No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Wednesday, May 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಉಡುಪಿ ಹೃದಯ ಭಾಗವನ್ನು ಪ್ರತಿನಿಧಿಸುವ ಹೃದಯವಂತ ಶಾಸಕ ರಘುಪತಿ ಭಟ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 14, 2020
in Special Articles
0
ಉಡುಪಿ ಹೃದಯ ಭಾಗವನ್ನು ಪ್ರತಿನಿಧಿಸುವ ಹೃದಯವಂತ ಶಾಸಕ ರಘುಪತಿ ಭಟ್

File Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಒಬ್ಬ ಜನಪ್ರತಿನಿಧಿ ಜನಪ್ರಿಯ ಜನಪ್ರತಿನಿಧಿ ಹೇಗೆ ಆಗಬಹುದು ಎನ್ನುವುದಕ್ಕೆ ನಮ್ಮ ಉಡುಪಿ ಶಾಸಕರಾದ ರಘುಪತಿ ಭಟ್ ಅವರು ಅತ್ಯುತ್ತಮ ಉದಾಹರಣೆ.

ದೇಶ ರಾಜ್ಯ ತನ್ನೂರಿನ ಜನರಿಗೆ ಕಷ್ಟ ಬಂದಾಗ ಅಪ್ಪಟ ಸೇನಾನಿಯ ಹಾಗೆ ಸೆಟೆದು ನಿಲ್ಲುವ ಭಟ್ ಅವರು ಹುಟ್ಟು ಹೋರಾಟಗಾರ ಎಂದರೆ ತಪ್ಪಾಗಲಾರದು. ದೇಶಕ್ಕೆ ದೇಶವೇ ಕೊರೋನ ಹೆಮ್ಮಾರಿಯನ್ನು ಹೇಗೆ ಮಣಿಸುವುದು ಎಂದು ತಲೆ ಮೇಲೆ ಕೈಹೊತ್ತು ಕುಳಿತಿರುವಾಗ ಉಡುಪಿ ಶಾಸಕರು ಊರಿಗೆ ಬಂದ ಮಾರಿಯನ್ನು ಮಣಿಸಲು ಸದ್ದಿಲ್ಲದೇ ಸಮರಭ್ಯಾಸ ಮಾಡುತ್ತಿದ್ದರು. ಉಸ್ತುವಾರಿ ಸಚಿವರ ಮಾರ್ಗದರ್ಶನದ ಮೇರೆಗೆ ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಸಾಲು ಸಾಲು ಮೀಟಿಂಗ್ ಮಾಡಿ ಉಡುಪಿಯಲ್ಲಿ ಕೊರೊನ ನಿಯಂತ್ರಣದ ಬಗ್ಗೆ ಚರ್ಚೆ ಮಾಡುತಿದ್ದರು.

ಭಟ್ರು ಗೌರವಾಧ್ಯಕ್ಷರು ಆಗಿರುವ ಉಡುಪಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಡಿಯಾಳಿ ಇದರ ನೇತೃತ್ವದಲ್ಲಿ ಕಳೆದ 20 ದಿನಗಳಿಂದ ಸುಮಾರು 3200ಕ್ಕೂ ಅಧಿಕ ಬಡ ಕೂಲಿ ಕಾರ್ಮಿಕರಿಗೆ ಮತ್ತು ಹಸಿದವರಿಗೆ ಅನ್ನದಾಸೋಹ ಮಾಡಿ ಬಡವರ ಬಂಧು ಎನಿಸಿಕೊಂಡಿದ್ದಾರೆ. ದಾನಿಗಳ ಸಹಾಯದಿಂದ ಅಕ್ಕಿ, ಸಕ್ಕರೆ, ಚಾಪುಡಿ, ಎಣ್ಣೆ ಇತ್ಯಾದಿ ಅಗತ್ಯ ವಸ್ತುಗಳನ್ನು ಪ್ಯಾಕ್ ಮಾಡಿಸಿ ರೇಷನ್ ಕಾರ್ಡ್ ಇಲ್ಲದೇ ಇರುವ ಬಡ ಕುಟುಬಗಳ ಮನೆ ಬಾಗಿಲಿಗೆ ಕಾರ್ಯಕರ್ತರ ಮೂಲಕ ತಲುಪಿಸುವ ಕಾರ್ಯವನ್ನು ಮಾಡಿದ್ದಾರೆ.

ಕೊರೋನಾ ಎನ್ನುವ ಮಹಾಮಾರಿ ದೇಶ ರಾಜ್ಯವನ್ನು ದಾಟಿ ಉಡುಪಿ ಜಿಲ್ಲೆಗೆ ಕಾಲಿಡುವ ಮುನ್ನವೇ ಎಚ್ಚೆತ್ತುಕೊಂಡ ಭಟ್ರು ಮಣಿಪಾಲ ಸಂಸ್ಥೆಯ ಮುಖ್ಯಸ್ಥರ ಜೊತೆ ಮಾತನಾಡಿ ರಾಜ್ಯದಲ್ಲೇ ಪ್ರಥಮವಾಗಿ ಕೊರೋನಾ ರೋಗಿಗಳಿಗೆ ಚಿಕಿತ್ಸೆ ನೀಡಲು ಟಿಎಂಎ ಪೈ ಖಾಸಗಿ ಆಸ್ಪತ್ರೆಯನ್ನು ನಿಗದಿಪಡಿಸಿದರು. ಅದೇ ರೀತಿ ಎಸ್ಡಿಎಂ ಅವರೊಂದಿಗೆ ಮಾತನಾಡಿ ಉದ್ಯಾವರದಲ್ಲಿ 150 ಬೆಡ್’ಗಳನ್ನು ಕ್ವಾರಂಟೈನ್’ಗಾಗಿ ವ್ಯವಸ್ಥೆಯನ್ನು ಮಾಡಿದರು.

ಭಟ್ ಅವರ ಈ ಮುಂಜಾಗ್ರತಾ ಕ್ರಮ ಇಡೀ ರಾಜ್ಯಕ್ಕೆ ಮಾದರಿಯಾಯಿತು. ಈ ಸಂದರ್ಭದಲ್ಲಿ ಭಟ್ರ ಜೊತೆ ಕೊರೋನಾ ನಿಯಂತ್ರಿಸಲು ಹಾಗೂ ನೊಂದ ಜನರ ನೆರವಿಗೆ ನಿಂತು ಮಾದರಿ ಜಿಲ್ಲೆಯಾಗಿಸುವಲ್ಲಿ ಹೆಗಲುಕೊಟ್ಟ ಜಿಲ್ಲಾಧಿಕಾರಿಗೂ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಅವರಿಗೆ ವಿಶೇಷ ಧನ್ಯವಾದ ಸಲ್ಲಿಸುತ್ತೇನೆ.

ರಾಜಕಾರಣಿಗಳು ಎಲ್ಲವನ್ನು ವೋಟಿಗಾಗಿ ಮಾಡುತ್ತಾರೆ ಎನ್ನುವ ಅಪವಾದವಿದೆ. ಆದರೆ ರಘುಪತಿ ಭಟ್ ಅವರು ತನ್ನ ಕ್ಷೇತ್ರದಲ್ಲಿ ವೋಟ್ ಇಲ್ಲದ ಉತ್ತರಕನ್ನಡ ಭಾಗದ ಸಾವಿರ ಸಾವಿರ ವಲಸೆ ಕಾರ್ಮಿಕರಿಗೆ ಪ್ರತಿನಿತ್ಯಾ ಊಟವನ್ನು ಒದಗಿಸಿದರು. ನನ್ನ ಕ್ಷೇತ್ರದಲ್ಲಿ ಯಾರೊಬ್ಬರೂ ಊಟವಿಲ್ಲದೆ ಹಸಿದು ಮಲಗಲು ಯಾವ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಎಂದು ಹೇಳಿದರು. ಭಟ್ರ ಈ ಹೇಳಿಕೆಯಿಂದ ನಮಗೆ ಅರ್ಥವಾಗುತ್ತದೆ ಅವರ ಹೃದಯ ಶ್ರೀಮಂತಿಗೆ ಎಂತಹದ್ದು ಎನ್ನುವುದು. ಕೆಲ ಕೇಂದ್ರ ಹಾಗೂ ರಾಜ್ಯ ಸಚಿವರು ಮನೆಯಲ್ಲೇ ಕುಳಿತಿರುವ ಸಂದರ್ಭದಲ್ಲಿ ಭಟ್ರು ನನ್ನ ಕ್ಷೇತ್ರದ ಉದ್ದಗಲಕ್ಕೂ ಸಂಚರಿಸಿ ಬಡ ಬಗ್ಗರ ಬಗ್ಗೆ ತೋರಿದ ಪ್ರೀತಿ ಕಾಳಜಿ ಕಂಡು ರಾಜ್ಯದ ಪ್ರತಿಷ್ಠಿತ ಸುದ್ದಿ ಮಾಧ್ಯಮಗಳು ಭಟ್ ಅವರ ಕಾರ್ಯ ವೈಖರಿಯನ್ನು ರಾಜ್ಯದ ಮೂಲೆ ಮೂಲೆಗೆ ತಲುಪುವಂತೆ ಪ್ರಯತ್ನವನ್ನು ಮಾಡಿದವು.

ತಾನೊಬ್ಬ ಶಾಸಕ ಎನ್ನುವ ಹಮ್ಮು-ಬಿಮ್ಮುಗಕಿಲ್ಲದೆ ಸಾಮಾನ್ಯನ ಹಾಗೆ ಬೆಳಿಗ್ಗೆ ಊಟಕ್ಕೆ ತರಕಾರಿ ಹಚ್ಚುದರಿಂದ ಹಿಡಿದು ಸಂಜೆ ಪಾತ್ರೆ ತೊಳೆಯುವ ಕೆಲಸದವರೆಗೂ ಕುದ್ದು ತಾನೇ ನಿಂತು ಎಲ್ಲವನ್ನು ನೋಡಿಕೊಳ್ಳುವ ನಮ್ಮ ಶಾಸಕರನ್ನು ಪಡೆದ ನಮ್ಮ ಉಡುಪಿ ಜನರು ನಿಜವಾಗಿ ಧನ್ಯರು. ಒಂದು ಗಣೇಶೋತ್ಸವ ಸಂಘದ ವತಿಯಿಂದ ಈ ಪರಿ ಸಮಾಜ ಸೇವೆ ಮಾಡಬಹುದು. ಜನರ ದುಃಖ ದುಮ್ಮಾನಕ್ಕೆ ನೆರವಾಗಬಹುದು ಎನ್ನುವುದನ್ನು ಸಮಾಜಕ್ಕೆ ತೋರಿಸಿಕೊಟ್ಟ ಜನ ನಾಯಕ ನಮ್ಮ ಭಟ್ರು. ಭಟ್ರ ಕರೆಗೆ ಓಗೊಟ್ಟು ಪ್ರತಿನಿತ್ಯ ಊಟಕ್ಕೆ ತಮ್ಮ ಕೈಯಲ್ಲಾದಷ್ಟು ಸಹಾಯ ಮಾಡುತ್ತಿರುವ ದಾನಿಗಳಿಗೂ ಧನ್ಯವಾದಗಳು. ಈ ಎಲ್ಲಾ ಜಂಜಾಟಗಳ ನಡುವೆ ಕೂಡ ಉಡುಪಿಯ ಜನರಿಗೆ ಮೇ ತಿಂಗಳ ಕೊನೆಯ ಹೊತ್ತಿಗೆ ನೀರಿನ ಅಭಾವ ಕಾಡಬಾರದು ಎನ್ನುವ ಉದ್ದೇಶದಿಂದ ಪಂಪ್ ಸೆಟ್ ಮೂಲಕ ಬಜೆ ಡ್ಯಾಮ್ ಗೆ ನೀರು ತುಂಬಿಸುವ ಕಾರ್ಯವನ್ನು ಸದ್ದಿಲ್ಲದೇ ಮಾಡುತ್ತಿದ್ದಾರೆ. ಯಾರೇನೇ ಹೇಳಲಿ ಯಾರೇನೇ ಟೀಕಿಸಲಿ ಉಡುಪಿ ರಿಯಲ್ ಹೀರೋ ನಮ್ ಭಟ್ರು.

ಹಿಂದಿನ ಡಿಸಿ 7 ಜನರ ಕಮಿಟಿ ಮಾಡಿ 7 ದಿನಗಳಲ್ಲಿ ಮರಳು ದಿಬ್ಬಗಳನ್ನು ಹಂಚಿಕೆ ಮಾಡಬೇಕಾದ ಜಿಲ್ಲಾಧಿಕಾರಿ ಒಂದು ತಿಂಗಳುಗಳ ಕಾಲ ಸುಮ್ಮನೆ ಕಾಲ ಹರಣ ಮಾಡಿದರು ಎನ್ನುವ ಒಂದೇ ಒಂದು ಕಾರಣಕ್ಕೆ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಜಿಲ್ಲೆಯ ಅಭಿವೃದ್ಧಿಗೆ ಮಾರಕವಾಗುವ ಡಿಸಿ ನಮಗೆ ಬೇಡ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ವರ್ತಿಸುವ ಜನಸ್ನೇಹಿ ಜಿಲ್ಲಾಧಿಕಾರಿ ನಮ್ಮ ಜಿಲ್ಲೆಗೆ ಬೇಕೆಂದು ಜಿ. ಜಗದೀಶ್ ಎನ್ನುವ ದಕ್ಷ ಅಧಿಕಾರಿಯನ್ನು ಉಡುಪಿಗೆ ಕರೆತಂದ ಉಡುಪಿ ಶಾಸಕರಿಗೆ ಅನಂತ ಅನಂತ ಧನ್ಯವಾದಗಳು.

ಕಳೆದ ವರ್ಷ ಉಡುಪಿ ಜಿಲ್ಲೆಯ ಜನರು ಮರಳಿನ ಸಮಸ್ಯೆಯಿಂದ ಪರಿತಪಿಸುತ್ತಿದ್ದಾಗ, ಕಳೆದ ಬೇಸಿಗೆಯಲ್ಲಿ ಉಡುಪಿ ನಗರದ ಜನತೆಗೆ ನೀರಿನ ಅಭಾವ ಆದಾಗ, ಈ ವರ್ಷ ಉಡುಪಿಯ ಜನತೆ ಭಯಾನಕ ಕೊರೋನಾ ಮಹಾಮಾರಿಯಿಂದ ಸಂಕಷ್ಟಕ್ಕೆ ಸಿಲುಕಿದಾಗ ಒಬ್ಬ ಜವಾಬ್ದಾರಿಯುತ ಮನೆಯ ಮಗನ ನೆಲೆಯಲ್ಲಿ ಸಹಾಯಕ್ಕೆ ನಿಲ್ಲುವ ಭಟ್ರು ನೂರಾರು ಕಾಲ ಸುಖವಾಗಿ ಬಾಳಲಿ ಎನ್ನುವುದು ನನ್ನ ಅಂತರಂಗದ ಆಶಯ.


Get in Touch With Us info@kalpa.news Whatsapp: 9481252093

Tags: CoronavirusCovid19IndiaKannadaNewsWebsiteLatestNewsKannadaMLA Raghupati BhatSouth KendraUdupiಉಡುಪಿಕೊರೋನಾ ವೈರಸ್ಜನಪ್ರತಿನಿಧಿಶಾಸಕಶಾಸಕ ರಘುಪತಿ ಭಟ್
Share228Tweet123Send
Previous Post

ಮೇ 3ರವರೆಗೂ ದೇಶದಾದ್ಯಂತ ಲಾಕ್ ಡೌನ್: ಪ್ರಧಾನಿ ನರೇಂದ್ರ ಮೋದಿ

Next Post

ಕುಂಸಿ: ಅಕ್ರಮವಾಗಿ ಗೋವು ಸಾಗಿಸುತ್ತಿದ್ದವರನ್ನು ಪೊಲೀಸರಿಗೆ ಹಿಡಿದುಕೊಟ್ಟ ಗೋ ಸಂರಕ್ಷಣಾ ವೇದಿಕೆ ಸದಸ್ಯರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕುಂಸಿ: ಅಕ್ರಮವಾಗಿ ಗೋವು ಸಾಗಿಸುತ್ತಿದ್ದವರನ್ನು ಪೊಲೀಸರಿಗೆ ಹಿಡಿದುಕೊಟ್ಟ ಗೋ ಸಂರಕ್ಷಣಾ ವೇದಿಕೆ ಸದಸ್ಯರು

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಭದ್ರಾವತಿ | ಆರು ಪೌರ ಕಾರ್ಮಿಕರಿಗೆ ಮಧು ಲ್ಯಾಬ್ ವತಿಯಿಂದ ಸನ್ಮಾನ

ಭದ್ರಾವತಿ | ಆರು ಪೌರ ಕಾರ್ಮಿಕರಿಗೆ ಮಧು ಲ್ಯಾಬ್ ವತಿಯಿಂದ ಸನ್ಮಾನ

May 5, 2026
Impressive concert by Smt. Surabhi Sheshadri

Impressive concert by Smt. Surabhi Sheshadri

May 5, 2026
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ | ಮಮತಾ ಬ್ಯಾನರ್ಜಿ ಹೊಸ ವರಸೆ

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ | ಮಮತಾ ಬ್ಯಾನರ್ಜಿ ಹೊಸ ವರಸೆ

May 5, 2026
ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

ಬೇಸೂರಿನಲ್ಲಿ ಪರಮಾಣು ವಿದ್ಯುತ್ ಸ್ಥಾವರ | ಸಾರ್ವಜನಿಕರಲ್ಲಿ ಆತಂಕ ಬೇಡ: ಜಿಲ್ಲಾಧಿಕಾರಿ ಸ್ಪಷ್ಟನೆ

May 5, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಗಮನಿಸಿ! ಈ ದಿನ ಬೆಂಗಳೂರಿನಿಂದ ಹೊರಡುವ ಈ ರೈಲುಗಳ ಸಂಚಾರದಲ್ಲಿ ಬದಲಾವಣೆ

May 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL