ಕಲ್ಪ ಮೀಡಿಯಾ ಹೌಸ್
ಸಾಗರ: ಅವರವರ ಪ್ರತಿಭೆ ಹಾಗೂ ಆಸಕ್ತಿಗೆ ತಕ್ಕಂತೆ ನೂತನ ಸಚಿವರುಗಳಿಗೆ ಖಾತೆ ಹಂಚಿಕೆಯಾಗಿರುವುದು ಸಂತಸದ ಸಂಗತಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ನಗರದಲ್ಲಿಂದು ಮಾತನಾಡಿದ ಅವರು, ಸಂಪುಟ ಸೇರಿರುವ ಎಲ್ಲ ಶಾಸಕರಿಗೂ ಅವರಿಗೆ ಇರುವ ಪ್ರತಿಭೆ ಹಾಗೂ ಆಸಕ್ತಿಗೆ ತಕ್ಕಂತೆ ಖಾತೆಗಳನ್ನು ಮುಖ್ಯಮಂತ್ರಿಗಳು ಹಂಚಿಕೆ ಮಾಡಿದ್ದಾರೆ. ನೂತನ ಸಚಿವರ ಇದನ್ನು ಸದುಪಯೋಗ ಮಾಡಿಕೊಂಡು ಮುಂದಿರುವ ಒಂದು ವರ್ಷ 10 ತಿಂಗಳ ಅವಧಿಯಲ್ಲಿ ಜನೋಪಯೋಗಿ ಕೆಲಸಗಳನ್ನು ಮಾಡಬೇಕು. ಇಂತಹ ಅವಕಾಶ ಪಡೆದ ಎಲ್ಲ ಸಚಿವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಆರಗ ಜ್ಞಾನೇಂದ್ರ, ಸುನಿಲ್ ಕುಮಾರ್, ಬಿ.ಸಿ. ನಾಗೇಶ್, ಕೋಟ ಶ್ರೀನಿವಾಸ್ ಪೂಜಾರಿ, ಶಂಕರ ಮುನೇನಕೊಪ್ಪ ಸೇರಿದಂತೆ ಬಹಳಷ್ಟು ಮಂದಿ ಹಲವು ವರ್ಷಗಳಿಂದ ರಾಜ್ಯ ಅಭಿವೃದ್ಧಿಗೆ ಕನಸು ಹೊಂದಿದ್ದರು. ಈಗ ಅವರೆಲ್ಲರಿಗೂ ಒಳ್ಳೆಯ ಖಾತೆಗಳು ದೊರೆತಿದೆ. ಈಗ ರಚನೆಯಾಗಿರುವ ಹೊಸ ಸಂಪುಟ ಹಗಲಿರುಳು ಶ್ರಮಿಸಿ ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post