ಕಲ್ಪ ಮೀಡಿಯಾ ಹೌಸ್ | ಸಾಗರ |
ಹೆಲ್ಮೆಟ್ #Helmet ಧರಿಸಿ, ಜೀವ ಉಳಿಸಿ ಎಂಬ ಧ್ಯೇಯ ವಾಕ್ಯಗೊಂದಿಗೆ ತಾಲೂಕಿನ ಆನಂದಪುರಂನಲ್ಲಿ ಪೊಲೀಸ್ ಇಲಾಖೆಯಿಂದ #Police Department ಬೈಕ್ ರ್ಯಾಲಿ #Bike Rally ನಡೆಸಲಾಯಿತು.
ಸಾಗರ ಉಪವಿಭಾಗ ಎಎಸ್’ಪಿ ಬೆನಕ ಪ್ರಸಾದ್ ಅವರ ನೇತೃತ್ವದಲ್ಲಿ ಆನಂದಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೆಲ್ಮೆಟ್ ಧರಿಸಿ, ಜೀವ ಉಳಿಸಿ ಎಂಬ ಧ್ಯೇಯ ವಾಕ್ಯದೊಂದಿಗೆ ಬೈಕ್ ರ್ಯಾಲಿ ಆಯೋಜಿಸಲಾಗಿತ್ತು. ಎಎಸ್’ಪಿ ಬೆನಕ ಪ್ರಸಾದ್ ಅವರು ಬೈಕ್ ರ್ಯಾಲಿಗೆ ಹಸಿರು ನಿಶಾನೆ ತೋರಿದರು.

ಈ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಬೆನಕ ಪ್ರಸಾದ್ ಅವರು, ದ್ವಿಚಕ್ರವಾಹನ ಚಾಲನೆ ಮಾಡುವಾಗ ಹೆಲ್ಮೆಟ್ ಅನ್ನು ಧರಿಸುವುದರ ಉದ್ದೇಶ, ಪ್ರಾಮುಖ್ಯತೆ ಹಾಗೂ ಅದರ ಮೌಲ್ಯದ ಬಗ್ಗೆ ವಿವರವಾಗಿ ತಿಳಿಸಿಕೊಟ್ಟರು.

ಆನಂದಪುರಂ ಪೊಲೀಸ್ ಉಪನಿರೀಕ್ಷಕ ಪ್ರವೀಣ್, ಆನಂದಪುರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post