ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದಲ್ಲಿ ನಡೆದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ 7 ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.
Also Read: ಹತ್ಯೆ ಪ್ರಕರಣ-ಕ್ರಿಮಿನಲ್ ಹಿನ್ನೆಲೆಯ ಆರು ಮಂದಿ ಬಂಧನ: ಎಸ್’ಪಿ ಲಕ್ಷ್ಮೀ ಪ್ರಸಾದ್ ಮಾಹಿತಿ
ಈ ಕುರಿತಂತೆ ಒಳಾಡಳಿತ(ಕಾನೂನು ಮತ್ತು ಸುವ್ಯವಸ್ಥೆ) ಅಧೀನ ಕಾರ್ಯದರ್ಶಿಗಳು ಅಧಿಸೂಚನೆ ಹೊರಡಿಸಿದ್ದು, 1973ರ ಅಪರಾಧ ದಂಡ ಪ್ರಕ್ರಿಯೆ ಸಂಹಿತೆಯ(ಕೇಂದ್ರ ಅಧಿನಿಯಮ 2/1974) ಸೆಕ್ಷನ್ 21ರ ಅಡಿಯಲ್ಲಿ ಒಟ್ಟು 7 ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳನ್ನು ನೇಮಕ ಮಾಡಿದ್ದಾರೆ.
Also Read: ಶಿವಮೊಗ್ಗದಲ್ಲಿ ಶುಕ್ರವಾರದವರೆಗೂ ಕರ್ಫ್ಯೂ ಮುಂದುವರಿಕೆ
ಯಾವ ವ್ಯಾಪ್ತಿಗೆ ಯಾರು ನೇಮಕ?
- ದೊಡ್ಡಪೇಟೆ ಪೊಲೀಸ್ ಸ್ಟೇಷನ್ ವ್ಯಾಪ್ತಿ: ರವಿಚಂದ್ರ ನಾಯಕ್, ಪ್ರಾಚಾರ್ಯರು, ಜಿಲ್ಲಾ ತರಬೇತಿ ಸಂಸ್ಥೆ
- ದೊಡ್ಡಪೇಟೆ ಪೊಲೀಸ್ ಸ್ಟೇಷನ್ ವ್ಯಾಪ್ತಿ: ಶಿವಕುಮಾರ್, ಮುಖ್ಯ ಆಡಳಿತಾಧಿಕಾರಿ, ಶಿವಮೊಗ್ಗ ವೈದ್ಯಕೀಯ ಸಂಸ್ಥೆ
- ಕೋಟೆ ಪೊಲೀಸ್ ಸ್ಟೇಷನ್ ವ್ಯಾಪ್ತಿ: ಕೊಟ್ರೇಶ್, ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ
- ತುಂಗಾನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿ: ಪ್ರಮೋದ್, ಉಪ ಆಯುಕ್ತರು, ಮಹಾನಗರ ಪಾಲಿಕೆ
- ತುಂಗಾನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿ: ನಾಗರಾಜ್, ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ
- ವಿನೋಬನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿ: ಕಿರಣ್ ಕುಮಾರ್, ಜಂಟಿ ನಿರ್ದೇಶಕರು, ಕೃಷಿ ಇಲಾಖೆ
Also Read: ಹರ್ಷ ಹತ್ಯೆ ಪ್ರಕರಣ: ಫೆ.23ರ ನಾಳೆ ಸೊರಬ ಬಂದ್’ಗೆ ಕರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post