ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ನಗರದ ಹೃದಯ ಭಾಗದಲ್ಲಿ ಹಾದುಹೋಗಿರುವ ರಾಜಕಾಲುವೆ ದುರಸ್ತಿಗೊಳಿಸಿ ಎಂದು ಸಚಿವ ಈಶ್ವರಪ್ಪ ಅವರಿಗೆ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಮನವಿ ಸಲ್ಲಿಸಲಾಯಿತು.
ಇಂದು ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗಿದ್ದು, ನಗರದ ಹೃದಯ ಭಾಗದಲ್ಲಿರುವ ರಾಜಕಾಲುವೆ ಶರಾವತಿ ನಗರದಿಂದ ಹಾದು ಹೋಗಿ ಸವಳಂಗ ರಸ್ತೆಯ ಮುಖಾಂತರ ಬಸವನಗುಡಿ ಜಯನಗರ ಹೊಂದಿಕೊಂಡಿರುವ ಸಂಪೂರ್ಣ ಹಾಳಾಗಿದೆ. ಮಳೆಗಾಲದ ಸಂದರ್ಭದಲ್ಲಿ ಸುತ್ತಮುತ್ತಲಿನ ಮನೆಗಳಿಗೆ ರಾಜಕಾಲುವೆಯ ನೀರು ನುಗ್ಗಿ ಅಲ್ಲಿಯ ನಿವಾಸಿಗಳ ಜನಜೀವನವೇ ಅಸ್ತವ್ಯಸ್ತಗೊಳ್ಳುತ್ತಿದೆ. ಕೊರೊನಾದ ತುರ್ತು ಸಂದರ್ಭದಲ್ಲಿ ರೋಗ ರುಜಿನಗಳಿಗೆ ಹೆದರಿ ಮನೆ ಖಾಲಿ ಮಾಡುವ ಪರಿಸ್ಥಿತಿ ಬಂದೊದಗಿದೆ ಎಂದು ವಿವರಿಸಿದರು.
ಈ ರಾಜಕಾಲುವೆ ವಿಷಯವಾಗಿ ಹತ್ತಾರು ಬಾರಿ ಜಿಲ್ಲಾಧಿಕಾರಿಗಳಿಗೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ, ತತಕ್ಷಣ ಈ ಬಗ್ಗೆ ಗಮನ ಹರಿಸಿ ರಾಜಕಾಲುವೆ ದುರಸ್ತಿಗೆ ಆದೇಶಿಸಬೇಕು ಎಂದು ವಿನಂತಿಸಿದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುವರ್, ಜಿಲ್ಲಾ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್ , ಶಿವಮೊಗ್ಗ ನಗರಾಧ್ಯಕ್ಷ ಎಚ್.ಪಿ. ಗಿರೀಶ್, ರಾಜ್ಯ ಕಾರ್ಯದರ್ಶಿ ಆರ್. ಕಿರಣ್, ಗ್ರಾಮಾಂತರ ಅಧ್ಯಕ್ಷ ಇ.ಟಿ. ನಿತಿನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ. ಲೋಕೇಶ್ ಇದ್ದರು.
Get In Touch With Us info@kalpa.news Whatsapp: 9481252093
Discussion about this post