No Result
View All Result
PESITM hosts Mock CET 2026 to Strengthen KCET Preparation
English Articles

PESITM hosts Mock CET 2026 to Strengthen KCET Preparation

by ಕಲ್ಪ ನ್ಯೂಸ್
March 31, 2026
0

Kalpa Media House  |  Shivamogga  | PES Institute of Technology and Management #PESITM conducted Mock CET 2026 on March 30...

Read moreDetails
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
  • Advertise With Us
  • Grievances
  • About Us
  • Contact Us
Wednesday, April 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಹಿಂದುಳಿದ ವರ್ಗದವರನ್ನು ಅವಮಾನಿಸುವ ರಾಹುಲ್ ಗಾಂಧಿ, ತಾನು ಬಲಿಪಶು ಎಂಬಂತೆ ನಟಿಸಬಾರದು: ಅಮಿತ್ ಶಾ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 24, 2023
in ರಾಷ್ಟ್ರೀಯ
0
ಹಿಂದುಳಿದ ವರ್ಗದವರನ್ನು ಅವಮಾನಿಸುವ ರಾಹುಲ್ ಗಾಂಧಿ, ತಾನು ಬಲಿಪಶು ಎಂಬಂತೆ ನಟಿಸಬಾರದು: ಅಮಿತ್ ಶಾ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತಕ್ಕಿಂತ 15-20 ಸ್ಥಾನಗಳನ್ನು ಹೆಚ್ಚಾಗಿ ಗೆಲ್ಲಲಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ #Amith Sha ಭರವಸೆ ವ್ಯಕ್ತಪಡಿಸಿದರು.

ಈ ಕುರಿತಂತೆ ಮಾತನಾಡಿದ ಅವರು, ಪಕ್ಷದ ಕೆಲವು ನಾಯಕರು ಪಕ್ಷಾಂತರಗೊಂಡರೂ, ಪಕ್ಷದ ನೆಲೆಯು ಅಖಂಡವಾಗಿದೆ ಎಂದು ಪ್ರತಿಪಾದಿಸಿದರು.

ಬಿಜೆಪಿಯ #BJP ಬಂಡಾಯಗಾರರು ಎಂದಿಗೂ ಗೆಲ್ಲುವುದಿಲ್ಲ ಎಂಬುದು ಇತಿಹಾಸ ಮತ್ತು ಅದು ಈ ಬಾರಿಯೂ ನಿಜವಾಗಲಿದೆ. ಕರ್ನಾಟಕದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ನ ಭ್ರಷ್ಟಾಚಾರ ಆರೋಪಗಳನ್ನು ‘ಆಧಾರ ರಹಿತ’ ಎಂದು ತಿರಸ್ಕರಿಸಿದ ಶಾ, ಕರ್ನಾಟಕವನ್ನು ‘ಎಟಿಎಂ’ ಆಗಿ ಬಳಸುತ್ತಿರುವ ಕಾಂಗ್ರೆಸ್, ತನ್ನ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು, ಯಾವುದೇ ನ್ಯಾಯಾಲಯದಲ್ಲಿ ಪ್ರಮಾಣೀಕರಿಸಲು ಸಾಧ್ಯವಿಲ್ಲದಿದ್ದರೂ ಬಿಜೆಪಿಯನ್ನು ದೂಷಿಸುತ್ತಿದೆ ಎಂದು ಕಿಡಿಕಾರಿದರು.
ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ, ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿದ್ದಕ್ಕಾಗಿ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಬಗ್ಗೆ, “ಭಾರತದಲ್ಲಿ ಯಾವುದೇ ಕುಟುಂಬ ಕಾನೂನಿಗಿಂತ ಮೇಲೆ ಇಲ್ಲ ಮತ್ತು ಕಾನೂನೂ ಎಲ್ಲರಿಗೂ ಒಂದೇ ” ಎಂದು ಹೇಳಿದರು.

ತೆರವು ನೋಟಿಸ್ ನೀಡಿದ ನಂತರ, ರಾಹುಲ್ ಗಾಂಧಿ ಶನಿವಾರ ತಮ್ಮ ಅಧಿಕೃತ ಬಂಗಲೆಯನ್ನು ಖಾಲಿ ಮಾಡಿದರು ಮತ್ತು ಅವರು ಸತ್ಯವನ್ನು ಮಾತನಾಡಿದ್ದಕ್ಕಾಗಿ ತಾನು ಬೆಲೆ ಕಟ್ಟುತ್ತಿದ್ದೇನೆ ಎಂದು ಹೇಳಿದ್ದಾರೆ. ಗಾಂಧಿ ‘ಬಲಿಪಶು’ ಎಂಬಂತೆ ಬಿಂಬಿತವಾಗುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಾ, “ರಾಹುಲ್ ಗಾಂಧಿಗೆ ಒಬಿಸಿ ಸಮುದಾಯವನ್ನು ಅವಮಾನಿಸುವಂತೆ ನಾವು ಹೇಳಿಲ್ಲ. ಅದಕ್ಕೆ ಕ್ಷಮೆ ಕೇಳದಿರಲು ಅವರೇ ನಿರ್ಧರಿಸಿದ್ದಾರೆ.
‘ಅವರಿಗೆ ಶಿಕ್ಷೆ ವಿಧಿಸಿದ ಕಾನೂನನ್ನು ಕಾಂಗ್ರೆಸ್ ಸರ್ಕಾರವೇ ರೂಪಿಸಿದೆ. ಆಗಿನ ಪ್ರಧಾನಿ ಮನಮೋಹನ್ ಸಿಂಗ್ #ManamohanSingh ಆ ಕಾನೂನನ್ನು ಹಿಂಪಡೆಯಲು ಪ್ರಯತ್ನಿಸಿದ್ದರು, ಆದರೆ ರಾಹುಲ್ ಗಾಂಧಿ ಅವರೇ ಆ ಸುಗ್ರೀವಾಜ್ಞೆ ಪ್ರತಿಯನ್ನು ಹರಿದು ಹಾಕಿದರು. ಅವರು ಇನ್ನು ಮುಂದೆ ತಾನು ಬಲಿಪಶು ಎಂಬ ನಾಟಕ ಆಡಬಾರದು. ಯಾವುದೇ ಕುಟುಂಬವು ಕಾನೂನನ್ನು ಮೀರಿದೆ ಎಂದು ಯಾರೂ ಭಾವಿಸಬಾರದು. ಸಂಸತ್ತು ಸುಗ್ರೀವಾಜ್ಞೆಯನ್ನು ಅಂಗೀಕರಿಸಿದ್ದರೆ, ಯಾವುದೇ ತಪ್ಪಿತಸ್ಥ ಸಂಸದರನ್ನು ತಕ್ಷಣವೇ ಅನರ್ಹತೆಗೊಳಿಸುವುದರಿಂದ ಉಳಿಸಲಾಗುತ್ತಿತ್ತು.

ಜಮ್ಮು ಮತ್ತು ಕಾಶ್ಮೀರದ #JammuKashimir ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರನ್ನು ಸಿಬಿಐ ವಿಚಾರಣೆಗೆ ಕರೆದಿರುವ ಬಗ್ಗೆ ಕೇಳಿದಾಗ, “ತನಿಖಾ ಸಂಸ್ಥೆಯು ಈ ಹಿಂದೆಯೂ ಅವರಿಗೆ ಸಮನ್ಸ್ ನೀಡಿದ್ದರಿಂದ ಅಂತಹ ಆರೋಪ ಸರಿಯಲ್ಲ” ಎಂದು ಶಾ ಹೇಳಿದರು. ಮುಚ್ಚಿಡಬೇಕಾದ ಯಾವ ಕೆಲಸವನ್ನೂ ಬಿಜೆಪಿ ಮಾಡಿಲ್ಲ. ನಮ್ಮನ್ನು ಅಗಲಿದ ನಂತರ ಯಾರಾದರೂ ಆರೋಪಗಳನ್ನು ಮಾಡುತ್ತಿದ್ದರೆ, ಮಾಧ್ಯಮಗಳು ಮತ್ತು ಜನರು ಅದಕ್ಕೆ ತಕ್ಕಂತೆ ಆ ವಿಷಯಗಳ ಮೌಲ್ಯಮಾಪನ ಮಾಡುವುದು ಒಳ್ಳೆಯದು.

ಕರ್ನಾಟಕದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ, 224 ಸದಸ್ಯ ಬಲದ ವಿಧಾನಸಭೆಯಲ್ಲಿ ಭಾಜಪ ಅರ್ಧ ಸ್ಥಾನಗಳಾದ 112 ಸೀಟುಗಳಿಗಿಂತ, 15-20 ಸ್ಥಾನಗಳನ್ನು ಹೆಚ್ಚು ಪಡೆಯಲಿದೆ ಎಂದು ಹೇಳಿದರು.

2009-14ರ ಅವಧಿಯಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರದಲ್ಲಿದ್ದಾಗ ಕೇಂದ್ರವು ರಾಜ್ಯಕ್ಕೆ ಕೇವಲ 94,224 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿತ್ತು. 2014-19ರ ಅವಧಿಯಲ್ಲಿ ಪ್ರಧಾನಿ ಮೋದಿಯವರು ಈ ಮೊತ್ತವನ್ನು 2.26 ಲಕ್ಷ ಕೋಟಿ ರೂ.ಗೆ ಹೆಚ್ಚಿಸಿದರು. ಅಲ್ಲದೆ, ತೆರಿಗೆ ಹಂಚಿಕೆ ಮತ್ತು ಅನುದಾನದಲ್ಲಿ ಕಾಂಗ್ರೆಸ್ ಸರ್ಕಾರ 22,000 ಕೋಟಿ ರೂ.ಗಳನ್ನು ನೀಡುತ್ತಿದ್ದು, ಅದನ್ನು 75,000 ಕೋಟಿ ರೂ.ಗೆ ಹೆಚ್ಚಿಸಲಾಗಿದೆ.
Kalahamsa Infotech private limitedಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರೆಸಿದ ಶಾ, ರಾಜ್ಯದಲ್ಲಿ ಮುಸ್ಲಿಮರಿಗೆ ಶೇಕಡಾ ನಾಲ್ಕು ಪ್ರತಿಶತ ಮೀಸಲಾತಿ ನೀಡುವ ಮೂಲಕ ಕಾಂಗ್ರೆಸ್ ಸಂವಿಧಾನವನ್ನು ಉಲ್ಲಂಘಿಸಿತ್ತು ಎಂದು ಹೇಳಿದರು. ಸಂವಿಧಾನವು ಧಾರ್ಮಿಕ ಆಧಾರದ ಮೇಲೆ ಯಾವುದೇ ರೀತಿಯ ಮೀಸಲಾತಿಯನ್ನು ಅನುಮತಿಸುವುದಿಲ್ಲ. ಬಿಜೆಪಿ ಸರಕಾರ ಈ ಮೀಸಲಾತಿಯನ್ನು ರದ್ದುಪಡಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಗಳ ಮೀಸಲಾತಿಯನ್ನು ಹೆಚ್ಚಿಸಿ ಸಾಮಾಜಿಕ ನ್ಯಾಯ ಒದಗಿಸಿದೆ.

ಕಾಂಗ್ರೆಸ್ ತನ್ನ ಆಡಳಿತ ಕಾಲದಲ್ಲಿ ಕಟ್ಟರ್ ಇಸ್ಲಾಮಿಕ್ ಸಂಘಟನೆಯಾದ ಪಿಎಫ್ಐ ಅನ್ನು ‘ರಕ್ಷಿಸಿ ಮತ್ತು ಪೋಷಿಸಿತು’, ಈಗ ಮೋದಿ ಸರ್ಕಾರವು ಅದನ್ನು ನಿಷೇಧಿಸಿದೆ. ಪಿಎಫ್ಐ ಕಾರ್ಯಕರ್ತರು ರಾಜ್ಯದಲ್ಲಿ ಹಾಡು ಹಗಲಿನಲ್ಲಿಯೇ ಹತ್ಯೆ ಮಾಡುತ್ತಿದ್ದರು. ಪ್ರಧಾನಿ ಮೋದಿ ಅದನ್ನು ನಿಷೇಧಿಸಿ, ರಾಜ್ಯದ ಜನತೆಗೆ ಭದ್ರತೆ ಒದಗಿಸಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ಮಾತನಾಡುತ್ತಾ ಶಾರವರು, “ಭಾರತದ ಮೇಲಿನ ಯಾವುದೇ ದಾಳಿಗೆ ನಾವು ತಕ್ಕ ಪ್ರತ್ಯುತ್ತರ ನೀಡುತ್ತೇವೆ” ಎಂದು ಹೇಳಿದರು. ಭಾರತದ ವಿದೇಶಿ ರಾಯಭಾರಿ ಕಚೇರಿಗಳ ಮೇಲಿನ ಹಿಂಸಾಚಾರವನ್ನು ಮೋದಿ ಸರ್ಕಾರವು ಲಘುವಾಗಿ ಪರಿಗಣಿಸುವುದಿಲ್ಲವೆಂದರು.

ಮೋದಿ ಮೇಲಿನ ವೈಯಕ್ತಿಕ ದಾಳಿಯ ಕುರಿತು ಅಮಿತ್ ಶಾ ಅವರು, ‘ಮೋದಿಯವರ ಮೇಲಿನ ವೈಯಕ್ತಿಕ ದಾಳಿಗಳು ಹೊಸದೇನಲ್ಲ. ಬಹಳ ಹಿಂದೆಯೇ ಸೋನಿಯಾ ಗಾಂಧಿ ಅವರನ್ನು ‘ಸಾವಿನ ವ್ಯಾಪಾರಿ’ ಎಂದು ಕರೆದಿದ್ದರು. ಆದರೆ ಮೋದಿಯವರು ಅಂತಹ ದಾಳಿಗಳನ್ನು ಎದುರಿಸಿದಾಗಲೆಲ್ಲಾ ಇನ್ನಷ್ಟು ಬಲಶಾಲಿಯಾಗಿ ಹೊರಹೊಮ್ಮಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Amit ShaBackward classBJPKannada News WebsiteLatest News KannadaNew DelhiRahul GandhiRebellionಅಮಿತ್ ಶಾಕರ್ನಾಟಕಕಾಂಗ್ರೆಸ್ನವದೆಹಲಿಬಂಡಾಯಬಿಜೆಪಿರಾಹುಲ್ ಗಾಂಧಿಹಿಂದುಳಿದ ವರ್ಗ
Share197Tweet123Send
Previous Post

ಪಿಯು ಫಲಿತಾಂಶ: ರಾಜ್ಯಕ್ಕೆ 3ನೆಯ ರ‍್ಯಾಂಕ್ ಮುಡಿಗೇರಿಸಿಕೊಂಡ ಶುಭಶ್ರೀ

Next Post

ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು: ಮಾಜಿ ಡಿಸಿಎಂ ಈಶ್ವರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು: ಮಾಜಿ ಡಿಸಿಎಂ ಈಶ್ವರಪ್ಪ

ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು: ಮಾಜಿ ಡಿಸಿಎಂ ಈಶ್ವರಪ್ಪ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಸೇರಿದ ವಿಶ್ವಕಪ್ ವಿಜೇತ ನಾಯಕಿ ನಿಕಿ ಪ್ರಸಾದ್!

ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಸೇರಿದ ವಿಶ್ವಕಪ್ ವಿಜೇತ ನಾಯಕಿ ನಿಕಿ ಪ್ರಸಾದ್!

April 1, 2026
ಬೆಂಗಳೂರು ಎಫ್‌ಸಿ ತಂಡಕ್ಕೆ ಸಾವಿಯೊ ಮೆಡೈರಾ ಸೇರ್ಪಡೆ

ಬೆಂಗಳೂರು ಎಫ್‌ಸಿ ತಂಡಕ್ಕೆ ಸಾವಿಯೊ ಮೆಡೈರಾ ಸೇರ್ಪಡೆ

April 1, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು-ಹುಬ್ಬಳ್ಳಿ, ಬೀದರ್, ಮುಂಬೈ ಸೇರಿ 28 ರೈಲುಗಳ ಸಂಚಾರದಲ್ಲಿ ವ್ಯತ್ಯಯ

April 1, 2026
ಕೋಟಕ್ ಮಹೀಂದ್ರಾ ಬ್ಯಾಂಕ್ ನಾಯಕತ್ವ ಬದಲಾವಣೆ | ಸಿಇಓ ಆಗಿ ಸೂರಜ್ ರಾಜಪ್ಪನ್ ನೇಮಕ

ಕೋಟಕ್ ಮಹೀಂದ್ರಾ ಬ್ಯಾಂಕ್ ನಾಯಕತ್ವ ಬದಲಾವಣೆ | ಸಿಇಓ ಆಗಿ ಸೂರಜ್ ರಾಜಪ್ಪನ್ ನೇಮಕ

April 1, 2026
SWR to run special trains for Good Friday, Easter rush

ತಿರುಚ್ಚಿರಾಪಳ್ಳಿ-ಬೆಂಗಳೂರು ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

April 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL