Friday, July 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ದೃಢ ಭಕ್ತಿಯಿಂದ ಬೇಡಿದವರ ಪಾಲಿಗೆ ನಾನಿದ್ದೇನೆ..ನಾನಿದ್ದೇನೆ.. ಎಂದು ಅನುಗ್ರಹಿಸುವ ವಾತ್ಸಲ್ಯಮೂರ್ತಿ ಶ್ರೀರಾಯರು

ಶ್ರೀರಾಘವೇಂದ್ರ ಸ್ವಾಮಿಗಳವರ ವರ್ಧಂತಿ ಉತ್ಸವ ನಿಮಿತ್ತ ವಿಶೇಷ ಲೇಖನ

March 1, 2020
in Special Articles
0 0
0
Internet Image

Internet Image

Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶ್ರೀರಾಘವೇಂದ್ರ ಗುರುಸಾರ್ವಭೌಮರು 16 ನೆಯ ಶತಮಾನದ ಸಂತ ಶ್ರೇಷ್ಠರು. ಶ್ರೀ ರಾಘವೇಂದ್ರ ಸ್ವಾಮಿಗಳ ಅನನ್ಯ ಭಕ್ತರು ದೇಶ, ವಿದೇಶಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿದ್ದಾರೆ. ಅದರಲ್ಲೂ ದಕ್ಷಿಣ ಭಾರತದ ಪ್ರದೇಶಗಳಾದ ಆಂಧ್ರ ಪ್ರದೇಶ, ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಪ್ರತಿ ವರ್ಷ ಫಾಲ್ಗುಣಮಾಸದ ಶುಕ್ಲಪಕ್ಷದ ದ್ವಿತೀಯ ದಿನವನ್ನು ಶ್ರೀರಾಯರ ಪಟ್ಟಾಭಿಷೇಕ ದಿನವನ್ನಾಗಿ ಆಚರಿಸಲಾಗುತ್ತದೆ. ಫಾಲ್ಗುಣ ಶುಕ್ಲಪಕ್ಷದ ಸಪ್ತಮಿದಿನವನ್ನು ಶ್ರೀರಾಯರ ವರ್ಧಂತಿ ಉತ್ಸವ ದಿನವನ್ನಾಗಿ ಆಚರಿಸಲಾಗುತ್ತದೆ.

ಗೌತಮ ಗೋತ್ರದ ಬೀಗಮುದ್ರೆಯ ಮನೆತನದವರಾದ ವೀಣಾಕನಕಾಚಲ ಭಟ್ಟರೆಂದೇ ಖ್ಯಾತಿ ಪಡೆದವರ ಪುತ್ರರು ತಿಮ್ಮಣ್ಣ ಭಟ್ಟರು. ಇವರೂ ಕೂಡ ತಮ್ಮ ಪೂರ್ವಜರಂತೆ ಆಚಾರ್ಯರ ಶಾಸ್ತ್ರದಲ್ಲಿ ಹಾಗೂ ವಂಶವಿದ್ಯೆಯಾದ ವೀಣೆಯಲ್ಲಿ ಪ್ರಾವೀಣ್ಯತೆ ಪಡೆದವರು.

ಇವರ ಸುಪುತ್ರರೇ ಶ್ರೀವೆಂಕಟನಾಥಾಚಾರ್ಯರು. ವೆಂಕಟನಾಥರೇ ಶ್ರೀಸುಧೀಂದ್ರ ತೀರ್ಥ ಗುರುಗಳಿಂದ ಸನ್ಯಾಸ ದೀಕ್ಷೆ ಪಡೆದು ಶ್ರೀರಾಘವೇಂದ್ರ ಗುರುಸಾರ್ವಭೌಮರಾಗಿ ವೇದಾಂತ ಸಾಮ್ರಾಜ್ಯದ ಪೀಠವನ್ನಲಂಕರಿಸಿದ ಯತಿವರೇಣ್ಯರು.

ಸನ್ಯಾಸ ದೀಕ್ಷೆಯನ್ನು ಫಾಲ್ಗುಣ ಶುಕ್ಲಪಕ್ಷದ ದ್ವಿತೀಯಾ ದಿನದಂದು ಶ್ರೀಸುಧೀಂದ್ರ ತೀರ್ಥರಿಂದ ಸ್ವೀಕರಿಸುತ್ತಾರೆ. ಈ ದಿನವನ್ನು ಶ್ರೀಗುರುಸಾರ್ವಭೌಮರ ಪಟ್ಟಾಭಿಷೇಕ ಮಹೋತ್ಸವದ ದಿನವನ್ನಾಗಿ ಆಚರಿಸಲಾಗುತ್ತದೆ.

ಮಹಾಮಹಿಮರಾದ ಶ್ರೀಗುರುರಾಯರು ಹುಟ್ಟಿದ ಮಂಗಳಕರವಾದ ದಿನವಾದ ಫಾಲ್ಗುಣ ಶುಕ್ಲಪಕ್ಷದ ಸಪ್ತಮಿಯನ್ನು ಶ್ರೀರಾಯರ ವರ್ಧಂತಿ ಉತ್ಸವ ದಿನವನ್ನಾಗಿ ಆಚರಿಸಲಾಗುತ್ತದೆ.

ಈ ಒಂದು ವಾರದ ಕಾಲದಲ್ಲಿ ಶ್ರೀರಾಯರಿಗೆ ವಿಶೇಷ ಉತ್ಸವ, ಪೂಜೆ, ಉಪನ್ಯಾಸ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಿ ಶ್ರೀರಾಘವೇಂದ್ರ ಸಪ್ತಾಹ ಎಂದೂ ಆಚರಿಸುತ್ತಾರೆ.

ಜನರ ಕಷ್ಟಗಳ ನಿವಾರಣೆಗೆ ಮತ್ತು ಲೋಕೋದ್ಧಾರಕ್ಕಾಗಿ ಅವತರಿಸಿದ ಮಹಾನುಭಾವರು ಶ್ರೀರಾಘವೇಂದ್ರ ಸ್ವಾಮಿಗಳು. ಯಾರು ರಾಯರನ್ನು ದೃಢ ಭಕ್ತಿಯಿಂದ ತಮ್ಮ ಇಷ್ಟಾರ್ಥ, ಸಿದ್ಧಿಗಾಗಿ ಮೊರೆ ಹೋಗುತ್ತಾರೋ ಅಂತಹವರ ಬೇಡಿಕೆಗಳನ್ನು ಈಡೇರಿಸುವ ಕರುಣಾಮಯಿಗಳು ಶ್ರೀ ಗುರುರಾಯರು.

ರಾಯರನ್ನು ನಂಬಿ ಕೆಟ್ಟವರಿಲ್ಲ. ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ. ಮನುಷ್ಯನ ಆತ್ಮ ಜ್ಞಾನಕ್ಕೆ ಪ್ರತಿಯೊಬ್ಬರ ಬದುಕಿನಲ್ಲಿ ಓರ್ವ ಗುರುವಿನ ಮಾರ್ಗದರ್ಶನ ಅತ್ಯಗತ್ಯ. ಅಂತಹ ಗುರುಗಳ ಪಂಕ್ತಿಯಲ್ಲಿ ಅಗ್ರಸ್ಥಾನ ಪಡೆದಿರುವವರು ಶ್ರೇಷ್ಠ ಗುರುಗಳಾದ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳವರು.

ರಾಯರು ಓರ್ವ ಮಹಿಮಾ ಪುರುಷರು. ಶ್ರೀರಾಯರು ಅವರ ಪೂರ್ವಾಶ್ರಮದಲ್ಲಿ(ವೆಂಕಟನಾಥರು) ಅವರ ಪತ್ನಿ ಮತ್ತು ಮಗನ ಸಮೇತ ಒಂದು ಸಮಾರಂಭಕ್ಕೆ ಹೋಗಿದ್ದಾಗ ಅವರಿಗೆ ಆಹ್ವಾನ ಕೊಟ್ಟವರು ಸರಿಯಾದ ಗೌರವ ಕೊಡದೆ ಅವರಿಗೆ ಗಂಧ ತೇಯುವ ಕೆಲಸವನ್ನು ಕೊಟ್ಟರು. ಗಂಧವನ್ನು ಹಚ್ಚಿಕೊಂಡ ಬ್ರಾಹ್ಮಣರಿಗೆ ಮೈಯೆಲ್ಲಾ ಉರಿಯಾಗಿ ಒದ್ದಾಟ ಪ್ರಾರಂಭವಾಯಿತು. ಕಾರ್ಯಕ್ರಮ ನಿರ್ವಾಹಕರಿಗೆ ತಕ್ಷಣ ಆಗಿರುವ ಪ್ರಮಾದವನ್ನರಿತು ವೆಂಕಟನಾಥರನ್ನು ಒದಗಿರುವ ಈ ಸಂದಿಗ್ಧ ಪರಿಸ್ಥಿತಿಯಿಂದ ಪಾರು ಮಾಡಬೇಕೆಂದು ಕೇಳಿಕೊಳ್ಳುತ್ತಾರೆ. ತಕ್ಷಣ ವೆಂಕಟನಾಥರು ವರುಣ ಸೂಕ್ತವನ್ನು ಪಠಿಸಿ ಎಲ್ಲರ ಮೈಯಲ್ಲಾದ ಉರಿಯನ್ನು ತಮ್ಮ ಮಂತ್ರ ಶಕ್ತಿಯಿಂದ ಶಮನಗೊಳಿಸುತ್ತಾರೆ.

ರಾಯರು ತಮ್ಮ ಶಿಷ್ಯನೊಬ್ಬನು ತನ್ನ ಕಡು ಬಡತನದ ಬಗ್ಗೆ ಅರಿಕೆ ಮಾಡಿಕೊಂಡಾಗ ಗುರುಗಳು ಒಂದು ಹಿಡಿ ಮಂತ್ರಾಕ್ಷತೆಯನ್ನು ಕೊಟ್ಟು ಆಶೀರ್ವದಿಸುತ್ತಾರೆ. ಶಿಷ್ಯನು ತನ್ನ ಮನೆಗೆ ಹೋಗುವಾಗ ಕತ್ತಲಾಗಿದ್ದರಿಂದ ದಾರಿಯಲ್ಲಿ ಸಿಕ್ಕ ಒಂದು ಮನೆಯ ಜಗಲಿಯ ಮೇಲೆ ತನ್ನ ಮಂತ್ರಾಕ್ಷತೆಯ ಗಂಟಿನೊಂದಿಗೆ ಮಲಗುತ್ತಾನೆ.

ಆ ಮನೆಗೆ ಪಿಶಾಚಿ ಬಾಧೆ ಇರುತ್ತದೆ. ಆ ದಿನವು ಎಂದಿನಂತೆ ಪಿಶಾಚಿ ಬರಲು ಶ್ರೀರಾಯರ ಮಂತ್ರಾಕ್ಷತೆ ಪ್ರಭಾವದಿಂದ ಮನೆಯೊಳಗೆ ಹೋಗಲಾಗದೇ ಹೊರಗಡೆಯೇ ಸುಟ್ಟು ಭಸ್ಮವಾಗುತ್ತದೆ. ಅಂದೇ ಆ ಮನೆಯಲ್ಲಿ ಮನೆಯೊಡತಿಗೆ ಮಗು ಹುಟ್ಟುತ್ತದೆ. ಆ ಮನೆಯಲ್ಲಿ ಮಗು ಹುಟ್ಟುವ ಪ್ರತಿ ಸಂದರ್ಭದಲ್ಲಿಯೂ ಪಿಶಾಚಿಯ ಕಾಟದಿಂದ ಹುಟ್ಟುವ ಮಕ್ಕಳು ಸತ್ತು ಹೋಗುತ್ತಿದ್ದವು. ಆದರೆ ಈ ಬಾರಿ ಮಂತ್ರಾಕ್ಷತೆಯ ಪ್ರಭಾವದಿಂದ ಹುಟ್ಟಿದ ಮಗು ಬದುಕಿತು, ಪಿಶಾಚಿ ಸುಟ್ಟು ಭಸ್ಮವಾಯಿತು.

ಹರಿದಾಸರಲ್ಲಿ ಅಗ್ರಗಣ್ಯರಾಗಿದ್ದ ಶ್ರೀಜಗನ್ನಾಥದಾಸರಿಗೂ ಅವರಿಗೆ ಬಂದಿದ್ದ ವ್ಯಾಧಿ ಪರಿಹಾರಕ್ಕೆ ದಾರಿ ತೋರಿಸಿದ ಮಹಾನುಭಾವರು. ತಮ್ಮ ಅಪೂರ್ವ ತಪಃಶಕ್ತಿಯ ಬಲದಿಂದ ದೇಹೀ ಎಂದು ಬರುವ ಭಕ್ತರ ಮನಸ್ಸಿನ ಇಷ್ಟಾರ್ಥ ಸಿದ್ಧಿಗಳನ್ನು ಈಡೇರಿಸುವ ಕಲಿಯುಗದ ಕಾಮಧೇನು ಶ್ರೀರಾಘವೇಂದ್ರ ಗುರುಸಾರ್ವಭೌಮರು.

ಶ್ರೀಗುರುರಾಯರು ಹುಟ್ಟಿದ್ದು ತಮಿಳುನಾಡಿನ ಭುವನಗಿರಿಯಲ್ಲಿ ಮತ್ತು ಸಶರೀರರಾಗಿ ಬೃಂದಾವನ ಪ್ರವೇಶ ಮಾಡಿದ್ದು ಆಂಧ್ರಪ್ರದೇಶದ ಮಂತ್ರಾಲಯದಲ್ಲಿ.

ಶ್ರೀಗುರುರಾಜರ ನಾಲ್ಕು ನೂರ ಇಪ್ಪತ್ತೈದನೆಯ ವರ್ಧಂತಿ ಉತ್ಸವದ ಸಂದರ್ಭದಲ್ಲಿ, ಭಕ್ತಿಯ ನಮನಗಳನ್ನು ಅರ್ಪಿಸಿ ಎಲ್ಲರಿಗೂ ಸನ್ಮಂಗಳವನ್ನು ಕರುಣಿಸಿ ಅನುಗ್ರಹಿಸುವಂತೆ ಶ್ರೀರಾಯರಲ್ಲಿ ಪ್ರಾರ್ಥಿಸೋಣ.


Get in Touch With Us info@kalpa.news Whatsapp: 9481252093

Tags: Andra PradeshHindu SwamijiKannada News WebsiteMantralayamRayaruSpecial ArticleSri Raghavendra SwamyTamil NaduVardhanti Festivalರಾಯರುವರ್ಧಂತಿ ಉತ್ಸವಶ್ರೀ ರಾಘವೇಂದ್ರ ಸ್ವಾಮಿಗಳುಶ್ರೀಗುರುರಾಯರುಶ್ರೀರಾಘವೇಂದ್ರ ಗುರುಸಾರ್ವಭೌಮರು
Previous Post

ಮತ್ತೆ ಕುರುಕ್ಷೇತ್ರದಂತಹ ಸಮರ ಸನ್ನಾಹ ಆಗುತ್ತಿದೆಯೇ?

Next Post

ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಸಂಪನ್ನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಸಂಪನ್ನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ  | ಜುಲೈ 19ರಿಂದ ಮೂರು ದಿನ ಸಮನ್ವಯ ಸಂಗಮ

July 18, 2025

ಅಭಿವ್ಯಕ್ತಿಯಲ್ಲಿ ಅರಳಿದ ಕರುಣೆ: ಅನಿಕಾ ಕುಲಕರ್ಣಿಯ ಅದ್ಭುತ ರಂಗಪ್ರವೇಶ

July 18, 2025

ಹಾವು ಕಚ್ಚಿದ ತಕ್ಷಣ ಏನು ಮಾಡಬೇಕು? ಇಲ್ಲಿದೆ ತುರ್ತಾಗಿ ಮಾಡಬೇಕಾದ್ದು, ಮಾಡಬಾರದ್ದು

July 18, 2025

ಮಗು ಏನಾದರೂ ವಸ್ತು ನುಂಗಿದರೆ ತಕ್ಷಣ ಆಸ್ಪತ್ರೆ ತೆರಳಿರಿ: ವೈದ್ಯರ ಎಚ್ಚರಿಕೆ

July 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ  | ಜುಲೈ 19ರಿಂದ ಮೂರು ದಿನ ಸಮನ್ವಯ ಸಂಗಮ

July 18, 2025

ಅಭಿವ್ಯಕ್ತಿಯಲ್ಲಿ ಅರಳಿದ ಕರುಣೆ: ಅನಿಕಾ ಕುಲಕರ್ಣಿಯ ಅದ್ಭುತ ರಂಗಪ್ರವೇಶ

July 18, 2025

ಹಾವು ಕಚ್ಚಿದ ತಕ್ಷಣ ಏನು ಮಾಡಬೇಕು? ಇಲ್ಲಿದೆ ತುರ್ತಾಗಿ ಮಾಡಬೇಕಾದ್ದು, ಮಾಡಬಾರದ್ದು

July 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!