ನವದೆಹಲಿ: ಲೋಕಸಭಾ ಚುನಾವಣೆಗೆ ಕೊನೆಯ ಹಂತದ ಮತದಾನಕ್ಕೆ ಬಹಿರಂಗ ಪ್ರಚಾರ ಅಂತ್ಯವಾದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಮಾಧ್ಯಮದವರ ಮೇಲೆ ಹರಿಹಾಯ್ದಿದ್ದಾರೆ.
ಮಾಧ್ಯಮದವರ ಕುರಿತಾಗಿ ಮಾತನಾಡಿರುವ ಅವರು, ನನಗೆ ನೀವು ಕಠಿಣ ಪ್ರಶ್ನೆಗಳನ್ನು ಕೇಳುತ್ತೀರಿ, ಆದರೆ ಪ್ರಧಾನಿ ನರೇಂದ್ರ ಮೋದಿಗೆ ನಿಮಗೆ ಮಾವಿನ ಹಣ್ಣು ಇಷ್ಟವಾ?’ ಎಂಬ ರೀತಿಯ ಲಘು ಪ್ರಶ್ನೆಗಳನ್ನು ಕೇಳುತ್ತೀರಿ ಏಕೆ ಎಂದು ಪ್ರಶ್ನಿಸಿದ್ದಾರೆ.
ಕೊನೆಗೂ ನೀವು (ಮೋದಿ) ರಫೇಲ್ ಫೈಟರ್ ಜೆಟ್ ಡೀಲ್ ಬಗ್ಗೆ ಬಹಿರಂಗ ಚರ್ಚೆಯ ನನ್ನ ಆಹ್ವಾನವನ್ನು ಸ್ವೀಕರಿಸಲೇ ಇಲ್ಲ ಎಂದು ಜರೆದ ರಾಹುಲ್, ಮಾಧ್ಯಮದವರು ನನಗೆ ಮಾತ್ರ ಕಠಿಣವಾದ ಪ್ರಶ್ನೆಗಳನ್ನು ಕೇಳುತ್ತಾರೆ. ಮತ್ತು ಮೋದಿಗೆ ಬಟ್ಟೆ ಮತ್ತು ಮಾವಿನ ಬಗ್ಗೆ ಪ್ರಶ್ನೆಗಳನ್ನು ಕೇಳುತ್ತೀರಾ ಎಂದರು.

















