ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ದೇಶದಲ್ಲಿ ಎಲ್ಲಿ ಸ್ಪರ್ಧಿಸಿದರೂ ಗೆಲ್ಲುವುದಿಲ್ಲ ಎನ್ನುವುದು ಅವರಿಗೇ ಗೊತ್ತಾಗಿದೆ. ಹೀಗಾಗಿ, ರಾಜ್ಯದ ಬೀದರ್ನಿಂದ ಸ್ಪರ್ಧಿಸುವ ನಿರ್ಧಾರ ಕೈಗೊಂಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಲೇವಡಿ ಮಾಡಿದ್ದಾರೆ.
ಈ ಕುರಿತಂತೆ ಇಂದು ಮಾತನಾಡಿರುವ ಅವರು, ತಾವು ಎಲ್ಲಿ ಸ್ಪರ್ಧಿಸಿದರೂ ಗೆಲ್ಲುವುದಿಲ್ಲ ಎನ್ನುವುದು ಅವರಿಗೆ ತಿಳಿದಿದೆ. ಹೀಗಾಗಿ, ಕರ್ನಾಟಕ ಸೇಫ್ ಎಂಬ ನಿರ್ಧಾರಕ್ಕೆ ಅವರು ಬಂದಂತಿದ್ದು, ಬೀದರ್ ಕುರಿತು ಚಿಂತಿಸುತ್ತಿದ್ದಾರೆ. ಆದರೆ, ರಾಜ್ಯದ ಜನತೆ ಬುದ್ದಿವಂತರಿದ್ದಾರೆ. ಅವರನ್ನು ತಿರಸ್ಕರಿಸಲಿದ್ದಾರೆ ಎಂದು ಕಟಕಿಯಾಡಿದ್ದಾರೆ.
Discussion about this post