ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ/ಆನಂದಪುರ |
ಸಹಕಾರಿ ಕ್ಷೇತ್ರದಲ್ಲಿ ಸರ್ಕಾರದ ಹಸ್ತಕ್ಷೇಪ ಇರಬಾರದು ಎಂದು ಒತ್ತಾಯಿಸಿ ಕೆಲವು ದಶಕಗಳ ಹಿಂದೆ ಮಾಡಿದ ಹೋರಾಟದ ಫಲವಾಗಿ ಇಂದು ಸಹಕಾರಿ ಕ್ಷೇತ್ರಗಳು ಅಭಿವೃದ್ಧಿಯಾಗುತ್ತಿದ್ದು, ಸಾರ್ವಜನಿಕರಿಗೆ ಅನುಕೂಲವಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮದ ಉಪಾಧ್ಯಕ್ಷ ಎ.ಆರ್. ಪ್ರಸನ್ನಕುಮಾರ್ ಹೇಳಿದ್ದಾರೆ.
ಅವರು ಇಂದು ಆನಂದಪುರದ ಸಾಗರ ಮುಖ್ಯ ರಸ್ತೆಯಲ್ಲಿ ಸಾರಸ್ವತ ಸೌಹಾರ್ದ ಪತ್ತಿನ ಸಹಕಾರಿಯ ನೂತನ ಶಾಖಾ ಪ್ರಾರಂಭೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ವಿಶೇಷ ಎಂದರೆ ಅಂದು ಕೈವಲ್ಯಮಠದ ಶ್ರೀಗಳೇ ಈ ಸಹಕಾರಿಯನ್ನು ಉದ್ಘಾಟಿಸಿದ್ದರು. ಇಂದು ಕೂಡ ಅವರ ಕೈಯಲ್ಲೇ ಮೂರನೇ ಶಾಖೆ ಉದ್ಘಾಟನೆಗೊಳ್ಳುತ್ತಿರುವುದು ಒಂದು ಸುಯೋಗ. ದೊಡ್ಡವರನ್ನು ಉದ್ಘಾಟನೆಗೆ ಕರೆಯುವುದು ಮುಖ್ಯವಲ್ಲ, ದೊಡ್ಡವರು ಹಾಕಿದ ಮಾರ್ಗದಲ್ಲೇ ಸಂಸ್ಥೆಯನ್ನು ಯಶಸ್ವಿಯಾಗಿ ನಡೆಸುವುದು ಮುಖ್ಯ ಎಂದರು.

ಸಾನ್ನಿಧ್ಯ ವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಗೌಡ ಪಾದಾಚಾರ್ಯ ಕೈವಲ್ಯ ಮಠಾಧೀಶರಾದ ಶ್ರೀ ಶಿವಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿ, ಮನುಷ್ಯನಿಗೆ ಹಣ ಬಹಳ ಮುಖ್ಯ. ಆರ್ಥಿಕತೆ ಸ್ಥಿರವಾಗಿದ್ದರೆ ಅವನ ಕುಟುಂಬದಲ್ಲಿ ನೆಮ್ಮದಿ ಇರುತ್ತದೆ. ಎಲ್ಲದಕ್ಕೂ ಮನಸ್ಸು ಕಾರಣ. ಆರ್ಥಿಕ ಸ್ಥಿತಿ ಚೆನ್ನಾಗಿದ್ದರೆ ಅವನ ಭೌತಿಕ ಮತ್ತು ಸ್ಥಿತಿಯೂ ಸರಿ ಇರುತ್ತದೆ. ಆದರೆ, ಹಣದ ಸದ್ವಿನಿಯೋಗ ಆಗಬೇಕು. ಹಣಕಾಸು ಸಂಸ್ಥೆಗಳು ಅರ್ಹರಿಗೆ ಆರ್ಥಿಕ ನೆರವು ನೀಡಬೇಕು. ಮತ್ತು ವೃದ್ಧರು ಠೇವಣಿ ಇಟ್ಟರೆ ಅವರಿಗೂ ಅನುಕೂಲವಾಗುವ ರೀತಿಯಲ್ಲಿ ಕಾರ್ಯನಿರ್ವಹಿಸಿ, ಸಾಮಾಜಿಕ ಬದ್ಧತೆ ಪ್ರದರ್ಶಿಸಬೇಕು. ಸಮಾಜಕ್ಕೆ ಸಹಕಾರಿಗಳು ತಮ್ಮಿಂದಾದಷ್ಟು ಕೊಡುಗೆ ನೀಡಬೇಕು. ಸಮಾಜದ ಕಲ್ಯಾಣವಾಗಬೇಕು ಎಂದರು.

ವಿಶೇಷ ಆಹ್ವಾನಿತರಾಗಿ ಸಂಸ್ಥಾಪಕ ಅಧ್ಯಕ್ಷ ದೇವದಾಸ್ ಎನ್. ನಾಯಕ್ ಮತ್ತು ಸಂಸ್ಥಾಪಕ ಮಂಡಳಿ ನಿರ್ದೇಶಕ ಹಾಗೂ ಜಿಎಸ್’ಬಿ ಸಮಾಜದ ಅಧ್ಯಕ್ಷ ಭಾಸ್ಕರ್ ಜಿ. ಕಾಮತ್, ಆನಂದಪುರದ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ನಾಯಕ್ ಅವರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸಾರಸ್ವತ ಸೌಹಾರ್ದ ಪತ್ತಿನ ಸಹಕಾರಿ ಉಪಾಧ್ಯಕ್ಷ ಸುಧೀರ್ ನಾಯಕ್, ಕಾರ್ಯದರ್ಶಿ ಪಿ. ಸದಾನಂದ ನಾಯಕ್, ಪ್ರಮುಖರಾದ ನರಸಿಂಹ ಕಿಣಿ, ವಿಶ್ವಾಸ್ ಕಾಮತ್, ಸುರೇಶ್ ರಾಮ್ ಪ್ರಭು, ಕೆ. ಮೋಹನ್ ದಾಸ್ ನಾಯಕ್, ಶ್ರೀಧರ ಶೆಣೈ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾಗರಾಜ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
 
	    	


 Loading ...
 Loading ... 
							



 
                
Discussion about this post