ಕಲ್ಪ ಮೀಡಿಯಾ ಹೌಸ್ | ಸಾಗರ |
ಕೇಂದ್ರ ನಾಯಕರು ನಂಬಿರುವ ಕೆಲವು ರಾಜ್ಯ ನಾಯಕರುಗಳು ನಂಬಿಕೆಯನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ #Yadiyurappa ಕುಟುಂಬದ ವಿರುದ್ಧ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ #K S Eshwarappa ಹೆಸರು ಹೇಳದೇ ವಾಗ್ದಾಳಿ ನಡೆಸಿದ್ದಾರೆ.
ಸಾಗರದಲ್ಲಿ ಮಾತನಾಡಿದ ಅವರು, ಕೇಂದ್ರದ ನಾಯಕರು ರಾಜ್ಯದಲ್ಲಿ ಕೆಲವರನ್ನ ನಂಬಿದ್ದಾರೆ. ಅವರ ನಂಬಿಕೆಯನ್ನ ದುರುಪಯೋಗ ಮಾಡಿಕೊಂಡು ಒಬ್ಬ ಮಗನ ಸಂಸದ ಮತ್ತೊಬ್ಬ ಮಗನನ್ನು ಆರು ತಿಂಗಳು ಕಾದು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ. ಇದೆಲ್ಲಾ ಕೇಂದ್ರದವರಿಗೆ ಯಾರು ಹೇಳಬೇಕು ಕಾರ್ಯಕರ್ತರ ನೋವನ್ನು ಯಾರು ಕೇಳಬೇಕು. ಈಗಿನ ಪರಿಸ್ಥಿತಿಯಲ್ಲಿ ಇಂಥವರ ಹಿಂದೆ ಹೋಗಿ ಅಧಿಕಾರ ಹೊಡಿಯುತ್ತಿದ್ದಾರೆ ಶ್ರಮ ಹಾಕಿದ ಕಾರ್ಯಕರ್ತರು ಹಿಂದೆ ಸರಿದಿದ್ದಾರೆ ಎಂದರು.

ಚುನಾವಣೆಯನ್ನು ಅನೇಕರು ವೃತ್ತಿ ದಂಧೆಯಾಗಿ ಮಾಡಿಕೊಂಡಿದ್ದಾರೆ. ರಾಜಕಾರಣಕ್ಕಾಗಿ ಅನೇಕ ಪಕ್ಷಗಳ ಮುಖವಾಡ ಹಾಕಿಕೊಳ್ಳುತ್ತಾರೆ. ಆದರೆ ಬಿಜೆಪಿ ಪಕ್ಷವನ್ನು ಕಾರ್ಯಕರ್ತರು ರಕ್ತವನ್ನು ಬೆವರಿನ ಹಾಗೆ ಸುರಿಸಿ ಪಕ್ಷ ಕಟ್ಟಿದ್ದರ ಫಲವಾಗಿ ಇಂದು ನರೇಂದ್ರ ಮೋದಿಯವರು ಪ್ರಧಾನಿಯಾಗಿದ್ದಾರೆ ಎಂದರು.

Also read: ಶಿವಮೊಗ್ಗ | ಈ ಗ್ರಾಮದಲ್ಲಿ ನಾಳೆ ಯುಗಾದಿ ಆಚರಿಸಲಿದ್ದಾರೆ ನಟ ಶಿವರಾಜಕುಮಾರ್ | ಇಲ್ಲಿದೆ ವಿವರ
ಸಿ.ಟಿ. ರವಿ, ಪ್ರತಾಪ್ ಸಿಂಹ, ಸದಾನಂದ ಗೌಡರಂತ ಒಕ್ಕಲಿಗ ನಾಯಕರಿಗೆ ಟಿಕೆಟ್ ಕೊಡದೆ ಮೂಲೆಗುಂಪು ಮಾಡಿದ್ದಾರೆ. ಹಿಂದುತ್ವ ಬಗ್ಗೆ ಮಾತನಾಡಿದ ಅನಂತ್ ಕುಮಾರ್ ಹೆಗ್ಗಡೆ, ಬಸವನಗೌಡ ಪಾಟೀಲ್ ಯತ್ನಾಳ್’ರನ್ನೂ ಸಹ ಮೂಲೆ ಗುಂಪು ಮಾಡಿದ್ದಾರೆ ಹಿಂದುತ್ವ ಬಗ್ಗೆ ಮಾತನಾಡುವುದೇ ತಪ್ಪಾ ಎಂದರು.

ರಾಜ್ಯದಲ್ಲಿ ಒಂದು ಕೋಟಿ ಸಾಮಾನ್ಯ ಜನರ ಸದಸ್ಯತ್ವ ಇದೆ. ಈಗ ಸದಸ್ಯತ್ವ ಮಾಡಿದ ವ್ಯಕ್ತಿಗಳಿಗೆ ನಮ್ಮ ಮಾತು ಯಾರು ಕೇಳುತ್ತಿಲ್ಲ ಎಂಬ ನೋವಿದೆ. ಹೊಂದಾಣಿಕೆ ರಾಜಕಾರಣ ಬಿಜೆಪಿ ರಕ್ತದಲ್ಲಿ ಬಂದಿಲ್ಲ ಬಿಜೆಪಿ ಜನರ ಮನಸ್ಸನ್ನು ಗೆದ್ದು ಅಧಿಕಾರಕ್ಕೆ ಬಂದಿದೆ ನನ್ನ ಜೀವನದಲ್ಲಿ ಹೊಂದಾಣಿಕೆ ರಾಜಕಾರಣ ಮಾಡಿಲ್ಲ ಹೊಂದಾಣಿಕೆ ರಾಜಕಾರಣ ಮಾಡಲು ಯಡಿಯೂರಪ್ಪಗೆ ಪಕ್ಷ ಯಾಕೆ ಬೇಕೆ ಎಂದು ಖಾರವಾಗಿ ಪ್ರಶ್ನಿಸಿದರು.

ನಾನು ರಾಷ್ಟ್ರೀಯವಾದಿ ಎಂದು ಜನ ನನಗೆ ಬೆಂಬಲ ಕೊಡುತ್ತಿದ್ದಾರೆ. ಆದರೆ ಜಾತಿ ಹೆಸರು ಹೇಳಿಕೊಂಡು ಮೋಸ ಮಾಡಿದವರಿಗೆ ಈಶ್ವರಪ್ಪನ ಗೆಲ್ಲಿಸುವ ಮೂಲಕ ಉತ್ತರ ಕೊಡುತ್ತೇವೆ ಎಂದು ಭದ್ರಾವತಿಯ ಒಕ್ಕಲಿಗ ಸಮಾಜದವರು ಹೇಳಿದ್ದಾರೆ.

ಒಬ್ಬ ಪಕ್ಷೇತರನಾಗಿ ನಿಂತಿರುವುದು ಚರ್ಚೆಯಾಗುತ್ತಿಲ್ಲ. ಬದಲಾಗಿ ನಲವತ್ತು ವರ್ಷ ಬಿಜೆಪಿಯಲ್ಲಿದ್ದು ಪಕ್ಷ ಕಟ್ಟಿದ ಈಶ್ವರಪ್ಪ ಪಕ್ಷೇತರನಾಗಿ ನಿಂತಿರುವುದು ರಾಜ್ಯದಲ್ಲಷ್ಟೆ ಅಲ್ಲದೆ ದೇಶದಲ್ಲಿಯೂ ಸಹ ಚರ್ಚೆಯಾಗುತ್ತಿದೆ. ನೀವೆಲ್ಲರೂ ನನ್ನ ಹೋರಟಾಕ್ಕೆ ಶಕ್ತಿ ತುಂಬಿ ಚುನಾವಣೆಯಲ್ಲಿ ಗೆಲ್ಲಿಸಿ ನಾನು ದೆಹಲಿಗೆ ಹೋಗಿ ಮೋದಿ ಪ್ರಧಾನಿಯಾಗಲು ಕೈ ಎತ್ತುತ್ತೇನೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post