ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸಾಗರ: ಒಂದೆಡೆ ದೇಶವ್ಯಾಪಿ ಕೊರೋನಾ ವೈರಸ್ ವಿರುದ್ಧ ಹೋರಾಡಲು ಲಾಕ್’ಡೌನ್ ಘೋಷಣೆ ಮಾಡಿದ್ದರೆ, ಇನ್ನೊಂದೆಡೆ ಮಲೆನಾಡಿನಲ್ಲಿ ರಕ್ತದ ಕಲೆ ಬಿದ್ದಿದೆ.
ಸಾಗರ ತಾಲೂಕಿನ ಮಂಕಳಲೆ ಗ್ರಾಮದಲ್ಲಿ ಅನ್ಯ ಕೋಮಿನ ಯುವಕರು ಇಬ್ಬರು ಯುವಕರಿಗೆ ಚೂರಿಯಿಂದ ಇರಿದಿದ್ದು, ಇದರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಮಂಕಳಲೆ ಗ್ರಾಮದಲ್ಲಿ ಗ್ರಾಮಸ್ಥರು ಯಾರಿಗೂ ಗ್ರಾಮಕ್ಕೆ ಪ್ರವೇಶವಿಲ್ಲ ಎಂಬ ಬೋರ್ಡ್ ಹಾಕಿ ಬೇಲಿ ಹಾಕಿದ್ದರು. ಅದನ್ನು ಕೆಡವಿ ಗ್ರಾಮದ ಕಾಲಿ ಖಾಸಗೀ ಜಾಗದಲ್ಲಿ ಇಸ್ಪೀಟು ಆಡುತ್ತಿದ್ದ ಸುಮಾರು 15 ಜನ ಸಾಗರದ ಕೆಲವು ಯುವಕರನ್ನು ಗಮನಿಸಿದ ಸ್ಥಳೀಯರು ಸರಿಯಾಗಿ ಗದರಿಸಿ ಕಳಿಸಿರುತ್ತಾರೆ.
ತದನಂತರ ಹಾಳುಗೆಡವಿದ ಬೇಲಿಯನ್ನು ಸರಿಪಡಿಸುತ್ತಿದ್ದ ಸಂದರ್ಭದಲ್ಲಿ ವಾಪಾಸ್ ಆಗಮಿಸಿದ ಕಿಡಿಗೇಡಿಗಳು ಅದೇ ಗ್ರಾಮದ ಇಬ್ಬರು ಯುವಕರಿಗೆ ಚೂರಿ ಇರಿದು ಪರಾರಿಯಾಗಿದ್ದಾರೆ.
ಅಶೋಕ ಮತ್ತು ಹರೀಶ ಎಂಬುವವರಿಗೆ ಚೂರಿ ಇರಿದು ಇನ್ನಿತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಯುವಕರು ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಂತಾಜನಕ ಸ್ಥಿತಿಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಅಶೋಕ ಎಂಬ ಯುವಕನನ್ನು ಮುಂದಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯಲಾಗಿದೆ.
Get in Touch With Us info@kalpa.news Whatsapp: 9481252093
Discussion about this post