Wednesday, June 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಉತ್ತರ ಕನ್ನಡ

ಸಿದ್ಧಾಪುರದ ಬಾನ್ಕುಳಿಯಲ್ಲಿ ಜುಲೈ 27ರಿಂದ ರಾಘವೇಶ್ವರ ಶ್ರೀಗಳ ಚಾತುರ್ಮಾಸ್ಯ

July 23, 2018
in ಉತ್ತರ ಕನ್ನಡ, ಬೆಂಗಳೂರು ನಗರ
0 0
0
Share on facebookShare on TwitterWhatsapp
Read - < 1 minute

ಬೆಂಗಳೂರು: ಗೋಸಂರಕ್ಷಣೆಗಾಗಿ ಕಳೆದ ಎರಡು ದಶಕಗಳಿಂದ ಅವಿರತವಾಗಿ ಶ್ರಮಿಸುತ್ತಿರುವ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ 25ನೆಯ ಚಾತುರ್ಮಾಸ್ಯ ವ್ರತ ಈ ಬಾರಿ ಗೋಸ್ವರ್ಗ ಚಾತುರ್ಮಾಸ್ಯವಾಗಿ ಆಚರಿಸಲ್ಪಡುತ್ತಿದೆ.

ಆಷಾಢ ಶುದ್ಧ ಹುಣ್ಣಿಮೆಯಿಂದ ಭಾದ್ರಪದ ಶುದ್ಧ ಹುಣ್ಣಿಮೆಯವರೆಗೆ (ಜುಲೈ 27 ರಿಂದ ಸೆಪ್ಟೆಂಬರ್ 25ರವರೆಗೆ) ಚಾತುರ್ಮಾಸ್ಯ ವ್ರತಾಚರಣೆ ನಡೆಯಲಿದ್ದು, ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ಸಮೀಪದ ಶ್ರೀರಾಮದೇವ ಬಾನ್ಕುಳಿ ಮಠದಲ್ಲಿ ಲೋಕಾರ್ಪಣೆಗೊಂಡಿರುವ ವಿಶ್ವದ ಪ್ರಪ್ರಥಮ ಗೋಸ್ವರ್ಗದಲ್ಲಿ 25ನೆಯ ಚಾತುರ್ಮಾಸ್ಯ ವ್ರತ ಕೈಗೊಳ್ಳುವುದು ವಿಶೇಷ.

ಚಾತುರ್ಮಾಸ್ಯದ ಅಂಗವಾಗಿ ಪ್ರತಿದಿನ ಕಾಮಧೇನು ಹವನ, ಶ್ರೀಕರಾರ್ಚಿತ ಪೂಜೆ, ಮಾತೆಯರಿಂದ ಭಜನೆ ಮತ್ತು ಕುಂಕುಮಾರ್ಚನೆ, ನಡೆಯಲಿದ್ದು, ಗಣ್ಯ-ಮಾನ್ಯರಿಗೆ ಸ್ವರ್ಗಸವ್ಮಾನ ನಡೆಯಲಿದೆ. ಪ್ರತಿದಿನ ಮಧ್ಯಾಹ್ನ 12.30ಕ್ಕೆ ಶ್ರೀಗಳಿಂದ ಶ್ರೀಮದ್ಭಾಗವತ ಪ್ರವಚನ ಹಾಗೂ ಭಕ್ತಾದಿಗಳಿಗೆ ಮಂತ್ರಾಕ್ಷತೆ ಅನುಗ್ರಹ ನಡೆಯಲಿದ್ದು, ಸಂಜೆ ಗೋಗಂಗಾರತಿಯಂಥ ವಿಶಿಷ್ಟ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನವಾಗಲಿವೆ.

ಗೋವಿನ ಸಂರಕ್ಷ ಣೆ-ಸಂವರ್ಧನೆ, ಸಂಶೋಧನೆ ಎಂಬ ತತ್ವದಡಿ ’ಗೋವು-ಲಕ್ಷ್ಮಿ’ ಎಂಬ ನೈಜತೆಯ ಸಾಧಿಸಿ, ಜನತೆಗೆ ತೋರಿಸಿ, ಜಗವು ಗೋವಿನತ್ತಸಾಗಿ ಸುಖ ಹೊಂದಲಿ ಎಂಬ ಸದಾಶಯದೊಂದಿಗೆ ಸಂಪನ್ನವಾಗಲಿರುವ ಗೋಸ್ವರ್ಗ ಚಾತುರ್ಮಾಸ್ಯವು ಜುಲೈ 27 ಕ್ಕೆ ಮಠೀಯ ಪದ್ಧತಿಯಂತೆ ವ್ಯಾಸಪೂಜೆಯೊಂದಿಗೆ ಶ್ರೀಗಳು ಚಾತುರ್ಮಾಸ್ಯ ವ್ರತಸಂಕಲ್ಪ ಕೈಗೊಳ್ಳುವುದರ ಮೂಲಕ ಶುಭಾರಂಭವಾಗಲಿದೆ.

ಆಗಸ್ಟ್ 1 ರಿಂದ ಆಗಸ್ಟ್ 3ರವರೆಗೆ:

ಸ್ವರ್ಗಯಕ್ಷ ಸಂಭ್ರಮ ಕಾರ್ಯಕ್ರಮವಿದ್ದು, ಮೂರು ದಿನಗಳ ಕಾಲ ಯಕ್ಷಗಾನ ತಾಳಮದ್ದಳೆ ನಡೆಯಲಿದೆ. ಅಲ್ಲದೇ, ಚಾತುರ್ಮಾಸ್ಯದ ಅವಧಿಯಲ್ಲಿ 10 ಯಕ್ಷ ಗಾನ ಪ್ರಸಂಗಗಳ ಪ್ರದರ್ಶನ ನಡೆಯಲಿದ್ದು, ನಾಡಿನ ಖ್ಯಾತ ಯಕ್ಷ ಕಲಾವಿದರು ಭಾಗವಹಿಸಲಿದ್ದಾರೆ.

ಆಗಸ್ಟ್ 8 ರಿಂದ ಆಗಸ್ಟ್ 12ರ ವರೆಗೆ:

ಸ್ವರ್ಗಸಂಗೀತ ಸಂಭ್ರಮ ಕಾರ್ಯಕ್ರಮವಿದ್ದು, ನಾದದ್ವೈತ, ಗೋಕುಲನಾದ, ಗೋನಾಧಸುಧಾ, ಸಾತ್ವಿಕ ಸಂಗೀತ, ಧೇನು-ನಾದ-ಅನುಸಂಧಾನ ಎಂಬ ಕಾರ್ಯಕ್ರಮದಡಿ ಪ್ರತಿದಿನವೂ ಖ್ಯಾತ ಸಂಗೀತ ಕಲಾವಿದರಿಂದ ಗಾಯನ ಕಾರ್ಯಕ್ರಮ ಇರಲಿದೆ.

ಸೆಪ್ಟೆಂಬರ್ 2:

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಸೆಪ್ಟೆಂಬರ್ 2 ರಿಂದ ಸೆಪ್ಟೆಂಬರ್ 8ರ ವರೆಗೆ ಶ್ರೀಕೃಷ್ಣಕಥಾ ಕಾರ್ಯಕ್ರಮ ಆಯೋಜಿಸಲಾಗಿದ್ದು ಗಾಯನ, ವಾದನ, ನರ್ತನ, ಚಿತ್ರ, ರೂಪಕಗಳ ಸಂಯೋಜನೆಯೊಂದಿಗೆ ಶ್ರೀರಾಮಕಥಾ ಮಾದರಿಯಲ್ಲಿ ಸಂಪನ್ನಗೊಳ್ಳಲಿದೆ. ಸೆಪ್ಟೆಂಬರ್ 13ರ ಗಣೇಶ ಚತುರ್ಥಿ ದಿನದಂದು ವಿಶೇಷ ಪೂಜೆ, ಸೆಪ್ಟೆಂಬರ್ 25ರಂದು ಚಾತುರ್ಮಾಸ್ಯ ಪ್ರಶಸ್ತಿ ಪ್ರದಾನ ಹಾಗೂ ಸೀಮೋಲ್ಲಂಘನದೊಂದಿಗೆ ಚಾತುರ್ಮಾಸ್ಯ ಪೂರ್ಣಗೊಳ್ಳಲಿದೆ.

ರಾಷ್ಟ್ರೀಯ ಗವ್ಯ ಸಮ್ಮೇಳನ:

ಚಾತುರ್ಮಾಸ್ಯದ ಅವಧಿಯಲ್ಲಿ ರಾಷ್ಟ್ರೀಯ ಗವ್ಯ ಸಮ್ಮೇಳನ ನಡೆಯಲಿದ್ದು, ರಾಷ್ಟ್ರಮಟ್ಟದ ಗೋವಿಜ್ಞಾನಿಗಳು ಹಾಗೂ ಸಂಶೋಧಕರು ಭಾಗವಹಿಸಲಿದ್ದಾರೆ. ಗವ್ಯೋತ್ಪನ್ನಗಳ ಕುರಿತು ಚರ್ಚೆ ನಡೆಯಲಿದ್ದು, ಗವ್ಯೋತ್ಪನ್ನಗಳ ಮಾರುಕಟ್ಟೆ, ಗವ್ಯಾಧಾರಿತ ಉತ್ಪನ್ನಗಳ ಸಂಶೋಧನೆ ಹಾಗೂ ಅಭಿವೃದ್ಧಿ ಹಾಗೂ ಬಳಕೆಯ ಕುರಿತು ವಿಚಾರ ಸಂಕಿರಣ ಬೆಳಕು ಚೆಲ್ಲಲಿದೆ.

ಪ್ರತಿವ್ಯಕ್ತಿ ಗೋಸ್ವರ್ಗದಲ್ಲಿ ಗಿಡ ನೆಡುವುದು

ಚಾತುರ್ಮಾಸ್ಯದ ಸಮಯದಲ್ಲಿ ಗೋಸ್ವರ್ಗಕ್ಕೆ ಭೇಟಿ ನೀಡುವ ಪ್ರತಿಯೊಬ್ಬ ವ್ಯಕ್ತಿಯೂ ಒಂದೊಂದು ಗಿಡ ನಡಬೇಕು ಎಂಬುದು ಪೂಜ್ಯ ಶ್ರೀಗಳ ಆಶಯವಾಗಿದ್ದು, ಪ್ರತಿಯೊಬ್ಬರು ಒಂದೊಂದು ಗಿಡ ನಡೆಲು ಅವಕಾಶ ಕಲ್ಪಿಸಲಾಗಿದೆ. ಹೂವು ಹಣ್ಣಿನ ಗಿಡಗಳು ಸೇರಿದಂತೆ ಪಶ್ಚಿಮಘಟ್ಟದ ವಿಶಿಷ್ಟ ಸಸ್ಯಸಂಕುಲವನ್ನು ಗೋಸ್ವರ್ಗದ ಪರಿಸರದಲ್ಲಿ ಬೆಳೆಸುವ ಯೋಜನೆ ರೂಪಿಸಲಾಗಿದೆ.

Tags: BENGALURUBhankuliRaghaveshwara Sri ChaturmasyaRaghaveshwara SwamijiRamachandra pura mattSiddapuraUttara Kannadaರಾಘವೇಶ್ವರ ಶ್ರೀಗಳ ಚಾತುರ್ಮಾಸ್ಯ
Previous Post

ದೇಶದ ಉತ್ಥಾನವಾಗಬೇಕಾದರೆ, ಗೋಹತ್ಯೆ ನಿಲ್ಲಬೇಕು: ರಾಘವೇಶ್ವರ ಶ್ರೀ

Next Post

ನನಗೆ ಮಗಳಿರುವುದು ಸಾಬೀತಾದರೆ ಪೀಠತ್ಯಾಗ ಮಾಡುತ್ತೇನೆ: ಪೇಜಾವರ ಶ್ರೀ ಸವಾಲು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನನಗೆ ಮಗಳಿರುವುದು ಸಾಬೀತಾದರೆ ಪೀಠತ್ಯಾಗ ಮಾಡುತ್ತೇನೆ: ಪೇಜಾವರ ಶ್ರೀ ಸವಾಲು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025

“ಎಡಗೈಯೇ ಅಪಘಾತಕ್ಕೆ ಕಾರಣ” ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ: ನಿರ್ಮಾಪಕ ರಾಜೇಶ್ ಕೀಳಂಬಿ ಸಂತಸ

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!