ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಿಯಮಗಳನ್ನು ಪಾಲನೆ ಮಾಡದೇ ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದು ಮನೆಯಲ್ಲಿರಿಸಿಕೊಂಡ ಪ್ರಕರಣದಲ್ಲಿ ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ್ ಗೌಡ #SonuSrinivasGowda ಅವರ ಪೊಲೀಸ್ ಕಸ್ಟಡಿ ಅವಧಿ ಇಂದಿಗೆ ಅಂತ್ಯವಾಗಲಿದ್ದು, ಜೈಲು ಹಕ್ಕಿಯಾಗ್ತಾರಾ ಎಂಬ ಪ್ರಶ್ನೆ ಮೂಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನು ಅವರ ಪೊಲೀಸ್ ಕಸ್ಟಡಿ #PoliceCustody ಅವಧಿ ಅಂತ್ಯಗೊಳ್ಳಲಿದ್ದು, ಬ್ಯಾಡರಹಳ್ಳಿ ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ನ್ಯಾಯಾಲಯದಲ್ಲಿ #Court ಏನಾಗಲಿದ ಎಂಬುದು ಕುತೂಹಲ ಮೂಡಿಸಿದೆ.
ರಾಯಚೂರಿನಲ್ಲಿ ಮಹಜರ್
ಇನ್ನು, ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಸ್ಥಳ ಮಹಜರಿಗಾಗಿ ಸೋನು ಅವರನ್ನು ರಾಯಚೂರಿನ ಮಸ್ಕಿ ತಾಲೂಕಿನ ಕಾಚಾಪುರದಲ್ಲಿರುವ ಬಾಲಕಿಯ ನಿವಾಸಕ್ಕೆ ಕರೆದುಕೊಂಡು ಹೋಗಲಾಗಿತ್ತು.
ರಾಯಚೂರಿನ #Raichur ಮಸ್ಕಿ ತಾಲೂಕಿನ ಕಾಚಾಪುರದಲ್ಲಿರುವ ಬಾಲಕಿಯ ಮನೆಗೆ ಸ್ಥಳ ಮಹಜರಿಗಾಗಿ ಸೋನು ಗೌಡಳನ್ನು ಪೊಲೀಸರು ಕರೆದುಕೊಂಡು ಹೋಗಿದ್ದರು.
ಬಾಲಕಿ ಚಿಕ್ಕಪ್ಪನ ಮನೆಗೆ ಬಂದ ಪೊಲೀಸರು ಕೆಲವೇ ಕ್ಷಣದಲ್ಲಿ ಮಾಹಿತಿ ಕಲೆಹಾಕಿ ಅವಸರದಲ್ಲಿ ಗ್ರಾಮದಿಂದ ಹೊರನಡೆದರು. ಈ ವೇಳೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಸೋನು ಗೌಡ ಇದ್ದ ಕಾರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿದ್ದರು.
ಸೋನು ಶ್ರೀನಿವಾಸ್ ಗೌಡ ವಿರುದ್ಧ ಸಿಡಿದೆದ್ದ ಗ್ರಾಮಸ್ಥರು ಕಾರಿಗೆ ಮುತ್ತಿಗೆ ಹಾಕಿದರು. ತಾನು ಮಾಡಿದ ಕೃತ್ಯದ ಬಗ್ಗೆ ಮಾತನಾಡಬೇಕು ಎಂದು ಆಗ್ರಹಿಸಿದರು. ಆದರೆ, ಸೋನು ಯಾವುದೇ ರೀತಿಯಲ್ಲಿ ಪ್ರತಿಕ್ರಿಯೆ ನೀಡಲಿಲ್ಲ. ಪೊಲೀಸರೂ ಸಹ ಅವಸರವಾಗಿ ಮಹಜರು ನಡೆಸಿ, ಶೀಘ್ರವಾಗಿ ಆಕೆಯನ್ನು ಕರೆದುಕೊಂಡು ಹೋದರು.
ಸೋನು ಅಲ್ಲಿಂದ ಹೊರಟ ನಂತರವೂ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮಗುವನ್ನು ಅಕ್ರಮವಾಗಿ ಕರೆದುಕೊಂಡು ಹೋಗಿ, ತನ್ನ ರೀಲ್ಸ್’ಗಾಗಿ ಬಳಸಿಕೊಂಡ ಆಕೆಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಿಡಿ ಕಾರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post