No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Tuesday, April 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನಿಮ್ಮ ಕೆಟ್ಟ ರಾಜಕೀಯ ಆಟ ನಡೆಯಲ್ಲ: ಡಿಸಿಎಂ ಡಿಕೆಶಿ ವಿರುದ್ಧ ಮಾಜಿ ಪ್ರಧಾನಿ ದೇವೇಗೌಡ ಗುಡುಗು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 2, 2023
in ಬೆಂಗಳೂರು ನಗರ, ರಾಜಕೀಯ, ರಾಮನಗರ
0
ನಿಮ್ಮ ಕೆಟ್ಟ ರಾಜಕೀಯ ಆಟ ನಡೆಯಲ್ಲ: ಡಿಸಿಎಂ ಡಿಕೆಶಿ ವಿರುದ್ಧ ಮಾಜಿ ಪ್ರಧಾನಿ ದೇವೇಗೌಡ ಗುಡುಗು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ರಾಮನಗರ/ಬೆಂಗಳೂರು |

ಜೆಡಿಎಸ್ ಪಕ್ಷವನ್ನು ಶೂನ್ಯ ಮಾಡಿಬಿಡುತ್ತೇನೆ. ಅಲ್ಲಿ ಒಬ್ಬ ಸಮರ್ಥ ನಾಯಕನನ್ನು ಇರಲು ಬಿಡಲ್ಲ ಎಂದು ಹೇಳಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್.. DKShivakumar ನಿಮ್ಮ ಕಸನು ಈಡೇರುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರು HDDevegowda ಗುಡುಗಿದ್ದಾರೆ.

ಡಿಕೆ ಅವರೇ, ನಿಮ್ಮ ಕೆಟ್ಟ ರಾಜಕೀಯ ಆಟ ನನ್ನ ಬಳಿ ನಡೆಯಲ್ಲ. ಅದು ನಿಮಗೆ ಗೊತ್ತಿರಲಿ, ನಮ್ಮ ಪಕ್ಷವನ್ನು ಏನು ಮಾಡಲು ಸಾಧ್ಯವಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಬಿಡದಿಯ ಕೇತಿಗಾನಹಳ್ಳಿಯ ಹೆಚ್.ಡಿ.ಕುಮಾರಸ್ವಾಮಿ ಅವರ ತೋಟದಲ್ಲಿ ಜೆಡಿಎಸ್ ಪಕ್ಷದ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು, ಜಿಲ್ಲಾಧ್ಯಕ್ಷರು ಹಾಗೂ ಹಿರಿಯ ಮುಖಂಡರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ತಮ್ಮ ಮಾತಿನುದ್ಧಕ್ಕೂ ತಮ್ಮ ಪಕ್ಷವನ್ನು ದುರ್ಬಲಗೊಳಿಸಲು ಕುತಂತ್ರ ರೂಪಿಸಿರುವ ಡಿಕೆಶಿ ವಿರುದ್ಧ ಮಾಜಿ ಪ್ರಧಾನಿಗಳು ಹರಿಹಾಯ್ದರಲ್ಲದೆ, ಆ ವ್ಯಕ್ತಿಗೆ ಉತ್ತರ ಕೊಡಬೇಕು, ಕೊಡುವ ಕೆಲಸ ಮಾಡುತ್ತೇವೆ. ಇವತ್ತು ಕುಮಾರಸ್ವಾಮಿ ಅವರು ಗಟ್ಟಿಯಾದ ಸಂದೇಶ ಕೊಟ್ಟಿದ್ದಾರೆ ಎಂದರು.
ನಮ್ಮ ಪಕ್ಷವನ್ನು ದುರ್ಬಲಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಒಂದು ವೇಳೆ ಯಾರಾದರೂ ಹಾಗೆ ಭಾವಿಸಿದ್ದರೆ ಅದು ಅವರ ಭ್ರಮೆ ಅಷ್ಟೇ ಎಂದು ಎಂದು ಮಾಜಿ ಪ್ರಧಾನಿಗಳು ಹೇಳಿದರು.

ಈ ಸಭೆ ಬಹಳ ಚೆನ್ನಾಗಿ ನಡೆದಿದೆ. ಕುಮಾರಸ್ವಾಮಿ ಅವರಿಗೆ ಇವತ್ತು ಒಳ್ಳೆಯ ಸಂದೇಶ ನೀಡಿದ್ದಾರೆ. ಪಕ್ಷದ ಶಕ್ತಿ ಏನು ಎಂಬುದನ್ನು ಅವರು ತೋರಿಸಿಕೊಟ್ಟಿದ್ದಾರೆ. ಈ ಸಭೆಗೆ ಬಂದ ಎಲ್ಲರಿಗೂ ನನ್ನ ಕೃತಜ್ಞತೆಗಳು ಎಂದು ಭಾವುಕರಾಗಿ ನುಡಿದರು ಮಾಜಿ ಪ್ರಧಾನಿಗಳು.
ಬಹಳ ಆಕ್ರೋಶಭರಿತರಾಗಿ ಭಾಷಣ ಮಾಡಿದ ಮಾಜಿ ಪ್ರಧಾನಿಗಳು, ನಿಮ್ಮನ್ನು (ಕಾರ್ಯಕರ್ತರು) ನಂಬಿದ್ದೇನೆ. ಪಕ್ಷದ ಬೆಳೆವಣಿಗೆಗೆ ಒಳ್ಳೆಯ ನಿರ್ಧಾರ ಕೈಗೊಳ್ಳಲಾಗಿದೆ. ಹೊಸ ರಾಜಕೀಯ ಬೆಳವಣಿಗೆ ಆಗುತ್ತಿದೆ. ಈ ಬಗ್ಗೆ ಕೇಂದ್ರ ಗೃಹಮಂತ್ರಿ ಅವರನ್ನು ಭೇಟಿ ಮಾಡಿದ್ದೆ. ಸುದೀರ್ಘ ಚರ್ಚೆ ನಡೆಸಿದ್ದೇನೆ. ಅವರ ಜತೆ ಮೈತ್ರಿ ಬಗ್ಗೆ ಚರ್ಚೆ ಮಾಡಿದೆ ಎಂದು ಹೇಳಿದರು.

ಈ ರಾಜಕಾರಣ ಅಧಿಕಾರಕ್ಕಾಗಿ ಯಾವ ಮಟ್ಟಕ್ಕೆ ಬೇಕಾದರೂ ಹೋಗುತ್ತದೆ. ಆದರೆ, ನಾನೆಂದೂ ಅದನ್ನು ಕೆಳಮಟ್ಟಕ್ಕೆ ತೆಗೆದುಕೊಂಡು ಹೋಗಿಲ್ಲ. ಆದರೆ, ಕಾಂಗ್ರೆಸ್ ನವರು ರಾಜಕೀಯವನ್ನು ಅದೆಷ್ಟು ಕನಿಷ್ಠ ಮಟ್ಟಕ್ಕೆ ಇಳಿಸಬೇಕೋ ಅಷ್ಟು ಮಾಡಿದ್ದಾರೆ. ಸಿದ್ದಾಂತ ಎನ್ನುವುದು ಆ ಪಕ್ಷದಲ್ಲಿ ಇಂದಿರಾಗಾಂಧಿ ಅವರ ಕಾಲದಲ್ಲಿಯೇ ಮುಗಿದು ಹೋಯಿತು ಎಂದು ಅವರು ಟೀಕಾಪ್ರಹಾರ ನಡೆಸಿದರು.
ರಾಜಕೀಯವಾಗಿ ನನ್ನ ಜತೆ ಇದ್ದ ಅನೇಕರು ಐಶ್ವರ್ಯ ಹುಡುಕಿಕೊಂಡು ಎಲ್ಲೆಲ್ಲೋ ಹೋದರು, ಬೇರೆ ಬೇರೆ ಪಕ್ಷಗಳಿಗೆ ಹೊರಟು ಹೋದರು. ನಾನು ಇಲ್ಲಿಯೇ ಇದ್ದೇನೆ. ನನಗೇನೂ ಬೇಸರ ಇಲ್ಲ. ಈ ಇಳಿ ವಯಸ್ಸಿನಲ್ಲಿಯೂ ಪಕ್ಷವನ್ನು ಕಟ್ಟುತ್ತಿದ್ದೇನೆ ಎಂದರು ಅವರು.

Also read: ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದೇ ನನ್ನ ಗುರಿ: ಹೆಚ್.ಡಿ. ಕುಮಾರಸ್ವಾಮಿ

ಈ ದೇಶ ಮುಂದೆ ಏನಾಗುತ್ತೋ ಊಹೆ ಮಾಡಲಾಗಲ್ಲ. ಪಕ್ಕದಲ್ಲಿ ಪಾಕಿಸ್ತಾನ, ಚೀನಾ ಇದೆ, ದೂರದಲ್ಲಿ ಅಮೆರಿಕ, ರಷ್ಯಾ ಇದೆ. ಈ ದೇಶವನ್ನು ಉಳಿಸುವ ನಾಯಕತ್ವ ಬೇಕು ಎಂದು ಅವರು ಹೇಳಿದರು.
ಜೀವ ಲೆಕ್ಕಿಸದೆ ಕಾಶ್ಮೀರಕ್ಕೆ ಹೋದೆ:
ದೆಹಲಿಯಲ್ಲಿ ಕಾಂಗ್ರೆಸ್ ನವರು ಅನೇಕ ವರ್ಷ ಆಡಳಿತ ನಡೆದರು. ಒಮ್ಮೆಯೂ ಯಾವ ಪ್ರಧಾನಿಯೂ ಕಾಶ್ಮೀರದ ಕಡೆ ತಲೆ ಹಾಕಿ ಮಲಗಲಿಲ್ಲ. ಕೊನೆಗೆ ನಾನು ಹೋದೆ. ಅಧಿಕಾರಿಗಳು ಬೇಡವೇ ಬೇಡ ಎಂದರು. ಭಯೋತ್ಪಾದಕರು ಹೊಡೆದು ಹಾಕುತ್ತಾರೆ ಎಂದು ಎಷ್ಟೋ ಹೇಳಲು ಪ್ರಯತ್ನ ಮಾಡಿದರು. ಆದರೂ ನಾನು ಜೀವ ಲೆಕ್ಕಿಸದೆ ನಾನು ಕಣಿವೆ ರಾಜ್ಯಕ್ಕೆ ಭೇಟಿ ನೀಡಿದೆ. ದೇಶದ ಹಿತಾಸಕ್ತಿ ನನಗೆ ಮುಖ್ಯವಾಗಿತ್ತು. ಆ ರಾಜ್ಯದಲ್ಲಿ ಚುನಾವಣೆ ನಡೆಸಿದೆ. 12 ವರ್ಷಗಳ ನಂತರ ಅಲ್ಲಿ ಚುನಾವಣೆ ನಡೆದು ಸರಕಾರ ಅಧಿಕಾರಕ್ಕೆ ಬಂತು. ಲಂಡನ್ ನಲ್ಲಿ ಇದ್ದ ಫಾರೂಖ್ ಅಬ್ದುಲ್ಲಾ ಅವರು ಬಂದು ಚುನಾವಣೆ ಗೆದ್ದು ಸಿಎಂ ಆದರು. ಇದು ನಾನು ಮಾಡಿದ ತಪ್ಪೇ? ಎಂದು ಮಾಜಿ ಪ್ರಧಾನಿಗಳು ಪ್ರಶ್ನೆ ಮಾಡಿದರು.

ಧಾರ್ಮಿಕ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಎಷ್ಟು ಮಾಡಿದೆ, ನಾನು ಏನು ಮಾಡಿದೀನಿ ಎಂಬ ಬಗ್ಗೆ ಚರ್ಚೆ ನಡೆಯಲಿ. ಉತ್ತರ ಸಿಗುತ್ತದೆ ಎಂದು ಅವರು ಸವಾಲು ಹಾಕಿದರು.
ಪಕ್ಷವನ್ನು ಕಟ್ಟುತ್ತೇನೆ, ಈ ಜೀವ ಇರುವವರೆಗೂ ಪಕ್ಷಕ್ಕಾಗಿ ದುಡಿಯುತ್ತೇನೆ, ಎಲ್ಲ ಕಡೆ ಹೋರಾಟ ಮಾಡುತ್ತೇನೆ
ನನ್ನ ಆರೋಗ್ಯವನ್ನು ಲೆಕ್ಕ ಮಾಡುವುದಿಲ್ಲ ಎಂದ ಅವರು; ಉತ್ತರ ಕರ್ನಾಟಕದ ಜನತೆಗೆ ಒಳ್ಳೆಯದು ಮಾಡಿದ್ದೇನೆ. ಶಿವಶರಣರ ಕೈಲಿ ಅನ್ನ ಉಂಡಿದ್ದೇನೆ. ಆ ಋಣವನ್ನು ತೀರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ಗದ್ಗದಿತರಾರು ಅವರು.

ಇಬ್ರಾಹಿಂ ಬಗ್ಗೆ ಲಘುವಾಗಿ ಮಾತನಾಡಲ್ಲ:
ಇಬ್ರಾಹಿಂ ಬಗ್ಗೆ ನಾನು ಲಘುವಾಗಿ ಮಾತನಾಡಲಿಲ್ಲ ಎನ್ನುತ್ತಲೇ, ಭದ್ರಾವತಿ ದಿನಗಳನ್ನು ನೆನಪು ಮಾಡಿಕೊಂಡರು ಗೌಡರು. ಒಂದು ಸನ್ಮಾನಕ್ಕೆ ಎಂದು ಅಲ್ಲಿಗೆ ಹೋದೆ, ಅಲ್ಲಿ ನನಗೆ ಸನ್ಮಾನದ ಜತೆ ಇಬ್ರಾಹಿಂ ಅವರು ಸಿಕ್ಕಿದರು, ಕರೆದುಕೊಂಡು ಬಂದು ಯುವ ಜನತಾದಳ ಅಧ್ಯಕ್ಷರನ್ನಾಗಿ ಮಾಡಿದೆ. ಈ ಸಭೆಗೆ ಅವರನ್ನು ಕರೆ ತರಲು ತಿಪ್ಪೇಸ್ವಾಮಿ ಅವರು ಬಹಳ ಪ್ರಯತ್ನಪಟ್ಟರು ಎಂದು ಅವರು ಹೇಳಿದರು.

http://kalpa.news/wp-content/uploads/2023/05/VID-20230516-WA0005.mp4

ಜೀವನ ಪರ್ಯಂತ ಒಳ್ಳೆಯ ಬದುಕಿಗೆ ಗಾರಂಟಿ ಕೊಡುತ್ತೇನೆ ಎಂದು ಹೇಳಿದ ಕುಮಾರಸ್ವಾಮಿ ಅವರನ್ನು ಸೋಲಿಸಿದ್ದು ಬಹಳ ನೋವುಂಟು ಮಾಡಿದೆ. ಈ ಸರ್ಕಾರ ಕೊಟ್ಟಿರುವ ಗ್ಯಾರಂಟಿಗಳಿಂದ ಏನು ಆಗುತ್ತದೆ ಎನ್ನುವುದು ನನಗೆ ಗೊತ್ತಿದೆ. ಉತ್ತಮ ಬದುಕಿಗೆ ಶಾಶ್ವತ ಪರಿಹಾರ ನೀಡುವ ನಿಟ್ಟಿನಲ್ಲಿ ಕುಮಾರಸ್ವಾಮಿ ಪ್ರಾಮಾಣಿಕವಾಗಿ ಕೆಲಸ ಮಾಡಿದರು. ನಾವು ನಿರಾಶೆ ಪಡಬೇಕಿಲ್ಲ. ಒಳ್ಳೆಯ ದಿನಗಳು ಬರುತ್ತವೆ ಎಂದು ಮಾಜಿ ಪ್ರಧಾನಿಗಳು ಹೇಳಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaRamanagara/Bangaloreರಾಮನಗರ/ಬೆಂಗಳೂರು
Share196Tweet123Send
Previous Post

ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದೇ ನನ್ನ ಗುರಿ: ಹೆಚ್.ಡಿ. ಕುಮಾರಸ್ವಾಮಿ

Next Post

ಶಿವಮೊಗ್ಗ ಈದ್ ಮೆರಣಿಗೆಯಲ್ಲಿ ಕತ್ತಿ, ಗುರಾಣಿ ಹಿಡಿದಿರಲಿಲ್ಲ: ಗೃಹ ಸಚಿವರ ಸ್ಪಷ್ಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಂಧಿತರನ್ನು ಈಗಲೇ ಉಗ್ರರು ಎಂದು ಹೇಳಲು ಆಗಲ್ಲ: ಗೃಹ ಸಚಿವ ಪರಮೇಶ್ವರ್

ಶಿವಮೊಗ್ಗ ಈದ್ ಮೆರಣಿಗೆಯಲ್ಲಿ ಕತ್ತಿ, ಗುರಾಣಿ ಹಿಡಿದಿರಲಿಲ್ಲ: ಗೃಹ ಸಚಿವರ ಸ್ಪಷ್ಟನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ರಾಜಕೀಯ ಸ್ವಾರ್ಥಕ್ಕಾಗಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ: ಚರ್ಚೆಗೆ ಕಿಮ್ಮನೆ ರತ್ನಾಕರ್ ಪಂಥಾಹ್ವಾನ

ರಾಜಕೀಯ ಸ್ವಾರ್ಥಕ್ಕಾಗಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ: ಚರ್ಚೆಗೆ ಕಿಮ್ಮನೆ ರತ್ನಾಕರ್ ಪಂಥಾಹ್ವಾನ

April 21, 2026
ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ಖಂಡಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ಖಂಡಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

April 21, 2026
ಪಾರ್ವತಮ್ಮ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ | ಯುಜಿಡಿ, ರಸ್ತೆ ಸಮಸ್ಯೆ ಪರಿಹಾರಕ್ಕೆ ಸೂಚನೆ

ಪಾರ್ವತಮ್ಮ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ | ಯುಜಿಡಿ, ರಸ್ತೆ ಸಮಸ್ಯೆ ಪರಿಹಾರಕ್ಕೆ ಸೂಚನೆ

April 21, 2026
ಇಂಡಿಯನ್ ರೇಸಿಂಗ್ ಲೀಗ್’ನಲ್ಲಿ ಮೂರನೇ ಸ್ಥಾನ ಪಡೆದ ಕಿಚ್ಚ ಸುದೀಪ್ ತಂಡ!

ಇಂಡಿಯನ್ ರೇಸಿಂಗ್ ಲೀಗ್’ನಲ್ಲಿ ಮೂರನೇ ಸ್ಥಾನ ಪಡೆದ ಕಿಚ್ಚ ಸುದೀಪ್ ತಂಡ!

April 21, 2026
ಭಾರತೀಯ ಸನಾತನ ಧರ್ಮವನ್ನು ರಕ್ಷಿಸಿದವರು ಆದಿ ಶಂಕರಾಚಾರ್ಯರು: ಸುರೇಶ್ ಋಗ್ವೇದಿ

ಭಾರತೀಯ ಸನಾತನ ಧರ್ಮವನ್ನು ರಕ್ಷಿಸಿದವರು ಆದಿ ಶಂಕರಾಚಾರ್ಯರು: ಸುರೇಶ್ ಋಗ್ವೇದಿ

April 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL