ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಲಾಕ್ಡೌನ್ ಸಂದರ್ಭದಲ್ಲಿ ಕೆಲವು ವ್ಯಾಪಾರಿಗಳು ಎಂಆರ್ಪಿ ದರಕ್ಕಿಂತ ಹೆಚ್ಚಿನ ದರ ವಿಧಿಸುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳು ಇಂದು ದಿಢೀರ್ ತಪಾಸಣೆ ನಡೆಸಿದರು.
ಸಿಮೆಂಟ್, ಸ್ಟೀಲ್, ಹಾರ್ಡ್ವೇರ್ ಅಂಗಡಿಗಳು, ದಿನಬಳಕೆ ಮಾರಾಟ ಅಂಗಡಿಗಳಿಗೆ ಭೇಟಿ ನೀಡಿ ಪರೀಕ್ಷಾರ್ಥ ಖರೀದಿ ನಡೆಸಿದ ಸಂದರ್ಭದಲ್ಲಿ ನಗದು ಬಿಲ್ಲು ನೀಡದೆ, ನೇರವಾಗಿ ನಗದು ಸಂಗ್ರಹಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ವಾಣಿಜ್ಯ ತೆರಿಗೆ ಅಧಿಕಾರಿಗಳು ನೊಟೀಸ್ ಜಾರಿ ಮಾಡಿದ್ದಾರೆ.
ಶಿವಮೊಗ್ಗ ನಗರ, ಆಯನೂರು ಹಾಗೂ ಸಾಗರ ಸುತ್ತಮುತ್ತ 10ಕ್ಕೂ ಅಧಿಕ ಮಳಿಗೆಗಳಿಗೆ ವಾಣಿಜ್ಯ ತೆರಿಗೆ ಅಧಿಕಾರಿಗಳು ತಪಾಸಣೆ ನಡೆಸಿದ್ದು, ಕರ್ನಾಟಕ ಸರಕು ಮತ್ತು ಸೇವಾ ತೆರಿಗೆ ಕಾಯ್ದೆ 2017 ಪ್ರಕರಣ 67(4) ಅಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದು. ನಗದು ಬಿಲ್ಲು ನೀಡದ ಪ್ರಕರಣಗಳಲ್ಲಿ ಸಾರ್ವನಿಕರು ದೂರು ನೀಡಬಹುದಾಗಿದೆ ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತ (ಜಾರಿ) ಎಚ್.ಜಿ. ಪವಿತ್ರ ತಿಳಿಸಿದ್ದಾರೆ.
Get in Touch With Us info@kalpa.news Whatsapp: 9481252093





Discussion about this post