಂದ ದೇಹೀ ಎಂದು ಬರುವ ಭಕ್ತರ ಮನಸ್ಸಿನ ಇಷ್ಟಾರ್ಥ ಸಿದ್ಧಿಗಳನ್ನು ಈಡೇರಿಸುವ ಕಲಿಯುಗದ ಕಾಮಧೇನು ಶ್ರೀರಾಘವೇಂದ್ರ ಗುರುಸಾರ್ವಭೌಮರು.

ಶ್ರೀಗುರುರಾಯರು ಹುಟ್ಟಿದ್ದು ತಮಿಳುನಾಡಿನ ಭುವನಗಿರಿಯಲ್ಲಿ ಮತ್ತು ಸಶರೀರರಾಗಿ ಬೃಂದಾವನ ಪ್ರವೇಶ ಮಾಡಿದ್ದು ಆಂಧ್ರಪ್ರದೇಶದ ಮಂತ್ರಾಲಯದಲ್ಲಿ.

ಶ್ರೀಗುರುರಾಜರ ನಾಲ್ಕು ನೂರ ಇಪ್ಪತ್ತೈದನೆಯ ವರ್ಧಂತಿ ಉತ್ಸವದ ಸಂದರ್ಭದಲ್ಲಿ, ಭಕ್ತಿಯ ನಮನಗಳನ್ನು ಅರ್ಪಿಸಿ ಎಲ್ಲರಿಗೂ ಸನ್ಮಂಗಳವನ್ನು ಕರುಣಿಸಿ ಅನುಗ್ರಹಿಸುವಂತೆ ಶ್ರೀರಾಯರಲ್ಲಿ ಪ್ರಾರ್ಥಿಸೋಣ.


Get in Touch With Us info@kalpa.news Whatsapp: 9481252093

Tags: Andra PradeshHindu SwamijiKannada News WebsiteMantralayamRayaruSpecial ArticleSri Raghavendra SwamyTamil NaduVardhanti Festivalರಾಯರುವರ್ಧಂತಿ ಉತ್ಸವಶ್ರೀ ರಾಘವೇಂದ್ರ ಸ್ವಾಮಿಗಳುಶ್ರೀಗುರುರಾಯರುಶ್ರೀರಾಘವೇಂದ್ರ ಗುರುಸಾರ್ವಭೌಮರು
Share247Tweet123Send
Previous Post

ಮತ್ತೆ ಕುರುಕ್ಷೇತ್ರದಂತಹ ಸಮರ ಸನ್ನಾಹ ಆಗುತ್ತಿದೆಯೇ?

Next Post

ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಸಂಪನ್ನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಸಂಪನ್ನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
National Safety Week 2026 Observed at Carriage Repair Workshop, Hubballi

National Safety Week 2026 Observed at Carriage Repair Workshop, Hubballi

March 18, 2026
7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

ಹುಬ್ಬಳ್ಳಿ | ರೈಲ್ವೆ ಇಲಾಖೆ ಪರೀಕ್ಷೆ ಮುಂದೂಡಿಕೆ

March 18, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಯುಗಾದಿ ಹಬ್ಬ ಹಿನ್ನೆಲೆ: ಯಶವಂತಪುರ ಮತ್ತು ಹೊಸಪೇಟೆ ನಡುವೆ ವಿಶೇಷ ರೈಲು ಸೇವೆ

March 18, 2026
ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

March 18, 2026
ಬಡವರ ಆರೋಗ್ಯದ ಜೊತೆ ಸರ್ಕಾರದ ಚೆಲ್ಲಾಟ | ಉಗ್ರಾಣಗಳಲ್ಲಿ 7 ತಿಂಗಳಾದರೂ ಔಷಧಿ ಪೂರೈಕೆಯಿಲ್ಲ: ಶಾಸಕ ಡಾ. ಧನಂಜಯ ಸರ್ಜಿ

ಬಡವರ ಆರೋಗ್ಯದ ಜೊತೆ ಸರ್ಕಾರದ ಚೆಲ್ಲಾಟ | ಉಗ್ರಾಣಗಳಲ್ಲಿ 7 ತಿಂಗಳಾದರೂ ಔಷಧಿ ಪೂರೈಕೆಯಿಲ್ಲ: ಶಾಸಕ ಡಾ. ಧನಂಜಯ ಸರ್ಜಿ

March 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL