ಕಲ್ಪ ಮೀಡಿಯಾ ಹೌಸ್ | ರಾಯಚೂರು |
ಸಿಂದನೂರಿನಲ್ಲಿಂದು ಪರಿಶಿಷ್ಟ ವರ್ಗದ ಮೆಟ್ರಿಕ್ ನಂತದ ವಿದ್ಯಾರ್ಥಿನಿಯರ ನಿಲಯವನ್ನು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಅವರು ಉದ್ಘಾಟಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಸಚಿವರು ವಿದ್ಯಾರ್ಥಿನಿಯರೊಂದಿಗೆ ಮುಕ್ತವಾಗಿ ಚರ್ಚಿಸಿದರು. ವಿದ್ಯಾರ್ಥಿಗಳಿಗೆ ದೊರಕುವ ಸೌಕರ್ಯ, ಸೌಲಭ್ಯ, ಊಟೋಪಚಾರದ ಗುಣಮಟ್ಟ, ಶಿಕ್ಷಣಕ್ಕೆ ಪೂಕರ ಸೌಲಭ್ಯಗಳ ಕುರಿತು ಚರ್ಚಿಸಿದರು.
ನಗರದ ಹೊರವಲಯದಲ್ಲಿರುವ ಈ ವಿದ್ಯಾರ್ಥಿನಿಲಯಲ್ಲಿ ಭದ್ರತೆಗಾಗಿ ಸಿ ಸಿ ಕ್ಯಾಮರಾ ಅಳವಡಿಸಲಾಗುವುದು. ಶುದ್ದ ಕುಡಿಯುವ ನೀರಿಗಾಗಿ ಆರ್ ಓ ಪ್ಲಾಂಟ್ ಅಳವಡಿಸಲಾಗಿದೆ. ಕೂಡು ರಸ್ತೆಯನ್ನು ಅಭಿವೃದ್ಧಿಗೆ ಕ್ರಮವಹಿಸಲಾಗುವುದು. ನಿಲಯಾರ್ಥಿಗಳು ಶಾಲೆ, ಕಾಲೇಜುಗಳಿಗೆ ಹೋಗಿ ಬರಲು ಅನುಕೂಲವಾಗುವಂತೆ ಸರ್ಕಾರಿ ಬಸ್ ವ್ಯವಸ್ಥೆಯನ್ನು ಕೂಡಲೇ ಕಲ್ಪಿಸುವಂತೆ ಸ್ಥಳದಲ್ಲೇ ಇದ್ದ ಎನ್ ಇ ಕೆಎಸ್ ಆರ್ ಟಿಸಿಯ ಡಿಸಿ ಯವರಿಗೆ ಸೂಚಿಸಿದರು. ಸಂದರ್ಭದಲ್ಲಿ ಶಾಸಕರಾದ ಶ್ರೀ ವೆಂಕಟರಾವ್ ನಾಡಗೌಡ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಶ್ರೀ ಪಿ.ಎಸ್. ಕಾಂತರಾಜ್ ಮತ್ತಿತರ ಅದಿಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post