Saturday, March 25, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಕೆಂಪೇಗೌಡರ ಸಮಾಧಿಗೆ ಕಾಯಕಲ್ಪ, ಕೆಂಪಾಪುರ ಅಭಿವೃದ್ಧಿಗೆ 35 ಕೋಟಿ ರೂ. ಯೋಜನೆ

May 23, 2020
in Small Bytes, ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಮಹಾ ಸಮಾಧಿ ಇರುವ ಮಾಗಡಿ ತಾಲ್ಲೂಕಿನ ಕೆಂಪಾಪುರ ಗ್ರಾಮವನ್ನು ವಿಶ್ವದರ್ಜೆಯ ಪ್ರವಾಸಿತಾಣವನ್ನಾಗಿ ಅಭಿವೃದ್ಧಿಪಡಿಸಲು 35 ಕೋಟಿ ರೂಪಾಯಿ ವೆಚ್ಚದ ಯೋಜನೆಯನ್ನು ಸಿದ್ಧಪಡಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಆಶ್ವತ್ಥನಾರಾಯಣ ಪ್ರಕಟಿಸಿದರು.

ಶುಕ್ರವಾರ ಅವರು, ಕೆಂಪಾಪುರ ಗ್ರಾಮಕ್ಕೆ ಭೇಟಿ ನೀಡಿ ಕೆಂಪೇಗೌಡರ ಸಮಾಧಿಗೆ ಪೂಜೆ ಸಲ್ಲಿಸಿದ ನಂತರ ಕೆಂಪಾಪುರ ಕೆರೆಯಲ್ಲಿ ಹೂಳೆತ್ತುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಾರ್ವಜನಿಕರ ಜತೆ ಮಾತನಾಡುತ್ತ ಈ ವಿಷಯವನ್ನು ಘೋಷಿಸಿದರು.

ಇವತ್ತು ಇಡೀ ಜಗತ್ತೇ ಬೆರಗಾಗುವ ರೀತಿಯಲ್ಲಿ ಬೆಂಗಳೂರು ಮಹಾನಗರ ಅಭಿವೃದ್ಧಿಯಾಗುತ್ತಿದೆ. ಆ ಕಾಲದಲ್ಲಿಯೇ ನಗರೀಕರಣದ ಬಗ್ಗೆ ಸ್ಪಷ್ಟ ದೃಷ್ಟಿಕೋನ ಹೊಂದಿದ್ದ ನಾಡಪ್ರಭುಗಳು, ನಮಗೆ ಬೆಲೆಕಟ್ಟಲಾಗದ ನೆಲೆಯೊಂದನ್ನು ಬಿಟ್ಟುಹೋಗಿದ್ದಾರೆ. ಜಾಗತಿಕ ಭೂಪಟದಲ್ಲಿ ರಾಜ್ಯಕ್ಕೊಂದು ಹೆಮ್ಮೆ ಸ್ಥಾನವಿದ್ದರೆ ಅದು ಬೆಂಗಳೂರಿನಿಂದ ಮಾತ್ರ, ಅದನ್ನು ಕಟ್ಟಿ ನಮಗೆಲ್ಲ ಬಿಟ್ಟುಹೋದ ಕೆಂಪೇಗೌಡರಿಂದ ಮಾತ್ರ ಸಾಧ್ಯವಾಗಿದೆ ಎಂದು
ಅವರು ಪ್ತತಿಪಾದಿಸಿದರು.

ಈ ಹಿನ್ನೆಲೆಯಲ್ಲಿ ಕೆಂಪಾಪುರವನ್ನು ಅಭಿವೃದ್ಧಿಪಡಿಸಲು ಸರಕಾರ ಮುಂದಾಗಿದೆ. ಅವರ ಸಾಧನೆಗಳನ್ನು ಮುಂದಿನ ತಲೆಮಾರುಗಳಿಗೂ ತಿಳಿಯುವಂತೆ ಮಾಡಬೇಕಾಗಿದೆ. ಈ ಯೋಜನೆಗೆ ಎಂಟು ಎಕರೆ ಭೂಮಿಯ ಅಗತ್ಯವಿದ್ದು, ಎಷ್ಟು ಬೇಗ ಭೂಮಿ ಸರಕಾರಕ್ಕೆ ಲಭ್ಯವಾಗಲಿದೆಯೋ ಅಷ್ಟು ತ್ವರಿತವಾಗಿ ನಾವು ಕಾಮಗಾರಿಯನ್ನು ಪ್ರಾರಂಭ ಮಾಡಲಿದ್ದೇವೆ ಎಂದರು.

ಸಮಾಧಿ ಸ್ಥಳ, ಕೆಂಪಾಪುರ ಕೆರೆ ಸೇರಿ ಇಡೀ ಗ್ರಾಮವನ್ನು ಅಭಿವೃದ್ಧಿ ಮಾಡುವ ಬಗ್ಗೆ ಈಗಾಗಲೇ ಸಿಡಾಕ್ ಸಂಸ್ಥೆ ಸಮಗ್ರ ಯೋಜನಾ ವರದಿ ನೀಡಿದೆ. ಜೂನ್ 27ರಂದು ಕೆಂಪೇಗೌಡರ ಜಯಂತಿ ಇದ್ದು, ಆ ದಿನದೊಳಗೆ ಭೂಮಿ ಸಿಕ್ಕರೆ ಆ ಪುಣ್ಯದಿನವೇ ಯೋಜನೆಗೆ ಶಂಕುಸ್ಥಾಪನೆ ಮಾಡಲು ಸರಕಾರ ಸಿದ್ಧವಿದೆ. ಆ ಮುಂದಿನ ವರ್ಷ ನಾಡಪ್ರಭುಗಳ ಜಯಂತಿ ದಿನವೇ ಅಭಿವೃದ್ಧಿಯಾದ ಕೆಂಪಾಪುರವನ್ನು ಲೋಕಾರ್ಪಣೆ ಮಾಡಲಾಗುವುದು. ಒಂದೇ ವರ್ಷದಲ್ಲಿ ಅಷ್ಟೂ ಕಾಮಗಾರಿಯನ್ನು ಮುಗಿಸುವ ಹೊಣೆ ನಮ್ಮದು. ಆ ವರ್ಷದ ಜಯಂತಿಯನ್ನು ಕೆಂಪಾಪುರದಲ್ಲೇ ಆಯೋಜಿಸುವ ಆಶಯ ನಮ್ಮದು ಎಂದು ಅವರು ತಿಳಿಸಿದರು.

ದಾಖಲೆಗಳ ಪ್ರಕಾರ ಕೆಂಪೇಗೌಡರು 46 ಕಡೆಗಳಲ್ಲಿ ಕೆಲಸ ಮಾಡಿದ್ದಾರೆ. ಅಷ್ಟೂ ತಾಣಗಳನ್ನು ಅನುಸಂಧಾನಗೊಳಿಸಿ ಅವರ ಸಾಧನೆಗಳನ್ನು ಅಜರಾಮರಗೊಳಿಸಬೇಕು ಎಂಬುದೇ ಸರಕಾರದ ಆಶಯ. ಇನ್ನೊಂದೆಡೆ ಮಾಗಡಿ ನಮ್ಮ ಪೂರ್ವಿಕರು ಬಾಳಿ ಬದುಕಿದ ನೆಲ. ನನಗೂ ಭಾವನಾತ್ಮಕವಾಗಿ ಈ ನೆಲದ ಜತೆ ಸಂಬಂಧವಿದೆ. ಈ ಮೂಲಕ ನಾಡಪ್ರಭುಗಳಿಗೆ ನನ್ನದೂ ಸೇವೆ ಸಲ್ಲಲಿ ಎಂಬ ಚಿಕ್ಕ ಅಭಿಲಾಶೆ ನನ್ನದು. ಮುಂದಿನ ದಿನಗಳಲ್ಲಿ ಕೆಂಪಾಪುರ ಕರ್ನಾಟಕವಷ್ಟೇ ಅಲ್ಲ ಭಾರತದ ಹೆಸರಾಂತ ಪ್ರವಾಸಿ ತಾಣವಾಗಬೇಕು. ರಾಜ್ಯಕ್ಕೆ ಭೇಟಿ ನೀಡುವ ಪ್ರತಿಯೊಬ್ಬ ಪ್ರವಾಸಿಗರೂ ತಪ್ಪದೇ ಕೆಂಪಾಪುರಕ್ಕೆ ಭೇಟಿ ನೀಡಲೇಬೇಕು. ಅಂತಹ ಉತ್ಕೃಷ್ಟ ಮಟ್ಟದಲ್ಲಿ ಈ ಗ್ರಾಮವನ್ನು ಅಭಿವೃದ್ಧಿಗೊಳಿಸಲಾಗುವುದು. ಇದಕ್ಕೆ ಗ್ರಾಮಸ್ಥರ ಸಹಕಾರ ಮುಖ್ಯ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ವಿಮಾನ ನಿಲ್ದಾಣದಲ್ಲಿ ಪ್ರತಿಮೆ
ಬೆಂಗಳೂರು ವಿಮಾನ ನಿಲ್ದಾಣದ ಮುಂದೆ 108 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆ ಸ್ಥಾಪನೆ ಮಾಡುವ 66 ಕೋಟಿ ರೂ ವೆಚ್ಚದ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದೆ. ವಿಧಾನಸೌಧ ಬಳಿ ಸ್ಥಾಪನೆಯಾಗಿರುವ ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ತಯಾರಿಸಿದ ರಾಮಸುತ ಅವರೇ ನಾಡಪ್ರಭುಗಳ ಈ ಬೃಹತ್ ಪ್ರತಿಮೆಯನ್ನು ಮಾಡುತ್ತಿದ್ದಾರೆ. ಈಗಾಗಲೇ ಅವರಿಗೆ ಕಾರ್ಯಾದೇಶವನ್ನೂ ನೀಡಲಾಗಿದೆ. ಯೋಜನೆಗೆ ಕೆಂಪೇಗೌಡರ ಜಯಂತಿ ದಿನವೇ ಶಂಕುಸ್ಥಾಪನೆ ಮಾಡಲು ನಿರ್ಧರಿಸಲಾಗಿದೆ ಎಂದು ಇದೇ ವೇಳೆ ಉಪ ಮುಖ್ಯಮಂತ್ರಿಗಳು ಘೋಷಿಸಿದರು.

ಮಾಗಡಿ ಶಾಸಕ ಮಂಜುನಾಥ, ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ, ರಾಮನಗರ ಜಿಲ್ಲಾಧಿಕಾರಿ ಡಾ. ಎಂ.ಎಸ್. ಅರ್ಚನಾ, ರಾಮನಗರ ಜಿ.ಪಂ. ಸಿಇಒ ಇಕ್ರಂ, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್‌ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

Get in Touch With Us info@kalpa.news Whatsapp: 9481252093

Tags: DCM AshwathnarayanKannadaNewsWebsiteLatestNewsKannadaNadaprabhu Kempegowdaಕೆಂಪಾಪುರ ಕೆರೆನಾಡಪ್ರಭು ಕೆಂಪೇಗೌಡರುಬೆಂಗಳೂರುವಿಮಾನ ನಿಲ್ದಾಣ
Previous Post

ಆರೋಗ್ಯ ಸೇತು ಅಪ್ಲಿಕೇಶನ್ ಪ್ರತಿಯೊಬ್ಬ ನಾಗರಿಕನ ಸುರಕ್ಷಾ ಕವಚವಿದ್ದಂತೆ: ಸಚಿವ ಡಾ.ಕೆ.ಸುಧಾಕರ್

Next Post

ಈದ್ ಹಬ್ಬವನ್ನು ಸರಳವಾಗಿ ಮನೆಯಲ್ಲಿ ಆಚರಿಸಿ: ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಈದ್ ಹಬ್ಬವನ್ನು ಸರಳವಾಗಿ ಮನೆಯಲ್ಲಿ ಆಚರಿಸಿ: ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ಇನ್ಮುಂದೆ ಕನ್ನಡದಲ್ಲೇ ದೊರೆಯಲಿದೆ ಮೆಡಿಕಲ್, ಇಂಜಿನಿಯರಿಂಗ್ ಶಿಕ್ಷಣ: ಪ್ರಧಾನಿ ಮೋದಿ

March 25, 2023

ಸೇನಾ ಹೆಲಿಕಾಪ್ಟರ್’ನಲ್ಲಿ ಶಿವಮೊಗ್ಗಕ್ಕೆ ಆಗಮಿಸಿ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ ಪ್ರಧಾನಿ ಮೋದಿ

March 25, 2023

ಕಾಂಗ್ರೆಸ್ ಮೊದಲ ಪಟ್ಟಿ: ಡಿ.ಕೆ. ರವಿ ಪತ್ನಿ ಸೇರಿ ಆರು ಮಹಿಳೆಯರಿಗೆ ಟಿಕೇಟ್

March 25, 2023

ಕೌಂಟರ್’ನಲ್ಲಿ ಟಿಕೇಟ್ ಖರೀದಿಸಿ ಮೆಟ್ರೋದಲ್ಲಿ ಪ್ರಯಾಣಿಸಿದ ಪ್ರಧಾನಿ ಮೋದಿ: ಟಿಕೇಟ್ ನೀಡಿದ್ದು ಯಾರು?

March 25, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಇನ್ಮುಂದೆ ಕನ್ನಡದಲ್ಲೇ ದೊರೆಯಲಿದೆ ಮೆಡಿಕಲ್, ಇಂಜಿನಿಯರಿಂಗ್ ಶಿಕ್ಷಣ: ಪ್ರಧಾನಿ ಮೋದಿ

March 25, 2023

ಸೇನಾ ಹೆಲಿಕಾಪ್ಟರ್’ನಲ್ಲಿ ಶಿವಮೊಗ್ಗಕ್ಕೆ ಆಗಮಿಸಿ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ ಪ್ರಧಾನಿ ಮೋದಿ

March 25, 2023

ಕಾಂಗ್ರೆಸ್ ಮೊದಲ ಪಟ್ಟಿ: ಡಿ.ಕೆ. ರವಿ ಪತ್ನಿ ಸೇರಿ ಆರು ಮಹಿಳೆಯರಿಗೆ ಟಿಕೇಟ್

March 25, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!