No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸಾಗರ

ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬಾ ಜಾತ್ರೆಗೆ ಅದ್ಧೂರಿ ಚಾಲನೆ

14  ಅಡಿ ಎತ್ತರದ ಮಾರಿಕಾಂಬಾ ಮೂರ್ತಿ | ದೇವರ ದರ್ಶನಕ್ಕಾಗಿ ರಾತ್ರಿಯಿಂದಲೇ ಸಾಲುಗಟ್ಟಿನಿಂತ ಜನರು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 7, 2023
in ಸಾಗರ
0
ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬಾ ಜಾತ್ರೆಗೆ ಅದ್ಧೂರಿ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸಾಗರ  |

ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬಾ ಜಾತ್ರೆಗೆ ಮಂಗಳವಾರ ಅದ್ಧೂರಿಯಾಗಿ ಚಾಲನೆ ದೊರಕಿತು. ಒಂಬತ್ತು ದಿನಗಳ ಕಾಲ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆಯ ಮೊದಲ ದಿನದ ಸಾಂಪ್ರಾದಾಯಿಕ ಪೂಜಾ ವಿಧಿ ವಿಧಾನಗಳು ಬೆಳಗ್ಗೆ ಬ್ರಾಹ್ಮೀ ಮಹೂರ್ತದಲ್ಲಿ ನಡೆಯಿತು. ಜಾತ್ರೆಯ ಮೊದಲ ದಿನವೇ ಸಾವಿರಾರು ಭಕ್ತರು ದೇವಿಯ ದರ್ಶನ ಪಡೆದರು.

ಮಂಗಳವಾರ ಬೆಳಗಿನ ಜಾವ 3 ಗಂಟೆಗೆ ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಹಾಗಣಪತಿ ದೇವಾಲಯದಲ್ಲಿ ತಾಯಿ ಶ್ರೀ ಮಾರಿಕಾಂಬೆಯ ತಾಳಿ ಮತ್ತು ಆಭರಣಗಳಿಗೆ ಪೂಜೆ ಸಲ್ಲಿಸಲಾಯಿತು. ವಿಧಿವಿಧಾನಗಳನ್ನು ದೇವಾಲಯದ ಪ್ರಧಾನ ಅರ್ಚಕ ವಿದ್ವಾನ್ ಪಿ.ಎಲ್.ಗಜಾನನ ಭಟ್ ನೆರವೇರಿಸಿದರು. ಶ್ರೀ ಮಾರಿಕಾಂಬಾ ಜಾತ್ರಾ ಸಮಿತಿಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ನಂತರ ಸಂಪ್ರದಾಯದಂತೆ ಪುರೋಹಿತ ರಮೇಶ ಭಟ್ಟರ ಮನೆಯಲ್ಲಿ ಪೂಜಾ ಕಾರ್ಯಕ್ರಮ ನಡೆದವು.

ರಾತ್ರಿಯಿಂದಲೇ ದೇವರ ದರ್ಶನಕ್ಕೆ ಜನರ ಸಾಲು
ಶ್ರೀ ಮಾರಿಕಾಂಬಾ ಜಾತ್ರೆಯ ಮೊದಲ ದಿನದಂದು ತವರುಮನೆಯಲ್ಲಿ ಶ್ರೀ ಮಾರಿಕಾಂಬೆ ದರ್ಶನಕ್ಕಾಗಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಸೋಮವಾರ ರಾತ್ರಿಯಿಂದಲೇ ಸರದಿ ಸಾಲಿನಲ್ಲಿ ನಿಂತಿದ್ದರು. ಸೋಮವಾರ ರಾತ್ರಿ ದೇವಸ್ಥಾನದ ಆವರಣದಲ್ಲಿ ನೂರಾರು ಜನರು ಸೇರಿದ್ದರು. ಮಂಗಳವಾರ ಬೆಳಗಿನ ಜಾವ 1 ಗಂಟೆಯಿಂದಲೇ ಸರತಿ ಸಾಲು ಹೆಚ್ಚಾಗತೊಡಗಿತು. ಮಂಗಳವಾರ ಬೆಳಗ್ಗೆ ಪೂಜೆಯ ಸಂದರ್ಭದಲ್ಲಿ ದೇವರ ದರ್ಶನಕ್ಕೆ ನಿಂತಿದ್ದ ಸರದಿ ಸಾಲು ಸಾಗರ ಪಟ್ಟಣದ ಟೌನ್‌ಪೊಲೀಸ್ ಠಾಣೆ ದಾಟಿತ್ತು. ದೈವಜ್ಞ ಸಮಾಜದ ಯುವಕರು ಹಾಗೂ ಆನಂದ ಸಾಗರ ಟ್ರಸ್ಟ್ ವತಿಯಿಂದ ಸರತಿ ಸಾಲಿನಲ್ಲಿ ನಿಂತಿದ್ದವರಿಗೆ ಚಹಾ, ಕಾಫಿ, ಬಾದಾಮಿ ಹಾಲನ್ನು ಉಚಿತವಾಗಿ ವಿತರಿಸಿದರು. ಜಾತ್ರೆಗೆ ಆಗಮಿಸಿದ್ದ ಸಾರ್ವಜನಿಕರಿಗೆ ಜಾತ್ರಾ ಸಮಿತಿಯಿಂದ ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು.

ಶ್ರೀ ಮಹಾಗಣಪತಿ ದೇವಾಲಯದಿಂದ ಮಂಗಳವಾದ್ಯಗಳೊಂದಿಗೆ ಸಾಗರ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿ ಬಂದ ದೇವಿಯ ಆಭರಣಗಳನ್ನು ತವರುಮನೆಗೆ ತರಲಾಯಿತು. ಸಾಗರ ನಗರದ ತವರು ಮನೆಯಲ್ಲಿ ಪ್ರತಿಷ್ಠಾಪಿಸಿದ್ದ ಅತ್ಯಾಕರ್ಷಕವಾದ ಶ್ರೀ ಮಾರಿಕಾಂಬಾ ವಿಗ್ರಹಕ್ಕೆ ವಿವಿಧ ಸಾಂಪ್ರಾದಾಯಿಕ ಆಚರಣೆಗಳನ್ನು ನಡೆಸಿ ಆಭರಣಗಳನ್ನು ತೊಡಿಸಲಾಯಿತು.
ಪೂಜಾ ಕಾರ್ಯಕ್ರಮದ ನಂತರ ತಾಯಿಯ ವಿಗ್ರಹಕ್ಕೆ ಭಾರಿ ಗಾತ್ರದ ಹಾರ ಸೇರಿದಂತೆ ವೈವಿಧ್ಯಮಯ ಹೂವಿನ ಅಲಂಕಾರ ನಡೆಸಿ ಮಹಾಮಂಗಳಾರತಿ ನಡೆಸಲಾಯಿತು. ನಂತರ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.

Also read: ಟರ್ಕಿ ಮಾರಕ ಭೂಕಂಪನಕ್ಕೆ ಅನಾಥರಾದ ಮಕ್ಕಳು: ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಇಬ್ಬರ ರಕ್ಷಣೆ

ತವರು ಮನೆಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರಧಾನ ಅರ್ಚಕ ಮಧುಕರ್ ಭಟ್, ಪುರೋಹಿತ ರಮೇಶ್ ಭಟ್, ಗಜಾನನ ಜೋಯ್ಸ್, ನೀಲಕಂಠ ಜೋಯ್ಸ್, ಸದಾಶಿವ ಜೋಯ್ಸ್, ರಾಘವೇಂದ್ರ ಭಟ್, ನವೀನ್ ಜೋಯ್ಸ್, ಸುಧೀಂದ್ರ ಜೋಯ್ಸ್, ಲಕ್ಷ್ಮಣ್ ಜೋಯ್ಸ್ ಇತರರು ಇದ್ದರು. ಗಣಪತಿ ದೇವಸ್ಥಾನದಿಂದ ಮಾರಿಕಾಂಬಾ ದೇವಸ್ಥಾನದ ತವರು ಮನೆಯವರೆಗೂ ಮೆರವಣಿಗೆಯಲ್ಲಿ ಸಾಗರದ ದೈವಜ್ಞ ಮಹಿಳಾ ಸಮಾಜದ ಸದಸ್ಯರು ಚಂಡೆವಾದನ ನಡೆಸಿಕೊಟ್ಟರು.

ಕರ್ನಾಟಕ ರಾಜ್ಯದ ಅತಿದೊಡ್ಡ ಜಾತ್ರೆಗಳಲ್ಲಿ ಸಾಗರದ ಶ್ರೀ ಮಾರಿಕಾಂಬಾ ಜಾತ್ರೆಯು ಒಂದಾಗಿದೆ. 14  ಅಡಿ ಎತ್ತರದ ತಾಯಿ ಮಾರಿಕಾಂಬಾ ಮೂರ್ತಿಯು ಅತ್ಯಂತ ವಿಶಿಷ್ಟತೆಯಿಂದ ಕೂಡಿತ್ತು. ತವರು ಮನೆಯಲ್ಲಿ ದೇವಿಯ ದರ್ಶನವನ್ನು ಭಕ್ತರು ಪಡೆದರು. ಜಾತ್ರಾ ಪ್ರಯುಕ್ತ ಹಾಕಲಾಗಿದ್ದ ಮಳಿಗೆಗಳಲ್ಲಿ ಮೊದಲ ದಿನ ಉತ್ತಮ ವ್ಯಾಪಾರ ವಹಿವಾಟು ನಡೆಯಿತು. ಇನ್ನೂ ಕೆಲವರು ಮಳಿಗೆಗಳ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದ್ದರು.

ಮೊದಲ ದಿನ ಮಂಗಳವಾರ ತವರು ಮನೆಯಲ್ಲಿ ಪೂಜೆ ನಡೆಯಲಿದೆ. ಫೆ. 8ರಿಂದ ಶ್ರೀ ಮಾರಿಕಾಂಬಾ ದೇವಿಯ ಮೂರ್ತಿಯನ್ನು ಗಂಡನ ಮನೆ ಆವರಣದಲ್ಲಿ ಕೂರಿಸಲಾಗುತ್ತದೆ. ಫೆ. 15ರವರೆಗೂ ಗಂಡನ ಮನೆ ಆವರಣದಲ್ಲಿ ಸಾರ್ವಜನಿಕರಿಗೆ ದರ್ಶನಕ್ಕೆ ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗುತ್ತದೆ. ಉಡಿಸೇವೆ, ತುಲಾಭಾರ, ಸೇರಿದಂತೆ ಭಕ್ತರು ಹರಕೆ ಸಲ್ಲಿಸಲು ಜಾತ್ರಾ ಸಮಿತಿ ಪೂರಕ ವ್ಯವಸ್ಥೆ ಮಾಡಿದೆ.
ಒಂಬತ್ತು ದಿನಗಳ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಪೂಜಾ ಕಾರ್ಯಗಳ ನಂತರ ಫೆ. 15 ರಂದು ರಾತ್ರಿ 10.30ಕ್ಕೆ ರಾಜಬೀದಿ ಉತ್ಸವ ನಡೆಯಲಿದೆ. ಶ್ರೀ ಮಾರಿಕಾಂಬಾ ದೇವಿಯನ್ನು ವನಕ್ಕೆ ಬಿಡಲಾಗುತ್ತದೆ. ರಾಜಬೀದಿ ಉತ್ಸವದಲ್ಲಿ ಪ್ರಸಿದ್ಧ ಜಾನಪದ ಕಲಾತಂಡಗಳು ಪಾಲ್ಗೊಳ್ಳಲಿವೆ.

ಫೆಬ್ರವರಿ 8ರ ಕಾರ್ಯಕ್ರಮ
ಸಾಗರದ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ನಗರಸಭೆ ಆವರಣದ ಮಾರಿಕಾಂಬ ಕಲಾವೇದಿಕೆಯಲ್ಲಿ ಫೆ. 8ರಂದು ಸಂಜೆ 7ಕ್ಕೆ ಆಯೋಜಿಸಿರುವ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮವನ್ನು ಶಾಸಕ ಹರತಾಳು ಹಾಲಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಉದ್ಘಾಟಿಸುವರು. ಶ್ರೀ ಮಾರಿಕಾಂಬಾ ಜಾತ್ರಾ ಸಮಿತಿ ಅಧ್ಯಕ್ಷ ಕೆ.ಎನ್.ನಾಗೇಂದ್ರ ಅಧ್ಯಕ್ಷತೆ ವಹಿಸುವರು. ರಂಗಕರ್ಮಿ ಟಿ.ಎಸ್.ನಾಗಾಭರಣ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ, ಕೆ.ಎಸ್.ಈಶ್ವರಪ್ಪ, ಕುಮಾರ್ ಬಂಗಾರಪ್ಪ, ಆಯನೂರು ಮಂಜುನಾಥ್, ಭಾರತಿ ಶೆಟ್ಟಿ, ಡಿ.ಎಸ್.ಅರುಣ್, ಎಸ್.ರುದ್ರೇಗೌಡ, ಎಸ್.ಎಲ್.ಭೋಜೆಗೌಡ, ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಎಸ್‌ಪಿ ಮಿಥುನ್‌ಕುಮಾರ್, ಸಾಗರ ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ, ರೋಹನ್ ಜಗದೀಶ್ ಉಪಸ್ಥಿತರಿರುವರು. ಸಮಿತಿ ಪ್ರಧಾನ ಕಾರ್ಯದರ್ಶಿ ಗಿರಿಧರರಾವ್, ಸಮಿತಿ ಸಂಚಾಲಕ ಲೋಕೇಶ್ ಕುಮಾರ್ ಗುಡಿಗಾರ್, ಸಹ ಸಂಚಾಲಕ ರಾಮಚಂದ್ರ ಜಿ.ನಾಗೇಶ್, ಉಪಾಧ್ಯಕ್ಷ ಸುಂದರ್‌ಸಿಂಗ್, ವಿ.ಶಂಕರ್, ರಾಮಪ್ಪ, ಸಹ ಕಾರ್ಯದರ್ಶಿ ವಿ.ಕೃಷ್ಣಮೂರ್ತಿ, ಎಂ.ಡಿ.ಆನಂದ್, ಖಜಾಂಚಿ ನಾಗೇಂದ್ರ ಎಸ್.ಕುಮುಟಾ ಉಪಸ್ಥಿತರಿರುವರು.
ಕಲಾಸಿರಿ ಕಾರ್ಯಕ್ರಮ
ಸಾಗರದ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ನಿರ್ಮಿಸಿರುವ ನಗರಸಭೆ ಆವರಣದ ಮಾರಿಕಾಂಬಾ ಕಲಾವೇದಿಕೆಯಲ್ಲಿ ಫೆ. 8ರಂದು ಸಂಜೆ ಕಲಾಸಿರಿ ಕಾರ್ಯಕ್ರಮ ನಡೆಯಲಿದೆ. ಫೆ. 8ರ ಸಂಜೆ  5.30ರಿಂದ 6ರವರೆಗೆ ದೈವಜ್ಞ ಕಲಾಬಳಗದಿಂದ ಚಂಡೆವಾದನ, ಸಂಜೆ 6ರಿಂದ 6.30ರವರೆಗೆ ಡಾ. ಬಿ.ಆರ್.ಅಂಬೇಡ್ಕರ್ ಕೋಲಾಟ ಬಳಗದಿಂದ ಕೋಲಾಟ, 6.45ರವರೆಗೆ ಶ್ರೀ ಶಾರದಾಂಬ ಸಾಂಸ್ಕೃತಿಕ ಕಲಾಕೇಂದ್ರ ಟ್ರಸ್ಟ್ ವತಿಯಿಂದ ಭರತನಾಟ್ಯ, ನಂತರ ಸಭಾ ಕಾರ್ಯಕ್ರಮ, ರಾತ್ರಿ 8ರಿಂದ 9ರವರೆಗೆ ಪರಂಪರಾ ಫ್ಯೂಜನ್ ಬ್ಯಾಂಡ್‌ನಿಂದ ವಿವಿಧ ವಾದ್ಯಗಳ ಸಂಗೀತ ಕಾರ್ಯಕ್ರಮ, 9.30ರವರೆಗೆ ಫ್ರೆಂಡ್ಸ್ ಮ್ಯೂಸಿಕ್ ಮತ್ತು ಮೆಲೊಡಿಸ್ ಜ್ಯೂನಿಯರ್ ಕಲಾವಿದರಿಂದ ರಸಮಂಜರಿ, 10ರವರೆಗೆ ನಾಟ್ಯಮಯೂರಿ ನೃತ್ಯ ಕಲಾಕೇಂದ್ರದಿಂದ ಭರತನಾಟ್ಯ, ನಂತರ ಮಾಸ್ಟರ್ ಶಂಕರ್ ಕಲಾವೃಂದ ಟ್ರಸ್ಟ್ ವತಿಯಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaSagaraShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸಾಗರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಟರ್ಕಿ ಮಾರಕ ಭೂಕಂಪನಕ್ಕೆ ಅನಾಥರಾದ ಮಕ್ಕಳು: ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಇಬ್ಬರ ರಕ್ಷಣೆ

Next Post

ಫೆ.8ರ ನಾಳೆ ಶಿವಮೊಗ್ಗಕ್ಕೆ ಸಿಎಂ ಬೊಮ್ಮಾಯಿ ಭೇಟಿ: ಏನೆಲ್ಲಾ ಕಾರ್ಯಕ್ರಗಳು ನಿಗದಿಯಾಗಿವೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಉತ್ತಮ ಆಡಳಿತದ ಫಲ ಗುಜರಾತ್ ಚುನಾವಣಾ ಫಲಿತಾಂಶ : ಸಿಎಂ ಬೊಮ್ಮಾಯಿ

ಫೆ.8ರ ನಾಳೆ ಶಿವಮೊಗ್ಗಕ್ಕೆ ಸಿಎಂ ಬೊಮ್ಮಾಯಿ ಭೇಟಿ: ಏನೆಲ್ಲಾ ಕಾರ್ಯಕ್ರಗಳು ನಿಗದಿಯಾಗಿವೆ?

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL