ಕಲ್ಪ ಮೀಡಿಯಾ ಹೌಸ್ | ರಾಮನಗರ |
ಕರ್ನಾಟಕದಲ್ಲಿ ಎನ್’ಡಿಎಗೆ 28 ಸ್ಥಾನಗಳನ್ನು ಗೆಲ್ಲಿಸಿಕೊಟ್ಟರೆ ಮೋದಿಯವರ ಕೈ ಹಿಡಿದು ಮೇಕೆದಾಟು ಯೋಜನೆಗೆ ಸಹಿ ಹಾಕಿಸುತ್ತೇನೆ ಎಂದು ಮಾಜಿ ಸಿಎಂ ಎಚ್.ಡಿ. ದೇವೇಗೌಡ #H D Devegowda ಭರವಸೆ ನೀಡಿದ್ದಾರೆ.
ತಮ್ಮ ಅಳಿಯ, ಮೈತ್ರಿ ಅಭ್ಯರ್ಥಿ ಡಾ. ಮಂಜುನಾಥ್ #Dr. Manjunath ಅವರ ಪರವಾಗಿ ಹಾರೋಹಳ್ಳಿಯಲ್ಲಿ ಪ್ರಚಾರ ನಡೆಸಿದ ವೇಳೆ ಅವರು ಮಾತನಾಡಿದರು.
ಕಾವೇರಿ #Kaveri ನದಿ ನೀರಿನ ಸಮಸ್ಯೆ ಬಗೆಹರಿಸುವುದಾಗಿ ಮೋದಿ #Modi ಭರವಸೆ ನೀಡಿದ್ದು, ಮೊನ್ನೆ ಚಿಕ್ಕಬಳ್ಳಾಪುರದಲ್ಲಿ ನನಗೆ ಭರವಸೆ ನೀಡಿದ್ದಾರೆ. ನಾನೂ ಅವರಿಗೆ ಒಂದು ಮಾತು ಕೊಟ್ಟಿದ್ದು, ರಾಜ್ಯದಲ್ಲಿ 28 ಸ್ಥಾನ ಗೆದ್ದು ಕೊಡುವ ಮಾತು ಕೊಟ್ಟಿದ್ದೇನೆ. ಅದಕ್ಕಾಗಿ ಈ ವಯಸ್ಸಿನಲ್ಲೂ ರಾಜ್ಯದಾದ್ಯಂತ ಪ್ರವಾಸ ಮಾಡುತ್ತಿದ್ದೇನೆ. ನೀವು 28 ಸ್ಥಾನಗಳನ್ನು ನೀಡಿದರೆ ಮೋದಿ ಕೈಹಿಡಿದು ಮೇಕೆದಾಟಿಗೆ ಸಹಿ ಹಾಕಿಸುತ್ತೇನೆ ಎಂದು ಭರವಸೆ ನೀಡಿದರು.
Also read: ಕೈಕೊಟ್ಟ ಸುಮಲತಾ? ಏಕಾಏಕಿ ಮಂಡ್ಯ ಪ್ರಚಾರ ರದ್ದು | ಬೆಂಗಳೂರಿನಲ್ಲೇ ವಾಸ್ತವ್ಯ
ನನಗೆ ಕನಕಪುರ ಹೊಸದಲ್ಲ. ಹಿಂದೆ ನನ್ನ ವಿರುದ್ಧ ತೇಜಸ್ವಿನಿ ಎಂಬ ಹೆಣ್ಣುಮಗಳನ್ನು ನಿಲ್ಲಿಸಿ ಸೋಲಿಸಿದ್ದರು. ಮತ್ತೆ ಅದೇ ಲೋಕಸಭಾ ಕ್ಷೇತ್ರದಲ್ಲಿ ಗೆದ್ದು ಪ್ರಧಾನಿ ಆಗಿದ್ದೆ. ನನ್ನನ್ನ ಪ್ರಧಾನಿ ಮಾಡಿದ್ದು ಇದೇ ಕ್ಷೇತ್ರದ ಮಹಾಜನತೆ ಎಂದು ನೆನಪಿಸಿಕೊಂಡರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post