ಕಲ್ಪ ಮೀಡಿಯಾ ಹೌಸ್
ಸಾಗರ: ಸ್ವಾತಂತ್ರ್ಯ ಹೋರಾಟಗಾರರು, ದೀನ ದಲಿತರ ಧ್ವನಿಯಾಗಿದ್ದ ಧೀಮಂತ ನಾಯಕ, ಹಸಿರು ಕ್ರಾಂತಿಯ ಹರಿಕಾರ, ದೇಶದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ೧೧೪ ನೇ ಜನ್ಮದಿನವನ್ನು ನಗರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆಯಿತು.
ನಗರಸಭೆ ಸದಸ್ಯೆ ಲಲಿತಮ್ಮಡಾ.ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಸರಳವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಾಗರ ನಗರಸಭೆ ವಿಪಕ್ಷ ನಾಯಕ ಗಣಪತಿ ಮಂಡಗಳಲೆ, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಸುರೇಶ್ ಬಾಬು, ಮಹಾಬಲ ಕೌತಿ, ತಾರಾ ಮೂರ್ತಿ, ನಾಗರಾಜ್, ಜಯರಾಂ, ಮೋಹನ್ ಮೊದಲಾದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post