No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Monday, July 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸಹಕಾರಿ ಕ್ಷೇತ್ರದಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲ: ಪ್ರಸನ್ನಕುಮಾರ್

ಆನಂದಪುರಂನಲ್ಲಿ ಸಾರಸ್ವತ ಪತ್ತಿನ ಸಹಕಾರಿಯ ನೂತನ ಶಾಖೆ ಆರಂಭ

kalpa News by kalpa News
November 21, 2022
in Small Bytes, ಸಾಗರ
0
ಸಹಕಾರಿ ಕ್ಷೇತ್ರದಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲ: ಪ್ರಸನ್ನಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ/ಆನಂದಪುರ  |

ಸಹಕಾರಿ ಕ್ಷೇತ್ರದಲ್ಲಿ ಸರ್ಕಾರದ ಹಸ್ತಕ್ಷೇಪ ಇರಬಾರದು ಎಂದು ಒತ್ತಾಯಿಸಿ ಕೆಲವು ದಶಕಗಳ ಹಿಂದೆ ಮಾಡಿದ ಹೋರಾಟದ ಫಲವಾಗಿ ಇಂದು ಸಹಕಾರಿ ಕ್ಷೇತ್ರಗಳು ಅಭಿವೃದ್ಧಿಯಾಗುತ್ತಿದ್ದು, ಸಾರ್ವಜನಿಕರಿಗೆ ಅನುಕೂಲವಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮದ ಉಪಾಧ್ಯಕ್ಷ ಎ.ಆರ್. ಪ್ರಸನ್ನಕುಮಾರ್ ಹೇಳಿದ್ದಾರೆ.

ಅವರು ಇಂದು ಆನಂದಪುರದ ಸಾಗರ ಮುಖ್ಯ ರಸ್ತೆಯಲ್ಲಿ ಸಾರಸ್ವತ ಸೌಹಾರ್ದ ಪತ್ತಿನ ಸಹಕಾರಿಯ ನೂತನ ಶಾಖಾ ಪ್ರಾರಂಭೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಅಂದು ಮನೋಹರ್ ಮಸ್ಕಿ ನೇತೃತ್ವದ ತಂಡ ಸೌಹಾರ್ದ ಸಂವರ್ಧಿನಿ ಸಮಿತಿ ಎಂದು ರಚಿಸಿ ಸೌಹಾರ್ದ ಸಹಕಾರಿಗಳ ಸಂಘ ಸ್ಥಾಪನೆಗೆ ಪ್ರಥಮವಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಇದರ ಪರಿಣಾಮ ಸೌಹಾರ್ದ ಸಹಕಾರಿ ಪತ್ತಿನ ಸಂಘಗಳ ಉದಯವಾಯಿತು. ಎರಡನೇ ಸಹಕಾರಿಯಾಗಿ 2002 ರಲ್ಲಿ ಪ್ರಾರಂಭವಾದ ಈ ಸಂಸ್ಥೆ ಇಂದು ಬೃಹದಾಕಾರವಾಗಿ ಬೆಳೆದಿದೆ. ಅಂದಿನ ದಿನಗಳಲ್ಲಿ ಬೆರಳೆಣಿಕೆಯಷ್ಟಿದ್ದ ಪತ್ತಿನ ಸಹಕಾರ ಸಂಘಗಳು ಈಗ ರಾಜ್ಯದಲ್ಲಿ 5600 ಕ್ಕೂ ಹೆಚ್ಚು ಸೌಹಾರ್ದ ಸಹಕಾರಿಗಳಿವೆ. ಸಾರಸ್ವತ ಸೌಹಾರ್ದ ಸಹಕಾರಿ ಚೊಕ್ಕವಾಗಿ ಬದ್ಧತೆಯಿಂದ ಅಚ್ಚುಕಟ್ಟಾಗಿ ಹಿರಿಯರ ಮಾರ್ಗದರ್ಶನದಲ್ಲಿ ಷೇರುದಾರರ ವಿಶ್ವಾಸ ಗಳಿಸಿ ವರ್ಷದಿಂದ ವರ್ಷಕ್ಕೆ ಲಾಭದೆಡೆಗೆ ಮುನ್ನುಗ್ಗುತ್ತಿದೆ. ಇದಕ್ಕೆ ಗುರುಹಿರಿಯರ ಮಾರ್ಗದರ್ಶನವೂ ಕಾರಣವಾಗಿದ್ದು, ಆಡಳಿತ ಮಂಡಳಿ ಗ್ರಾಹಕರನ್ನು ವಿಶ್ವಾಸದಿಂದ ಕಂಡು ಪ್ರಾಮಾಣಿಕತೆ ರೂಢಿಸಿಕೊಂಡು ಯಶಸ್ವಿಯಾಗಿದೆ ಎಂದರು.

ವಿಶೇಷ ಎಂದರೆ ಅಂದು ಕೈವಲ್ಯಮಠದ ಶ್ರೀಗಳೇ ಈ ಸಹಕಾರಿಯನ್ನು ಉದ್ಘಾಟಿಸಿದ್ದರು. ಇಂದು ಕೂಡ ಅವರ ಕೈಯಲ್ಲೇ ಮೂರನೇ ಶಾಖೆ ಉದ್ಘಾಟನೆಗೊಳ್ಳುತ್ತಿರುವುದು ಒಂದು ಸುಯೋಗ. ದೊಡ್ಡವರನ್ನು ಉದ್ಘಾಟನೆಗೆ ಕರೆಯುವುದು ಮುಖ್ಯವಲ್ಲ, ದೊಡ್ಡವರು ಹಾಕಿದ ಮಾರ್ಗದಲ್ಲೇ ಸಂಸ್ಥೆಯನ್ನು ಯಶಸ್ವಿಯಾಗಿ ನಡೆಸುವುದು ಮುಖ್ಯ ಎಂದರು.
ದೇಶದಲ್ಲಿ ಸಹಕಾರಿ ಸಂಸ್ಥೆಗಳು ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಸ್ವತಃ ಗೃಹ ಸಚಿವ ಅಮಿತ್ ಶಾ ಅವರೇ ವಿಶೇಷ ಮುತುವರ್ಜಿ ವಹಿಸಿ ಸಹಕಾರಿ ಇಲಾಖೆಗೆ ಒಂದು ಸ್ಥಾನ ಮಾನ ನೀಡಿದ್ದಲ್ಲದೇ, ಅವರು ಸಹಕಾರಿ ಸಚಿವರಾಗಿ ಅತ್ಯಂತ ಬಲಿಷ್ಠವಾಗಿ ಸಹಕಾರ ಸಂಘಗಳಿಗೆ ಸಹಾಯ ಹಸ್ತ ಚಾಚಿದ್ದಾರೆ ಎಂದರು.

ಸಾನ್ನಿಧ್ಯ ವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಗೌಡ ಪಾದಾಚಾರ್ಯ ಕೈವಲ್ಯ ಮಠಾಧೀಶರಾದ ಶ್ರೀ ಶಿವಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿ, ಮನುಷ್ಯನಿಗೆ ಹಣ ಬಹಳ ಮುಖ್ಯ. ಆರ್ಥಿಕತೆ ಸ್ಥಿರವಾಗಿದ್ದರೆ ಅವನ ಕುಟುಂಬದಲ್ಲಿ ನೆಮ್ಮದಿ ಇರುತ್ತದೆ. ಎಲ್ಲದಕ್ಕೂ ಮನಸ್ಸು ಕಾರಣ. ಆರ್ಥಿಕ ಸ್ಥಿತಿ ಚೆನ್ನಾಗಿದ್ದರೆ ಅವನ ಭೌತಿಕ ಮತ್ತು ಸ್ಥಿತಿಯೂ ಸರಿ ಇರುತ್ತದೆ. ಆದರೆ, ಹಣದ ಸದ್ವಿನಿಯೋಗ ಆಗಬೇಕು. ಹಣಕಾಸು ಸಂಸ್ಥೆಗಳು ಅರ್ಹರಿಗೆ ಆರ್ಥಿಕ ನೆರವು ನೀಡಬೇಕು. ಮತ್ತು ವೃದ್ಧರು ಠೇವಣಿ ಇಟ್ಟರೆ ಅವರಿಗೂ ಅನುಕೂಲವಾಗುವ ರೀತಿಯಲ್ಲಿ ಕಾರ್ಯನಿರ್ವಹಿಸಿ, ಸಾಮಾಜಿಕ ಬದ್ಧತೆ ಪ್ರದರ್ಶಿಸಬೇಕು. ಸಮಾಜಕ್ಕೆ ಸಹಕಾರಿಗಳು ತಮ್ಮಿಂದಾದಷ್ಟು ಕೊಡುಗೆ ನೀಡಬೇಕು. ಸಮಾಜದ ಕಲ್ಯಾಣವಾಗಬೇಕು ಎಂದರು.
ಅಧ್ಯಕ್ಷ ಎಂ.ಆರ್. ಗೋಪಾಲಕೃಷ್ಣ ಪಂಡಿತ್ ಮಾತನಾಡಿ, 6.80 ಲಕ್ಷ ರೂ. ಮೂಲ ಬಂಡವಾಳದಿಂದ ಪ್ರಾರಂಭವಾದ ಸಂಸ್ಥೆ ಇಂದು 17 ಕೋಟಿ ರೂ.ಗೂ ಹೆಚ್ಚಿನ ವ್ಯವಹಾರ ಮಾಡುತ್ತಿದೆ. ಮೂರು ಶಾಖೆಗಳಿವೆ. ಒಬ್ಬರಿಗೆ 40 ಗರಿಷ್ಠ ಸಾಲ ನೀಡುವಷ್ಟು ಸಂಸ್ಥೆ ಬೆಳೆದಿದೆ. ಷೇರುದಾರರಿಗೆ ಹೆಚ್ಚಿನ ಡೆವಿಡೆಂಟ್ ನೀಡುತ್ತಿದೆ. ಇದುವರೆಗೆ ಎಲ್ಲಾ ಆಡಳಿತ ಮಂಡಳಿಯ ಪದಾಧಿಕಾರಿಗಳು, ಸದಸ್ಯರು ಸಂಸ್ಥೆಯನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಇದರ ಯಶಸ್ಸು ಎಲ್ಲರಿಗೂ ಸೇರುತ್ತದೆ ಎಂದರು.

ವಿಶೇಷ ಆಹ್ವಾನಿತರಾಗಿ ಸಂಸ್ಥಾಪಕ ಅಧ್ಯಕ್ಷ ದೇವದಾಸ್ ಎನ್. ನಾಯಕ್ ಮತ್ತು ಸಂಸ್ಥಾಪಕ ಮಂಡಳಿ ನಿರ್ದೇಶಕ ಹಾಗೂ ಜಿಎಸ್’ಬಿ ಸಮಾಜದ ಅಧ್ಯಕ್ಷ ಭಾಸ್ಕರ್ ಜಿ. ಕಾಮತ್, ಆನಂದಪುರದ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ನಾಯಕ್ ಅವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಾರಸ್ವತ ಸೌಹಾರ್ದ ಪತ್ತಿನ ಸಹಕಾರಿ ಉಪಾಧ್ಯಕ್ಷ ಸುಧೀರ್ ನಾಯಕ್, ಕಾರ್ಯದರ್ಶಿ ಪಿ. ಸದಾನಂದ ನಾಯಕ್, ಪ್ರಮುಖರಾದ ನರಸಿಂಹ ಕಿಣಿ, ವಿಶ್ವಾಸ್ ಕಾಮತ್, ಸುರೇಶ್ ರಾಮ್ ಪ್ರಭು, ಕೆ. ಮೋಹನ್ ದಾಸ್ ನಾಯಕ್, ಶ್ರೀಧರ ಶೆಣೈ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾಗರಾಜ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AnandapuramCo-operative sectorKannada News WebsiteLatest News KannadaSaraswat Cooperative SocietyShimogaShivamoggaShivamogga NewsSri Shivananda Saraswati Swamijiಆನಂದಪುರಂಕೈವಲ್ಯ ಮಠಶಿವಮೊಗ್ಗಶ್ರೀ ಶಿವಾನಂದ ಸರಸ್ವತಿ ಸ್ವಾಮೀಜಿಸಹಕಾರಿ ಕ್ಷೇತ್ರಸಾರಸ್ವತ ಸೌಹಾರ್ದ ಪತ್ತಿನ ಸಹಕಾರಿ ಸಂಘ
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಡಿ.ಎಸ್. ಅರುಣ್ ಕಾರ್ಯ ರಾಜ್ಯದ ಯುವಜನರಿಗೆ ಸ್ಪೂರ್ತಿ: ಮಾಜಿ ಡಿಸಿಎಂ ಈಶ್ವರಪ್ಪ ಬಣ್ಣನೆ

Next Post

ಬಾಲ್ಯದಿಂದಲೇ ಮಕ್ಕಳಿಗೆ ಸಂಗೀತ ಅಭ್ಯಾಸ ಮಾಡಿಸಿ: ಡಾ. ಅಮಿತಾ ಹೆಗ್ಡೆ ಕರೆ

kalpa News

kalpa News

Next Post
ಬಾಲ್ಯದಿಂದಲೇ ಮಕ್ಕಳಿಗೆ ಸಂಗೀತ ಅಭ್ಯಾಸ ಮಾಡಿಸಿ: ಡಾ. ಅಮಿತಾ ಹೆಗ್ಡೆ ಕರೆ

ಬಾಲ್ಯದಿಂದಲೇ ಮಕ್ಕಳಿಗೆ ಸಂಗೀತ ಅಭ್ಯಾಸ ಮಾಡಿಸಿ: ಡಾ. ಅಮಿತಾ ಹೆಗ್ಡೆ ಕರೆ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL