Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ದುಬೈ ಭಕ್ತರಿಗೂ ರಾಯರ ದರ್ಶನ ಭಾಗ್ಯ | ಸೆ. 8ರಂದು ರಾಘವೇಂದ್ರ ಸ್ವಾಮಿಗಳ ಆರಾಧನಾ ಉತ್ಸವ

ಕಳೆಗಟ್ಟಲಿದೆ ಅಜ್ಮಾನ್ ಇಂಡಿಯನ್ ಅಸೋಸಿಯೇಷನ್ ಸಭಾಂಗಣ | ವಿಜಯ್, ಮಧು, ಸಾಧನ್ ದಾಸ್ ಸಾರಥ್ಯ

September 5, 2023
in Special Articles
0 0
0
Share on facebookShare on TwitterWhatsapp
Read - 4 minutes

ಕಲ್ಪ ಮೀಡಿಯಾ ಹೌಸ್  |  ಲೇಖನ: ರಘುರಾಮ  |

ಅರಬ್ #Arab ರಾಷ್ಟ್ರದ ದುಬೈನ #Dubai ಅಜ್ಮಾನ್ ಇಂಡಿಯನ್ ಅಸೋಸಿಯೇಷನ್‌ನಲ್ಲಿ ಸೆ. 8ರ ಶುಕ್ರವಾರ ಯತಿಶ್ರೇಷ್ಠರೆಂದೇ ಪರಿಚಿತರಾದ ಶ್ರೀ ರಾಘವೇಂದ್ರ ಗುರುಸಾರ್ವಭೌಮರ 352 ನೇ ಆರಾಧನಾ ಮಹೋತ್ಸವದ ಅಂಗವಾಗಿ ವಿಶೇಷ ಧಾರ್ಮಿಕ ಮಹೋತ್ಸವ ಆಯೋಜನೆಗೊಂಡಿದೆ. ಇದಕ್ಕೆ ಶ್ರೀ ರಾಘವೇಂದ್ರ ಸ್ವಾಮಿಗಳೇ ಪ್ರಧಾನರು. ಸಾಗರದ ಆಚೆ ಇರುವ ರಾಯರ ಸೇವಕರು ಒಂದೆಡೆ ಮಿಲನಗೊಂಡು ಭಕ್ತಿ ಭಾವದಿಂದ ಈ ಮಹೋತ್ಸವವನ್ನು ಸಂಪನ್ನಗೊಳಿಸಲು ಈಗ ಸಂಭ್ರಮದಿಂದಲೇ ಅಣಿಯಾಗಿದ್ದಾರೆ. ಶ್ರೀ ರಾಘವೇಂದ್ರ ಸೇವಾ ಸಮಿತಿ ಯುಎಇ #UAE ನೇತೃತ್ವದಲ್ಲಿ ನಡೆಯಲಿರುವ ಆರಾಧನಾ ಮಹೋತ್ಸವದ ಶುಭ ಸಂದರ್ಭದಲ್ಲಿ ಒಂದು ವಿಶೇಷ ಲೇಖನ…

ಎತ್ತಣ ಮಾಮರ, ಎತ್ತಣ ಕೋಗಿಲೆ, ಎತ್ತಣ ರಾಘವೇಂದ್ರ ಗುರು ಸಾರ್ವಭೌಮರು-ಎಲ್ಲಿಯ ದುಬೈ….. ಇದೇನು ಸಂಬಂಧ ಎಂದು ಎಣಿಸಬೇಡಿ. ರಾಯರ ಹೆಸರೊಂದೇ ಈ ಎಲ್ಲ ಸಂಬಂಧವನ್ನು ಜೋಡಿಸಿ, ಸಾವಿರಾರು ಮೈಲು ದೂರದಲ್ಲಿರುವ ಭಾರತೀಯ ಮೂಲದ ಭಕುತರನ್ನು ಒಂದುವೇದಿಕೆಯಡಿ ಬಂಧಿಸಿದೆ. ಅದೂ ಪ್ರೀತಿಯಿಂದ, ವಿಶ್ವಾಸದಿಂದ ಮತ್ತು ರಾಯರ ಬಗ್ಗೆ ಇರುವ ಅಪಾರ ಭಕ್ತಿ, ಶ್ರದ್ಧೆಗಳಿಂದ….

ರಾಯರ ಅನನ್ಯ ಸೇವಕರು ಮತ್ತು ಆರಾಧನೆ ರೂವಾರಿಗಳಾದ ವಿಜಯ್ ಮತ್ತು ಮಧು ಗೌಡರ್

ಗಗನಚುಂಬಿ ಕಟ್ಟಡಗಳ ನಗರ ಹಾಗೂ ವಿದೇಶಿ ಪ್ರವಾಸಿಗರ ಅಚ್ಚುಮೆಚ್ಚಿನ ತಾಣವೆಂದೇ ಹೆಸರಾಗಿರುವ ದುಬೈ #Dubai ನಗರಕ್ಕೆ ಈಗ ಮತ್ತೊಂದು ಆಕರ್ಷಣೀಯ ಛಾಪು ಮೂಡಿಸಿದವರು ಮಂತ್ರಾಲಯ ಮಂದಿರ ನಿವಾಸಿ ರಾಘವೇಂದ್ರ ಸ್ವಾಮಿಗಳು. ವಿವಿಧ ಮಹಲು, ಕಟ್ಟಡ, ವಸ್ತು ಸಂಗ್ರಹಾಲಯ ಮತ್ತು ಮರಳುಗಾಡಿನ ಸಾರಿ ಮೂಲಕ ದುಬೈ ಕೀರ್ತಿ ಪಾತಕೆ ವಿಶ್ವ ಮಟ್ಟದಲ್ಲಿ ಹಾರಿದೆ. ಇದಕ್ಕೆಲ್ಲ ಮುಕುಟಮಣಿಯಾಗಿ ಮತ್ತೊಂದು ಹೊಸ ದಾಖಲೆಗೆ ದುಬೈ ನಗರ ಸಾಕ್ಷಿಯಾಗಲು ಗುರು ರಾಯರು ಹೊಸ ಮುನ್ನುಡಿ ಬರೆಸಿದ್ದಾರೆ. ಅದುವೇ ಶ್ರೀ ರಾಘವೇಂದ್ರರ ಆರಾಧನೋತ್ಸವ.

ಅಲ್ಲೋ ಇಲ್ಲೋ ಕೆಲ ಮನೆಗಳಲ್ಲಿ, ಕೆಲವು ಜನಗಳಿಗೆ ಮಾತ್ರ, ಕೆಲವೊಮ್ಮೆ ಮನೆ ಮಂದಿಗಷ್ಟೇ ಸೀಮಿತವಾಗಿ ನಡೆಯುತ್ತಿದ್ದ ಗುರು ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಈಗ ಒಂದು ಮಹೋತ್ಸವವಾಗಿ ರೂಪುಗೊಂಡಿದೆ.

ಧಾರ್ಮಿಕ ವಿಧಿಯಂತೆ ಮಹೋತ್ಸವದ ಪೂರ್ತಿ ದಿವಸ ಅಚ್ಚುಕಟ್ಟಾಗಿ ನಡೆಸಿಕೊಡುವುದಕ್ಕೆ ಪೂನಾದ ರಾಯರ ಮಠದ ವ್ಯವಸ್ಥಾಪಕರಾದ ಶ್ರೀ ದತ್ತಾತ್ರೇಯ ಜೋಶಿ ಮತ್ತವರ ಶಿಷ್ಯ ವೃಂದ ಆಗಮಿಸಿ ಪೂಜಾ #Pooja ವಿಧಿ ವಿಧಾನಗಳನ್ನು ನೆರವೇರಿಸಲಿದ್ದಾರೆ.

ಗಣ್ಯರಿಗೆ ಗೌರವಾರ್ಪಣೆ

ರಾಘವೇಂದ್ರ ಗುರುಗಳ ಮಹೋತ್ಸವದ ವಿಶೇಷತೆಯ ಸುದಿನ. ಧ್ಯಾನದ ಬಗ್ಗೆ ಹಾಗೂ ಸನಾತನ ಧರ್ಮದ ವಿಚಾರಗಳನ್ನು ಮನಮುಟ್ಟುವಂತೆ ತಿಳಿಸಿಕೊಡಲು ಅಧ್ಯಾತ್ಮಿಕ ಚಿಂತಕರಾದ, ರಾಯರ ಅನನ್ಯ ಭಕ್ತರಾದ ಶ್ರೀ ವೇಣುಗೋಪಾಲ ಗುರೂಜಿ ಆಗಮಿಸಲಿದ್ದಾರೆ. ಯುಎಇ ನ ಹಲವು ಭಜನಾ ಮಂಡಳಿಗಳಿಂದ ರಾಯರ ಭಜನೆ, ಸ್ತೋತ್ರ ಹಾಗೂ ನೃತ್ಯ ರೂಪಕ ರೂಪಕಗಳನ್ನು ಆಯೋಜಿಸಲಾಗಿದೆ . ರಾಯರ ಪರಮ ಭಕ್ತರಾದ ಕಲಾವಿದ ರವಿ ಸಂತು ರಾಯರ ಕುರಿತಾದ ಭಕ್ತಿಗೀತೆಗಳನ್ನು ಹಾಡಿ ರಂಜಿಸಲಿದ್ದಾರೆ.

ರಾಯರ ಅಭಿಲಾಷೆಯಂತೆ ಈ ರೀತಿಯ ರಾಯರ ಮಹೋತ್ಸವಗಳನ್ನು ಹಾಗೂ ಆರಾಧನೆಗಳನ್ನು ಯುಎಇ ಯಲ್ಲಿ ನಡೆಸಿಕೊಡಲು ಪ್ರಮುಖ ಪಾತ್ರ ವಹಿಸುತ್ತಿರುವ ಡಾ. ವಿಜಯ್, ಸದನ್ ದಾಸ್ ಮತ್ತು ಮಧು ಅವರ ವಿಶೇಷ ಸೇವೆಗೆ ಇಡೀ ಯುಎಇ ಗುರುರಾಯರ ಭಕ್ತ ವೃಂದ ಶರಣಾಗಿದೆ. ಭಕ್ತಿಯಿಂದ ಕೈಜೋಡಿಸಿದೆ. ಧನ್ಯತೆಯಿಂದ ಸಹಕಾರ ನೀಡಿದೆ.

`ವಿಜಯ’ದಲ್ಲಿ `ಮಧು’ ಹಂಚಿದ ಸೇವಕರು
ಕಲಿಯುಗದ ಕಾಮಧೇನು, ಬೇಡಿದವರ ಇಷ್ಟಾರ್ಥ ನೆರವೇರಿಸುವ ರಾಘವೇಂದ್ರ ಸ್ವಾಮಿಗಳವರ 398 ನೇ ಪಟ್ಟಾಭಿಷೇಕ ಮಹೋತ್ಸವ, ಮತ್ತು 424 ನೇ ವರ್ಧಂತಿ ಉತ್ಸವ ಮಂತ್ರಾಲಯ #Mantralaya ಸೇರಿ ದೇಶದೆಲ್ಲೆಡೆ ಫಾಲ್ಗುಣ ಮಾಸದಲ್ಲಿ ( 2019ರಲ್ಲಿ) ವಿಜೃಂಭಣೆಯಿಂದ ನಡೆಯಿತು. ಇದೇ ಸಂದರ್ಭದಲ್ಲಿ ನಾವೂ ಏಕೆ ರಾಯರ ವರ್ಧಂತಿ ಉತ್ಸವ ಮಾಡಬಾರದು ಎಂಬ ಚಿಂತನೆ ದುಬೈನ ಖ್ಯಾತ ಇಂಜಿನಿಯರ್‌ಗಳಾದ ಡಾ. ವಿಜಯ್, ಮಧು ಅವರಲ್ಲಿ ಉಗಮಿಸಿತು. ತಕ್ಷಣ ಅವರು ಕಾರ್ಯ ಪ್ರವೃತ್ತರಾದರು. ಸಹ ಚಿಂತಕರನ್ನು ಒಗ್ಗೂಡಿಸಿದರು. ದುಬೈ #Dubai ಮಹಾನಗರದ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ರಾಯರ ವರ್ಧಂತಿ ಉತ್ಸವ 2019ರ ಮಾರ್ಚಿ 22ರಂದು ಅದ್ದೂರಿಯಾಗಿ ಸಂಪನ್ನಗೊಂಡಿತು. ಈ ಬಾರಿ ಈ ಉತ್ಸವಕ್ಕೆ ಮತ್ತೊಬ್ಬ ಭಕ್ತರಾದ ಸಾಧನ ದಾಸ್ ಕೈಜೋಡಿಸಿರುವುದು ವಿಶೇಷ.

ರಾಯರ ಸೇವೆಗೆ ಬದ್ಧರಾದ ವನಿತೆಯರ ತಂಡ

ರಾಯರ ಮಹಿಮೆಗೆ, ಕೃಪೆಗೆ ಒಳಗಾದ, ಒಂದಿಲ್ಲೊಂದು ರೀತಿಯಲ್ಲಿ ರಾಯರ ಪವಾಡ ಮತ್ತು ಕೃಪೆಗೆ ಪಾತ್ರರಾದ ನೂರಾರು ಭಕ್ತರು ಜಾತಿ-ಮತದ ಅಂತರ ತೊರೆದು ರಾಯರ ಹೆಸರಿನಲ್ಲಿ ಒಂದೆಡೆ ಸಂಗಮವಾಗಿದ್ದು ಹೊಸ ಇತಿಹಾಸ ನಿರ್ಮಾಣ ಮಾಡಿತು. ಸಾಮಾನ್ಯವಾಗಿ ದುಬೈ ಎಂದರೆ ಹಲವರ ಕಲ್ಪನೆಯಲ್ಲಿ ಮೂಡುವ ಚಿತ್ರಣವೇ ಬೇರೆ. ಆದರೆ ರಾಘವೇಂದ್ರ ಸ್ವಾಮಿಗಳ #RaghavendraSwamiji ಬಗೆಗಿನ ಭಕ್ತಿ ಮತ್ತು ಅವರೇ ನೀಡಿದ ಅಪಾರ ಶಕ್ತಿ- ಇಂಧನ ಸಾಮ್ರಾಜ್ಯದಲ್ಲೂ ಭಾರತೀಯ ಧರ್ಮ ಸಾಮ್ರಾಜ್ಯವನ್ನೇ ಮನ-ಮನೆಯಂಗಳದಲ್ಲಿ ಸೃಷ್ಟಿ ಮಾಡಿತು. ಈ ವರ್ಧಂತಿ ಉತ್ಸವದ ಪ್ರೇರಣೆಯಿಂದಲೇ ಈಬಾರಿ ಮತ್ತೆ ರಾಯರ ಆರಾಧನಾ ಉತ್ಸವ ಆಯೋಜನೆಗೊಂಡಿದೆ.

ದತ್ತಾತ್ರೇಯ ಜೋಶಿ ತಂಡದ ಸಾರಥ್ಯ
ಮಂತ್ರಾಲಯದಲ್ಲಿ ಅಧ್ಯಯನ ಮಾಡಿ ಸದ್ಯ ಪೂನಾದ ರಾಘವೇಂದ್ರ ಸ್ವಾಮಿಗಳ ಮಠದ ಉಸ್ತುವಾರಿ ವಹಿಸಿಕೊಂಡಿರುವ ದತ್ತಾತ್ರೇಯ ಜೋಷಿ ಅವರು ಧಾರ್ಮಿಕ ವಿಧಿ ವಿಧಾನಗಳ ನೇತೃತ್ವ ವಹಿಸಲು ಈ ಬಾರಿಯೂ ಆಗಮಿಸುತ್ತಿದ್ದಾರೆ. ರಾಯರ ಪ್ರತಿಮೆಗೆ ಮತ್ತು ವಿವಿಧ ಸಾಲಿಗ್ರಾಮಗಳಿಗೆ ಅಭಿಷೇಕ, ಪಂಚಾಮೃತ, ಅಲಂಕಾರ, ಕನಕಾಭಿಷೇಕ – ಈ ಸಂದರ್ಭದಲ್ಲಿ ರಾಯರ ಅಷ್ಟೋತ್ತರ ಪುನಶ್ಚರಣಗಳೆಲ್ಲವೂ ಮಂತ್ರಾಲಯದ ವಿಧಿಗಳ ಪ್ರಕಾರವೇ ನಡೆಯಲಿದೆ.

ಪರಿಮಳ ಭರಿತ ವಿವಿಧ ಹೂವುಗಳಲ್ಲಿ ಪರಿಮಳಾಚಾರ್ಯರೆಂದೇ #Parimalacharya ಖ್ಯಾತರಾದ ರಾಯರ ವೃಂದಾವನದ ಪ್ರತಿಕೃತಿಯನ್ನು ನಿರ್ಮಿಸಲಾಗುತ್ತದೆ. ಇಡೀ ಸಭಾಂಗಣದಲ್ಲಿ ಹೊಸದಾಗಿ ವೃಂದಾವನ ಪ್ರತಿಷ್ಠಾಪನೆ ಆಗಿದೆಯೋ ಎಂಬಂತೆ ಭಾಸವಾಗುವುದು ಇಲ್ಲಿನ ವಿಶೇಷತೆ. ಇದು ಧನಾತ್ಮಕ ಬೆಳವಣಿಗೆ. ಮಾತ್ರವಲ್ಲ, ಭಾರತೀಯ ಸನಾತನ ಪರಂಪರೆಗೆ ಕಲಶ ಇಟ್ಟು, ಸಕಲ ಮತದವರಿಗೂ ದರ್ಶನ ನೀಡಿದ, ಅವರೆಲ್ಲರ ಅಪೇಕ್ಷೆ, ಬೇಡಿಕೆ ಈಡೇರಿಸಿದ ರಾಘವೇಂದ್ರ ಸ್ವಾಮಿಗಳ ಮಹಿಮೆಯ ಪ್ರತೀಕವೇ ಆಗಿದೆ ಈ ಆರಾಧನಾ ಉತ್ಸವ.

ಕರೆದಲ್ಲಿಗೆ ಬರುವ ವಿಶ್ವಸಂತ ನಮ್ಮ ರಾಯರು…
ಭವ ಜೀವಿಗಳ ದೃಷ್ಟಿಯಿಂದ ಕಣ್ಮರೆಯಾಗಿ 3 ಶತಮಾನ ಕಳೆದರೂ ಮಧ್ವ ಮುನಿಯ ಈ ಮುದ್ದು ಕುವರ ಕರೆದಲ್ಲಿಗೆ ಬರುವಷ್ಟು ದಯಾಮಯಿ. ಹಾಗಾಗಿ ರಾಯರನ್ನು ಭಕ್ತಗಣವೇ ಕಾಮಧೇನು ಎಂದು ಕರೆದು ಧನ್ಯತೆ ಮೆರೆಯಿತು. ನೂರಾರು ದಾಸರು, ಸಾವಿರಾರು ಭಕ್ತರು, ಕೋಟಿ ಕೋಟಿ ಪಾಮರರು ಭಕುತಿಯಿಂದ ಬಯಸುವ ಹೆಸರೇ ರಾಘವೇಂದ್ರ. ಅವರ ಜ್ಞಾನ, ಭಕ್ತಿ ಮತ್ತು ವೈರಾಗ್ಯದ ತಪೋಶಕ್ತಿ ಎಷ್ಟೆಂದು ನಾವು ಊಹಿಸಿದಷ್ಟೂ ಅದು ವಿಸ್ತಾರ. ಹರಿ ಸರ್ವೋತ್ತಮ ತತ್ವವನು ಎಳ್ಳಷ್ಟೂ ಅನುಮಾನವಿಲ್ಲದೆ ನಂಬಿದ ಫಲ, ಅನನ್ಯವಾಗಿ ಮೂಲ ರಾಮದೇವರ ಉಪಾಸನೆಯ ಬಲಗಳಿಂದ ರಾಯರು ಅತ್ಯಂತ ಸರಳವಾಗಿ ಭವ ಲೋಕದ ಜೀವಿಗಳಿಗೆ ಹೇಳಿದ ಸಂದೇಶದ ಉದಾತ್ತತೆಯೇ ಬಣ್ಣಿಸಲು ಅಸದಳ.

ಕಟ್ಟ ಕಡೆಯ ವ್ಯಕ್ತಿಯನ್ನೂ ದೇವರೆಡೆಗೆ ಕರೆದೊಯ್ಯುವ ನಾಯಕರಾಗಿ ರಾಯರು ಧಾರ್ಮಿಕ ರಂಗದಲ್ಲಿ ಪ್ರಧಾನರಾದರು. ಹಾಗಾಗಿ ಮಂಚಾಲೆಯ ಮಹಾ ಮಹಿಮರೆಂದೇ ಖ್ಯಾತರಾದರು. ಅವರ ಜೀವನವೇ ಒಂದು ಭವ್ಯ ವೇದಿಕೆ. ಅದನ್ನು ಎಷ್ಟು ಬಾರಿ ಅವಲೋಕಿಸಿದರೂ ಕನಿಷ್ಠ ಎನಿಸುವುದು ವಾಡಿಕೆ. ಭಾರತೀಯ ಇತಿಹಾಸದಲ್ಲಿ ಆಯಾ ಕಾಲ ಘಟ್ಟಕ್ಕೆ ಹಲವರು ಜನರನ್ನು ಮತ ಪರಿವರ್ತನೆ ಮಾಡಿದರು. ಆದರೆ ರಾಯರು ಮತಿ ಪರಿವರ್ತನೆ ಮಾಡಿ ಬಹು ವಿಶಿಷ್ಠರಾದರು.

ಅದು ಲಕ್ಷಾಂತರ ಜನರ ಜೀವನ ಗತಿಯನ್ನೇ ಸುಧಾರಿಸಿತು. ಸಮಾಜಮುಖಿಯಾಗಿ ಸಮನ್ವಯಿಸಿತು. ತುಂಗೆಯ ತಟದಲ್ಲಿ ಉತ್ತುಂಗ ಮುನಿ ಎನಿಸಿದರು ಈ ರಾಯರು. ಕೋಟಿ, ಕೋಟಿ ಜನರನು ಪಾವನ ಮಾಡಿದ್ದಾರೆ. ಹಾಗಾಗಿ ಪವಿತ್ರ ಮಂತ್ರಾಲಯ #Mantralaya ವಿಶ್ವ ಭೂಪಟದಲ್ಲಿ ಗುರುತಿಸಿಕೊಂಡಿದೆ. ದೇಶ- ವಿದೇಶದಲ್ಲಿ ಇಂದು ರಾಯರ ಆರಾಧನೆ ನಡೆಯುತ್ತಿದೆ ಎಂದರೆ ಅದರಕ್ಕೆ ರಾಯರ ತಪೋ ಮಹತ್ತೇ ಸಾಕ್ಷಿ. ಕರುಣೆಯ ಕಡಲಾಗಿರುವ ರಾಯರು ಕಡಲಾಚೆಗೂ ಭಕುತ ಕೋಟಿಯನ್ನು ಭಕ್ತಿ ಭಾವದಲ್ಲಿ ಮಿಂದೇಳುವ ಕೃಪೆ ತೋರುತ್ತ ಇರುವುದು ಮಹತ್ವದ ಸಂಗತಿ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4
Tags: ArabDubaiKannada News WebsiteLatest News KannadaMantralayaPuneRayara AradhanaShri Raghavendra SwamyUAEಅಜ್ಮಾನ್ ಇಂಡಿಯನ್ ಅಸೋಸಿಯೇಷನ್‌ಅರಬ್ದುಬೈಪರಿಮಳಾಚಾರ್ಯಪೂನಾಮಂತ್ರಾಲಯಯುಎಇರಾಯರ ಆರಾಧನೆರಾಯರ ಮಹಿಮೆಶ್ರೀ ರಾಘವೇಂದ್ರ ಸ್ವಾಮಿ
Previous Post

ವಿಶೇಷಚೇತನ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವ ಶಿಕ್ಷಕರ ಸೇವೆ ಶ್ಲಾಘನೀಯ: ಎನ್. ಕುಮಾರ್ ಅಭಿಪ್ರಾಯ

Next Post

Films with native flavor is Pan Indian: Ashok Kashyap

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Films with native flavor is Pan Indian: Ashok Kashyap

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!