Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಕನ್ನಡದ ಕಂಪೇ ಇಲ್ಲದ ಆರ್’ಸಿಬಿ ಹಾಡು

September 25, 2020
in Special Articles
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಪ್ರಸಕ್ತ ವರ್ಷದ ಐಪಿಎಲ್ ಪಂದ್ಯಾವಳಿ ಮೊನ್ನೆ ಇಂದ ಶುರುವಾಗಿದೆ. ಕೋವಿಡ್’ನಿಂದ ಮುಂದೂಡಲ್ಪಟ್ಟಿದ್ದ ದೇಶದ ಪ್ರತಿಷ್ಟಿತ ಕ್ರೀಡಾ ಚಟುವಟಿಕೆ ತಡವಾಗಿಯಾದರೂ ಆರಂಭವಾಗಿರುವುದು ಕ್ರಿಕೆಟ್ ಪ್ರೇಮಿಗಳ ಕುಂದುತ್ತಿರುವ ಉತ್ಸಾಹಕ್ಕೆ ಮರುಜೀವ ಕೊಟ್ಟಂತಾಗಿದೆ. ಐಪಿಎಲ್ ಶುರುವಾದಾಗಿನಿಂದಲೂ ಬೇರೆ ಬೇರೆ ಕಾರಣಗಳಿಗೆ ಆರ್’ಸಿಬಿ ತಂಡದ ಮ್ಯಾನೇಜ್ಮೆಂಟ್ ಸುದ್ದಿಯಾಗುತ್ತಲೇ ಇರುತ್ತದೆ, ಆದರೆ ಈ ಬಾರಿ ಕನ್ನಡ ಪದಗಳೇ ಇಲ್ಲದ ಅಧಿಕೃತ ಅಂಥೆಂಮ್ ಬಿಡುಗಡೆಮಾಡುವ ಮೂಲಕ ಕೆಟ್ಟ ಕಾರಣಕ್ಕೆ ಪುನ ಸುದ್ದಿಯಾಗಿದೆ. ಕನ್ನಡ ಪದ ಹಾಗೂ ಕನ್ನಡತನವೇ ಇಲ್ಲದ ಹೊಸ ಆರ್’ಸಿಬಿ ಅಂಥೆಟಮ್ ಗೆ ಈಗ ನೆಟ್ಟಿಗರು ಮತ್ತು ತಂಡದ ಕಟ್ಟಾ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಯಲ್ ಚಾಲೆಂಜರ್ಸ್ ಬ್ಯಾಂಗಳೋರ್ ತಂಡಕ್ಕೆ ಇರುವ ಅಭಿಮಾನ ಬಳಗ ಐಪಿಎಲ್ ಪಂದ್ಯಾವಳಿಯ ಉಳಿದೆಲ್ಲ ತಂಡದಗಳಿಗಿಂತ ಒಂದು ಕೈ ಮೇಲು ಎಂಬ ಮಾತಿದೆ, ಇದು ನಿಜವೂ ಹೌದು. ಯಾಕೆಂದರೆ ಆರ್ ಸಿ ಬಿ ತಂಡದ ಕುರಿತಾಗಿ ಬಂದಿರುವ ಫ್ಯಾನ್ ಮ್ಯಾಡ್ ಹಾಡುಗಳು ಉಳಿದ್ಯಾವ ತಂಡಗಳ ಮೇಲೂ ಮಾಡಿದ್ದು ಕಡಿಮೆ ಎಂದೇ ಹೇಳಬಹುದು.

ಅದು ಅಲ್ಲದೇ ಐಪಿಎಲ್ ನ ಮೊದಲ ಅವತರಿಣಿಕೆ ಯಿಂದಲೂ ಸೋಲು ಗೆಲುವಿನ ಆಧಾರದ ಮೇಲೆ ಸಹಕಾರ ನೀಡದೆ ಕೇವಲ ನಮ್ಮ ತಂಡ ಎಂದು ಹುರಿದುಂಬಿಸುವ ಮನೋಭಾವ ಉಳ್ಳ ನಿಷ್ಠಾವಂತ ಅಭಿಮಾನಿಗಳಿರುವ ಏಕೈಕ ತಂಡ ಆರ್’ಸಿಬಿ ಎಂದರೆ ತಪ್ಪಾಗಲಾರದು. ಆರ್’ಸಿಬಿ ತಂಡಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಇರುವುದು ಕರ್ನಾಟಕದಲ್ಲಿ. ಅದಕ್ಕೆ ಇರುವ ಏಕೈಕ ಕಾರಣ ತಂಡದ ಜೊತೆಗೆ ಸೇರಿರುವ ’ಬೆಂಗಳೂರು’ ಎಂಬ ಹೆಸರು ಎಂಬುದು ಅಷ್ಟೇ ಸತ್ಯ. ಆದರೆ ಈ ಸರಳ ವಿಷಯವನ್ನು ತಂಡದ ಮ್ಯಾನೇಜ್ಮೆಂಟ್ ಮೊದಲಿನಿಂದಲೂ ಮರೆತಂತಿದೆ.

ಕನ್ನಡ ಪದ ಹಾಗೂ ಕನ್ನಡತನವೇ ಇಲ್ಲದ ಹೊಸ ಆರ್’ಸಿಬಿ ಅಂಥೆಟಮ್ ಗೆ ಈಗ ನೆಟ್ಟಿಗರು ಮತ್ತು ತಂಡದ ಕಟ್ಟಾ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Posted by Kalpa News on Friday, 25 September 2020

ಐಪಿಎಲ್ ಪಂದ್ಯಾವಳಿಯ ಮೊದಲ ಅವತರಿಣಿಕೆ ಇಂದಲೂ ತಮ್ಮ ಪ್ರಮೋಶನಲ್ ಸ್ಟ್ರಾಟಜಿಯಲ್ಲಿ ಕನ್ನಡತನಕ್ಕೆ ಒತ್ತು ಕೊಡದೆ ಕನ್ನಡ ವಿರೋಧಿ ಧೋರಣೆ ಅನುಸರಿಸುತ್ತಿರುವುದು ನಿಷ್ಠಾವಂತ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗುವಂತೆ ಆಗಿದೆ. ಕಳೆದ ವರ್ಷವಷ್ಟೇ ’ರಾಯಲ್ ಚಾಲೆಂಜರ್ಸ್ Bangalore’ ಅನ್ನು ’ಬೆಂಗಳೂರು’ ಆಗಿ ಬದಲಾಯಿಸಬೇಕೆಂದು ಅಭಿಮಾನಿಗಳು ಎಷ್ಟೇ ಹರಸಾಹಸ ಪಟ್ಟರೂ ಸಹ ಮ್ಯಾನೇಜ್ಮೆಂಟ್ ಅದನ್ನು ತಲೆಗೆ ಹಾಕಿಕೊಂಡಿರಲಿಲ್ಲ.

ಮೊನ್ನೆಯಷ್ಟೇ ಹಿಂದಿ ದಿವಸ್ ಆಚರಣೆಯ ವಿರುದ್ಧವಾಗಿ ದಕ್ಷಿಣ ಭಾರತದ ತಾರೆಯರು, ರಾಜಕಾರಣಿಗಳು ಸೇರಿದಂತೆ ಹಲವಾರು ಜನರು ತಮ್ಮದೇ ರೀತಿಯಲ್ಲಿ ವಿರೋಧ ವ್ಯಕ್ತಪಡಿಸಿದ್ದು ಹಸಿ ಹಸಿಯಾಗಿರುವಾಗಲೇ ಆರ್’ಸಿಬಿ ಇಂದ ಮತ್ತೊಂದು ಎಡವಟ್ಟಾಗಿದೆ. ಐಪಿಎಲ್ ನ ತಂಡಗಳು ಆಯಾ ತಂಡಗಳ ಪರವಾಗಿ ಅಧಿಕೃತ ಅಂಥೆಮ್ ಹಾಡುಗಳನ್ನು ಬಿಡುಗಡೆ ಮಾಡುವ ವಾಡಿಕೆ ಇಟ್ಟುಕೊಂಡಿದೆ. ಚೆನ್ನೈ, ಪಂಜಾಬ್, ಕೋಲ್ಕತಾ ಸೇರಿದಂತೆ ಬೇರೆ ಬೇರೆ ತಂಡಗಳು ಬಿಡುಗಡೆ ಮಾಡಿರುವ ಅಂಥೆಮ್ ಹಾಡುಗಳಲ್ಲಿ ಆಯಾ ರಾಜ್ಯಗಳ ನೇಟಿವಿಟಿಗೆ ಅನುಗುಣವಾಗಿ ರಾಜ್ಯದ ಅಧಿಕೃತ ಭಾಷೆಯನ್ನೇ ಸಂಪೂರ್ಣವಾಗಿ ಬಳಸಿಕೊಳ್ಳಲಾಗಿದೆ. ಆದರೆ ಆರ್’ಸಿಬಿ ವಿಚಾರದಲ್ಲಿ ಇದು ಸುಳ್ಳಾಗಿದೆ. ಕೇವಲ ಎರಡೇ ಎರಡು ಪದಗಳನ್ನು ಹಾಡಿನ ಶುರುವಿನಲ್ಲಿ ಕಾಟಾಚಾರಕ್ಕೆ ಬಳಸಿಕೊಂಡು ಸಂಪೂರ್ಣ ಹಿಂದಿ ಮತ್ತು ಇಂಗ್ಲಿಷ್ ಮಿಶ್ರಿತ ಅಂಥೆಮ್ ಹಾಡು ಬಿಡುಗಡೆ ಮಾಡಿರುವುದು ಇದೀಗ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಇದುವರೆಗೂ ಕಪ್ ಗೆಲ್ಲದೇ ವರ್ಷದಿಂದ ವರ್ಷಕ್ಕೆ ಕಳಪೆ ಪ್ರದರ್ಶನ ನೀಡಿ ಪಂದ್ಯಾವಳಿಯ ಮಧ್ಯದಲ್ಲೇ ಹೊರಬರುತ್ತಿರುವ ತಂಡವಾದರೂ ಇದ್ಯಾವುದನ್ನೂ ತಲೆಗೆ ಹಾಕಿಕೊಳ್ಳದೆ ಕೇವಲ ನಮ್ಮ ಬೆಂಗಳೂರು ತಂಡ ಎಂಬ ಉದ್ದೇಶದಿಂದ ಪ್ರೋತ್ಸಾಹ ತುಂಬುತ್ತಿರುವ ಅಭಿಮಾನಿಗಳು ಆರ್’ಸಿಬಿ ಮ್ಯಾನೇಜ್ಮೆಂಟ್’ನ ಈ ಧೋರಣೆಯಿಂದ ಬೇಸತ್ತು ಕೆಂಡಾಮಂಡಲರಾಗಿದ್ದಾರೆ. ಈ ಕೂಡಲೇ ಅಂಥೆಮ್ ಹಾಡನ್ನು ಸಂಪೂರ್ಣವಾಗಿ ಕನ್ನಡ ಭಾಷೆಗೆ ಬದಲಿಸಬೇಕು ಎಂಬ ಬೇಡಿಕೆಯನ್ನು ಆರ್’ಸಿಬಿಯ ಅಧಿಕೃತ ಟ್ವೀಟರ್ ಹ್ಯಾಂಡಲ್’ಗೆ ಟಾಗ್ ಮಾಡುವ ಮೂಲಕ ಹಲವಾರು ಜನರು ಆಗ್ರಹಿಸಿದ್ದಾರೆ. ಬದಲಿಸದೆ ಇದ್ದರೆ ತಂಡಕ್ಕೆ ನೀಡುವ ಬೆಂಬಲವನ್ನು ಹಿಂಪಡೆಯುವ ಬೆದರಿಕೆಯನ್ನು ಸಹ ಹೊರಹಾಕಿದ್ದಾರೆ. ಇದಲ್ಲದೇ ನಿರ್ದೇಶಕ ಸುನಿ, ಛಾಯಾಗ್ರಾಹಕ ಮಹೇಂದ್ರ ಸಿಂಹ ಅವರು ಸಹ ಇದರ ಕುರಿತು ತಮ್ಮ ಫೇಸ್ಬುಕ್ ಮತ್ತು ಟ್ವೀಟರ್ ಖಾತೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಿನ್ನೆಲೆ ಸಂಗೀತವೇ ಇಲ್ಲದೇ ಎಸ್’ಪಿ ಬಾಲಸುಬ್ರಹ್ಮಣ್ಯಂ ಕನ್ನಡದಲ್ಲಿ ಹಾಡಿದ ಕೊನೆಯ ಹಾಡು ಇದು…

ವರ್ಷಗಳು ಕಳೆದರೂ ತಮ್ಮ ಕನ್ನಡ ವಿರೋಧಿ ಧೋರಣೆಯಿಂದ ಅಪಖ್ಯಾತಿಗೆ ಒಳಗಾಗಿರುವ ಆರ್’ಸಿಬಿ ಮ್ಯಾನೇಜ್ಮೆಂಟ್ ಈಗಲಾದರೂ ಎಚ್ಚೆತ್ತುಕೊಳ್ಳದಿದ್ದರೆ ನಿಷ್ಠಾವಂತ ಅಭಿಮಾನಿ ಬಳಗವನ್ನು ಕಳೆದುಕೊಳ್ಳುವ ಸಾಧ್ಯತೆಗಳು ದಟ್ಟವಾಗಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: CricketIPLIPL TournamentKannada News WebsiteLatest News KannadaRCBRoyal Challengers Bangaloreಆರ್’ಸಿಬಿಐಪಿಎಲ್ಐಪಿಎಲ್ ಪಂದ್ಯಾವಳಿರಾಯಲ್ ಚಾಲೆಂಜರ್ಸ್ ಬ್ಯಾಂಗಳೋರ್
Previous Post

ಎಸ್’ಪಿಬಿ ನಿಧನ: ಪ್ರಧಾನಿ ಮೋದಿ, ಸಿಎಂ ಬಿಎಸ್’ವೈ ಸೇರಿ ಗಣ್ಯಾತಿಗಣ್ಯರ ಸಂತಾಪ

Next Post

ಲೋಕ ಕಲ್ಯಾಣಾರ್ಥ ಅಧಿಕ ಮಾಸ ಜಪಯಜ್ಞ: ನೀವೂ ಜಪದಲ್ಲಿ ಪಾಲ್ಗೊಳ್ಳಬಹುದು, ಇಲ್ಲಿದೆ ವಿವರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಲೋಕ ಕಲ್ಯಾಣಾರ್ಥ ಅಧಿಕ ಮಾಸ ಜಪಯಜ್ಞ: ನೀವೂ ಜಪದಲ್ಲಿ ಪಾಲ್ಗೊಳ್ಳಬಹುದು, ಇಲ್ಲಿದೆ ವಿವರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!