ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ #RenukaswamyMurderCase ಸಂಬಂಧಿಸಿದಂತೆ ಆರೋಪ ಪಟ್ಟಿಯಲ್ಲಿನ ಅಂಶಗಳನ್ನು ಪ್ರಕಟಣೆ ಮಾಡದಂತೆ ಮಾಧ್ಯಮಗಳಿಗೆ ಹೈಕೋರ್ಟ್ ಪ್ರಸಾರ ಮಾಡದಂತೆ ನಿರ್ಬಂಧ ಹೇರಿದೆ.
ಈ ಕುರಿತಂತೆ ಚಾರ್ಜ್ ಶೀಟ್’ನಲ್ಲಿರುವ ವರದಿಯನ್ನು ಪ್ರಕಟಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕೆಂದು ಕೋರಿ ನಟ ದರ್ಶನ್ #ActorDarshan ಹೈಕೋರ್ಟ್’ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಮುಂದಿನ ವಿಚಾರಣೆಯವರೆಗೂ ನಿರ್ಬಂಧ ಜಾರಿಯಲ್ಲಿರುತ್ತದೆ ಎಂದು ನ್ಯಾಯಾಲಯ ತಿಳಿಸಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ2 ನಟ ದರ್ಶನ್ ಸೇರಿದಂತೆ ಎಲ್ಲ 17 ಆರೋಪಿಗಳ ವಿರುದ್ಧ ಪೊಲೀಸರು 3,991 ಪುಟಗಳ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post