Tuesday, July 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಒಮ್ಮೆಯಾದರೂ ‘ಗಂಧದ ಮಾಲೆ’ ಆಸ್ವಾದಿಸಿ ಬಿಡಿ

ಮಾಹಿತಿಗಳ ರಾಶಿಯನ್ನು ಚಂದದ ಮಾಲೆ ಪೋಣಿಸುವುದು ರೋಹಿತ್ ಚಕ್ರತೀರ್ಥರಿಗೆ ಸಿದ್ಧಿಸಿದ ವಿದ್ಯೆ

December 24, 2020
in Small Bytes, ಸಚಿನ್ ಪಾರ್ಶ್ವನಾಥ್
0 0
0
Share on facebookShare on TwitterWhatsapp
Read - 3 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಹೆಸರಿನಲ್ಲಿಯೇ ಒಂದು ಚಂದದ ಸುವಾಸನೆ ಇದೆ. ಕರ್ತೃ ರೋಹಿತ್ ಚಕ್ರತೀರ್ಥ. ರಾಶಿ ರಾಶಿ ಮಾಹಿತಿಗಳ ಆಸ್ಥೆಯಿಂದ ಆರಿಸಿ ತಂದು ತಂದು ಚಂದದ ಮಾಲೆ ಕಟ್ಟುವುದು ರೋಹಿತರಿಗೆ ಸಿದ್ಧಿಸಿದ ವಿದ್ಯೆ. ಅವರ ಅಂಕಣಗಳ ಗುಚ್ಛವೇ ಈ ಗಂಧದ ಮಾಲೆ. ಬದುಕಿನಲ್ಲಿ ಎಷ್ಟೇ ವೈರುಧ್ಯವಿರಲಿ, ವ್ಯಸ್ತತೆಯಿರಲಿ ಎಲ್ಲವನ್ನೂ ಬದಿಗೆ ಸರಿಸಿ ಒಮ್ಮೆ ಅವರ ಯಾವುದಾದರೊಂದು ಪುಸ್ತಕ ತೆರೆಯಿರಿ. ತುಟಿಯ ಮೇಲೆ ಒಂದು ಪುಟ್ಟ ನಗು, ಕಣ್ಣುಗಳಲ್ಲಿ ನಿಲ್ಲದೇ ಓಡುವ ಕಾತುರ ಎಲ್ಲಿಯಾದರೂ ನಿಂತಿತು ಎಂದರೆ ಕೇಳಿ. ಮಿಗಿಲಾಗಿ ಈ ಸಾಲುಗಳು ನನ್ನ ವಿಮರ್ಶೆಯಲ್ಲ, ನನ್ನ ಅನುಭವ.

ಶ್ರೀ ರೋಹಿತ್ ಚಕ್ರತೀರ್ಥ ಅವರು ದಿನಪತ್ರಿಕೆಗೆ ಬರೆಯುತ್ತಿದ್ದ ವ್ಯಕ್ತಿಚಿತ್ರಗಳ ಸಂಗ್ರಹ ಈ ಗಂಧದ ಮಾಲೆ. ಇನ್ನಷ್ಟು ಬೇಕೆನಿಸುವ ರುಚಿ ಹುಟ್ಟಿಸುವ ಹಲವು ವಿಶಿಷ್ಟತೆಗಳ ಸಂಗ್ರಹ. ನಿಮ್ಮ ಮೇಜಿನ ಮೇಲಿನ ಕಾಫಿ ಹಾಗೇ ಇರುತ್ತದೆ, ಆದರೆ ಪುಸ್ತಕದೊಳಗಿನ ನಿಮ್ಮ ತಲೆಯನ್ನು ಹೊರ ಜಗತ್ತಿಗೆ ಬಿಡದಷ್ಟು ಕುತೂಹಲ ಕಟ್ಟುವ ಪುಸ್ತಕ. ಓದಲು ಕುಳಿತಿರೆಂದರೆ ಪದಗಳ ಪರ್ಯಟನೆಗೆ ಕುಳಿತಂತೆ. ಅಮೆರಿಕೆಯ ಈಸಿ ಎಡ್ಡಿಯಿಂದ ಹಿಡಿದು ವಿರಾಟ್ ಕೊಹ್ಲಿ, ಕಲ್ಪನಾ ಚಾವ್ಲಾ ಹೀಗೆ ಹಲವರು ತಮ್ಮ ಬಗ್ಗೆ ಹೇಳುತ್ತಾರೆ. ಬದುಕು ಕಟ್ಟಿಕೊಂಡವನ ಕತೆಯಿಂದ ಹಿಡಿದು ನಾಡು ಕಟ್ಟಿದವ, ದೇಶ ಕಟ್ಟಿದವ, ಜಗತ್ತು ಗೆದ್ದವ ಕೊನೆಗೆ ಸಾವಿಗೂ ತೊಡೆ ತಟ್ಟಿದವರ ಜೀವಂತ ಬದುಕುಗಳಿದೆ. ಎಲ್ಲಿಯ ತನಕ ಎಂದರೆ ಅಕ್ಷರಮತ್ತನಾದ ಓದುಗನ ಪಾತ್ರಗಳು ಬಂದು ತೋಳುಗಳಿಗೆ ಭುಜ ಕೊಟ್ಟು ದೂರ ಒಯ್ದಂತೆ.

ಗಂಧದ ಮಾಲೆ ಹೊತ್ತಿಗೆಯ ಒಂದೆರಡು ತುಣುಕುಗಳ ಹಂಚಿಕೊಳ್ಳುವೆ. ಪುಟ್ಟ ಕಂದಮ್ಮಗಳ ಚಂದದ ಕಿರು ಪದ್ಯಗಳ ಹೆಕ್ಕಿ ತಂದು ಗಂಧದ ಮಾಲೆಗೆ ಘಮ್ಮೆನ್ನುವ ಗುಲಾಬಿ ಬಣ್ಣದ ಹೂಗಳ ಪೋಣಿಸಿದ್ದಾರೆ.

ಈ ಒಂದು ಮನೆಯನ್ನು
ನಾವು ಬಿಡುತ್ತಿದ್ದೇವೆ
ಆ ಮನೆಗೆ ಬೇರೆಯವರು
ಬರುತ್ತಾರೆ
ಇದು ಅಕಾಲಿಕ ಮರಣ ಹೊಂದಿದ ಹತ್ತರ ಹರೆಯದ ಪೂರ್ಣನ ಕವಿತೆ ಎಂದರೆ ನೀವು ನಂಬಲೇಬೇಕು. ಇನ್ನೊಂದು ಘಟನೆ. ತನ್ನ ನಾಯಿಯ ಕಳೆದುಕೊಂಡ ಪುಟ್ಟ ಬಾಲಕನ ಕುರಿತು.


ಕ್ಯಾನ್ಸರ್ ಪೀಡಿತ ಕೊನೆಯ ಹಂತದಲ್ಲಿದ್ದ ಸಾಕು ನಾಯಿ ಬೇಲ್ಕರ್‌ಗೆ ದಯಾಮರಣದ ಚುಚ್ಚುಮದ್ದು ಕೊಟ್ಟ ಡಾಕ್ಟರ್ ಮೈಕ್ ಶಿಷ್ಟಾಚಾರ ಪಾಲಿಸಿ, ರಾನ್ ಕುಟುಂಬದೊಂದಿಗೆ ಕೆಲವು ನಿಮಿಷಗಳನ್ನು ಕಳೆದರು. ಬೆಕ್ಕು ನಾಯಿಗಳಿಗೆಲ್ಲ ಹೆಚ್ಚೆಂದರೆ 12 ವರ್ಷ ಬದುಕುತ್ತವೆ. ಪಾಪ ಅಷ್ಟು ಚಿಕ್ಕ ಆಯುಸ್ಸನ್ನು ದೇವರು ಯಾಕೆ ಕೊಟ್ಟನೋ ಏನೋ – ಎಂಬ ಮಾತು ಬಂತು. ಅದುವರೆಗೆ ಆ ಎಲ್ಲ ಮಾತುಗಳನ್ನು ಕೇಳಿಸಿಕೊಳ್ಳುತ್ತಿದ್ದ ರಾನ್ ಮಗ ಶೇನ್ ಥಟ್ಟನೆ ಯಾಕೆ ಅನ್ನೋದು ನನಗೆ ಗೊತ್ತು ಡಾಕ್ಟರ್ ಎಂದ.

ಹೌದಾ?

ಹೌದು ಎನ್ನುತ್ತಾ ಎಲ್ಲರ ಮಧ್ಯೆ ಜಿಗಿದು ಡಾಕ್ಟರ್ ಮೈಕ್ ರನ್ನು ನೋಡುತ್ತ ಹೇಳಿದ ನೋಡಿ ಡಾಕ್ಟರ್, ಈಗ ಮನುಷ್ಯ 100 ವರ್ಷ ಬದುಕುತ್ತಾನೆ. ಯಾಕೆ ಅಷ್ಟು ದೊಡ್ಡ ಲೈಫ್ ಕೊಟ್ಟಿದ್ದಾನೆ ದೇವರು ಹೇಳಿ. ಯಾಕೇ ಅಂದ್ರೆ ಮನುಷ್ಯ ಹುಟ್ಟಿದ ಮೇಲೆ ಬೇರೆಯವರ ಜೊತೆ ಹೊಂದಿಕೊಂಡು ಹೋಗೋದನ್ನು ಕಲೀಬೇಕು. ಎಲ್ಲರನ್ನೂ ಪ್ರೀತಿಯಿಂದ ನೋಡೋದನ್ನು ಕಲೀಬೇಕು. ಮನೆಯವರ ಜೊತೆ ಯಾವತ್ತೂ ಖುಷಿಯಾಗಿರೋದು ಹೇಗೆ ಅನ್ನೋದನ್ನು ಕಲೀಬೇಕು. ಪ್ರಾಮಾಣಿಕನಾಗಿರುವುದನ್ನು ಕಲೀಬೇಕು. ಇಷ್ಟೆಲ್ಲಾ ವಿಷಯ ಕಲಿತು ಅಳವಡಿಸಿಕೊಂಡು ಬದುಕಬೇಕು ಅಂದ್ರೆ ನೂರು ವರ್ಷ ಬೇಕು. ಆದ್ರೆ ನಾಯಿಗೆ ಅದೆಲ್ಲ ವಿಷಯ ಕಲೀಬೇಕಾದ ಅಗತ್ಯವೇ ಇರೋದಿಲ್ಲ. ಯಾಕೇಂದ್ರೆ ಹೊಂದಿಕೊಂಡು ಹೋಗೋದು, ಪ್ರೀತಿ ಮಾಡೋದು, ಪ್ರಾಮಾಣಿಕನಾಗಿರೋದು ಇವನ್ನೆಲ್ಲ ಅದು ಹುಟ್ತಾನೇ ಕಲ್ತೇ ಬಂದಿರೋದ್ರಿಂದ, ಇಲ್ಲಿ ಈ ಜಗತ್ತಲ್ಲಿ ಕೇವಲ ಬದುಕಿಹೋದ್ರೆ ಆಯ್ತು ನೋಡಿ! ಅದಕ್ಕೆ ದೇವರು ನಾಯಿಗೆ 12 ವರ್ಷ ಬದುಕೋದಕ್ಕೆ ಅಂತ ಮಾತ್ರ ಕೊಟ್ಟಿದ್ದಾನೆ.


ಎಂತಹ ಘಟನೆ. ಇಂತಹ ನೂರಾರು ಘಟನೆಗಳ ಸಂಗ್ರಹ ರೋಹಿತ್ ಚಕ್ರತೀರ್ಥ ಅವರ ಗಂಧದಮಾಲೆ. ಓದಲೇಬೇಕಾದ ಪುಸ್ತಕ. ನಿಮಗೆ ಅನ್ನಿಸಬಹುದು, ಅನ್ನಿಸಿದರೂ ಅಚ್ಚರಿಯಿಲ್ಲ. ಪುಸ್ತಕದ ಬಗ್ಗೆಗಿಂತ ರೋಹಿತ್ ಚಕ್ರತೀರ್ಥ ಅವರ ಬಗ್ಗೆಯೇ ಹೆಚ್ಚು ಬರೆದಂತೆ ಇದೆ ಎಂದು. ಯಾವುದೇ ವಿಷಯವನ್ನು ಈಚೆಯಿಂದ ಆಚೆಗೆ ಯಾರಾದರೂ ಮುಟ್ಟಿಸಿ ಬಿಡುತ್ತಾರೆ. ಆದರೆ ತನ್ನತನವನ್ನು ಬೆರೆಸುವುದು ಆ ವಿಷಯವನ್ನು ಅರ್ಥೈಸಿಕೊಂಡವರಿಗೆ ಮಾತ್ರ ಸಾಧ್ಯ. ಅನವರತ ಮಮತೆಯಿಂದ ಚಕ್ರತೀರ್ಥ ಅವರು ಪುಟ್ಟ ಪುಟ್ಟ ವೈಶಿಷ್ಟ್ಯತೆಗಳನ್ನು ಹೆಕ್ಕಿ ಪೋಣಿಸಿದ್ದಾರೆ. ಮೂಲ ವಸ್ತುವಿಗೆ ಧಕ್ಕೆ ಬಾರದಂತೆ ಆಪ್ತತೆಯ ಹೆಣೆಯುವ ಕೆಲಸ ಅವರಿಗೆ ಸಿದ್ಧಿಸಿದೆ. ಒಮ್ಮೆಯಾದರೂ ಗಂಧದ ಮಾಲೆ ಆಸ್ವಾದಿಸಿ ಬಿಡಿ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Book ReviewGandada MaleKannada News WebsiteLatest News KannadaRohith Chakratirthaಗಂಧದ ಮಾಲೆಪುಸ್ತಕ ವಿಮರ್ಷೆರೋಹಿತ್ ಚಕ್ರತೀರ್ಥವ್ಯಕ್ತಿಚಿತ್ರ
Previous Post

ಮೆಕ್ಕೆಜೋಳ ಖರೀದಿಗೆ 1520 ರೂ. ಬೆಂಬಲ ಬೆಲೆ ಘೋಷಣೆ: ಸಂಸದ ರಾಘವೇಂದ್ರ ಅಭಿನಂದನೆ

Next Post

ವ್ಯಾಪಕ ವಿರೋಧದ ಹಿನ್ನೆಲೆ: ರಾಜ್ಯದಲ್ಲಿ ನೈಟ್ ಕರ್ಫ್ಯೂ ಹಿಂಪಡೆತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ವ್ಯಾಪಕ ವಿರೋಧದ ಹಿನ್ನೆಲೆ: ರಾಜ್ಯದಲ್ಲಿ ನೈಟ್ ಕರ್ಫ್ಯೂ ಹಿಂಪಡೆತ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!