No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, April 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಎಸ್‌. ರುದ್ರೇಗೌಡರ ಅಭಿನಂದನಾ ಸಮಿತಿಯಿಂದ ಜ. 27 ರಂದು ಪ್ಲೇಟ್‌ ಬ್ಯಾಂಕ್‌ ಲೋಕಾರ್ಪಣೆ

ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘ ಸಹಕಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 26, 2024
in ಶಿವಮೊಗ್ಗ
0
ಶಿವಮೊಗ್ಗದಲ್ಲಿ ಕೈಗಾರಿಕೆಗಳ ಕಾರ್ಯ ಸ್ಥಗಿತಗೊಳಿಸಿರುವುದು ಆಶ್ಚರ್ಯ ಮೂಡಿಸಿದೆ: ಎಂಎಲ್’ಸಿ ರುದ್ರೇಗೌಡ

ಸಾಂದರ್ಭಿಕ ಚಿತ್ರ

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಖ್ಯಾತ ಕೈಗಾರಿಕೋದ್ಯಮಿಗಳು ಹಾಗೂ ವಿಧಾನ ಪರಿಷತ್‌ ಸದಸ್ಯರಾದ ಶ್ರೀ ಎಸ್‌.ರುದ್ರೇಗೌಡರ ಅಭಿನಂದನಾ ಕಾರ್ಯಕ್ರಮದ ಅಂಗವಾಗಿ ಜ. 27 ರಂದು ಬೆಳಗ್ಗೆ ಪ್ಲೇಟ್‌ ಬ್ಯಾಂಕ್‌ನ್ನು ಅಭಿನಂದನಾ ಸಮಿತಿಯು ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘಕ್ಕೆ ಲೋಕಾರ್ಪಣೆಗೊಳಿಸಲಿದೆ.

ಶಿವಮೊಗ್ಗ ನಗರದ ಹಾಗೂ ಜಿಲ್ಲೆಯ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಬಸವೇಶ್ವರ ವೀರಶೈವ ಸೇವಾ ಸಮಾಜ, ಎಸ್‌.ರುದ್ರೇಗೌಡರ ಅಭಿನಂದನಾ ಸಮಿತಿ, ರುದ್ರೇಗೌಡರ ಅಭಿಮಾನಿ ಬಳಗದ ಸಂಯುಕ್ತಾಶ್ರಯದಲ್ಲಿ ಈ ಯೋಜನೆಯನ್ನು ಬೆಂಗಳೂರಿನ ಅದಮ್ಯ ಚೇತನ ಫೌಂಡೇಷನ್ನಿನ ಅಧ್ಯಕ್ಷೆ ಶ್ರೀಮತಿ ತೇಜಸ್ವಿನಿ ಅನಂತಕುಮಾರ್‌ ಲೋಕಾರ್ಪಣೆ ಮಾಡಲಿದ್ದಾರೆ.
ಸಾರ್ವಜನಿಕರು ಹಮ್ಮಿಕೊಳ್ಳುವ ಯಾವುದೇ ಸಭೆ ಸಮಾರಂಭ ಇತರೆ ಕಾರ್ಯಗಳಲ್ಲಿ ಪ್ಲಾಸ್ಟಿಕ್‌, ಪೇಪರ್‌ ತಟ್ಟೆಗಳನ್ನು ಬಳಸದೇ ಶೂನ್ಯ ತ್ಯಾಜ್ಯ ಪದ್ಧತಿ ಪ್ರೋತರ‍ಸಾಹಿಸುವುದು ಇದರ ಉದ್ದೇಶ, ಪ್ಲೇಟ್‌ ಬಳಕೆಯಿಂದ ಕನಿಷ್ಠ ಶೇ. 25 ರಷ್ಟು ಘನ ತ್ಯಾಜ್ಯ ಕಡಿಮೆ ಮಾಡಬಹುದಾಗಿದ್ದು, ಈ ನಿಟ್ಟಿನಲ್ಲಿ ಪ್ಲೇಟ್‌ ಸಹಕಾರಿಯಾಗಲಿದೆ.

4000 ಸಾವಿರ ಊಟದ ಸ್ಟೀಲ್‌ ತಟ್ಟೆ, 2000 ಸಾವಿರ ಲೋಟ , ಟೀ ಮತ್ತು ಕಾಫಿ ಕಪ್‌ಗಳು ಹಾಗೂ ಚಮಚಗಳು ಪ್ಲೇಟ್‌ ಬ್ಯಾಂಕ್‌ನಲ್ಲಿ ಲಭ್ಯವಿರುತ್ತದೆ. ಅಗತ್ಯ ಸಂದರ್ಭಗಳಲ್ಲಿ ಎಲ್ಲರೂ ಇದರ ಉಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.

ನಗರದ ನೆಹರೂ ರಸ್ತೆಯ ಶ್ರೀ ಬಸವೇಶ್ವರ ಸಮಾಜಕ್ಕೆ ಪ್ಲೇಟ್‌ ಬ್ಯಾಂಕನ್ನು ಹಸ್ತಾಂತರ ಮಾಡಿದ ನಂತರ ಸಮಾಜವು ಅದರ ನಿರ್ವಹಣೆ ಮಾಡಲಿದೆ. ಸ್ಟೀಲ್‌ ಪರಿಕರಗಳು ಅಗತ್ಯವಿದ್ದಲ್ಲಿ ಮುಂಗಡವಾಗಿ ಹಣವನ್ನು ಕಾಯ್ದಿರಿಸಿ, ವಸ್ತುಗಳನ್ನು ವಾಪಾಸು ಕೊಟ್ಟ ನಂತರ ಹಣವನ್ನು ನೀಡಲಾಗುತ್ತದೆ. ಈ ಸೇವೆ ಸಂಪೂರ್ಣ ಉಚಿತವಾಗಿದ್ದು, ಡಿಶ್‌ ವಾಷರ್‌ ಕೊಡಲಾಗುತ್ತದೆ,
ಇದೊಂದು ಮಾದರಿಯ ಕಾರ್ಯವಾಗಿದ್ದು,  ಯಾವುದೇ ಸಮಾರಂಭಗಳಲ್ಲಿ ತಟ್ಟೆ, ಸ್ಟೀಲ್‌ ಲೋಟಗಳನ್ನು ಬಳಸುವುದು ಒಳ್ಳೆಯದು. ಏಕೆಂದರೆ ಪ್ಲಾಸ್ಟಿಕ್‌ ತಟ್ಟೆ, ಲೋಟ ಬಳಸಿದ ನಂತರ ಭೂಮಿಗೆ ಬಿಸಾಡುವುದರಿಂದ ಭೂಮಿ ಮತ್ತು ಪರಿಸರಕ್ಕೆ ಸಾಕಷ್ಟು ಹಾನಿಯುಂಟಾಗುತ್ತದೆ. ನಾವು ಬಳಸಿ ಭೂಮಿಗೆಸೆಯುವ ಪ್ಲಾಸ್ಟಿಕ್‌ ಸುಮಾರು 200 ವರ್ಷಗಳ ಕಾಲ ಕೊಳೆಯೋದಿಲ್ಲ. ಪ್ಲಾಸ್ಟಿಕ್‌ ಬಿದ್ದ ಜಾಗದಲ್ಲಿ ಯಾವುದೇ ಸಸ್ಯವೂ ಬೆಳೆಯೋದಿಲ್ಲ.
ಒಂದು ಚಿಟಿಗೆ ಹೊಡೆಯುವಷ್ಟರಲ್ಲಿ 1ಮಿಲಿಯನ್‌ ಪ್ಲಾಸ್ಟಿಕ್‌ ವಾಟರ್‌ ಬಾಟಲ್‌ ಸೇಲ್‌ ಆಗುತ್ತಿದೆ. ಒಂದು ವರ್ಷಕ್ಕೆ ಸುಮಾರು 3 ಟ್ರಿಲಿಯನ್‌ ಪ್ಲಾಸ್ಟಿಕ್‌ ಬ್ಯಾಗ್‌ಗಳು ಸೇಲ್‌ ಆಗುತ್ತಿದೆ, ಆದರೆ, ಬಳಸುವ ಪ್ಲಾಸ್ಟಿಕ್‌ ಶೇ.10 ರಷ್ಟು ಮಾತ್ರ ರೀ ಸೈಕ್ಲಿಂಗ್‌ ಆಗುತ್ತಿದೆ, ಉಳಿದ್ಲವೂ ಭೂಮಿಯನ್ನು ಸೇರುತ್ತಿದೆ. ಹೀಗೆ ಭೂಮಿಗೆಸೆಯುವ ಪ್ಲಾಸಿಕ್‌ ಗಾಳಿ, ನೀರು ಹಾಗೂ ಆಹಾರದ ಮೂಲಕ ಕಣಗಳ ರೂಪದಲ್ಲಿ ಮನುಷ್ಯನ ದೇಹವನ್ನು ಗೊತ್ತಿಲ್ಲದ ಹಾಗೆ ಸೇರಿಕೊಳ್ಳುತ್ತಿದೆ.

ಒಬ್ಬ ಮನುಷ್ಯ ಒಂದು ವರ್ಷಕ್ಕೆ ಏನಿಲ್ಲವೆಂದರೂ ಒಂದು ಎಟಿಎಂ ಕಾರ್ಡ್‌ಷ್ಟು ಪ್ಲಾಸ್ಟಿಕ್‌ ನ್ನು ಸೇವಿಸುತ್ತಿದ್ದಾನೆ, ಮನುಷ್ಯನ ನಿಷ್ಕಾಳಜಿಯಿಂದಾಗಿ ಕುಡಿಯುವ ನೀರು, ಗಾಳಿ, ಮಣ್ಣು ಎಲ್ಲವೂ ಕುಲುಷಿತಗೊಳ್ಳುತ್ತಿದೆ.
ಶಿವಮೊಗ್ಗ ನಗರವೊಂದರಿಂದಲೇ ಅನುಪಿನಕಟ್ಟೆ ತ್ಯಾಜ್ಯ ವಿಲೇ ಘಟಕ್ಕೆ ಪ್ರತಿ ದಿನ 161 ಮೆಟ್ರಿಕ್‌ ಟನ್‌ ತ್ಯಾಜ್ಯವಿಲೇ ಆಗುತ್ತಿದೆ.

ಹೆಚ್ಚುತ್ತಿರುವ ಜನಸಂಖ್ಯೆ, ಬೆಳೆಯುತ್ತಿರುವ ಪಟ್ಟಣ, ನಗರ ಹಾಗೂ ಮಹಾನಗರ ಪ್ರದೇಶಗಳಲ್ಲಿ ತ್ಯಾಜ್ಯ ಹೆಚ್ಚುತ್ತಲೇ ಇದೆ, ವಿಲೇವಾರಿಯೂ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಮಹಾನಗರ ಮುಂಬೈನಲ್ಲಿ ಪ್ರತಿ ದಿನಕ್ಕೆ 7,500 ಟನ್‌, ದೆಹಲಿಯಲ್ಲಿ ಪ್ರತಿದಿನ 11,332 ಟನ್‌ ಘನತ್ಯಾಜ್ಯ ಉತ್ಪಾದನೆಯಾದರೆ, ಇದರಲ್ಲಿ ಪ್ಲಾಸ್ಟಿಕ್‌ ತ್ಯಾಜ್ಯವೇ 689.8 ಟನ್‌ ಉತ್ಪಾದನೆಯಗುತ್ತಿದೆ. ಇದು ಭಾರತದ ಮೆಟ್ರೋಪಾಲಿಟನ್‌ ನಗರಗಳಲ್ಲಿ ಅತ್ಯಧಿಕ.

ಹಾಗೆಯೇ ಕೋಲ್ಕತ್ತಾ ಮತ್ತು ಚೆನ್ನೈ ಅನುಕ್ರಮವಾಗಿ 429.5 ಮತ್ತು 429.4 ಟನ್‌ ಪ್ಲಾಸ್ಟಿಕ್‌ ತ್ಯಾಜ್ಯ ಉತ್ಪಾದನೆಯಾಗುತ್ತಿದ್ದು, ಮಹಾನಗರಗಳಲ್ಲಿ ಎರಡನೇ ಮತ್ತು ಮೂರನೇ ಸ್ಥಾನದಲ್ಲಿವೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ತ್ಯಾಜ್ಯ ಸಂಗ್ರಹವಾಗುತ್ತಿರುವುದು ಸಮರ್ಪಕ ವಿಲೇವಾರಿಗೆ ಸಮಸ್ಯೆಯಾದರೆ, ಮತ್ತೊಂದೆಡೆ ಪರಿಸರ ಹಾಗೂ ಜನರ ಆರೋಗ್ಯದ ಮೇಲೂ ದುಷ್ಪರಿಣಾಮವನ್ನು ಬೀರುತ್ತಿದೆ. ಪ್ಲೇಟ್‌ ಬ್ಯಾಂಕ್‌ನಂತಹ ಯೋಜನೆ ಪರಿಸ್ನೇಹಿಯಾಗಲಿದೆ. ಇದರ ಲಾಭವನ್ನು ಅಗತ್ಯ ಇದ್ದವರು ಪಡೆದುಕೊಳ್ಳಬಹುದು.
Kalahamsa Infotech private limitedಪತ್ರಿಕಾಗೋಷ್ಟಿಯಲ್ಲಿ ಅಭಿನಂದನಾ ಸಮಿತಿಯ ಅಧ್ಯಕ್ಷರಾದ ಡಿ.ಜಿ. ಬೆನಕಪ್ಪ, , ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್‌.ಎಸ್‌.ಜ್ಯೋತಿಪ್ರಕಾಶ್‌, ಉದ್ಯಮಿ ರುದ್ರೇಶ್, ಉದ್ಯಮಿ ಬಾಳೆಕಾಯಿ ಮೋಹನ್‌ , ಬಳ್ಳೆಕೆರೆ ಸಂತೋಷ್ , ಓಪನ್ ಮೈಂಡ್ಸ್ ಸ್ಕೂಲ್ ನ ಕಿರಣ್ ಕುಮಾರ್ ಕೆ.ಮತ್ತಿತರರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Malnad NewsMLC S RudregowdaShimogaShivamogga News
Share196Tweet123Send
Previous Post

ಅರಣ್ಯದ ನೀರುಗುಂಡಿಗೆ ಸೌರಪಂಪ್ ನಿಂದ ನೀರು ಹಾಯಿಸಿ: ಈಶ್ವರ ಖಂಡ್ರೆ

Next Post

ಪ್ರತಿಯೊಬ್ಬರು ಬಲಿಷ್ಟ ರಾಷ್ಟ್ರ ನಿರ್ಮಾಣದ ಸಂಕಲ್ಪ ಕೈಗೊಳ್ಳಬೇಕು: ತಹಶೀಲ್ದಾರ್  ಹುಸೇನ್ ಸರಕವಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪ್ರತಿಯೊಬ್ಬರು ಬಲಿಷ್ಟ ರಾಷ್ಟ್ರ ನಿರ್ಮಾಣದ ಸಂಕಲ್ಪ ಕೈಗೊಳ್ಳಬೇಕು: ತಹಶೀಲ್ದಾರ್  ಹುಸೇನ್ ಸರಕವಸ್

ಪ್ರತಿಯೊಬ್ಬರು ಬಲಿಷ್ಟ ರಾಷ್ಟ್ರ ನಿರ್ಮಾಣದ ಸಂಕಲ್ಪ ಕೈಗೊಳ್ಳಬೇಕು: ತಹಶೀಲ್ದಾರ್  ಹುಸೇನ್ ಸರಕವಸ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

April 17, 2026
ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

April 17, 2026
ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

April 17, 2026
ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

April 17, 2026
ಹೊಸ ವಿನ್ಯಾಸದ ನವೀಕರಣದೊಂದಿಗೆ ಶೈಲಿಯಲ್ಲಿ ಬದಲಾದ ಯಮಹಾ ಫ್ಯಾಸಿನೊ

ಹೊಸ ವಿನ್ಯಾಸದ ನವೀಕರಣದೊಂದಿಗೆ ಶೈಲಿಯಲ್ಲಿ ಬದಲಾದ ಯಮಹಾ ಫ್ಯಾಸಿನೊ

April 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL