No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Wednesday, July 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ರಾಯಚೂರು

ಜೋಡೆತ್ತು ಎಂದವರು ನಡುರಸ್ತೆಯಲ್ಲಿ ಕೈ ಬಿಟ್ಟರು: ಡಿಸಿಎಂ ಡಿಕೆಶಿ ವಿರುದ್ಧ ಹೆಚ್‌ಡಿಕೆ ಆಕ್ರೋಶ

kalpa News by kalpa News
October 9, 2023
in ರಾಯಚೂರು, ರಾಜಕೀಯ
0
ಸಾಂವಿಧಾನಿಕ ಮೌಲ್ಯಗಳನ್ನು ಕಸಕ್ಕೆ ಸಮ ಎಂದುಕೊಂಡಿದೆ ಕಾಂಗ್ರೆಸ್: ಮಾಜಿ ಸಿಎಂ ಎಚ್’ಡಿಕೆ ಕಿಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ರಾಮನಗರ |

ಪಬ್ಲಿಕ್ ನಲ್ಲಿ ನನ್ನ ಕೈ ಮೇಲೆ ಎತ್ತಿ ಜೋಡೆತ್ತು ಎಂದು ಹೇಳಿದ ನಯವಂಚಕ ಮಾತುಗಳನ್ನು ನಂಬಿ ಮೋಸ ಹೋದೆ. ಆಮೇಲೆ ಅವರು ನನ್ನನ್ನು ನಡು ರಸ್ತೆಯಲ್ಲಿ ಕೈ ಬಿಟ್ಟು ಎತ್ತು, ಗಾಡಿಯೊಂದಿಗೆ ಪಲಾಯನ ಮಾಡಿದರು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ HDKumaraswamy ಅವರು ಪರೋಕ್ಷವಾಗಿ ಡಿ.ಕೆ. ಶಿವಕುಮಾರ್ DKShivakumar ಅವರ ವಿರುದ್ಧ ಹರಿಹಾಯ್ದರು.

ಬಿಡದಿಯ ತಮ್ಮ ತೋಟದಲ್ಲಿ ನಡೆದ ರಾಮನಗರ ಜಿಲ್ಲಾ ಜೆಡಿಎಸ್ ಮುಖಂಡರ ಸಭೆಯಲ್ಲಿ ಅವರು ಮಾತನಾಡಿ, 2018 ಸರ್ಕಾರ ಹೋಗಿದ್ದು ಡಿ.ಕೆ. ಶಿವಕುಮಾರ್ ಅವರಿಂದಲೇ ಹೊರತು ನನ್ನಿಂದ ಅಲ್ಲ. ನನಗೂ ರಮೇಶ್ ಜಾರಕಿಹೊಳಿ ಅವರಿಗೂ ವೈಷಮ್ಯ ಇತ್ತಾ? ಬೆಳಗಾವಿ ಡಿಸಿಸಿ ಬ್ಯಾಂಕ್ ರಾಜಕೀಯಕ್ಕೆ ನಾನು ಬಲಿಪಶುವಾದೆ. ಅವರು ಬೆಳಗಾವಿ ರಾಜಕೀಯಕ್ಕೆ ಕೈಹಾಕಿದ್ದು ಯಾಕೆ? ನಾನು ಕುಮಾರಣ್ಣನ ಸರ್ಕಾರ ಉಳಿಸೋಕೆ ಪ್ರಾಮಾಣಿಕ ಪ್ರಯತ್ನ ಮಾಡಿದೆ ಎಂದು ಮೊಸಳೆ ಕಣ್ಣೀರು ಹಾಕಿ ಪ್ರಚಾರ ತೆಗೆದುಕೊಂಡರು. ಆಮೇಲೆ ನೋಡಿದರೆ ಒಳಗೊಳಗೇ ಮಾಡುವುದೆಲ್ಲವನ್ನು ಮಾಡಿದರು ಎಂದು ಕುಮಾರಸ್ವಾಮಿ ಅವರು ಹೇಳಿದರು.
ಸಭೆಯಲ್ಲಿ ಕನಕಪುರ ಕ್ಷೇತ್ರದ ಮುಖಂಡರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಅವರನ್ನು ನಂಬಿ ನಾನು ಕುತ್ತಿಗೆ ಕುಯ್ದುಕೊಂಡಿದ್ದೇನೆ, ನಿಮ್ಮ ಕುತ್ತಿಗೆಯನ್ನು ಕುಯ್ದಿದ್ದೇನೆ. ಅವರಿಂದ ನನಗೆ, ನಿಮಗೆ ಅನ್ಯಾಯ ಆಗಿದೆ. ಅದನ್ನು ಬಿಟ್ಟರೆ ಕನಕಪುರ ಜನರಿಗೆ ನನ್ನಿಂದ ಎಳ್ಳಷ್ಟೂ ಅನ್ಯಾಯ ಆಗಿಲ್ಲ. ಆಗಿರುವ ಅನ್ಯಾಯ ಸರಿ ಮಾಡುವ ಹೊಣೆ ನನ್ನದು ಎಂದು ಡಿಕೆಶಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೋಟೆ ಕಟ್ಟಿ ಮೆರೆದೋರೆಲ್ಲ ಏನೇನೋ ಆಗಿ ಹೋದರು. ಅದು ಇವರಿಗೂ ಅನ್ವಯ ಆಗುತ್ತದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ 2ರಿಂದ 3 ಲಕ್ಷ ಮತಗಳ ಅಂತರದಲ್ಲಿ ಗೆಲ್ಲಬೇಕು. ಅದಕ್ಕೆ ನೀವೆಲ್ಲರೂ ಶ್ರಮ ಹಾಕಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಈ ಮೈತ್ರಿಕೂಟದ ಮೂಲಕ ಇಡೀ ರಾಜ್ಯಕ್ಕೆ ದೇಶಕ್ಕೆ ನಾವು ಒಳ್ಳೆಯ ಸಂದೇಶ ಕೊಡಬೇಕು ಎಂದರು.
ನಾವೆಲ್ಲರೂ ನಂಬಿಕೆ, ವಿಶ್ವಾಸ, ಪ್ರಾಮಾಣಿಕತೆಯಿಂದ ಕೆಲಸ ಮಾಡೋಣ. ಯಾರೇ ಮೈತ್ರಿಕೂಟದ ಅಭ್ಯರ್ಥಿ ಆದರೂ ನಾವು ಒಟ್ಟಾಗಿ ಕೆಲಸ ಮಾಡೋಣ. ಮಂಡ್ಯ ಚುನಾವಣೆಯಲ್ಲಿ ನಿಖಿಲ್ ಅವರಿಗೆ ಮೋಸ ಮಾಡಿದ ಹಾಗೆ ಇಲ್ಲಿಯೂ ನಾವು ಮಾಡಿದ್ದಿದ್ದರೆ ಆ ವ್ಯಕ್ತಿ (ಡಿ.ಕೆ.ಸುರೇಶ್) ಯ ಕಥೆ ಅಂದೇ ಮುಗಿದು ಹೋಗುತ್ತಿತ್ತು. ಆದರೆ, ನಾವು ಮೈತ್ರಿ ಧರ್ಮ ಪಾಲಿಸಿದೆವು. ಅವರು ನಮಗೆ ಕೇಡು ಬಗೆದರು ಎಂದರು ಕುಮಾರಸ್ವಾಮಿ.

ಈ ಸರ್ಕಾರದ ಪಾಪದ ಕೊಡ ತುಂಬುತ್ತಿದೆ. ಇಷ್ಟು ಕೆಟ್ಟ ಸರ್ಕಾರವನ್ನು ನಾನು ನೋಡಿಯೇ ಇಲ್ಲ. ಆಂತರಿಕ ಕಚ್ಚಾಟದಿಂದ ಈ ಸರ್ಕಾರ ಹೋಗುತ್ತದೆ. 2024ರಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುವುದು ಖಚಿತ. ಆ ಚುನಾವಣೆಗೆ ಆ ವ್ಯಕ್ತಿ ಅಭ್ಯರ್ಥಿ ಆಗುವುದೇ ಅನುಮಾನ, ಏನು ಆಗುತ್ತದೆ ಎನ್ನುವುದು ನನಗೆ ಗೊತ್ತಿದೆ ಎಂದು ಡಿಕೆಶಿ ಮೇಲೆ ವಾಗ್ದಾಳಿ ನಡೆಸಿದರು.
ಜೀವನದಲ್ಲಿ ಅವರ (ಡಿಕೆಶಿ) ಜತೆ ಎಂದೂ ರಾಜಿ ಆಗಿಲ್ಲ. ಒಮ್ಮೆ ಅವರ ಜತೆ ಸರ್ಕಾರ ಮಾಡಿದ್ದರಿಂದ ನಾನು ಈಗಲೂ ನೋವು ಅನುಭವಿಸ್ತಾ ಇದ್ದೇನೆ. ಅವರು ಒಮ್ಮೆ ತಿಹಾರ್ ನೋಡಿಕೊಂಡು ಬಂದಿದ್ದಾರೆ. ಅವರು ಮತ್ತೆ ಅಲ್ಲಿಗೆ ಪರಮನೆಂಟಾಗಿ ಹೋದರೂ ಅಚ್ಚರಿ ಅಲ್ಲ. ನಮ್ಮನ್ನು ಹಾಸನಕ್ಕೆ ಓಡಿಸಬಹುದು, ಅವರರು ತಿಹಾರ್ ಗೆ ಓಡುವ ಕಾಲ ಹತ್ತಿರದಲ್ಲಿ ಇದೆ ಎಂದು ಮಾರ್ಮಿಕವಾಗಿ ನುಡಿದರು.

Also read: ರಾಗಿಗುಡ್ಡ ಗಲಭೆ | ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಮಾಜಿ ಪಿಎಂ ದೇವೇಗೌಡ ಹೇಳಿದ್ದೇನು?

ಶಾಮನೂರು ಶಿವಶಂಕರಪ್ಪನವರು ಧೈರ್ಯವಾಗಿ ಮಾತನಾಡಿದ್ದಾರೆ
ವೀರಶೈವ ಲಿಂಗಾಯತರಿಗೆ ಎಷ್ಟು ಸ್ಥಾನ ಕೊಟ್ಟಿದ್ದೇವೆ ಎಂದು ಸಂಖ್ಯೆ ಹೇಳುವುದಲ್ಲ, ಯಾವ ಸ್ಥಾನ ಕೊಟ್ಟಿದ್ದೀರಿ ಎನ್ನುವುದು ಮುಖ್ಯ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟರು.
ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡುತ್ತಾ; ಶಾಮನೂರು ಶಿವಶಂಕರಪ್ಪನವರು ತಮ್ಮ ಅಭಿಪ್ರಾಯವನ್ನು ಧೈರ್ಯವಾಗಿ ಹೇಳಿದ್ದಾರೆ. ಇಲ್ಲಿ ಸಂಖ್ಯೆಗಿಂತ ಇಲಾಖೆಯಲ್ಲಿ ಯಾವ್ಯಾವ ಅಧಿಕಾರಿಗೆ ಯಾವ ಇಲಾಖೆ ಕೊಟ್ಟಿದ್ದಾರೆ ಎಂಬುದು ಮುಖ್ಯ. ಕೆಲಸಕ್ಕೆ ಬಾರದ ಜಾಗ ಕೊಟ್ಟು, ಇಂತಹ ಸಮುದಾಯಕ್ಕೆ ಇಷ್ಟು ಸಂಖ್ಯೆ ಕೊಟ್ಟಿದ್ದೇವೆ ಎಂದರೆ ಅದರಿಂದ ಏನು ಉಪಯೋಗ? ಅವರು ಧೈರ್ಯವಾಗಿ ಹೇಳಿದ್ದಾರೆ ಎಂದರು ಮಾಜಿ ಮುಖ್ಯಮಂತ್ರಿಗಳು.

ಹಲವಾರು ಸಮುದಾಯಗಳಿಗೂ ಪರಿಸ್ಥಿತಿ ಏನಾಗಿದೆ ಎನ್ನುವುದು ಗೊತ್ತಿದೆ. ಆ ಮಾನದಂಡ ಏನಿದೆ ಎಂಬುದು ಕೂಡ ನನಗೆ ಗೊತ್ತಿದೆ. ಅಧಿಕಾರಿಗಳು ಮತ್ತು ನೌಕರರ ವರ್ಗದವರಲ್ಲಿ ಅಸಮಾಧಾನ ಇದೆ. ಇದು ಚುನಾವಣೆಯ ಸಂದರ್ಭದಲ್ಲಿ ಸ್ಫೋಟಗೊಳ್ಳಲಿದೆ ಎಂದು ಅವರು ತಿಳಿಸಿದರು

ವರದಿ: ಡಿ.ಎಲ್. ಹರೀಶ್, ಬೆಂಗಳೂರು

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaRamanagaraರಾಮನಗರ
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಗಿಗುಡ್ಡ ಗಲಭೆ | ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಮಾಜಿ ಪಿಎಂ ದೇವೇಗೌಡ ಹೇಳಿದ್ದೇನು?

Next Post

ಮುಂದಿನ 2 ವರ್ಷಗಳಲ್ಲಿ ಎಡಪಂಥೀಯ ಉಗ್ರವಾದವನ್ನು ಸಂಪೂರ್ಣ ನಿರ್ಮೂಲನೆ ಮಾಡಲಾಗುವುದು: ಅಮಿತ್ ಶಾ ಪ್ರತಿಜ್ಞೆ

kalpa News

kalpa News

Next Post
ಮುಂದಿನ 2 ವರ್ಷಗಳಲ್ಲಿ ಎಡಪಂಥೀಯ ಉಗ್ರವಾದವನ್ನು ಸಂಪೂರ್ಣ ನಿರ್ಮೂಲನೆ ಮಾಡಲಾಗುವುದು: ಅಮಿತ್ ಶಾ ಪ್ರತಿಜ್ಞೆ

ಮುಂದಿನ 2 ವರ್ಷಗಳಲ್ಲಿ ಎಡಪಂಥೀಯ ಉಗ್ರವಾದವನ್ನು ಸಂಪೂರ್ಣ ನಿರ್ಮೂಲನೆ ಮಾಡಲಾಗುವುದು: ಅಮಿತ್ ಶಾ ಪ್ರತಿಜ್ಞೆ

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL